ETV Bharat / city

ಡಿಕೆಶಿಗೆ ಬೆಕ್ಕಿನ ಕನಸಲ್ಲಿ ಇಲಿ ಎಂಬಂತಾಗಿದೆ: ಸಿಎಂ ತಿರುಗೇಟು

author img

By

Published : Dec 31, 2021, 11:01 AM IST

Updated : Dec 31, 2021, 11:35 AM IST

ದೇವಸ್ಥಾನಗಳನ್ನು ಆರ್​ಎಸ್ಎಸ್ ಮತ್ತು ಬಿಜೆಪಿ ಕಾರ್ಯಕರ್ತರಿಗೆ ಹಸ್ತಾಂತರ ಮಾಡಲು ಮುಂದಾಗಿದ್ದಾರೆ ಎಂಬ ಡಿಕೆಶಿ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ ಬೊಮ್ಮಾಯಿ, ಡಿಕೆಶಿ ಅವರ ಅಭಿಪ್ರಾಯ ಹಿಂದೂ ದೇವಸ್ಥಾನಗಳ ವಿರುದ್ಧ ಮತ್ತು ಹಿಂದೂ ಭಕ್ತರ ವಿರುದ್ಧ ಇರೋದು ಇದರಿಂದ ಸ್ಪಷ್ಟವಾಗಿದೆ ಎಂದು ವಾಗ್ದಾಳಿ ನಡೆಸಿದರು.

CM Bommai
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ದೇವಸ್ಥಾನಗಳಿಗೆ ಸ್ವಾತಂತ್ರ್ಯ ವಿಚಾರದಲ್ಲಿ ಡಿ.ಕೆ.ಶಿವಕುಮಾರ್​ ಅವರ ಹೇಳಿಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದು, ಡಿಕೆಶಿಗೆ ಬೆಕ್ಕಿನ ಕನಸಲ್ಲಿ ಇಲಿ ಎಂಬಂತಾಗಿದೆ ಎಂದು ಹೇಳಿದರು.

ಆರ್.ಟಿ.ನಗರ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ದೇವಸ್ಥಾನಗಳನ್ನು ಆರ್​ಎಸ್ಎಸ್ ಮತ್ತು ಬಿಜೆಪಿ ಕಾರ್ಯಕರ್ತರಿಗೆ ಹಸ್ತಾಂತರ ಮಾಡಲು ಮುಂದಾಗಿದ್ದಾರೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸುತ್ತಾ, ನಾವು ದೇವಸ್ಥಾನಗಳನ್ನು ಯಾರಿಗೂ ಹಸ್ತಾಂತರ ಮಾಡುತ್ತಿಲ್ಲ. ದೇವಸ್ಥಾನಗಳನ್ನು ಸರ್ಕಾರದ ಕಟ್ಟುಪಾಡುಗಳಿಂದ ಮುಕ್ತ ಮಾಡುತ್ತೇವೆ. ಡಿಕೆಶಿ ಅವರ ಅಭಿಪ್ರಾಯ ಹಿಂದೂ ದೇವಸ್ಥಾನಗಳ ವಿರುದ್ಧ ಮತ್ತು ಹಿಂದೂ ಭಕ್ತರ ವಿರುದ್ಧ ಇರೋದು ಇದರಿಂದ ಸ್ಪಷ್ಟವಾಗಿದೆ ಎಂದು ವಾಗ್ದಾಳಿ ನಡೆಸಿದರು.

ಮಾಧ್ಯಮಗಳೊಂದಿಗೆ ಸಿಎಂ ಬೊಮ್ಮಾಯಿ

ಇಡೀ ದೇಶದಲ್ಲಿ‌ ಕೋವಿಡ್, ಒಮಿಕ್ರಾನ್ ಹೆಚ್ಚಾಗ್ತಿದೆ. ಎಂಟು ರಾಜ್ಯಗಳಲ್ಲಿ ಕರ್ನಾಟಕವೂ ಒಂದು ಅಂತ ಕೇಂದ್ರ ಗುರುತಿಸಿದೆ. ಸರ್ಕಾರದಿಂದ ಹಲವು ಮುಂಜಾಗ್ರತೆ ತೆಗೆದುಕೊಂಡಿದ್ದೇವೆ. ಆಕ್ಸಿಜನ್ ಬೆಡ್​​ಗಳು, ಆರೋಗ್ಯ ಸೌಕರ್ಯಗಳನ್ನು ಒದಗಿಸುತ್ತಿದ್ದೇವೆ. ಕೇಸ್​ಗಳಿಗೆ ಅನುಗುಣವಾಗಿ ಮೆಡಿಕಲ್ ವ್ಯವಸ್ಥೆ ಮಾಡ್ಕೊಳ್ತಿದ್ದೇವೆ. ಇಡೀ ದೇಶದಲ್ಲಿ ಕೋವಿಡ್ ಜಾಸ್ತಿ ಆಗ್ತಿದೆ. ಬರುವ ದಿನಗಳಲ್ಲಿ ಕೇಸ್​​ಗಳು ಯಾವ ರೀತಿ‌ ಆಗ್ತಿವೆ ನೋಡಿಕೊಂಡು ಕ್ರಮಗಳನ್ನು ಕೈಗೊಳ್ತೇವೆ ಎಂದು ಸಿಎಂ ಇದೇ ವೇಳೆ ಹೇಳಿದರು.

