ETV Bharat / city

ರೈತರ ಒತ್ತಾಯಕ್ಕೆ ಪ್ರಧಾನಿ ಸ್ಪಂದನೆ- ನಮ್ಮದು ಸ್ಪಂದನಾಶೀಲ ಸರ್ಕಾರ: ಸಿಎಂ ಬೊಮ್ಮಾಯಿ ಸಮರ್ಥನೆ

author img

By

Published : Nov 19, 2021, 12:26 PM IST

ನಮ್ಮದು ಸ್ಪಂದನಾಶೀಲ ಸರ್ಕಾರ. ರೈತರ ಒತ್ತಾಯಕ್ಕೆ ನಮ್ಮ ಪ್ರಧಾನಿಗಳು ಸ್ಪಂದಿಸಿದ್ದಾರೆ ಎಂದು ಕೃಷಿ ತಿದ್ದುಪಡಿ ಕಾಯ್ದೆಗಳನ್ನು (Repeal of 3 farm laws) ವಾಪಸ್ ಪಡೆಯುತ್ತಿರುವ ವಿಚಾರವಾಗಿ ಸಿಎಂ ಬಸವರಾಜ ಬೊಮ್ಮಾಯಿ (CM Basavaraja bommai) ಪ್ರತಿಕ್ರಿಯೆ ನೀಡಿದ್ದಾರೆ.

CM Basavaraja bommai
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ನಮ್ಮದು ಸ್ಪಂದನಾಶೀಲ ಸರ್ಕಾರ. ರೈತರ ಒತ್ತಾಯಕ್ಕೆ ನಮ್ಮ ಪ್ರಧಾನಿಗಳು ಸ್ಪಂದಿಸಿದ್ದಾರೆ. ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಾಪಸ್ (Repeal of 3 farm laws) ಪಡೆಯುತ್ತಿರುವುದಕ್ಕೂ ಪಂಚರಾಜ್ಯಗಳ ಚುನಾವಣೆಗೂ ಯಾವುದೇ ಸಂಬಂಧ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraja bommai) ಸ್ಪಷ್ಟಪಡಿಸಿದ್ದಾರೆ.

ಬಹಳಷ್ಟು ಸುಧಾರಣೆಗಳ ಅವಶ್ಯಕತೆ ಇದೆ

ಆರ್‌ಟಿ ನಗರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂರು ಕೃಷಿ ತಿದ್ದುಪಡಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ವಾಪಸ್ ಪಡೆಯುತ್ತಿರುವುದಾಗಿ ಪ್ರಧಾನಿ ನರೇಂದ್ರ ಮೋದಿ(PM Narendra Modi) ಘೋಷಿಸಿದ್ದಾರೆ. ನಮ್ಮ ದೇಶದಲ್ಲಿ ಜಾಗತೀಕರಣ, ಉದಾರೀಕರಣ ಪ್ರಾರಂಭವಾಗಿದ್ದು ಯುಪಿಎ ಸರ್ಕಾರದ ಅವಧಿಯಲ್ಲಿ. ಅದರ ಅಂಗವಾಗಿ ಬಹಳಷ್ಟು ಹೊಸ ಕಾಯ್ದೆಗಳನ್ನು ತರಬೇಕು ಎಂದು ಅವರು ಚಿಂತನೆ ಮಾಡಿದ್ದರು. ವಿಶ್ವ ವಾಣಿಜ್ಯ ಒಪ್ಪಂದವನ್ನು ಯುಪಿಎ ಸರ್ಕಾರ ಇದ್ದಾಗಲೇ ಮಾಡಿದ್ದು, ಅದರಲ್ಲಿ ಬಹಳಷ್ಟು ಸುಧಾರಣೆಗಳನ್ನು ಕೃಷಿ ಮಾರುಕಟ್ಟೆ ವ್ಯಾಪ್ತಿಯಲ್ಲಿ ತರಬೇಕು ಎನ್ನುವುದು ಕೂಡ ಇದೆ ಎಂದು ಸಿಎಂ ಹೇಳಿದ್ದಾರೆ.

