ETV Bharat / city

ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಬಳಿ ಅಂಬೇಡ್ಕರ್ ಪುತ್ಥಳಿ ಅನಾವರಣ

author img

By

Published : Apr 25, 2022, 5:34 PM IST

ಡಾ.ಅಂಬೇಡ್ಕರ್ ಅವರು ರಚಿಸಿದ ಭಾರತ ಸಂವಿಧಾನ ಶ್ರೇಷ್ಠ ಸಂವಿಧಾನವಾಗಿದೆ. ಕೇವಲ ಆಡಳಿತಗಾರರಿಗೆ ಮಾತ್ರವಲ್ಲ, ದೇಶದ ಪ್ರತಿ ನಾಗರಿಕನಿಗೂ ಅಧಿಕಾರವನ್ನು ಕೊಟ್ಟಿದೆ. ನ್ಯಾಯ, ನೀತಿ, ಬಡವರಿಗೆ ರಕ್ಷಣೆ, ತುಳಿತಕ್ಕೊಳಗಾದವರಿಗೆ ಸ್ವಾಭಿಮಾನ ನೀಡಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಬಳಿ ಅಂಬೇಡ್ಕರ್ ಪುತ್ಥಳಿ ಅನಾವರಣ
ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಬಳಿ ಅಂಬೇಡ್ಕರ್ ಪುತ್ಥಳಿ ಅನಾವರಣ

ಬೆಂಗಳೂರು: ಮಾನವೀಯ ಗುಣಗಳೇ ಭಾರತದ ದೇಶದ ಅಂತರ್ಗತ ಶಕ್ತಿಯಾಗಿದ್ದು, ಪ್ರತಿ ಭಾರತೀಯನನ್ನು ಒಗ್ಗೂಡಿಸುವಲ್ಲಿ ಮಹತ್ವದ ಪಾತ್ರ ವಹಿಸಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಸಮೀಪದ ವಿಭಾಗೀಯ ರೈಲ್ವೆ ವ್ಯವಸ್ಥಾಪಕರ ಕಚೇರಿ ಆವರಣದ ಬಳಿ ಅಖಿಲ ಭಾರತ ಪರಿಶಿಷ್ಟ ಜಾತಿ/ವರ್ಗದ ರೈಲ್ವೆ ನೌಕರ ಸಂಘದಿಂದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿ ಅನಾವರಣಗೊಳಿಸಿ ಅವರು ಮಾತನಾಡಿದರು.

ಡಾ.ಅಂಬೇಡ್ಕರ್ ಅವರು ರಚಿಸಿದ ಭಾರತ ಸಂವಿಧಾನ ಶ್ರೇಷ್ಠ ಸಂವಿಧಾನವಾಗಿದೆ. ಕೇವಲ ಆಡಳಿತಗಾರರಿಗೆ ಮಾತ್ರವಲ್ಲ, ದೇಶದ ಪ್ರತಿ ನಾಗರಿಕನಿಗೂ ಅಧಿಕಾರವನ್ನು ಕೊಟ್ಟಿದೆ. ನ್ಯಾಯ, ನೀತಿ, ಬಡವರಿಗೆ ರಕ್ಷಣೆ, ತುಳಿತಕ್ಕೊಳಗಾದವರಿಗೆ ಸ್ವಾಭಿಮಾನ ನೀಡಿದೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ತಳಹಂತದ, ಅವಕಾಶವಂಚಿತ, ಶಿಕ್ಷಣವಂಚಿತ ಸಮಾಜದವರು ಸ್ವಾವಲಂಬನೆಯ ಸ್ವಾಭಿಮಾನದ ಸಮಾಜವನ್ನು ಕಟ್ಟಿಕೊಳ್ಳಲು ತಮ್ಮ ಜೀವನವನ್ನೇ ಮುಡುಪಾಗಿಟ್ಟರು ಎಂದು ಸಿಎಂ ನೆನೆದರು.

ಹಕ್ಕುಗಳಿಂದ ವಂಚಿತರಾಗಿದ್ದ ಜನರಿಗೆ ನ್ಯಾಯ ಒದಗಿಸಿದರು. ಸ್ವತಂತ್ರ ಭಾರತದಲ್ಲಿ ತುಳಿತಕ್ಕೊಳಗಾದ ಜನರ ಭವಿಷ್ಯದ ಬಗ್ಗೆ ಚಿಂತನೆ ಮಾಡಿದವರು. ಆರ್​ಬಿಐ ಸ್ಥಾಪನೆಗೆ ರೂಪುರೇಷೆ ರಚಿಸಿದರು. ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಬದಲಾವಣೆ ತರುವ ಮೂಲಕ ಅವರ ಸಾವಿರಾರು ವರ್ಷ ಗಟ್ಟಿನಿಲ್ಲುವಂತಹ ಕಾರ್ಯಗಳನ್ನು ಮಾಡಿದ್ದಾರೆ. ಅವರ ವಿಚಾರಧಾರೆಗಳನ್ನು ಕಾರ್ಯರೂಪಕ್ಕೆ ತರುವುದು ನಮ್ಮೆಲ್ಲರ ಕರ್ತವ್ಯ. ಡಾ.ಅಂಬೇಡ್ಕರ್ ಅವರ ಪ್ರತಿಮೆ ಸ್ಥಾಪನೆಯಿಂದ ಅವರ ಮೌಲ್ಯಗಳನ್ನು ಸ್ಥಾಪಿಸಿದಂತಾಗಿದೆ ಎಂದು ತಿಳಿಸಿದರು.

