ETV Bharat / city

ರಾಜ್ಯಾದ್ಯಂತ ಬೂಸ್ಟರ್ ಡೋಸ್ ಲಸಿಕಾಭಿಯಾನಕ್ಕೆ ಸಿಎಂ ಚಾಲನೆ: ಸ್ಪುಟ್ನಿಕ್ ಲಸಿಕೆ ಪಡೆದವರಿಗಿಲ್ಲ ಬೂಸ್ಟರ್ ಡೋಸ್ - Precaution dose of COVID-19 vaccine

ಶಿವಾಜಿನಗರದಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ಕಾಲೇಜಿನಲ್ಲಿಂದು ಸಿಎಂ ಬಸವರಾಜ್ ಬೊಮ್ಮಾಯಿ ಬೂಸ್ಟರ್ ಡೋಸ್ ಲಸಿಕಾಭಿಯಾನಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಿದರು.

CM Bommai inaugurates booster vaccine dose drive
ರಾಜ್ಯಾದ್ಯಂತ ಬೂಸ್ಟರ್ ಡೋಸ್ ಲಸಿಕಾಭಿಯಾನಕ್ಕೆ ಸಿಎಂ ಚಾಲನೆ
author img

By

Published : Jan 10, 2022, 12:00 PM IST

Updated : Jan 10, 2022, 12:19 PM IST

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ತೀವ್ರತೆ ಹೆಚ್ಚಾಗ್ತಿದೆ. ಇದರ ಬೆನ್ನಲ್ಲೇ ಮುಂಜಾಗ್ರತಾ ಕ್ರಮವಾಗಿ ತಜ್ಞರ ಸೂಚನೆ ಮೇರೆಗೆ, ಆರೋಗ್ಯ ಸಿಬ್ಬಂದಿ, ಕೋವಿಡ್ ನಿಯಂತ್ರಣದ ಮುಂಚೂಣಿ ಕಾರ್ಯಕರ್ತರು ಹಾಗೂ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಇಂದಿನಿಂದ ಬೂಸ್ಟರ್ ಡೋಸ್ ನೀಡಲಾಗುತ್ತಿದೆ.

ಶಿವಾಜಿನಗರದಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ಕಾಲೇಜಿನಲ್ಲಿಂದು ಸಿಎಂ ಬಸವರಾಜ್ ಬೊಮ್ಮಾಯಿ ಬೂಸ್ಟರ್ ಡೋಸ್ ಲಸಿಕಾಭಿಯಾನಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಿದರು. ಇವರಿಗೆ ಆರೋಗ್ಯ ಸಚಿವ ಸುಧಾಕರ್ ಸಾಥ್ ನೀಡಿದರು.

ಬೂಸ್ಟರ್ ಡೋಸ್ ಲಸಿಕಾಭಿಯಾನಕ್ಕೆ ಸಿಎಂ ಚಾಲನೆ

ಚಾಲನೆ ನೀಡಿದ ಬಳಿಕ ಮಾತಾನಾಡಿದ ಸಿಎಂ ಬೊಮ್ಮಾಯಿ, ಇಂದಿನಿಂದ 60 ವರ್ಷ ಮೇಲ್ಪಟ್ಟವರಿಗೆ, ಆರೋಗ್ಯ ಹಾಗೂ ಫ್ರಂಟ್ ಲೈನ್ ವರ್ಕರ್ಸ್​​​ಗೆ ಮುನ್ನೆಚ್ಚರಿಕಾ ಲಸಿಕೆ ನೀಡಲಾಗುತ್ತಿದೆ. ಕೋವಿಡ್​​ನಿಂದ ರಕ್ಷಣೆ ಆಗಬೇಕು. ಇದಕ್ಕೆ ರಕ್ಷಾಕವಚ ಬೇಕಿದ್ದು, ವ್ಯಾಕ್ಸಿನೇಷನ್‌ ಅಗತ್ಯ‌. ಮೊದಮೊದಲು ವ್ಯಾಕ್ಸಿನ್‌ ಬಂದಾಗ ಹಲವು ದೇಶಗಳು ಕಡೆಗಣಿಸಿದ್ದವು, ಆಗ ಸೋಂಕಿತರ ಸಂಖ್ಯೆ ಹೆಚ್ಚಾಗಿದ್ದನ್ನ ಕಾಣಬಹುದು ಎಂದರು‌.

