ETV Bharat / city

ಜನತಾಪರಿವಾರದ ಬೇರು ಆಳವಾಗಿ ಬೇರೂರಲು ರಾಮಕೃಷ್ಣ ಹೆಗಡೆ ಕಾರಣ: ಸಿಎಂ ಬೊಮ್ಮಾಯಿ

author img

By

Published : Aug 29, 2021, 3:11 PM IST

ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ 95ನೇ ಜನ್ಮದಿನದ ಪ್ರಯುಕ್ತ ಸಿಎಂ ಬಸವರಾಜ ಬೊಮ್ಮಾಯಿ ಭಾವಪೂರ್ಣ ನಮನಗಳನ್ನು ಸಲ್ಲಿಸಿದ್ದಾರೆ.

ಸಿಎಂ ಬೊಮ್ಮಾಯಿ
ಸಿಎಂ ಬೊಮ್ಮಾಯಿ

ಬೆಂಗಳೂರು: ರಾಮಕೃಷ್ಣ ಹೆಗಡೆ ಅವರ ಆಡಳಿತ ಶೈಲಿ, ವಾಕ್ಪಟುತ್ವ, ನೇರ ಮತ್ತು ನಿಷ್ಠುರ ನಡೆಯಿಂದ ನಮ್ಮದೊಂದು ಪೀಳಿಗೆಯೇ ಪ್ರಭಾವಿತವಾಗಿತ್ತು. ಅಂತಹ ಮುತ್ಸದ್ದಿ ಮತ್ತು ಸುಸಂಸ್ಕೃತ ನಾಯಕನ ಒಡನಾಟ ನಮಗೆ ದೊರೆತದ್ದು ನಮ್ಮ ಸುದೈವ ಎಂದೇ ಭಾವಿಸುತ್ತೇನೆ. ಅವರ 95ನೇ ಜನ್ಮದಿನದ ಸಂದರ್ಭದಲ್ಲಿ ಮತ್ತೊಮ್ಮೆ ಅವರಿಗೆ ಭಾವಪೂರ್ಣ ನಮನಗಳನ್ನು ಸಲ್ಲಿಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಕರ್ನಾಟಕದ ಪ್ರಪ್ರಥಮ ಕಾಂಗ್ರೆಸ್ಸೇತರ ಮುಖ್ಯಮಂತ್ರಿಯಾಗಿ ಜನತಾಪರಿವಾರದ ಬೇರು ಮತ್ತು ಬಿಳಲುಗಳು ಆಳವಾಗಿ ಬೇರೂರಲು ಹೆಗಡೆಯವರು ಕಾರಣರಾದರು. ಹೆಗಡೆಯವರು, ಎಸ್.ಆರ್.ಬೊಮ್ಮಾಯಿ ಮತ್ತು ಹೆಚ್.ಡಿ.ದೇವೇಗೌಡರು ಜನತಾ ಪರಿವಾರದ ತ್ರಿಮೂರ್ತಿಗಳೆಂದೇ ಪ್ರಸಿದ್ಧರು. ರಾಜ್ಯದಲ್ಲಿ ಅಧಿಕಾರ ವಿಕೇಂದ್ರೀಕರಣಕ್ಕೆ ನಾಂದಿ ಹಾಡಿ ಅಗತ್ಯ ಕಾನೂನುಗಳನ್ನು ರೂಪಿಸಿ ಪಂಚಾಯತ್ ರಾಜ್ ವ್ಯವಸ್ಥೆಯನ್ನು ಇಡೀ ರಾಷ್ಟ್ರಕ್ಕೆ ಮಾದರಿಯಾಗುವಂತೆ ರೂಪಿಸಿದ ಹೆಗ್ಗಳಿಕೆ ಹೆಗಡೆಯವರದ್ದು ಎಂದು ಪತ್ರಿಕಾ ಪ್ರಕಟಣೆ ಮೂಲಕ ಮುಖ್ಯಮಂತ್ರಿಯವರು ಸ್ಮರಿಸಿದ್ದಾರೆ.

