ETV Bharat / city

ಭಾರತ್ ನೆಟ್​ಗೆ ಕರ್ನಾಟಕವನ್ನ ಸೇರಿಸಿ : ಕೇಂದ್ರ ಸರ್ಕಾರಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಮನವಿ - ಹುಬ್ಬಳ್ಳಿ- ಅಂಕೋಲಾ ರೈಲ್ವೇ ಮಾರ್ಗ

4300 ಕೋಟಿ ರೂ.ಗಳಲ್ಲಿ ರಾಜ್ಯದಲ್ಲಿ ಸಂಪೂರ್ಣ ನೆಟ್ ವರ್ಕಿಂಗ್ ಸಾಧ್ಯವಾಗುತ್ತದೆ. ಇದರಿಂದ ರಾಜ್ಯದಲ್ಲಿ ಗ್ರಾಮ ಪಂಚಾಯತ್‌ ಮಟ್ಟದಲ್ಲಿ ಆಡಳಿತಕ್ಕೆ, ವ್ಯಾಪಾರ, ವಹಿವಾಟಿಗೆ ಹಾಗೂ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಮನವಿ ಮಾಡಿದ್ದೇನೆ. ಇದಕ್ಕೆ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಅನುದಾನದ ಲಭ್ಯತೆ ಆಧಾರದಲ್ಲಿ ಯೋಜನೆ ಜಾರಿ ಮಾಡುವುದಾಗಿ ಕೇಂದ್ರ ಸಚಿವರು ಭರವಸೆ ನೀಡಿದ್ದಾರೆ..

bharat-net-project
ಸಿಎಂ ಬಸವರಾಜ ಬೊಮ್ಮಾಯಿ
author img

By

Published : Sep 7, 2021, 10:24 PM IST

ಬೆಂಗಳೂರು : ಗ್ರಾಮೀಣ ಪ್ರದೇಶಕ್ಕೆ ಅಂತರ್ಜಾಲ (ಇಂಟರ್ನೆಟ್) ಸೌಲಭ್ಯ ಕಲ್ಪಿಸುವ ದೇಶದ ಮಹತ್ವದ 'ಭಾರತ್ ನೆಟ್ ಯೋಜನೆ'ಗೆ ಕರ್ನಾಟಕ ರಾಜ್ಯವನ್ನು ಸೇರ್ಪಡೆ ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಭಾರತ್ ನೆಟ್​ಗೆ ಕರ್ನಾಟಕವನ್ನು ಸೇರಿಸುವಂತೆ ಕೇಂದ್ರ ಸರ್ಕಾರಕ್ಕೆ ಸಿಎಂ ಮನವಿ

ಸಿಎಂ ಇಂದು ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಮತ್ತು ದೂರಸಂಪರ್ಕ ಖಾತೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾದರು. ರಾಜ್ಯಕ್ಕೆ ಸಂಬಂಧಿಸಿದಂತೆ ಹಲವಾರು ವಿಷಯಗಳನ್ನು ಚರ್ಚಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಆಪ್ಟಿಕಲ್ ಫೈಬರ್ ನೆಟ್‌ವರ್ಕಿಂಗ್ ಬಹಳ ಸೀಮಿತವಾಗಿದೆ. ಭಾರತ್‌ ನೆಟ್​ಗೆ ಕರ್ನಾಟವನ್ನು ಸೇರ್ಪಡೆ ಮಾಡಬೇಕು.

4300 ಕೋಟಿ ರೂ.ಗಳಲ್ಲಿ ರಾಜ್ಯದಲ್ಲಿ ಸಂಪೂರ್ಣ ನೆಟ್ ವರ್ಕಿಂಗ್ ಸಾಧ್ಯವಾಗುತ್ತದೆ. ಇದರಿಂದ ರಾಜ್ಯದಲ್ಲಿ ಗ್ರಾಮ ಪಂಚಾಯತ್‌ ಮಟ್ಟದಲ್ಲಿ ಆಡಳಿತಕ್ಕೆ, ವ್ಯಾಪಾರ, ವಹಿವಾಟಿಗೆ ಹಾಗೂ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಮನವಿ ಮಾಡಿದ್ದೇನೆ. ಇದಕ್ಕೆ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಅನುದಾನದ ಲಭ್ಯತೆ ಆಧಾರದಲ್ಲಿ ಯೋಜನೆ ಜಾರಿ ಮಾಡುವುದಾಗಿ ಕೇಂದ್ರ ಸಚಿವರು ಭರವಸೆ ನೀಡಿದ್ದಾರೆ ಎಂದರು.