ಕೊರೊನಾ ನಿಯಮ ಪಾಲನೆಯಲ್ಲಿ ರಾಜಕೀಯ ಮಾಡಲ್ಲ

ಮೂರನೇ ಅಲೆ ಬಂದಿದ್ದು, ಸರ್ಕಾರದ ನಿಯಮಗಳನ್ನ ಪಾಲಿಸಬೇಕು. ‌ಇದರಲ್ಲಿ ಯಾವುದೇ ರಾಜಕೀಯ ಮಾಡಲ್ಲ ಅಂತ ಪರೋಕ್ಷವಾಗಿ ಬೊಮ್ಮಾಯಿ ಕಾಂಗ್ರೆಸ್ ಪಾದಯಾತ್ರೆಗೆ ತಿರುಗೇಟು ನೀಡಿದರು‌. ಕೊರೊನಾ ಏರಿಕೆ ಆಗ್ತಿದೆ ಎನ್ನುವಾಗಲೇ ಸಾಕಷ್ಟು ಮುಂಜಾಗ್ರತಾ ಕ್ರಮವನ್ನ ನಮ್ಮ ಸರ್ಕಾರ ಕೈಗೊಳ್ಳಗುತ್ತಿದೆ ಎಂದು ಸಚಿವ ಸುಧಾಕರ್ ತಿಳಿಸಿದರು.

ವಿರೋಧ ಪಕ್ಷ ಅಂದರೆ ಶ್ಯಾಡೋ ಲೀಡರ್ ಅಂತಾರೆ. ನಿಯಮವನ್ನ ಪಾಲಿಸೋದು ಆಡಳಿತ ಪಕ್ಷದ ಕೆಲಸ ಮಾತ್ರ ಅಲ್ಲ, ವಿರೋಧ ಪಕ್ಷವೂ ಪಾಲಿಸಬೇಕು. ಆದರೆ, ಇದನ್ನೆಲ್ಲ ಈಗ ವಿರೋಧ ಪಕ್ಷದವರು ಗಾಳಿಗೆ ತೂರಿದ್ದಾರೆ ಅಂತ ಅಸಮಾಧಾನ ವ್ಯಕ್ತಪಡಿಸಿದರು.

ನಾವು ಕಷ್ಟ ಪಟ್ಟು ಕೊರೊನಾ ನಿಯಂತ್ರಣ ಮಾಡುತ್ತಿದ್ದೇವೆ. ಆದರೆ ಅದೇ ವಿರೋಧ ಪಕ್ಷ ಪಾದಯಾತ್ರೆ ಹೆಸರಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳ ಮಾಡುತ್ತಿದ್ದಾರೆ. ಕಾನೂನು ವ್ಯಾಪ್ತಿಯಲ್ಲಿ ಏನು ಕ್ರಮ ಕೈಗೊಳ್ಳಬೇಕು ತೆಗೆದುಕೊಳ್ಳುತ್ತೇವೆ. ರಾಜಕಾರಣಿಗಳಿಗೆ ಒಂದು ಜನರಿಗೆ ಒಂದು ಕಾನೂನು ಮಾಡೋಲ್ಲ ಎಂದು ಸಿಎಂ ತಿಳಿಸಿದರು.

ಸ್ಪುಟ್ನಿಕ್ ಲಸಿಕೆ ಪಡೆದವರಿಗಿಲ್ಲ ಬೂಸ್ಟರ್ ಡೋಸ್

ಕೊವ್ಯಾಕ್ಸಿನ್ ಮತ್ತು ಕೋವಿಶೀಲ್ಡ್ ಲಸಿಕೆಯ ಮೊದಲನೇ ಮತ್ತು ಎರಡನೇ ಡೋಸ್ ಆಗಿ ಪಡೆದಿರುವವರು ಮಾತ್ರ ಮುನ್ನೆಚ್ಚರಿಕೆ ಡೋಸ್ ಲಸಿಕೆ ಪಡೆಯಲು ಅರ್ಹರಿರುತ್ತಾರೆ. ಸ್ಟುಟ್ನಿಕ್ ಲಸಿಕೆಯನ್ನು ಮೊದಲನೇ ಮತ್ತು ಎರಡನೇ ಡೋಸ್ ಪಡೆದಿರುವ ಫಲಾನುಭವಿಗಳು ಮುನ್ನೆಚ್ಚರಿಕೆ ಡೋನ್ ಲಸಿಕಾಕರಣಕ್ಕೆ ಅರ್ಹರಿರುವುದಿಲ್ಲ.