'ಲೋಕಾಯುಕ್ತ ವ್ಯವಸ್ಥೆ ಜಾರಿಗೆ ತಂದ ಕೀರ್ತಿ ಹೆಗಡೆ ಅವರದ್ದು'

ನಮ್ಮ ತಂದೆ ಎಸ್.ಆರ್.ಬೊಮ್ಮಾಯಿ ಅವರು ಮತ್ತು ರಾಮಕೃಷ್ಣ ಹೆಗಡೆಯವರು ಅತ್ಯಂತ ಆತ್ಮೀಯರಾಗಿದ್ದರು. ಈ ಇಬ್ಬರೂ ನಾಯಕರು ಯುವ ನಾಯಕರಿಗೆ ಸ್ಪೂರ್ತಿಯಾಗಿದ್ದರಲ್ಲದೆ, ಆದರ್ಶಪ್ರಾಯರಾಗಿದ್ದರು, ಮಾರ್ಗದರ್ಶಕರಾಗಿದ್ದರು. ಮತ್ತು ಹಲವು ಯುವ ನಾಯಕರು ಸಾರ್ವಜನಿಕ ಜೀವನದಲ್ಲಿ ಉನ್ನತ ಸ್ಥಾನಗಳಿಗೇರಲು ಪ್ರೇರಕರಾಗಿದ್ದರು ಎಂದು ಅವರು ಸಿಎಂ ಹೇಳಿದ್ದಾರೆ.

ಭಾರತದ ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಹಾಗೂ ರಾಜ್ಯಗಳ ಸಂಬಂಧ ಮತ್ತು ಅಧಿಕಾರಗಳ ಬಗ್ಗೆ ಸ್ಪಷ್ಟತೆ ತರಲು ಶ್ರಮಿಸಿದ ಅವರ ಕಾರಣದಿಂದಲೇ ಸರ್ಕಾರಿ ಆಯೋಗ ಸ್ಥಾಪನೆಯಾಗಿತ್ತು. ರಾಜ್ಯದಲ್ಲಿ ಲೋಕಾಯುಕ್ತ ವ್ಯವಸ್ಥೆ ಜಾರಿಗೆ ತಂದ ಕೀರ್ತಿ ಅವರದ್ದು. ಸಾರ್ವಜನಿಕ ಜೀವನವನ್ನು ಶುದ್ಧೀಕರಿಸಿ, ವಿಶ್ವಾಸಾರ್ಹತೆ ಮೂಡಿಸಲು ಕಾರಣರಾಗಿದ್ದರು. ತಮ್ಮ ಜೀವನವಿಡೀ ಮೌಲ್ಯಾಧಾರಿತ ರಾಜಕಾರಣವನ್ನು ಪ್ರತಿಪಾದಿಸಿದ್ದರು ಎಂದು ನೆನೆದರು.

ರಾಜಕೀಯ ಚಟುವಟಿಕೆಗಳಲ್ಲಿ ಚೇತೋಹಾರಿ ಬದಲಾವಣೆ

ಕೇವಲ ರಾಜಕಾರಣಕ್ಕಷ್ಟೇ ಸೀಮಿತರಾಗದೆ ಕಲೆ ಸಂಸ್ಕೃತಿ, ಸಾಹಿತ್ಯ, ಸಿನಿಮಾ, ಇತ್ಯಾದಿ ಲಲಿತ ಕಲೆಗಳಲ್ಲಿ ತೀವ್ರವಾದ ಆಸಕ್ತಿ ಹೊಂದಿದ್ದ ಹೆಗಡೆಯವರು ಉತ್ತಮ ವಾಗ್ಮಿಗಳು ಹಾಗೂ ಚಿಂತಕರೂ ಆಗಿದ್ದ ಸುಸಂಸ್ಕೃತ ವ್ಯಕ್ತಿ. ಕಾಂಗ್ರೆಸ್ ಸರ್ಕಾರಗಳು ರಾಜ್ಯದಲ್ಲಿ ಮೌಲ್ಯಗಳ ಕುಸಿತಕ್ಕೆ ಕಾರಣರಾಗಿ ಜನತೆ ರಾಜಕಾರಣಿಗಳ ಬಗ್ಗೆ ವಿಶ್ವಾಸ ಕಳೆದುಕೊಂಡಿದ್ದ ಸಂದರ್ಭದಲ್ಲಿ ಹೊಸತನ ಮತ್ತು ಸುಸಂಸ್ಕೃತ ನಡೆ, ನೀತಿ, ಕಾರ್ಯಕ್ರಮಗಳ ಮೂಲಕ ರಾಜಕೀಯ ಚಟುವಟಿಕೆಗಳಲ್ಲಿ ಒಂದು ರೀತಿಯ ಚೇತೋಹಾರಿ ಬದಲಾವಣೆ ತರಲು ಹೆಗಡೆಯವರು ಸ್ಪೂರ್ತಿಯಾಗಿದ್ದರು ಎಂದು ಬಸವರಾಜ ಬೊಮ್ಮಾಯಿ ಅವರು ನೆನಪಿಸಿಕೊಂಡಿದ್ದಾರೆ.

