ETV Bharat / city

'ಅಂತಾರಾಷ್ಟ್ರೀಯ ಮಟ್ಟದಲ್ಲಿ ಇಂಥ ವಿಷಯಗಳು ಮೊದಲು ಚರ್ಚೆಯಾಗಿ, ನಂತರ ಸ್ಥಳೀಯ ಮಟ್ಟಕ್ಕೆ ಬರುತ್ತವೆ'

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ವಿಧಾನಸೌಧದ ಆವರಣದಲ್ಲಿರುವ ಕೆಂಗಲ್ ಹನುಮಂತಯ್ಯ ಪ್ರತಿಮೆಗೆ ನಮನ‌ ಸಲ್ಲಿಸಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.

author img

By

Published : Feb 10, 2022, 12:46 PM IST

Updated : Feb 10, 2022, 1:58 PM IST

cm basavaraja bommai
ಕೆಂಗಲ್ ಹನುಮಂತಯ್ಯ ಪ್ರತಿಮೆಗೆ ನಮನ‌ ಸಲ್ಲಿಸಿದ ಬೊಮ್ಮಾಯಿ

ಬೆಂಗಳೂರು: ಹಿಜಾಬ್​, ಕೇಸರಿ ಶಾಲು ವಿವಾದಕ್ಕೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಇಂಥ ವಿಷಯಗಳ ಬಗ್ಗೆ ಮೊದಲು ಚರ್ಚೆಯಾಗುತ್ತದೆ, ಆಮೇಲೆ ಸ್ಥಳೀಯ ಮಟ್ಟಕ್ಕೆ ಬರುತ್ತದೆ ಎಂದು ಹೇಳಿದರು.

ಮುಖ್ಯಮಂತ್ರಿ ಬೊಮ್ಮಾಯಿ ಇಂದು ವಿಧಾನಸೌಧ ಆವರಣದಲ್ಲಿರುವ ಕೆಂಗಲ್ ಹನುಮಂತಯ್ಯ ಪ್ರತಿಮೆಗೆ ನಮನ‌ ಸಲ್ಲಿಸಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.


ಕೆಂಗಲ್ ಹನುಮಂತಯ್ಯ ಅವರ ತ್ಯಾಗದಿಂದ ಕರ್ನಾಟಕ ಒಂದಾಗಿದೆ. ಅವರು ಈ ನಾಡನ್ನು ಒಗ್ಗೂಡಿಸಿರುವ ಹಿರಿಯ ಚೇತನ. ದೂರದೃಷ್ಠಿಯ ಮಹತ್ವ ಹೇಳಿ ಕೊಟ್ಟ ಪುಣ್ಯಾತ್ಮ. ಕೆಂಗಲ್ ಹನುಮಂತಯ್ಯ ಅವರ ಪ್ರತಿಮೆಯನ್ನು ಅವರ ಊರಿನಲ್ಲಿ(ರಾಮನಗರ) ಈ ವರ್ಷವೇ ನಿರ್ಮಿಸುತ್ತೇವೆ ಎಂದು ತಿಳಿಸಿದರು.

ಅನುದಾನದ ಕೊರತೆ ಇಲ್ಲ: ಕೆಂಪೇಗೌಡರ ಪ್ರತಿಮೆ ಕಾಮಗಾರಿ ವಿಳಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಿಎಂ, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ ಪ್ರತಿಮೆ ಸ್ಥಾಪನೆಯಾಗುತ್ತಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆಯುವ ನಿಟ್ಟಿನಲ್ಲಿ ಪ್ರತಿಮೆ ನಿರ್ಮಾಣ ಮಾಡುತ್ತೇವೆ. ಅದಕ್ಕೆ ಯಾವುದೇ ಅನುದಾನದ ಕೊರತೆಯಾಗಲ್ಲ.‌ ಮಾಜಿ ಸಿಎಂ ಯಡಿಯೂರಪ್ಪನವರು ಘೋಷಿಸಿದ ಕಾಲದ ಮಿತಿಯಲ್ಲೇ ಪ್ರತಿಮೆ ನಿರ್ಮಾಣ ಮಾಡುತ್ತೇವೆ ಎಂದು ತಿಳಿಸಿದರು.