ಇನ್ನು ರಾಜ್ಯವು 18 ವರ್ಷ ಮೇಲ್ಪಟ್ಟ 4.89 ಕೋಟಿ ಲಸಿಕಾಕರಣ ನಡೆಸುವ ಗುರಿ ಹೊಂದಿದ್ದು, ಇದುವರೆಗೂ 4.8 ಕೋಟಿ (ಶೇ.99) ಫಲಾನುಭವಿಗಳಿಗೆ ಮೊದಲನೇ ಡೋಸ್ ಮತ್ತು 3.9 ಕೋಟಿ ( ಶೇ.81) ಜನರಿಗೆ ಎರಡೂ ಡೋಸ್ ನೀಡಲಾಗಿದೆ. 15-18 ವರ್ಷದ 31.75 ಲಕ್ಷ ಫಲಾನುಭವಿಗಳಿಗೆ ಲಸಿಕಾಕರಣ ನಡೆಸುವ ಗುರಿ ಹೊಂದಿದ್ದು, ಈಗಾಗಲೇ 15.5 ಲಕ್ಷ (ಶೇ. 49) ಫಲಾನುಭವಿಗಳಿಗೆ ಮೊದಲನೇ ಡೋಸ್ ಲಸಿಕೆ ನೀಡಲಾಗಿದೆ.

9 ತಿಂಗಳು ಪೂರೈಸಿದ ನಂತರ ಬೂಸ್ಟರ್ ಡೋಸ್

ಇನ್ನು ರಾಜ್ಯದಲ್ಲಿ ಮೊದಲ ಹಾಗೂ ಎರಡನೇ ಡೋಸ್ ಪಡೆದು 9 ತಿಂಗಳು (39 ವಾರಗಳನ್ನು) ಪೂರೈಸಿದ 6 ಲಕ್ಷ ಆರೋಗ್ಯ ಕಾರ್ಯಕರ್ತರು, 7 ಲಕ್ಷ ಮುಂಚೂಣಿ ಕಾರ್ಯಕರ್ತರು ಮತ್ತು 60 ವರ್ಷ ಮೇಲ್ಪಟ್ಟ 8 ಲಕ್ಷ ಜನರು ಹಾಗೂ ಅಸ್ವಸ್ಥತೆ ಹೊಂದಿರುವ ಫಲಾನುಭವಿಗಳು ಸಹ ಲಸಿಕೆ ಪಡೆಯಲಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ತೀವ್ರತೆ ಹೆಚ್ಚಾಗ್ತಿದೆ. ಇದರ ಬೆನ್ನಲ್ಲೇ ಮುಂಜಾಗ್ರತಾ ಕ್ರಮವಾಗಿ ತಜ್ಞರ ಸೂಚನೆ ಮೇರೆಗೆ, ಆರೋಗ್ಯ ಸಿಬ್ಬಂದಿ, ಕೋವಿಡ್ ನಿಯಂತ್ರಣದ ಮುಂಚೂಣಿ ಕಾರ್ಯಕರ್ತರು ಹಾಗೂ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಇಂದಿನಿಂದ ಬೂಸ್ಟರ್ ಡೋಸ್ ನೀಡಲಾಗುತ್ತಿದೆ.

ಶಿವಾಜಿನಗರದಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ಕಾಲೇಜಿನಲ್ಲಿಂದು ಸಿಎಂ ಬಸವರಾಜ್ ಬೊಮ್ಮಾಯಿ ಬೂಸ್ಟರ್ ಡೋಸ್ ಲಸಿಕಾಭಿಯಾನಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಿದರು. ಇವರಿಗೆ ಆರೋಗ್ಯ ಸಚಿವ ಸುಧಾಕರ್ ಸಾಥ್ ನೀಡಿದರು.

