ETV Bharat / city

ಸ್ವಚ್ಛತೆ ಕಾಪಾಡಲು ಸಿಎಂ ಸೂಚನೆ: ಮುಂಜಾನೆ 6ಕ್ಕೆ ರಾಜಧಾನಿ ಸುತ್ತಲಿರುವ ಪಾಲಿಕೆ ಅಧಿಕಾರಿಗಳು - Strict measures to maintain cleanliness

ನಗರದ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಪಾಲಿಕೆ ಅಧಿಕಾರಿಗಳು ಮುಂಜಾನೆ 6 ಗಂಟೆಯಿಂದಲೇ ಸ್ಥಳ ಪರಿಶೀಲನೆ ನಡೆಸಬೇಕು ಎಂದು ಆಯುಕ್ತ ಬಿ.ಹೆಚ್.ಅನಿಲ್ ಕುಮಾರ್ ಆದೇಶಿಸಿದ್ದಾರೆ.

CM notice to maintain cleanliness
author img

By

Published : Nov 20, 2019, 2:06 AM IST

ಬೆಂಗಳೂರು: ನಗರ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲು ಮುಖ್ಯಮಂತ್ರಿ ಸೂಚನೆ ನೀಡಿರುವ ಹಿನ್ನೆಲೆ, ವಲಯವಾರು ಕರ್ತವ್ಯ ನಿರ್ವಹಿಸುತ್ತಿರುವ ವಿಶೇಷ ಆಯುಕ್ತರು, ಜಂಟಿ ಆಯುಕ್ತರು, ಮುಖ್ಯ ಅಭಿಯಂತರರು ಮುಂಜಾನೆ 6 ಗಂಟೆಯಿಂದಲೇ ಸ್ಥಳ ಪರಿಶೀಲನೆ ನಡೆಸಬೇಕು ಎಂದು ಆಯುಕ್ತ ಬಿ.ಹೆಚ್.ಅನಿಲ್ ಕುಮಾರ್ ಆದೇಶಿಸಿದ್ದಾರೆ.

ಘನತ್ಯಾಜ್ಯ ನಿರ್ವಹಣೆ , ರಸ್ತೆಗುಂಡಿ ಪರಿಶೀಲನೆ, ಉದ್ಯಾನಗಳ ನಿರ್ವಹಣೆ ಸೇರಿದಂತೆ ಪಾಲಿಕೆ ವ್ಯಾಪ್ತಿಗೆ ಬರುವ ಎಲ್ಲವನ್ನೂ ಕಡ್ಡಾಯವಾಗಿ ಬೆಳಗ್ಗೆ 6 ರಿಂದ 9ರವರೆಗೆ ಪರಿಶೀಲಿಸಿ ವರದಿ ನೀಡಬೇಕು ಎಂದು ಸೂಚಿಸಿದ್ದಾರೆ.

ಕಸ ನಿರ್ವಹಣೆ, ರಸ್ತೆ ಸಮಸ್ಯೆಗಳ ದೂರು ಹೆಚ್ಚಾಗಿರುವ ಹಿನ್ನೆಲೆ ಸಿಎಂ ಸಭೆಯಲ್ಲಿ ಈ ಆದೇಶ ಹೊರಡಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ ತಕ್ಷಣವೇ ಜಾರಿಗೆ ಬರುವಂತೆ ಪ್ರತಿ ವಲಯದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ವರದಿ ನೀಡುವಂತೆ ಸುತ್ತೋಲೆ ಹೊರಡಿಸಿದ್ದಾರೆ.

ಬೆಂಗಳೂರು: ನಗರ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲು ಮುಖ್ಯಮಂತ್ರಿ ಸೂಚನೆ ನೀಡಿರುವ ಹಿನ್ನೆಲೆ, ವಲಯವಾರು ಕರ್ತವ್ಯ ನಿರ್ವಹಿಸುತ್ತಿರುವ ವಿಶೇಷ ಆಯುಕ್ತರು, ಜಂಟಿ ಆಯುಕ್ತರು, ಮುಖ್ಯ ಅಭಿಯಂತರರು ಮುಂಜಾನೆ 6 ಗಂಟೆಯಿಂದಲೇ ಸ್ಥಳ ಪರಿಶೀಲನೆ ನಡೆಸಬೇಕು ಎಂದು ಆಯುಕ್ತ ಬಿ.ಹೆಚ್.ಅನಿಲ್ ಕುಮಾರ್ ಆದೇಶಿಸಿದ್ದಾರೆ.