ರಾಜ್ಯದಲ್ಲಿ ಶಾಸಕರಾಗಿ, ಮಂತ್ರಿಯಾಗಿ, ಮುಖ್ಯಮಂತ್ರಿಗಳಾಗಿ, ರಾಜ್ಯ ಸಭಾ ಸದಸ್ಯರಾಗಿ, ಕೇಂದ್ರದ ವಾಣಿಜ್ಯ ಖಾತೆ ಸಚಿವರಾಗಿ ಮತು ಯೋಜನಾ ಆಯೋಗದ ಉಪಾಧ್ಯಕ್ಷರಾಗಿ ಅತ್ಯಂತ ದಕ್ಷ ರೀತಿಯಲ್ಲಿ ಕಾರ್ಯನಿರ್ವಹಿಸಿ ರಾಷ್ಟ್ರೀಯ ಮಟ್ಟದ ನಾಯಕ ಎಂದು ಹೆಸರಾಗಿದ್ದರು. ರಾಜ್ಯದಲ್ಲಿ ಹಣಕಾಸು ಸಚಿವರು ಮತ್ತು ಮುಖ್ಯಮಂತ್ರಿಗಳಾಗಿ ದಾಖಲೆಯ 13 ಮುಂಗಡ ಪತ್ರಗಳನ್ನು ಮಂಡಿಸಿದ್ದ ಹೆಗಡೆಯವರು ಜಾತ್ಯಾತೀತತೆ ಮತ್ತು ಸಮಸಮಾಜ ನಿರ್ಮಾಣಕ್ಕೆ ಬದ್ಧರಾಗಿದ್ದರು. ಮೌಲ್ಯಾಧಾರಿತ ರಾಜಕಾರಣವನ್ನು ಪ್ರತಿಪಾದಿಸಿದ ಮತ್ತು ಆಚರಣೆಯಲ್ಲಿ ತಂದ ದಿವಂಗತ ರಾಮಕೃಷ್ಣ ಹೆಗಡೆಯವರ 95ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಅವರಿಗೆ ಹೃದಯಪೂರ್ವಕ ಗೌರವ ಸಲ್ಲಿಸುತ್ತೇನೆ ಎಂದು ಸಿಎಂ ತಿಳಿಸಿದ್ದಾರೆ.

ಬೆಂಗಳೂರು: ರಾಮಕೃಷ್ಣ ಹೆಗಡೆ ಅವರ ಆಡಳಿತ ಶೈಲಿ, ವಾಕ್ಪಟುತ್ವ, ನೇರ ಮತ್ತು ನಿಷ್ಠುರ ನಡೆಯಿಂದ ನಮ್ಮದೊಂದು ಪೀಳಿಗೆಯೇ ಪ್ರಭಾವಿತವಾಗಿತ್ತು. ಅಂತಹ ಮುತ್ಸದ್ದಿ ಮತ್ತು ಸುಸಂಸ್ಕೃತ ನಾಯಕನ ಒಡನಾಟ ನಮಗೆ ದೊರೆತದ್ದು ನಮ್ಮ ಸುದೈವ ಎಂದೇ ಭಾವಿಸುತ್ತೇನೆ. ಅವರ 95ನೇ ಜನ್ಮದಿನದ ಸಂದರ್ಭದಲ್ಲಿ ಮತ್ತೊಮ್ಮೆ ಅವರಿಗೆ ಭಾವಪೂರ್ಣ ನಮನಗಳನ್ನು ಸಲ್ಲಿಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಕರ್ನಾಟಕದ ಪ್ರಪ್ರಥಮ ಕಾಂಗ್ರೆಸ್ಸೇತರ ಮುಖ್ಯಮಂತ್ರಿಯಾಗಿ ಜನತಾಪರಿವಾರದ ಬೇರು ಮತ್ತು ಬಿಳಲುಗಳು ಆಳವಾಗಿ ಬೇರೂರಲು ಹೆಗಡೆಯವರು ಕಾರಣರಾದರು. ಹೆಗಡೆಯವರು, ಎಸ್.ಆರ್.ಬೊಮ್ಮಾಯಿ ಮತ್ತು ಹೆಚ್.ಡಿ.ದೇವೇಗೌಡರು ಜನತಾ ಪರಿವಾರದ ತ್ರಿಮೂರ್ತಿಗಳೆಂದೇ ಪ್ರಸಿದ್ಧರು. ರಾಜ್ಯದಲ್ಲಿ ಅಧಿಕಾರ ವಿಕೇಂದ್ರೀಕರಣಕ್ಕೆ ನಾಂದಿ ಹಾಡಿ ಅಗತ್ಯ ಕಾನೂನುಗಳನ್ನು ರೂಪಿಸಿ ಪಂಚಾಯತ್ ರಾಜ್ ವ್ಯವಸ್ಥೆಯನ್ನು ಇಡೀ ರಾಷ್ಟ್ರಕ್ಕೆ ಮಾದರಿಯಾಗುವಂತೆ ರೂಪಿಸಿದ ಹೆಗ್ಗಳಿಕೆ ಹೆಗಡೆಯವರದ್ದು ಎಂದು ಪತ್ರಿಕಾ ಪ್ರಕಟಣೆ ಮೂಲಕ ಮುಖ್ಯಮಂತ್ರಿಯವರು ಸ್ಮರಿಸಿದ್ದಾರೆ.

