ETV Bharat / city

ಕಲ್ಯಾಣ್ ಸಿಂಗ್ ನಿಧನಕ್ಕೆ ಸಿಎಂ ಬೊಮ್ಮಾಯಿ, ಬಿಎಸ್​ವೈ ಸೇರಿದಂತೆ ಬಿಜೆಪಿ ನಾಯಕರ ಸಂತಾಪ

author img

By

Published : Aug 22, 2021, 1:43 AM IST

ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ನಿಧನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಬಿಎಸ್​ವೈ ಸಂತಾಪ ವ್ಯಕ್ತಪಡಿಸಿದ್ದಾರೆ.

cm-basavaraj-bommai-condolence-to-kalyan-singh
ಕಲ್ಯಾಣ್ ಸಿಂಗ್ ನಿಧನಕ್ಕೆ ಸಿಎಂ ಬೊಮ್ಮಾಯಿ, ಬಿಎಸ್​ವೈ ಸೇರಿದಂತೆ ಬಿಜೆಪಿ ನಾಯಕರ ಸಂತಾಪ

ಬೆಂಗಳೂರು: ಉತ್ತರ ಪ್ರದೇಶದ ಮುಖ್ಯಮಂತ್ರಿ ಹಾಗೂ ರಾಜ್ಯಸ್ಥಾನದ ರಾಜ್ಯಪಾಲರಾಗಿಯೂ ಕಾರ್ಯನಿರ್ವಹಿಸಿದ್ದ ಕಲ್ಯಾಣ್ ಸಿಂಗ್ ನಿಧನಕ್ಕೆ ರಾಜ್ಯ ಬಿಜೆಪಿ ನಾಯಕರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಸಿಎಂ ಬಸವರಾಜ್ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸೇರಿದಂತೆ ಹಲವು ನಾಯಕರು ಸಾಮಾಜಿಕ ಜಾಲತಾಣದ ಮೂಲಕ ತಮ್ಮ ಸಂತಾಪ ಸಂದೇಶ ನೀಡಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಟ್ವೀಟ್​​ನಲ್ಲಿ, ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ, ರಾಜಸ್ಥಾನದ ಮಾಜಿ ರಾಜ್ಯಪಾಲರಾಗಿದ್ದ ಕಲ್ಯಾಣ್‌ ಸಿಂಗ್‌ ಅವರು ನಿಧನರಾದ ವಿಷಯ ತುಂಬಾ ದುಃಖ ತಂದಿದೆ. ಭಗವಂತನು ಅವರ ಆತ್ಮಕ್ಕೆ ಶಾಂತಿಯನ್ನು ಕರುಣಿಸಲಿ ಮತ್ತು ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

  • ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ, ರಾಜಸ್ಥಾನದ ರಾಜ್ಯಪಾಲರಾಗಿದ್ದ ಶ್ರೀ ಕಲ್ಯಾಣ್‌ ಸಿಂಗ್‌ ಅವರು ಇಂದು ನಿಧನರಾದ ವಿಷಯ ತುಂಬಾ ದುಃಖ ತಂದಿದೆ.

    ಭಗವಂತನು ಅವರ ಆತ್ಮಕ್ಕೆ ಶಾಂತಿಯನ್ನು ಕರುಣಿಸಲಿ ಮತ್ತು ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. #KalyanSingh

    — Basavaraj S Bommai (@BSBommai) August 21, 2021 " class="align-text-top noRightClick twitterSection" data=" ">

ಇನ್ನು ತಮ್ಮ ಸಂದೇಶದಲ್ಲಿ, ಕಲ್ಯಾಣ್​​ಸಿಂಗ್ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಮಾಡಿರುವ ಅಭಿವೃದ್ಧಿ ಕಾರ್ಯಗಳು ಇತರರಿಗೆ ಅನುಕರಣೀಯವಾಗಿವೆ. ರಾಜ್ಯಪಾಲರಾಗಿಯೂ ಅವರು ಸೇವೆಯನ್ನು ಸಲ್ಲಿಸಿದ್ದಾರೆ. ಅಂಥ ಮೇಧಾವಿ ರಾಜಕಾರಣಿಯನ್ನು ನಾವು ಕಳೆದುಕೊಂಡಿದ್ದೇವೆ. ದೇವರು ಅವರ ಆತ್ಮಕ್ಕೆ ಶಾಂತಿಯನ್ನು ನೀಡಲಿ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ನೀಡಲಿ ಎಂದು ಆ ಭಗವಂತನಲ್ಲಿ ಕೋರುತ್ತೇನೆ ಎಂದು ಅವರು ಹೇಳಿದ್ದಾರೆ.