ರೈತರ ಮನವೊಲಿಸುವ ನಮ್ಮ ಪ್ರಯತ್ನ ವಿಫಲವಾಗಿದೆ

ಯುಪಿಎ ಸರ್ಕಾರದಲ್ಲಿ ಇದ್ದ ಕರಡು ನೀತಿಯನ್ನು ಎಲ್ಲ ರಾಜ್ಯದ ಅಭಿಪ್ರಾಯವನ್ನು ಕೇಳಿ ನೇರವಾಗಿ ರೈತರು ಬೆಳೆದ ಬೆಳೆಯನ್ನು ಎಲ್ಲಿ ಬೇಕಾದರೂ ಮಾರಾಟ ಮಾಡಬಹುದು ಎನ್ನುವ ತೀರ್ಮಾನ ಮಾಡಿ ಜಾರಿಗೆ ತರಲು ಹೊರಟಿದ್ದೆವು. ಆದರೆ, ಪಂಜಾಬ್, ಹರಿಯಾಣ ಸೇರಿ ಕೆಲ ರಾಜ್ಯದ ರೈತರು ಇದನ್ನು ವಿರೋಧಿಸಿ ಪ್ರತಿಭಟನೆ(farmers protest) ಮಾಡಿದರು. ರೈತರ ಮನವೊಲಿಸುವ ನಮ್ಮ ಪ್ರಯತ್ನ ವಿಫಲವಾಯಿತು.

ರೈತರ ಅಭಿಪ್ರಾಯಕ್ಕೆ ಸ್ಪಂದಿಸಿದ್ದಾರೆ

ಈ ಕುರಿತು ಇಂದು ಪ್ರಧಾನಿ ಮೋದಿ ಹೇಳಿಕೆ ನೀಡಿದ್ದಾರೆ. ರೈತರ ಜೊತೆ ಮಾತುಕತೆ ನಡೆಸಿ ಕಾಯ್ದೆಗಳ ಬಗ್ಗೆ ಮನವೊಲಿಸುವ ಪ್ರಯತ್ನ ಮಾಡಿದೆ. ಆದರೆ, ಅದು ವಿಫಲವಾಗಿದೆ. ಹಾಗಾಗಿ ಈ ಮೂರು ಕಾಯ್ದೆಗಳನ್ನು ನಾವು ವಾಪಸ್ ಪಡೆಯುತ್ತಿದ್ದೇವೆ ಎಂದು ಘೋಷಣೆ (PM Narendra Modi announces to repeal all three farm laws) ಮಾಡಿದ್ದಾರೆ. ಈ ಬಾರಿಯ ಸಂಸತ್ ಅಧಿವೇಶನದಲ್ಲಿ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ತಿಳಿಸಿದ್ದಾರೆ. ರೈತರ ಒತ್ತಾಯಕ್ಕೆ ಪ್ರಧಾನಿ ಸ್ಪಂದಿಸಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ಇದನ್ನೂ ಓದಿ: 3 ಕೃಷಿ ತಿದ್ದುಪಡಿ ಕಾಯ್ದೆ ವಾಪಸ್: 'ಇದು ಮತ ಫಸಲಿಗೆ ಮಾಡಿದ ಹೈಡ್ರಾಮಾ ಆಗದಿರಲಿ ಎಂದ ಹೆಚ್​ಡಿಕೆ'