'ಲೋಕಾಯುಕ್ತ ವ್ಯವಸ್ಥೆ ಜಾರಿಗೆ ತಂದ ಕೀರ್ತಿ ಹೆಗಡೆ ಅವರದ್ದು'

ನಮ್ಮ ತಂದೆ ಎಸ್.ಆರ್.ಬೊಮ್ಮಾಯಿ ಅವರು ಮತ್ತು ರಾಮಕೃಷ್ಣ ಹೆಗಡೆಯವರು ಅತ್ಯಂತ ಆತ್ಮೀಯರಾಗಿದ್ದರು. ಈ ಇಬ್ಬರೂ ನಾಯಕರು ಯುವ ನಾಯಕರಿಗೆ ಸ್ಪೂರ್ತಿಯಾಗಿದ್ದರಲ್ಲದೆ, ಆದರ್ಶಪ್ರಾಯರಾಗಿದ್ದರು, ಮಾರ್ಗದರ್ಶಕರಾಗಿದ್ದರು. ಮತ್ತು ಹಲವು ಯುವ ನಾಯಕರು ಸಾರ್ವಜನಿಕ ಜೀವನದಲ್ಲಿ ಉನ್ನತ ಸ್ಥಾನಗಳಿಗೇರಲು ಪ್ರೇರಕರಾಗಿದ್ದರು ಎಂದು ಅವರು ಸಿಎಂ ಹೇಳಿದ್ದಾರೆ.

ಭಾರತದ ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಹಾಗೂ ರಾಜ್ಯಗಳ ಸಂಬಂಧ ಮತ್ತು ಅಧಿಕಾರಗಳ ಬಗ್ಗೆ ಸ್ಪಷ್ಟತೆ ತರಲು ಶ್ರಮಿಸಿದ ಅವರ ಕಾರಣದಿಂದಲೇ ಸರ್ಕಾರಿ ಆಯೋಗ ಸ್ಥಾಪನೆಯಾಗಿತ್ತು. ರಾಜ್ಯದಲ್ಲಿ ಲೋಕಾಯುಕ್ತ ವ್ಯವಸ್ಥೆ ಜಾರಿಗೆ ತಂದ ಕೀರ್ತಿ ಅವರದ್ದು. ಸಾರ್ವಜನಿಕ ಜೀವನವನ್ನು ಶುದ್ಧೀಕರಿಸಿ, ವಿಶ್ವಾಸಾರ್ಹತೆ ಮೂಡಿಸಲು ಕಾರಣರಾಗಿದ್ದರು. ತಮ್ಮ ಜೀವನವಿಡೀ ಮೌಲ್ಯಾಧಾರಿತ ರಾಜಕಾರಣವನ್ನು ಪ್ರತಿಪಾದಿಸಿದ್ದರು ಎಂದು ನೆನೆದರು.

