ETV Bharat / city

ಉಮೇಶ್ ಕತ್ತಿ, ಲಿಂಬಾವಳಿ ಕ್ಯಾಬಿನೆಟ್ ಸೇರ್ಪಡೆಗೆ ಸಿಎಂ ಕಸರತ್ತು

ಸಚಿವ ಸ್ಥಾನ ಸಿಗದೇ ಅಸಮಾಧಾನಗೊಂಡಿರುವ ಹಿರಿಯ ಶಾಸಕರಾದ ಉಮೇಶ ಕತ್ತಿ, ಅರವಿಂದ ಲಿಂಬಾವಳಿ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಲು ಸಿಎಂ ಯಡಿಯೂರಪ್ಪ ತೀವ್ರ ಕಸರತ್ತು ನಡೆಸಿದ್ದಾರೆ ಎನ್ನಲಾಗ್ತಿದೆ.

author img

By

Published : Aug 26, 2019, 12:56 PM IST

Updated : Aug 26, 2019, 1:01 PM IST

ಉಮೇಶ್ ಕತ್ತಿ, ಲಿಂಬಾವಳಿ, ಯಡಿಯೂರಪ್ಪ

ಬೆಂಗಳೂರು: ಸಚಿವ ಸ್ಥಾನ ಸಿಗದೇ ಅಸಮಾಧಾನಗೊಂಡಿರುವ ಹಿರಿಯ ಶಾಸಕರಾದ ಉಮೇಶ್​ ಕತ್ತಿ, ಅರವಿಂದ ಲಿಂಬಾವಳಿ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ತೀವ್ರ ಕಸರತ್ತು ನಡೆಸಿದ್ದಾರೆ.

ಬಿಜೆಪಿ ಹೈಕಮಾಂಡ್, ಸಂಘ ಪರಿವಾರದ ಮುಖಂಡರ ಬಳಿ ಸಿಎಂ ಸುದೀರ್ಘವಾಗಿ ಸಮಾಲೋಚನೆ ನಡೆಸಿ, ಇಬ್ಬರನ್ನೂ ಕ್ಯಾಬಿನೆಟ್​ಗೆ ಸೇರಿಸಿಕೊಳ್ಳಲು ಒಪ್ಪಿಗೆ ಪಡೆದಿದ್ದಾರೆಂದು ಹೇಳಲಾಗ್ತಿದೆ.

ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನದ ಪ್ರಮುಖ ಆಕಾಂಕ್ಷಿಯಾಗಿದ್ದ ಅರವಿಂದ ಲಿಂಬಾವಳಿ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ಕೈ ತಪ್ಪಿದ್ದರಿಂದ ಸಚಿವ ಸ್ಥಾನ ನೀಡಲು ಸಿಎಂ ನಿರ್ಧರಿಸಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿಯೂ ಸಹ ಲಕ್ಷ್ಮಣ್​ ಸವದಿ, ಶಶಿಕಲಾ ಜೊಲ್ಲೆ ಅವರ ಜತೆ ಉಮೇಶ್​ ಕತ್ತಿ ಅವರಿಗೆ ಸಚಿವ ಸ್ಥಾನ ನೀಡಲು ಇರುವ ಅಡೆತಡೆಗಳನ್ನು ಯಡಿಯೂರಪ್ಪ ನಿವಾರಿಸಿಕೊಂಡಿದ್ದಾರೆಂದು ತಿಳಿದುಬಂದಿದೆ.

ಇನ್ನು ಸುಪ್ರೀಂ ಕೋರ್ಟ್​ನಲ್ಲಿ ಅನರ್ಹ ಶಾಸಕರ ಅರ್ಜಿ ವಿಚಾರಣೆ ಗಮನಿಸಿ ಸಂಪುಟ ವಿಸ್ತರಣೆ ಮಾಡಲು ಮುಖ್ಯಮಂತ್ರಿ ತೀರ್ಮಾನಿಸಿದ್ದಾರೆ ಎನ್ನಲಾಗಿದೆ. ಒಂದು ವೇಳೆ ನ್ಯಾಯಾಲಯದಲ್ಲಿ ಶಾಸಕರ ಅನರ್ಹತೆಗೆ ತಡೆಯಾಜ್ಞೆ ದೊರೆತರೆ ಕಾನೂನು ತೊಡಕುಗಳನ್ನು ನಿವಾರಿಸಿ, ಅನರ್ಹ ಶಾಸಕರನ್ನು ಮೊದಲು ಬಿಜೆಪಿಗೆ ಸೇರಿಸಿಕೊಂಡು ನಂತರ ಸಂಪುಟ ವಿಸ್ತರಣೆ ಮಾಡುವ ಆಲೋಚನೆ ಇದೆ ಎನ್ನಲಾಗಿದೆ.

ಬೆಂಗಳೂರು: ಸಚಿವ ಸ್ಥಾನ ಸಿಗದೇ ಅಸಮಾಧಾನಗೊಂಡಿರುವ ಹಿರಿಯ ಶಾಸಕರಾದ ಉಮೇಶ್​ ಕತ್ತಿ, ಅರವಿಂದ ಲಿಂಬಾವಳಿ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ತೀವ್ರ ಕಸರತ್ತು ನಡೆಸಿದ್ದಾರೆ.