ರೈಲ್ವೆ ಯೋಜನೆಗೆ ಆದ್ಯತೆ : ರಾಜ್ಯದಲ್ಲಿ ರೈಲ್ವೆ ಅಭಿವೃದ್ಧಿ ಯೋಜನೆಗಳು, ಅದರಲ್ಲೂ ಪ್ರಮುಖವಾಗಿ ಈಗಾಗಲೇ ಪ್ರಾರಂಭ ಮಾಡಿರುವ ಕಾಮಗಾರಿಗಳನ್ನು ತೀವ್ರಗತಿಯಲ್ಲಿ ಕಾರ್ಯಗತಗೊಳಿಸುವ ಬಗ್ಗೆ ಚರ್ಚಿಸಲಾಗಿದೆ. ವಿಶೇಷವಾಗಿ ಕಲಬುರ್ಗಿಯಲ್ಲಿ ರೈಲ್ವೆ ಡಿವಿಜನ್ ಸ್ಥಾಪಿಸುವ ಬೇಡಿಕೆ ಇದೆ. ಇದರಿಂದ ಆ ಭಾಗದಲ್ಲಿ ಆರ್ಥಿಕ ಚಟುವಟಿಕೆಗಳಿಗೆ ಅನುಕೂಲವಾಗಲಿದೆ.

ಹುಬ್ಬಳ್ಳಿ-ಅಂಕೋಲಾ ರೈಲ್ವೆ ಮಾರ್ಗ ಬಹಳ ದಿನಗಳಿಂದ ನೆನಗುದಿಗೆ ಬಿದ್ದಿದೆ. ಪ್ರಕರಣ ಹೈಕೋರ್ಟಿನಲ್ಲಿದೆ. ಹೊಸ ಡಿಪಿಆರ್ ಮಾಡಲಾಗಿದ್ದರೂ ಅದನ್ನು ಪ್ರಶ್ನಿಸಲಾಗಿದೆ. ಆದಷ್ಟು ಬೇಗ ಆ ತಡೆಯಾಜ್ಞೆ ತೆರವುಗೊಳಿಸಲು ಪ್ರಯತ್ನಿಸಿ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಸಿಎಂ ಹೇಳಿದರು.‌

ಬೆಂಗಳೂರು ಸಬ್ ಅರ್ಬನ್ ರೈಲ್ವೆ ಆದಷ್ಟು ಬೇಗನೆ ಜಾರಿಗೆ ತರಬೇಕು. ಇದಕ್ಕೆ ಆಡಳಿತಾತ್ಮಕ ಅನುಮೋದನೆ ದೊರೆತಿದೆ. ಕೆ-ರೈಡ್ ಮತ್ತು ಕರ್ನಾಟಕದ ನಡುವೆ ರಿಯಾಯಿತಿ ಒಪ್ಪಂದ ಆಗಬೇಕು. ಸಂಪೂರ್ಣವಾಗಿ ಅಧಿಕಾರಿಗಳೊಂದಿಗೆ ಚರ್ಚೆ ಮಾಡಿ ತ್ವರಿತಗತಿಯಲ್ಲಿ ಮುಗಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಬೆಂಗಳೂರು : ಗ್ರಾಮೀಣ ಪ್ರದೇಶಕ್ಕೆ ಅಂತರ್ಜಾಲ (ಇಂಟರ್ನೆಟ್) ಸೌಲಭ್ಯ ಕಲ್ಪಿಸುವ ದೇಶದ ಮಹತ್ವದ 'ಭಾರತ್ ನೆಟ್ ಯೋಜನೆ'ಗೆ ಕರ್ನಾಟಕ ರಾಜ್ಯವನ್ನು ಸೇರ್ಪಡೆ ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಭಾರತ್ ನೆಟ್​ಗೆ ಕರ್ನಾಟಕವನ್ನು ಸೇರಿಸುವಂತೆ ಕೇಂದ್ರ ಸರ್ಕಾರಕ್ಕೆ ಸಿಎಂ ಮನವಿ

ಸಿಎಂ ಇಂದು ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಮತ್ತು ದೂರಸಂಪರ್ಕ ಖಾತೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾದರು. ರಾಜ್ಯಕ್ಕೆ ಸಂಬಂಧಿಸಿದಂತೆ ಹಲವಾರು ವಿಷಯಗಳನ್ನು ಚರ್ಚಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಆಪ್ಟಿಕಲ್ ಫೈಬರ್ ನೆಟ್‌ವರ್ಕಿಂಗ್ ಬಹಳ ಸೀಮಿತವಾಗಿದೆ. ಭಾರತ್‌ ನೆಟ್​ಗೆ ಕರ್ನಾಟವನ್ನು ಸೇರ್ಪಡೆ ಮಾಡಬೇಕು.