ಬೂಸ್ಟರ್ ಡೋಸ್ ಲಸಿಕಾಭಿಯಾನಕ್ಕೆ ಸಿಎಂ ಚಾಲನೆ

ಚಾಲನೆ ನೀಡಿದ ಬಳಿಕ ಮಾತಾನಾಡಿದ ಸಿಎಂ ಬೊಮ್ಮಾಯಿ, ಇಂದಿನಿಂದ 60 ವರ್ಷ ಮೇಲ್ಪಟ್ಟವರಿಗೆ, ಆರೋಗ್ಯ ಹಾಗೂ ಫ್ರಂಟ್ ಲೈನ್ ವರ್ಕರ್ಸ್​​​ಗೆ ಮುನ್ನೆಚ್ಚರಿಕಾ ಲಸಿಕೆ ನೀಡಲಾಗುತ್ತಿದೆ. ಕೋವಿಡ್​​ನಿಂದ ರಕ್ಷಣೆ ಆಗಬೇಕು. ಇದಕ್ಕೆ ರಕ್ಷಾಕವಚ ಬೇಕಿದ್ದು, ವ್ಯಾಕ್ಸಿನೇಷನ್‌ ಅಗತ್ಯ‌. ಮೊದಮೊದಲು ವ್ಯಾಕ್ಸಿನ್‌ ಬಂದಾಗ ಹಲವು ದೇಶಗಳು ಕಡೆಗಣಿಸಿದ್ದವು, ಆಗ ಸೋಂಕಿತರ ಸಂಖ್ಯೆ ಹೆಚ್ಚಾಗಿದ್ದನ್ನ ಕಾಣಬಹುದು ಎಂದರು‌.

ಕೊರೊನಾ ನಿಯಮ ಪಾಲನೆಯಲ್ಲಿ ರಾಜಕೀಯ ಮಾಡಲ್ಲ

ಮೂರನೇ ಅಲೆ ಬಂದಿದ್ದು, ಸರ್ಕಾರದ ನಿಯಮಗಳನ್ನ ಪಾಲಿಸಬೇಕು. ‌ಇದರಲ್ಲಿ ಯಾವುದೇ ರಾಜಕೀಯ ಮಾಡಲ್ಲ ಅಂತ ಪರೋಕ್ಷವಾಗಿ ಬೊಮ್ಮಾಯಿ ಕಾಂಗ್ರೆಸ್ ಪಾದಯಾತ್ರೆಗೆ ತಿರುಗೇಟು ನೀಡಿದರು‌. ಕೊರೊನಾ ಏರಿಕೆ ಆಗ್ತಿದೆ ಎನ್ನುವಾಗಲೇ ಸಾಕಷ್ಟು ಮುಂಜಾಗ್ರತಾ ಕ್ರಮವನ್ನ ನಮ್ಮ ಸರ್ಕಾರ ಕೈಗೊಳ್ಳಗುತ್ತಿದೆ ಎಂದು ಸಚಿವ ಸುಧಾಕರ್ ತಿಳಿಸಿದರು.

ವಿರೋಧ ಪಕ್ಷ ಅಂದರೆ ಶ್ಯಾಡೋ ಲೀಡರ್ ಅಂತಾರೆ. ನಿಯಮವನ್ನ ಪಾಲಿಸೋದು ಆಡಳಿತ ಪಕ್ಷದ ಕೆಲಸ ಮಾತ್ರ ಅಲ್ಲ, ವಿರೋಧ ಪಕ್ಷವೂ ಪಾಲಿಸಬೇಕು. ಆದರೆ, ಇದನ್ನೆಲ್ಲ ಈಗ ವಿರೋಧ ಪಕ್ಷದವರು ಗಾಳಿಗೆ ತೂರಿದ್ದಾರೆ ಅಂತ ಅಸಮಾಧಾನ ವ್ಯಕ್ತಪಡಿಸಿದರು.

ನಾವು ಕಷ್ಟ ಪಟ್ಟು ಕೊರೊನಾ ನಿಯಂತ್ರಣ ಮಾಡುತ್ತಿದ್ದೇವೆ. ಆದರೆ ಅದೇ ವಿರೋಧ ಪಕ್ಷ ಪಾದಯಾತ್ರೆ ಹೆಸರಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳ ಮಾಡುತ್ತಿದ್ದಾರೆ. ಕಾನೂನು ವ್ಯಾಪ್ತಿಯಲ್ಲಿ ಏನು ಕ್ರಮ ಕೈಗೊಳ್ಳಬೇಕು ತೆಗೆದುಕೊಳ್ಳುತ್ತೇವೆ. ರಾಜಕಾರಣಿಗಳಿಗೆ ಒಂದು ಜನರಿಗೆ ಒಂದು ಕಾನೂನು ಮಾಡೋಲ್ಲ ಎಂದು ಸಿಎಂ ತಿಳಿಸಿದರು.