ರಾಜಕೀಯ ಚಟುವಟಿಕೆಗಳಲ್ಲಿ ಚೇತೋಹಾರಿ ಬದಲಾವಣೆ

ಕೇವಲ ರಾಜಕಾರಣಕ್ಕಷ್ಟೇ ಸೀಮಿತರಾಗದೆ ಕಲೆ ಸಂಸ್ಕೃತಿ, ಸಾಹಿತ್ಯ, ಸಿನಿಮಾ, ಇತ್ಯಾದಿ ಲಲಿತ ಕಲೆಗಳಲ್ಲಿ ತೀವ್ರವಾದ ಆಸಕ್ತಿ ಹೊಂದಿದ್ದ ಹೆಗಡೆಯವರು ಉತ್ತಮ ವಾಗ್ಮಿಗಳು ಹಾಗೂ ಚಿಂತಕರೂ ಆಗಿದ್ದ ಸುಸಂಸ್ಕೃತ ವ್ಯಕ್ತಿ. ಕಾಂಗ್ರೆಸ್ ಸರ್ಕಾರಗಳು ರಾಜ್ಯದಲ್ಲಿ ಮೌಲ್ಯಗಳ ಕುಸಿತಕ್ಕೆ ಕಾರಣರಾಗಿ ಜನತೆ ರಾಜಕಾರಣಿಗಳ ಬಗ್ಗೆ ವಿಶ್ವಾಸ ಕಳೆದುಕೊಂಡಿದ್ದ ಸಂದರ್ಭದಲ್ಲಿ ಹೊಸತನ ಮತ್ತು ಸುಸಂಸ್ಕೃತ ನಡೆ, ನೀತಿ, ಕಾರ್ಯಕ್ರಮಗಳ ಮೂಲಕ ರಾಜಕೀಯ ಚಟುವಟಿಕೆಗಳಲ್ಲಿ ಒಂದು ರೀತಿಯ ಚೇತೋಹಾರಿ ಬದಲಾವಣೆ ತರಲು ಹೆಗಡೆಯವರು ಸ್ಪೂರ್ತಿಯಾಗಿದ್ದರು ಎಂದು ಬಸವರಾಜ ಬೊಮ್ಮಾಯಿ ಅವರು ನೆನಪಿಸಿಕೊಂಡಿದ್ದಾರೆ.

ರಾಜ್ಯದಲ್ಲಿ ಶಾಸಕರಾಗಿ, ಮಂತ್ರಿಯಾಗಿ, ಮುಖ್ಯಮಂತ್ರಿಗಳಾಗಿ, ರಾಜ್ಯ ಸಭಾ ಸದಸ್ಯರಾಗಿ, ಕೇಂದ್ರದ ವಾಣಿಜ್ಯ ಖಾತೆ ಸಚಿವರಾಗಿ ಮತು ಯೋಜನಾ ಆಯೋಗದ ಉಪಾಧ್ಯಕ್ಷರಾಗಿ ಅತ್ಯಂತ ದಕ್ಷ ರೀತಿಯಲ್ಲಿ ಕಾರ್ಯನಿರ್ವಹಿಸಿ ರಾಷ್ಟ್ರೀಯ ಮಟ್ಟದ ನಾಯಕ ಎಂದು ಹೆಸರಾಗಿದ್ದರು. ರಾಜ್ಯದಲ್ಲಿ ಹಣಕಾಸು ಸಚಿವರು ಮತ್ತು ಮುಖ್ಯಮಂತ್ರಿಗಳಾಗಿ ದಾಖಲೆಯ 13 ಮುಂಗಡ ಪತ್ರಗಳನ್ನು ಮಂಡಿಸಿದ್ದ ಹೆಗಡೆಯವರು ಜಾತ್ಯಾತೀತತೆ ಮತ್ತು ಸಮಸಮಾಜ ನಿರ್ಮಾಣಕ್ಕೆ ಬದ್ಧರಾಗಿದ್ದರು. ಮೌಲ್ಯಾಧಾರಿತ ರಾಜಕಾರಣವನ್ನು ಪ್ರತಿಪಾದಿಸಿದ ಮತ್ತು ಆಚರಣೆಯಲ್ಲಿ ತಂದ ದಿವಂಗತ ರಾಮಕೃಷ್ಣ ಹೆಗಡೆಯವರ 95ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಅವರಿಗೆ ಹೃದಯಪೂರ್ವಕ ಗೌರವ ಸಲ್ಲಿಸುತ್ತೇನೆ ಎಂದು ಸಿಎಂ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.