ಇದನ್ನೂ ಓದಿ: ಹಿಂದೂ ದೇಗುಲಗಳನ್ನು ಕಾನೂನಿನ ಕಟ್ಟುಪಾಡುಗಳಿಂದ ಮುಕ್ತಗೊಳಿಸುತ್ತೇವೆ: ಬೊಮ್ಮಾಯಿ

ಇವತ್ತು ಜಿಲ್ಲಾಧಿಕಾರಿಗಳ ಸಭೆ ಕರೆದಿದ್ದೇನೆ. ಜಿಲ್ಲಾ ಮಟ್ಟದ ಹಲವು ಆಡಳಿತಾತ್ಮಕ ವಿಚಾರಗಳ ಬಗ್ಗೆ ಚರ್ಚೆ ನಡೆಸುತ್ತೇನೆ. ಯೋಜನೆಗಳ ಅನುಷ್ಠಾನದ ಬಗ್ಗೆ ಸುದೀರ್ಘ ಚರ್ಚೆ ನಡೆಸ್ತೇನೆ. ಬರುವ ದಿನಗಳಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗುವುದು. ಹೊಸ ವರ್ಷದಲ್ಲಿ ಹೊಸ ದಿಕ್ಸೂಚಿ ಅಡಿಯಲ್ಲಿ ಇನ್ನಷ್ಟು ಜನರೆಡೆಗೆ ಆಡಳಿತ ಕೊಂಡೊಯ್ಯುವ ಕೆಲಸ ಮಾಡುತ್ತೇವೆ ಎಂದು ಬೊಮ್ಮಾಯಿ ತಿಳಿಸಿದರು.

ರಾಜ್ಯದ ಮಹಾ ಜನತೆಗೆ ಹೊಸ ವರ್ಷದ ಶುಭಾಶಯಗಳು. ಕರ್ನಾಟಕ ಎಲ್ಲಾ ಸವಾಲುಗಳಿಂದ ಮುಕ್ತವಾಗಲಿ. ಜನಸಾಮಾನ್ಯರ ಬದುಕು ಉತ್ತಮಗೊಳ್ಳಲಿ, ಹಸನಾಗಲಿ. ಹೊಸ ವರ್ಷ ಜನತೆಗೆ ಹರ್ಷ ತರಲಿ ಎಂದು ಪ್ರಾರ್ಥನೆ ಮಾಡುತ್ತೇನೆ ಎಂದು ಸಿಎಂ ಶುಭ ಕೋರಿದರು.

ಬೆಂಗಳೂರು: ದೇವಸ್ಥಾನಗಳಿಗೆ ಸ್ವಾತಂತ್ರ್ಯ ವಿಚಾರದಲ್ಲಿ ಡಿ.ಕೆ.ಶಿವಕುಮಾರ್​ ಅವರ ಹೇಳಿಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದು, ಡಿಕೆಶಿಗೆ ಬೆಕ್ಕಿನ ಕನಸಲ್ಲಿ ಇಲಿ ಎಂಬಂತಾಗಿದೆ ಎಂದು ಹೇಳಿದರು.

ಆರ್.ಟಿ.ನಗರ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ದೇವಸ್ಥಾನಗಳನ್ನು ಆರ್​ಎಸ್ಎಸ್ ಮತ್ತು ಬಿಜೆಪಿ ಕಾರ್ಯಕರ್ತರಿಗೆ ಹಸ್ತಾಂತರ ಮಾಡಲು ಮುಂದಾಗಿದ್ದಾರೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸುತ್ತಾ, ನಾವು ದೇವಸ್ಥಾನಗಳನ್ನು ಯಾರಿಗೂ ಹಸ್ತಾಂತರ ಮಾಡುತ್ತಿಲ್ಲ. ದೇವಸ್ಥಾನಗಳನ್ನು ಸರ್ಕಾರದ ಕಟ್ಟುಪಾಡುಗಳಿಂದ ಮುಕ್ತ ಮಾಡುತ್ತೇವೆ. ಡಿಕೆಶಿ ಅವರ ಅಭಿಪ್ರಾಯ ಹಿಂದೂ ದೇವಸ್ಥಾನಗಳ ವಿರುದ್ಧ ಮತ್ತು ಹಿಂದೂ ಭಕ್ತರ ವಿರುದ್ಧ ಇರೋದು ಇದರಿಂದ ಸ್ಪಷ್ಟವಾಗಿದೆ ಎಂದು ವಾಗ್ದಾಳಿ ನಡೆಸಿದರು.