(ಇದನ್ನೂ ಓದಿ: ಕೋವಿಡ್ 4ನೇ ಅಲೆ ಭೀತಿ: ರಾಜ್ಯದಲ್ಲಿ ಮಾಸ್ಕ್ ಕಡ್ಡಾಯ.. ಸರ್ಕಾರದಿಂದ ಹೊಸ ಮಾರ್ಗಸೂಚಿ)

ಬೆಂಗಳೂರು: ಮಾನವೀಯ ಗುಣಗಳೇ ಭಾರತದ ದೇಶದ ಅಂತರ್ಗತ ಶಕ್ತಿಯಾಗಿದ್ದು, ಪ್ರತಿ ಭಾರತೀಯನನ್ನು ಒಗ್ಗೂಡಿಸುವಲ್ಲಿ ಮಹತ್ವದ ಪಾತ್ರ ವಹಿಸಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಸಮೀಪದ ವಿಭಾಗೀಯ ರೈಲ್ವೆ ವ್ಯವಸ್ಥಾಪಕರ ಕಚೇರಿ ಆವರಣದ ಬಳಿ ಅಖಿಲ ಭಾರತ ಪರಿಶಿಷ್ಟ ಜಾತಿ/ವರ್ಗದ ರೈಲ್ವೆ ನೌಕರ ಸಂಘದಿಂದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿ ಅನಾವರಣಗೊಳಿಸಿ ಅವರು ಮಾತನಾಡಿದರು.

ಡಾ.ಅಂಬೇಡ್ಕರ್ ಅವರು ರಚಿಸಿದ ಭಾರತ ಸಂವಿಧಾನ ಶ್ರೇಷ್ಠ ಸಂವಿಧಾನವಾಗಿದೆ. ಕೇವಲ ಆಡಳಿತಗಾರರಿಗೆ ಮಾತ್ರವಲ್ಲ, ದೇಶದ ಪ್ರತಿ ನಾಗರಿಕನಿಗೂ ಅಧಿಕಾರವನ್ನು ಕೊಟ್ಟಿದೆ. ನ್ಯಾಯ, ನೀತಿ, ಬಡವರಿಗೆ ರಕ್ಷಣೆ, ತುಳಿತಕ್ಕೊಳಗಾದವರಿಗೆ ಸ್ವಾಭಿಮಾನ ನೀಡಿದೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ತಳಹಂತದ, ಅವಕಾಶವಂಚಿತ, ಶಿಕ್ಷಣವಂಚಿತ ಸಮಾಜದವರು ಸ್ವಾವಲಂಬನೆಯ ಸ್ವಾಭಿಮಾನದ ಸಮಾಜವನ್ನು ಕಟ್ಟಿಕೊಳ್ಳಲು ತಮ್ಮ ಜೀವನವನ್ನೇ ಮುಡುಪಾಗಿಟ್ಟರು ಎಂದು ಸಿಎಂ ನೆನೆದರು.

ಹಕ್ಕುಗಳಿಂದ ವಂಚಿತರಾಗಿದ್ದ ಜನರಿಗೆ ನ್ಯಾಯ ಒದಗಿಸಿದರು. ಸ್ವತಂತ್ರ ಭಾರತದಲ್ಲಿ ತುಳಿತಕ್ಕೊಳಗಾದ ಜನರ ಭವಿಷ್ಯದ ಬಗ್ಗೆ ಚಿಂತನೆ ಮಾಡಿದವರು. ಆರ್​ಬಿಐ ಸ್ಥಾಪನೆಗೆ ರೂಪುರೇಷೆ ರಚಿಸಿದರು. ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಬದಲಾವಣೆ ತರುವ ಮೂಲಕ ಅವರ ಸಾವಿರಾರು ವರ್ಷ ಗಟ್ಟಿನಿಲ್ಲುವಂತಹ ಕಾರ್ಯಗಳನ್ನು ಮಾಡಿದ್ದಾರೆ. ಅವರ ವಿಚಾರಧಾರೆಗಳನ್ನು ಕಾರ್ಯರೂಪಕ್ಕೆ ತರುವುದು ನಮ್ಮೆಲ್ಲರ ಕರ್ತವ್ಯ. ಡಾ.ಅಂಬೇಡ್ಕರ್ ಅವರ ಪ್ರತಿಮೆ ಸ್ಥಾಪನೆಯಿಂದ ಅವರ ಮೌಲ್ಯಗಳನ್ನು ಸ್ಥಾಪಿಸಿದಂತಾಗಿದೆ ಎಂದು ತಿಳಿಸಿದರು.

(ಇದನ್ನೂ ಓದಿ: ಕೋವಿಡ್ 4ನೇ ಅಲೆ ಭೀತಿ: ರಾಜ್ಯದಲ್ಲಿ ಮಾಸ್ಕ್ ಕಡ್ಡಾಯ.. ಸರ್ಕಾರದಿಂದ ಹೊಸ ಮಾರ್ಗಸೂಚಿ)

ETV Bharat Logo

Copyright © 2024 Ushodaya Enterprises Pvt. Ltd., All Rights Reserved.