ಮಕ್ಕಳಲ್ಲಿ ಗೊಂದಲ ಸೃಷ್ಟಿಸುವುದು ಬೇಡ: ಹಿಜಾಬ್​, ಕೇಸರಿ ಶಾಲು ವಿವಾದಕ್ಕೆ ಪ್ರತಿಕ್ರಿಯಿಸಿ, ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವುದು ಎಲ್ಲರ ಕರ್ತವ್ಯ. ಮಕ್ಕಳಲ್ಲಿ ಗೊಂದಲ ಸೃಷ್ಟಿಸುವುದು ಬೇಡ. ಹೊರಗಡೆಯಿಂದ ಪ್ರಚೋದನೆ ನೀಡುವ ಕೆಲಸ ಆಗಬಾರದು. ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಸ್ವಯಂ ನಿಯಂತ್ರಣ ಮಾಡಬೇಕು ಎಂದು ಮನವಿ ಮಾಡಿದರು.

ಇದನ್ನೂ ಓದಿ: ಹಿಜಾಬ್ ವಿವಾದ: ಶಾಲಾ, ಕಾಲೇಜು ರಜೆ ವಿಸ್ತರಣೆ ಬಗ್ಗೆ ಸಂಜೆ ಸಭೆಯಲ್ಲಿ ತೀರ್ಮಾನ- ಸಿಎಂ

ನ್ಯಾಯಾಲಯ ನ್ಯಾಯ ಕೊಡುವುದಕ್ಕೆ ಶಾಂತಿಯುತ ವಾತಾವರಣ ನಿರ್ಮಾಣ ಮಾಡಿಕೊಡಬೇಕು. ಆಗ ನ್ಯಾಯ ಕೊಡುವುದಕ್ಕೆ ಸಾಧ್ಯವಾಗುತ್ತದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಇಂಥ ವಿಷಯಗಳ ಬಗ್ಗೆ ಮೊದಲು ಚರ್ಚೆಯಾಗುತ್ತದೆ, ಆಮೇಲೆ ಸ್ಥಳೀಯ ಮಟ್ಟಕ್ಕೆ ಬರುತ್ತದೆ ಬಿಡಿ ಎಂದು ಹೇಳಿ ಸಿಎಂ ತೆರಳಿದರು.

ಕೆಂಪೇಗೌಡ ಕ್ಯಾಲೆಂಡರ್, ಲಾಂಛನ ಬಿಡುಗಡೆ: ಇದಕ್ಕೂ ಮುನ್ನ ಕೆಂಗಲ್ ಹನುಮಂತಯ್ಯ ಪ್ರತಿಮೆ ಬಳಿ ನಾಡ ಪ್ರಭು ಕೆಂಪೇಗೌಡ ಪಾರಂಪರಿಕ ತಾಣದ ಅಭಿವೃದ್ಧಿ ಪ್ರಾಧಿಕಾರ ಹೊರತಂದಿರುವ ಕೆಂಪೇಗೌಡರ ಕ್ಯಾಲೆಂಡರ್ ಮತ್ತು ಲಾಂಛನವನ್ನು ಸಿಎಂ ಬಿಡುಗಡೆ ಮಾಡಿದರು.

ಬೆಂಗಳೂರು: ಹಿಜಾಬ್​, ಕೇಸರಿ ಶಾಲು ವಿವಾದಕ್ಕೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಇಂಥ ವಿಷಯಗಳ ಬಗ್ಗೆ ಮೊದಲು ಚರ್ಚೆಯಾಗುತ್ತದೆ, ಆಮೇಲೆ ಸ್ಥಳೀಯ ಮಟ್ಟಕ್ಕೆ ಬರುತ್ತದೆ ಎಂದು ಹೇಳಿದರು.

ಮುಖ್ಯಮಂತ್ರಿ ಬೊಮ್ಮಾಯಿ ಇಂದು ವಿಧಾನಸೌಧ ಆವರಣದಲ್ಲಿರುವ ಕೆಂಗಲ್ ಹನುಮಂತಯ್ಯ ಪ್ರತಿಮೆಗೆ ನಮನ‌ ಸಲ್ಲಿಸಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.


ಕೆಂಗಲ್ ಹನುಮಂತಯ್ಯ ಅವರ ತ್ಯಾಗದಿಂದ ಕರ್ನಾಟಕ ಒಂದಾಗಿದೆ. ಅವರು ಈ ನಾಡನ್ನು ಒಗ್ಗೂಡಿಸಿರುವ ಹಿರಿಯ ಚೇತನ. ದೂರದೃಷ್ಠಿಯ ಮಹತ್ವ ಹೇಳಿ ಕೊಟ್ಟ ಪುಣ್ಯಾತ್ಮ. ಕೆಂಗಲ್ ಹನುಮಂತಯ್ಯ ಅವರ ಪ್ರತಿಮೆಯನ್ನು ಅವರ ಊರಿನಲ್ಲಿ(ರಾಮನಗರ) ಈ ವರ್ಷವೇ ನಿರ್ಮಿಸುತ್ತೇವೆ ಎಂದು ತಿಳಿಸಿದರು.