ಮಾಧ್ಯಮಗಳೊಂದಿಗೆ ಸಿಎಂ ಬೊಮ್ಮಾಯಿ

ಇಡೀ ದೇಶದಲ್ಲಿ‌ ಕೋವಿಡ್, ಒಮಿಕ್ರಾನ್ ಹೆಚ್ಚಾಗ್ತಿದೆ. ಎಂಟು ರಾಜ್ಯಗಳಲ್ಲಿ ಕರ್ನಾಟಕವೂ ಒಂದು ಅಂತ ಕೇಂದ್ರ ಗುರುತಿಸಿದೆ. ಸರ್ಕಾರದಿಂದ ಹಲವು ಮುಂಜಾಗ್ರತೆ ತೆಗೆದುಕೊಂಡಿದ್ದೇವೆ. ಆಕ್ಸಿಜನ್ ಬೆಡ್​​ಗಳು, ಆರೋಗ್ಯ ಸೌಕರ್ಯಗಳನ್ನು ಒದಗಿಸುತ್ತಿದ್ದೇವೆ. ಕೇಸ್​ಗಳಿಗೆ ಅನುಗುಣವಾಗಿ ಮೆಡಿಕಲ್ ವ್ಯವಸ್ಥೆ ಮಾಡ್ಕೊಳ್ತಿದ್ದೇವೆ. ಇಡೀ ದೇಶದಲ್ಲಿ ಕೋವಿಡ್ ಜಾಸ್ತಿ ಆಗ್ತಿದೆ. ಬರುವ ದಿನಗಳಲ್ಲಿ ಕೇಸ್​​ಗಳು ಯಾವ ರೀತಿ‌ ಆಗ್ತಿವೆ ನೋಡಿಕೊಂಡು ಕ್ರಮಗಳನ್ನು ಕೈಗೊಳ್ತೇವೆ ಎಂದು ಸಿಎಂ ಇದೇ ವೇಳೆ ಹೇಳಿದರು.

ಇದನ್ನೂ ಓದಿ: ಹಿಂದೂ ದೇಗುಲಗಳನ್ನು ಕಾನೂನಿನ ಕಟ್ಟುಪಾಡುಗಳಿಂದ ಮುಕ್ತಗೊಳಿಸುತ್ತೇವೆ: ಬೊಮ್ಮಾಯಿ

ಇವತ್ತು ಜಿಲ್ಲಾಧಿಕಾರಿಗಳ ಸಭೆ ಕರೆದಿದ್ದೇನೆ. ಜಿಲ್ಲಾ ಮಟ್ಟದ ಹಲವು ಆಡಳಿತಾತ್ಮಕ ವಿಚಾರಗಳ ಬಗ್ಗೆ ಚರ್ಚೆ ನಡೆಸುತ್ತೇನೆ. ಯೋಜನೆಗಳ ಅನುಷ್ಠಾನದ ಬಗ್ಗೆ ಸುದೀರ್ಘ ಚರ್ಚೆ ನಡೆಸ್ತೇನೆ. ಬರುವ ದಿನಗಳಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗುವುದು. ಹೊಸ ವರ್ಷದಲ್ಲಿ ಹೊಸ ದಿಕ್ಸೂಚಿ ಅಡಿಯಲ್ಲಿ ಇನ್ನಷ್ಟು ಜನರೆಡೆಗೆ ಆಡಳಿತ ಕೊಂಡೊಯ್ಯುವ ಕೆಲಸ ಮಾಡುತ್ತೇವೆ ಎಂದು ಬೊಮ್ಮಾಯಿ ತಿಳಿಸಿದರು.

ರಾಜ್ಯದ ಮಹಾ ಜನತೆಗೆ ಹೊಸ ವರ್ಷದ ಶುಭಾಶಯಗಳು. ಕರ್ನಾಟಕ ಎಲ್ಲಾ ಸವಾಲುಗಳಿಂದ ಮುಕ್ತವಾಗಲಿ. ಜನಸಾಮಾನ್ಯರ ಬದುಕು ಉತ್ತಮಗೊಳ್ಳಲಿ, ಹಸನಾಗಲಿ. ಹೊಸ ವರ್ಷ ಜನತೆಗೆ ಹರ್ಷ ತರಲಿ ಎಂದು ಪ್ರಾರ್ಥನೆ ಮಾಡುತ್ತೇನೆ ಎಂದು ಸಿಎಂ ಶುಭ ಕೋರಿದರು.

Last Updated : Dec 31, 2021, 11:35 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.