ಕಾಯ್ದೆಗಳ ವಾಪಸಾತಿಗೂ ಚುನಾವಣೆಗೂ ಸಂಬಂಧವಿಲ್ಲ

ಈ ಕಾಯ್ದೆಗಳನ್ನು ವಾಪಸ್ ಪಡೆಯುತ್ತಿರುವುದಕ್ಕೂ ಪಂಚರಾಜ್ಯಗಳ ಚುನಾವಣೆಗೆ ಯಾವುದೇ ಸಂಬಂಧ ಇಲ್ಲ. ಆಯಾ ರಾಜ್ಯಗಳಲ್ಲಿ ನಡೆದ ಉಪಚುನಾವಣೆಯಲ್ಲಿ ನಾವು ಗೆದ್ದಿದ್ದೇವೆ. ಹಾಗಾಗಿ ಅದಕ್ಕೂ ಇದಕ್ಕೂ ಸಂಬಂಧವಿಲ್ಲ. ಕಾಯ್ದೆಯಲ್ಲಿ ಇನ್ನು ಸ್ವಲ್ಪ ಚರ್ಚೆಯಾಗಬೇಕು ಎನ್ನುವ ಕಾರಣಕ್ಕೆ ವಾಪಸ್ ಪಡೆಯಲಾಗಿದೆ ಎಂದರು.

ಬೆಂಗಳೂರು: ನಮ್ಮದು ಸ್ಪಂದನಾಶೀಲ ಸರ್ಕಾರ. ರೈತರ ಒತ್ತಾಯಕ್ಕೆ ನಮ್ಮ ಪ್ರಧಾನಿಗಳು ಸ್ಪಂದಿಸಿದ್ದಾರೆ. ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಾಪಸ್ (Repeal of 3 farm laws) ಪಡೆಯುತ್ತಿರುವುದಕ್ಕೂ ಪಂಚರಾಜ್ಯಗಳ ಚುನಾವಣೆಗೂ ಯಾವುದೇ ಸಂಬಂಧ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraja bommai) ಸ್ಪಷ್ಟಪಡಿಸಿದ್ದಾರೆ.

ಬಹಳಷ್ಟು ಸುಧಾರಣೆಗಳ ಅವಶ್ಯಕತೆ ಇದೆ

ಆರ್‌ಟಿ ನಗರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂರು ಕೃಷಿ ತಿದ್ದುಪಡಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ವಾಪಸ್ ಪಡೆಯುತ್ತಿರುವುದಾಗಿ ಪ್ರಧಾನಿ ನರೇಂದ್ರ ಮೋದಿ(PM Narendra Modi) ಘೋಷಿಸಿದ್ದಾರೆ. ನಮ್ಮ ದೇಶದಲ್ಲಿ ಜಾಗತೀಕರಣ, ಉದಾರೀಕರಣ ಪ್ರಾರಂಭವಾಗಿದ್ದು ಯುಪಿಎ ಸರ್ಕಾರದ ಅವಧಿಯಲ್ಲಿ. ಅದರ ಅಂಗವಾಗಿ ಬಹಳಷ್ಟು ಹೊಸ ಕಾಯ್ದೆಗಳನ್ನು ತರಬೇಕು ಎಂದು ಅವರು ಚಿಂತನೆ ಮಾಡಿದ್ದರು. ವಿಶ್ವ ವಾಣಿಜ್ಯ ಒಪ್ಪಂದವನ್ನು ಯುಪಿಎ ಸರ್ಕಾರ ಇದ್ದಾಗಲೇ ಮಾಡಿದ್ದು, ಅದರಲ್ಲಿ ಬಹಳಷ್ಟು ಸುಧಾರಣೆಗಳನ್ನು ಕೃಷಿ ಮಾರುಕಟ್ಟೆ ವ್ಯಾಪ್ತಿಯಲ್ಲಿ ತರಬೇಕು ಎನ್ನುವುದು ಕೂಡ ಇದೆ ಎಂದು ಸಿಎಂ ಹೇಳಿದ್ದಾರೆ.