4300 ಕೋಟಿ ರೂ.ಗಳಲ್ಲಿ ರಾಜ್ಯದಲ್ಲಿ ಸಂಪೂರ್ಣ ನೆಟ್ ವರ್ಕಿಂಗ್ ಸಾಧ್ಯವಾಗುತ್ತದೆ. ಇದರಿಂದ ರಾಜ್ಯದಲ್ಲಿ ಗ್ರಾಮ ಪಂಚಾಯತ್‌ ಮಟ್ಟದಲ್ಲಿ ಆಡಳಿತಕ್ಕೆ, ವ್ಯಾಪಾರ, ವಹಿವಾಟಿಗೆ ಹಾಗೂ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಮನವಿ ಮಾಡಿದ್ದೇನೆ. ಇದಕ್ಕೆ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಅನುದಾನದ ಲಭ್ಯತೆ ಆಧಾರದಲ್ಲಿ ಯೋಜನೆ ಜಾರಿ ಮಾಡುವುದಾಗಿ ಕೇಂದ್ರ ಸಚಿವರು ಭರವಸೆ ನೀಡಿದ್ದಾರೆ ಎಂದರು.

ರೈಲ್ವೆ ಯೋಜನೆಗೆ ಆದ್ಯತೆ : ರಾಜ್ಯದಲ್ಲಿ ರೈಲ್ವೆ ಅಭಿವೃದ್ಧಿ ಯೋಜನೆಗಳು, ಅದರಲ್ಲೂ ಪ್ರಮುಖವಾಗಿ ಈಗಾಗಲೇ ಪ್ರಾರಂಭ ಮಾಡಿರುವ ಕಾಮಗಾರಿಗಳನ್ನು ತೀವ್ರಗತಿಯಲ್ಲಿ ಕಾರ್ಯಗತಗೊಳಿಸುವ ಬಗ್ಗೆ ಚರ್ಚಿಸಲಾಗಿದೆ. ವಿಶೇಷವಾಗಿ ಕಲಬುರ್ಗಿಯಲ್ಲಿ ರೈಲ್ವೆ ಡಿವಿಜನ್ ಸ್ಥಾಪಿಸುವ ಬೇಡಿಕೆ ಇದೆ. ಇದರಿಂದ ಆ ಭಾಗದಲ್ಲಿ ಆರ್ಥಿಕ ಚಟುವಟಿಕೆಗಳಿಗೆ ಅನುಕೂಲವಾಗಲಿದೆ.

ಹುಬ್ಬಳ್ಳಿ-ಅಂಕೋಲಾ ರೈಲ್ವೆ ಮಾರ್ಗ ಬಹಳ ದಿನಗಳಿಂದ ನೆನಗುದಿಗೆ ಬಿದ್ದಿದೆ. ಪ್ರಕರಣ ಹೈಕೋರ್ಟಿನಲ್ಲಿದೆ. ಹೊಸ ಡಿಪಿಆರ್ ಮಾಡಲಾಗಿದ್ದರೂ ಅದನ್ನು ಪ್ರಶ್ನಿಸಲಾಗಿದೆ. ಆದಷ್ಟು ಬೇಗ ಆ ತಡೆಯಾಜ್ಞೆ ತೆರವುಗೊಳಿಸಲು ಪ್ರಯತ್ನಿಸಿ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಸಿಎಂ ಹೇಳಿದರು.‌

ಬೆಂಗಳೂರು ಸಬ್ ಅರ್ಬನ್ ರೈಲ್ವೆ ಆದಷ್ಟು ಬೇಗನೆ ಜಾರಿಗೆ ತರಬೇಕು. ಇದಕ್ಕೆ ಆಡಳಿತಾತ್ಮಕ ಅನುಮೋದನೆ ದೊರೆತಿದೆ. ಕೆ-ರೈಡ್ ಮತ್ತು ಕರ್ನಾಟಕದ ನಡುವೆ ರಿಯಾಯಿತಿ ಒಪ್ಪಂದ ಆಗಬೇಕು. ಸಂಪೂರ್ಣವಾಗಿ ಅಧಿಕಾರಿಗಳೊಂದಿಗೆ ಚರ್ಚೆ ಮಾಡಿ ತ್ವರಿತಗತಿಯಲ್ಲಿ ಮುಗಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.