ಸ್ಪುಟ್ನಿಕ್ ಲಸಿಕೆ ಪಡೆದವರಿಗಿಲ್ಲ ಬೂಸ್ಟರ್ ಡೋಸ್

ಕೊವ್ಯಾಕ್ಸಿನ್ ಮತ್ತು ಕೋವಿಶೀಲ್ಡ್ ಲಸಿಕೆಯ ಮೊದಲನೇ ಮತ್ತು ಎರಡನೇ ಡೋಸ್ ಆಗಿ ಪಡೆದಿರುವವರು ಮಾತ್ರ ಮುನ್ನೆಚ್ಚರಿಕೆ ಡೋಸ್ ಲಸಿಕೆ ಪಡೆಯಲು ಅರ್ಹರಿರುತ್ತಾರೆ. ಸ್ಟುಟ್ನಿಕ್ ಲಸಿಕೆಯನ್ನು ಮೊದಲನೇ ಮತ್ತು ಎರಡನೇ ಡೋಸ್ ಪಡೆದಿರುವ ಫಲಾನುಭವಿಗಳು ಮುನ್ನೆಚ್ಚರಿಕೆ ಡೋನ್ ಲಸಿಕಾಕರಣಕ್ಕೆ ಅರ್ಹರಿರುವುದಿಲ್ಲ.

ಇನ್ನು ರಾಜ್ಯವು 18 ವರ್ಷ ಮೇಲ್ಪಟ್ಟ 4.89 ಕೋಟಿ ಲಸಿಕಾಕರಣ ನಡೆಸುವ ಗುರಿ ಹೊಂದಿದ್ದು, ಇದುವರೆಗೂ 4.8 ಕೋಟಿ (ಶೇ.99) ಫಲಾನುಭವಿಗಳಿಗೆ ಮೊದಲನೇ ಡೋಸ್ ಮತ್ತು 3.9 ಕೋಟಿ ( ಶೇ.81) ಜನರಿಗೆ ಎರಡೂ ಡೋಸ್ ನೀಡಲಾಗಿದೆ. 15-18 ವರ್ಷದ 31.75 ಲಕ್ಷ ಫಲಾನುಭವಿಗಳಿಗೆ ಲಸಿಕಾಕರಣ ನಡೆಸುವ ಗುರಿ ಹೊಂದಿದ್ದು, ಈಗಾಗಲೇ 15.5 ಲಕ್ಷ (ಶೇ. 49) ಫಲಾನುಭವಿಗಳಿಗೆ ಮೊದಲನೇ ಡೋಸ್ ಲಸಿಕೆ ನೀಡಲಾಗಿದೆ.

9 ತಿಂಗಳು ಪೂರೈಸಿದ ನಂತರ ಬೂಸ್ಟರ್ ಡೋಸ್

ಇನ್ನು ರಾಜ್ಯದಲ್ಲಿ ಮೊದಲ ಹಾಗೂ ಎರಡನೇ ಡೋಸ್ ಪಡೆದು 9 ತಿಂಗಳು (39 ವಾರಗಳನ್ನು) ಪೂರೈಸಿದ 6 ಲಕ್ಷ ಆರೋಗ್ಯ ಕಾರ್ಯಕರ್ತರು, 7 ಲಕ್ಷ ಮುಂಚೂಣಿ ಕಾರ್ಯಕರ್ತರು ಮತ್ತು 60 ವರ್ಷ ಮೇಲ್ಪಟ್ಟ 8 ಲಕ್ಷ ಜನರು ಹಾಗೂ ಅಸ್ವಸ್ಥತೆ ಹೊಂದಿರುವ ಫಲಾನುಭವಿಗಳು ಸಹ ಲಸಿಕೆ ಪಡೆಯಲಿದ್ದಾರೆ.

Last Updated : Jan 10, 2022, 12:19 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.