ಘನತ್ಯಾಜ್ಯ ನಿರ್ವಹಣೆ , ರಸ್ತೆಗುಂಡಿ ಪರಿಶೀಲನೆ, ಉದ್ಯಾನಗಳ ನಿರ್ವಹಣೆ ಸೇರಿದಂತೆ ಪಾಲಿಕೆ ವ್ಯಾಪ್ತಿಗೆ ಬರುವ ಎಲ್ಲವನ್ನೂ ಕಡ್ಡಾಯವಾಗಿ ಬೆಳಗ್ಗೆ 6 ರಿಂದ 9ರವರೆಗೆ ಪರಿಶೀಲಿಸಿ ವರದಿ ನೀಡಬೇಕು ಎಂದು ಸೂಚಿಸಿದ್ದಾರೆ.

ಕಸ ನಿರ್ವಹಣೆ, ರಸ್ತೆ ಸಮಸ್ಯೆಗಳ ದೂರು ಹೆಚ್ಚಾಗಿರುವ ಹಿನ್ನೆಲೆ ಸಿಎಂ ಸಭೆಯಲ್ಲಿ ಈ ಆದೇಶ ಹೊರಡಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ ತಕ್ಷಣವೇ ಜಾರಿಗೆ ಬರುವಂತೆ ಪ್ರತಿ ವಲಯದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ವರದಿ ನೀಡುವಂತೆ ಸುತ್ತೋಲೆ ಹೊರಡಿಸಿದ್ದಾರೆ.

Intro:ಬಿಬಿಎಂಪಿ ಅಧಿಕಾರಿಗಳಿಗೆ ಆರುಗಂಟೆಯಿಂದಲೇ ಫೀಲ್ಡ್ ಗಳಿಯುವಂತೆ ನೋಟೀಸ್!


ಬೆಂಗಳೂರು: ಬೆಂಗಳೂರನ್ನು ಸ್ವಚ್ಛವಾಗಿಟ್ಟುಕೊಳ್ಳಲು ಸಿಎಂ ಖಡಕ್ ಸೂಚನೆ ನೀಡಿರುವ ಹಿನ್ನಲೆ, ಪಾಲಿಕೆಯ ಅಧಿಕಾರಿಗಳು ಬೆಳಗ್ಗೆ ಆರು ಗಂಟೆಯಿಂದಲೇ ಸ್ಥಳಪರಿಶೀಲನೆ ನಡೆಸಬೇಕೆಂದು, ಆಯುಕ್ತರಾದ ಬಿ.ಹೆಚ್ ಅನಿಲ್ ಕುಮಾರ್ ಸುತ್ತೋಲೆ ಹೊರಡಿಸಿದ್ದಾರೆ.
ಘನತ್ಯಾಜ್ಯ ನಿರ್ವಹಣೆ , ರಸ್ತೆಗುಂಡಿ ಪರಿಶೀಲನೆ, ಪಾರ್ಕ್ ಗಳ ನಿರ್ವಹಣೆಯನ್ನು ಕಡ್ಡಾಯವಾಗಿ ಬೆಳಗ್ಗೆ ಆರು ಗಂಟೆಯಿಂದ ಒಂಭತ್ತು ಗಂಟೆಯವರೆಗೆ ಪರಿಶೀಲಿಸಿ ವರದಿ ನೀಡಬೇಕು ಎಂದು ಆಯುಕ್ತರು ಸೂಚಿಸಿದ್ದಾರೆ. ವಲಯಗಳ ವಿಶೇಷ ಆಯುಕ್ತರು, ಜಂಟಿ ಆಯುಕ್ತರು, ಮುಖ್ಯ ಅಭಿಯಂತರರಿಗೆ ಈ ಸುತ್ತೋಲೆ ಹೊರಡಿಸಲಾಗಿದೆ.
ನಗರಕ್ಕೆ ಸಂಬಂಧಿಸಿದಂತೆ ಕಳಪೆ ಕಸ ನಿರ್ವಹಣೆ, ರಸ್ತೆ ಸಮಸ್ಯೆಗಳ ದೂರು ಹೆಚ್ಚಾಗಿರುವ ಹಿನ್ನಲೆ ಸಿಎಂ ಸಭೆಯಲ್ಲಿ ಈ ಆದೇಶ ಹೊರಡಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ ತಕ್ಷಣವೇ ಜಾರಿಗೆ ಬರುವಂತೆ ಪ್ರತೀ ವಲಯಮಟ್ಟದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಜವಾಬ್ದಾರಿಯನ್ನು ನಿರ್ವಹಿಸಿ ವರದಿ ನೀಡುವಂತೆ ಸುತ್ತೋಲೆ ಹೊರಡಿಸಿದ್ದಾರೆ.


ಸೌಮ್ಯಶ್ರೀ
Kn_bng_03_bbmp_6pm_7202707 Body:..Conclusion:..
ETV Bharat Logo

Copyright © 2025 Ushodaya Enterprises Pvt. Ltd., All Rights Reserved.