ಅನುದಾನದ ಕೊರತೆ ಇಲ್ಲ: ಕೆಂಪೇಗೌಡರ ಪ್ರತಿಮೆ ಕಾಮಗಾರಿ ವಿಳಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಿಎಂ, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ ಪ್ರತಿಮೆ ಸ್ಥಾಪನೆಯಾಗುತ್ತಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆಯುವ ನಿಟ್ಟಿನಲ್ಲಿ ಪ್ರತಿಮೆ ನಿರ್ಮಾಣ ಮಾಡುತ್ತೇವೆ. ಅದಕ್ಕೆ ಯಾವುದೇ ಅನುದಾನದ ಕೊರತೆಯಾಗಲ್ಲ.‌ ಮಾಜಿ ಸಿಎಂ ಯಡಿಯೂರಪ್ಪನವರು ಘೋಷಿಸಿದ ಕಾಲದ ಮಿತಿಯಲ್ಲೇ ಪ್ರತಿಮೆ ನಿರ್ಮಾಣ ಮಾಡುತ್ತೇವೆ ಎಂದು ತಿಳಿಸಿದರು.

ಮಕ್ಕಳಲ್ಲಿ ಗೊಂದಲ ಸೃಷ್ಟಿಸುವುದು ಬೇಡ: ಹಿಜಾಬ್​, ಕೇಸರಿ ಶಾಲು ವಿವಾದಕ್ಕೆ ಪ್ರತಿಕ್ರಿಯಿಸಿ, ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವುದು ಎಲ್ಲರ ಕರ್ತವ್ಯ. ಮಕ್ಕಳಲ್ಲಿ ಗೊಂದಲ ಸೃಷ್ಟಿಸುವುದು ಬೇಡ. ಹೊರಗಡೆಯಿಂದ ಪ್ರಚೋದನೆ ನೀಡುವ ಕೆಲಸ ಆಗಬಾರದು. ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಸ್ವಯಂ ನಿಯಂತ್ರಣ ಮಾಡಬೇಕು ಎಂದು ಮನವಿ ಮಾಡಿದರು.

ಇದನ್ನೂ ಓದಿ: ಹಿಜಾಬ್ ವಿವಾದ: ಶಾಲಾ, ಕಾಲೇಜು ರಜೆ ವಿಸ್ತರಣೆ ಬಗ್ಗೆ ಸಂಜೆ ಸಭೆಯಲ್ಲಿ ತೀರ್ಮಾನ- ಸಿಎಂ

ನ್ಯಾಯಾಲಯ ನ್ಯಾಯ ಕೊಡುವುದಕ್ಕೆ ಶಾಂತಿಯುತ ವಾತಾವರಣ ನಿರ್ಮಾಣ ಮಾಡಿಕೊಡಬೇಕು. ಆಗ ನ್ಯಾಯ ಕೊಡುವುದಕ್ಕೆ ಸಾಧ್ಯವಾಗುತ್ತದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಇಂಥ ವಿಷಯಗಳ ಬಗ್ಗೆ ಮೊದಲು ಚರ್ಚೆಯಾಗುತ್ತದೆ, ಆಮೇಲೆ ಸ್ಥಳೀಯ ಮಟ್ಟಕ್ಕೆ ಬರುತ್ತದೆ ಬಿಡಿ ಎಂದು ಹೇಳಿ ಸಿಎಂ ತೆರಳಿದರು.

ಕೆಂಪೇಗೌಡ ಕ್ಯಾಲೆಂಡರ್, ಲಾಂಛನ ಬಿಡುಗಡೆ: ಇದಕ್ಕೂ ಮುನ್ನ ಕೆಂಗಲ್ ಹನುಮಂತಯ್ಯ ಪ್ರತಿಮೆ ಬಳಿ ನಾಡ ಪ್ರಭು ಕೆಂಪೇಗೌಡ ಪಾರಂಪರಿಕ ತಾಣದ ಅಭಿವೃದ್ಧಿ ಪ್ರಾಧಿಕಾರ ಹೊರತಂದಿರುವ ಕೆಂಪೇಗೌಡರ ಕ್ಯಾಲೆಂಡರ್ ಮತ್ತು ಲಾಂಛನವನ್ನು ಸಿಎಂ ಬಿಡುಗಡೆ ಮಾಡಿದರು.

Last Updated : Feb 10, 2022, 1:58 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.