ರೈತರ ಮನವೊಲಿಸುವ ನಮ್ಮ ಪ್ರಯತ್ನ ವಿಫಲವಾಗಿದೆ

ಯುಪಿಎ ಸರ್ಕಾರದಲ್ಲಿ ಇದ್ದ ಕರಡು ನೀತಿಯನ್ನು ಎಲ್ಲ ರಾಜ್ಯದ ಅಭಿಪ್ರಾಯವನ್ನು ಕೇಳಿ ನೇರವಾಗಿ ರೈತರು ಬೆಳೆದ ಬೆಳೆಯನ್ನು ಎಲ್ಲಿ ಬೇಕಾದರೂ ಮಾರಾಟ ಮಾಡಬಹುದು ಎನ್ನುವ ತೀರ್ಮಾನ ಮಾಡಿ ಜಾರಿಗೆ ತರಲು ಹೊರಟಿದ್ದೆವು. ಆದರೆ, ಪಂಜಾಬ್, ಹರಿಯಾಣ ಸೇರಿ ಕೆಲ ರಾಜ್ಯದ ರೈತರು ಇದನ್ನು ವಿರೋಧಿಸಿ ಪ್ರತಿಭಟನೆ(farmers protest) ಮಾಡಿದರು. ರೈತರ ಮನವೊಲಿಸುವ ನಮ್ಮ ಪ್ರಯತ್ನ ವಿಫಲವಾಯಿತು.

ರೈತರ ಅಭಿಪ್ರಾಯಕ್ಕೆ ಸ್ಪಂದಿಸಿದ್ದಾರೆ

ಈ ಕುರಿತು ಇಂದು ಪ್ರಧಾನಿ ಮೋದಿ ಹೇಳಿಕೆ ನೀಡಿದ್ದಾರೆ. ರೈತರ ಜೊತೆ ಮಾತುಕತೆ ನಡೆಸಿ ಕಾಯ್ದೆಗಳ ಬಗ್ಗೆ ಮನವೊಲಿಸುವ ಪ್ರಯತ್ನ ಮಾಡಿದೆ. ಆದರೆ, ಅದು ವಿಫಲವಾಗಿದೆ. ಹಾಗಾಗಿ ಈ ಮೂರು ಕಾಯ್ದೆಗಳನ್ನು ನಾವು ವಾಪಸ್ ಪಡೆಯುತ್ತಿದ್ದೇವೆ ಎಂದು ಘೋಷಣೆ (PM Narendra Modi announces to repeal all three farm laws) ಮಾಡಿದ್ದಾರೆ. ಈ ಬಾರಿಯ ಸಂಸತ್ ಅಧಿವೇಶನದಲ್ಲಿ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ತಿಳಿಸಿದ್ದಾರೆ. ರೈತರ ಒತ್ತಾಯಕ್ಕೆ ಪ್ರಧಾನಿ ಸ್ಪಂದಿಸಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ಇದನ್ನೂ ಓದಿ: 3 ಕೃಷಿ ತಿದ್ದುಪಡಿ ಕಾಯ್ದೆ ವಾಪಸ್: 'ಇದು ಮತ ಫಸಲಿಗೆ ಮಾಡಿದ ಹೈಡ್ರಾಮಾ ಆಗದಿರಲಿ ಎಂದ ಹೆಚ್​ಡಿಕೆ'

ಕಾಯ್ದೆಗಳ ವಾಪಸಾತಿಗೂ ಚುನಾವಣೆಗೂ ಸಂಬಂಧವಿಲ್ಲ

ಈ ಕಾಯ್ದೆಗಳನ್ನು ವಾಪಸ್ ಪಡೆಯುತ್ತಿರುವುದಕ್ಕೂ ಪಂಚರಾಜ್ಯಗಳ ಚುನಾವಣೆಗೆ ಯಾವುದೇ ಸಂಬಂಧ ಇಲ್ಲ. ಆಯಾ ರಾಜ್ಯಗಳಲ್ಲಿ ನಡೆದ ಉಪಚುನಾವಣೆಯಲ್ಲಿ ನಾವು ಗೆದ್ದಿದ್ದೇವೆ. ಹಾಗಾಗಿ ಅದಕ್ಕೂ ಇದಕ್ಕೂ ಸಂಬಂಧವಿಲ್ಲ. ಕಾಯ್ದೆಯಲ್ಲಿ ಇನ್ನು ಸ್ವಲ್ಪ ಚರ್ಚೆಯಾಗಬೇಕು ಎನ್ನುವ ಕಾರಣಕ್ಕೆ ವಾಪಸ್ ಪಡೆಯಲಾಗಿದೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.