Deeply saddened by the passing away of senior BJP leader & former CM of UP Shri Kalyan Singh Ji. A strong voice of backward communities, Kalyan Singh Ji will always be remembered for his charismatic leadership and integrity in public life. Condolences to his family. Om Shanti.

— B.S. Yediyurappa (@BSYBJP) August 21, 2021 " class="align-text-top noRightClick twitterSection" data=" ">

ಮಾಜಿ ಸಿಎಂ ಬಿಎಸ್​​ವೈ ಸಂತಾಪ: ಬಿಜೆಪಿ ಹಿರಿಯ ನಾಯಕ ಹಾಗೂ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಜೀ ಅವರ ನಿಧನದ ಸುದ್ದಿ ಕೇಳಿ ಬಹಳ ದುಃಖವಾಗಿದೆ. ಹಿಂದುಳಿದ ಸಮುದಾಯಗಳ ಪ್ರಬಲ ಧ್ವನಿಯಾಗಿದ್ದ ಕಲ್ಯಾಣ್ ಸಿಂಗ್ ಅವರ ವರ್ಚಸ್ವಿ ನಾಯಕತ್ವ ಮತ್ತು ಸಾರ್ವಜನಿಕ ಜೀವನದಲ್ಲಿ ಸಮಗ್ರತೆಗಾಗಿ ಸದಾ ಎಲ್ಲರ ನೆನಪಾಗಿ ಉಳಿಯುತ್ತಾರೆ ಎಂದಿದ್ದಾರೆ. ಇದಲ್ಲದೇ ಬಿಜೆಪಿಯ ಹಲವು ನಾಯಕರು ಕಲ್ಯಾಣ್ ಸಿಂಗ್ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್​ ವಿಧಿವಶ

ಇದನ್ನೂ ಓದಿ: ವಿದೇಶಿ ಪ್ರಜೆಯ ಹೊಟ್ಟೆಯಲ್ಲಿ 11 ಕೋಟಿ ರೂ. ಮೌಲ್ಯದ ಮಾದಕ ವಸ್ತು ಪತ್ತೆ

ಬೆಂಗಳೂರು: ಉತ್ತರ ಪ್ರದೇಶದ ಮುಖ್ಯಮಂತ್ರಿ ಹಾಗೂ ರಾಜ್ಯಸ್ಥಾನದ ರಾಜ್ಯಪಾಲರಾಗಿಯೂ ಕಾರ್ಯನಿರ್ವಹಿಸಿದ್ದ ಕಲ್ಯಾಣ್ ಸಿಂಗ್ ನಿಧನಕ್ಕೆ ರಾಜ್ಯ ಬಿಜೆಪಿ ನಾಯಕರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಸಿಎಂ ಬಸವರಾಜ್ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸೇರಿದಂತೆ ಹಲವು ನಾಯಕರು ಸಾಮಾಜಿಕ ಜಾಲತಾಣದ ಮೂಲಕ ತಮ್ಮ ಸಂತಾಪ ಸಂದೇಶ ನೀಡಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಟ್ವೀಟ್​​ನಲ್ಲಿ, ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ, ರಾಜಸ್ಥಾನದ ಮಾಜಿ ರಾಜ್ಯಪಾಲರಾಗಿದ್ದ ಕಲ್ಯಾಣ್‌ ಸಿಂಗ್‌ ಅವರು ನಿಧನರಾದ ವಿಷಯ ತುಂಬಾ ದುಃಖ ತಂದಿದೆ. ಭಗವಂತನು ಅವರ ಆತ್ಮಕ್ಕೆ ಶಾಂತಿಯನ್ನು ಕರುಣಿಸಲಿ ಮತ್ತು ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

  • ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ, ರಾಜಸ್ಥಾನದ ರಾಜ್ಯಪಾಲರಾಗಿದ್ದ ಶ್ರೀ ಕಲ್ಯಾಣ್‌ ಸಿಂಗ್‌ ಅವರು ಇಂದು ನಿಧನರಾದ ವಿಷಯ ತುಂಬಾ ದುಃಖ ತಂದಿದೆ.

    ಭಗವಂತನು ಅವರ ಆತ್ಮಕ್ಕೆ ಶಾಂತಿಯನ್ನು ಕರುಣಿಸಲಿ ಮತ್ತು ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. #KalyanSingh

    — Basavaraj S Bommai (@BSBommai) August 21, 2021 " class="align-text-top noRightClick twitterSection" data=" ">

ಇನ್ನು ತಮ್ಮ ಸಂದೇಶದಲ್ಲಿ, ಕಲ್ಯಾಣ್​​ಸಿಂಗ್ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಮಾಡಿರುವ ಅಭಿವೃದ್ಧಿ ಕಾರ್ಯಗಳು ಇತರರಿಗೆ ಅನುಕರಣೀಯವಾಗಿವೆ. ರಾಜ್ಯಪಾಲರಾಗಿಯೂ ಅವರು ಸೇವೆಯನ್ನು ಸಲ್ಲಿಸಿದ್ದಾರೆ. ಅಂಥ ಮೇಧಾವಿ ರಾಜಕಾರಣಿಯನ್ನು ನಾವು ಕಳೆದುಕೊಂಡಿದ್ದೇವೆ. ದೇವರು ಅವರ ಆತ್ಮಕ್ಕೆ ಶಾಂತಿಯನ್ನು ನೀಡಲಿ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ನೀಡಲಿ ಎಂದು ಆ ಭಗವಂತನಲ್ಲಿ ಕೋರುತ್ತೇನೆ ಎಂದು ಅವರು ಹೇಳಿದ್ದಾರೆ.

  • Deeply saddened by the passing away of senior BJP leader & former CM of UP Shri Kalyan Singh Ji. A strong voice of backward communities, Kalyan Singh Ji will always be remembered for his charismatic leadership and integrity in public life. Condolences to his family. Om Shanti.

    — B.S. Yediyurappa (@BSYBJP) August 21, 2021 " class="align-text-top noRightClick twitterSection" data=" ">

ಮಾಜಿ ಸಿಎಂ ಬಿಎಸ್​​ವೈ ಸಂತಾಪ: ಬಿಜೆಪಿ ಹಿರಿಯ ನಾಯಕ ಹಾಗೂ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಜೀ ಅವರ ನಿಧನದ ಸುದ್ದಿ ಕೇಳಿ ಬಹಳ ದುಃಖವಾಗಿದೆ. ಹಿಂದುಳಿದ ಸಮುದಾಯಗಳ ಪ್ರಬಲ ಧ್ವನಿಯಾಗಿದ್ದ ಕಲ್ಯಾಣ್ ಸಿಂಗ್ ಅವರ ವರ್ಚಸ್ವಿ ನಾಯಕತ್ವ ಮತ್ತು ಸಾರ್ವಜನಿಕ ಜೀವನದಲ್ಲಿ ಸಮಗ್ರತೆಗಾಗಿ ಸದಾ ಎಲ್ಲರ ನೆನಪಾಗಿ ಉಳಿಯುತ್ತಾರೆ ಎಂದಿದ್ದಾರೆ. ಇದಲ್ಲದೇ ಬಿಜೆಪಿಯ ಹಲವು ನಾಯಕರು ಕಲ್ಯಾಣ್ ಸಿಂಗ್ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್​ ವಿಧಿವಶ

ಇದನ್ನೂ ಓದಿ: ವಿದೇಶಿ ಪ್ರಜೆಯ ಹೊಟ್ಟೆಯಲ್ಲಿ 11 ಕೋಟಿ ರೂ. ಮೌಲ್ಯದ ಮಾದಕ ವಸ್ತು ಪತ್ತೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.