ಬಿಜೆಪಿ ಹೈಕಮಾಂಡ್, ಸಂಘ ಪರಿವಾರದ ಮುಖಂಡರ ಬಳಿ ಸಿಎಂ ಸುದೀರ್ಘವಾಗಿ ಸಮಾಲೋಚನೆ ನಡೆಸಿ, ಇಬ್ಬರನ್ನೂ ಕ್ಯಾಬಿನೆಟ್​ಗೆ ಸೇರಿಸಿಕೊಳ್ಳಲು ಒಪ್ಪಿಗೆ ಪಡೆದಿದ್ದಾರೆಂದು ಹೇಳಲಾಗ್ತಿದೆ.

ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನದ ಪ್ರಮುಖ ಆಕಾಂಕ್ಷಿಯಾಗಿದ್ದ ಅರವಿಂದ ಲಿಂಬಾವಳಿ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ಕೈ ತಪ್ಪಿದ್ದರಿಂದ ಸಚಿವ ಸ್ಥಾನ ನೀಡಲು ಸಿಎಂ ನಿರ್ಧರಿಸಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿಯೂ ಸಹ ಲಕ್ಷ್ಮಣ್​ ಸವದಿ, ಶಶಿಕಲಾ ಜೊಲ್ಲೆ ಅವರ ಜತೆ ಉಮೇಶ್​ ಕತ್ತಿ ಅವರಿಗೆ ಸಚಿವ ಸ್ಥಾನ ನೀಡಲು ಇರುವ ಅಡೆತಡೆಗಳನ್ನು ಯಡಿಯೂರಪ್ಪ ನಿವಾರಿಸಿಕೊಂಡಿದ್ದಾರೆಂದು ತಿಳಿದುಬಂದಿದೆ.

ಇನ್ನು ಸುಪ್ರೀಂ ಕೋರ್ಟ್​ನಲ್ಲಿ ಅನರ್ಹ ಶಾಸಕರ ಅರ್ಜಿ ವಿಚಾರಣೆ ಗಮನಿಸಿ ಸಂಪುಟ ವಿಸ್ತರಣೆ ಮಾಡಲು ಮುಖ್ಯಮಂತ್ರಿ ತೀರ್ಮಾನಿಸಿದ್ದಾರೆ ಎನ್ನಲಾಗಿದೆ. ಒಂದು ವೇಳೆ ನ್ಯಾಯಾಲಯದಲ್ಲಿ ಶಾಸಕರ ಅನರ್ಹತೆಗೆ ತಡೆಯಾಜ್ಞೆ ದೊರೆತರೆ ಕಾನೂನು ತೊಡಕುಗಳನ್ನು ನಿವಾರಿಸಿ, ಅನರ್ಹ ಶಾಸಕರನ್ನು ಮೊದಲು ಬಿಜೆಪಿಗೆ ಸೇರಿಸಿಕೊಂಡು ನಂತರ ಸಂಪುಟ ವಿಸ್ತರಣೆ ಮಾಡುವ ಆಲೋಚನೆ ಇದೆ ಎನ್ನಲಾಗಿದೆ.

Intro: ಉಮೇಶ್ ಕತ್ತಿ, ಲಿಂಬಾವಳಿ ಕ್ಯಾಬಿನೇಟ್ ಸೇರ್ಪಡೆಗೆ
ಸಿಎಂ ಕಸರತ್ತು...



ಬೆಂಗಳೂರು :

ಸಚಿವ ಸ್ಥಾನ ಸಿಗದೇ ಅಸಮಾಧಾನಗೊಂಡಿರುವ ಹಿರಿಯ ಶಾಸಕರಾದ ಉಮೇಶ ಕತ್ತಿ, ಅರವಿಂದ ಲಿಂಬಾವಳಿ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ತೀವ್ರ ಕಸರತ್ತು ನಡೆಸಿದ್ದಾರೆ.

ಬಿಜೆಪಿ ಹೈಕಮಾಂಡ್, ಸಂಘ ಪರಿವಾರದ ಮುಖಂಡರ ಬಳಿ ಸಿಎಂ ಯಡಿಯೂರಪ್ಪ ನವರು ಸುದೀರ್ಘ ಸಮಾಲೋಚನೆ ನಡೆಸಿ ಇಬ್ಬರನ್ನೂ ಕ್ಯಾಬಿನೆಟ್ ಗೆ ಸೇರ್ಪಡೆ ಮಾಡಿಕೊಳ್ಳಲು ಒಪ್ಪಿಗೆ ಪಡೆದಿದ್ದಾರೆಂದು ಹೇಳಲಾಗಿದೆ.




Body: ಬೆಂಗಳೂರು ನಂತರ ರಾಜ್ಯದಲ್ಲಿಯೇ ಅತೀ ದೊಡ್ಡದಾದ ಬೆಳಗಾವಿ ಜಿಲ್ಲೆಗೆ ಹೆಚ್ಚಿನ ಕ್ಯಾಬಿನೆಟ್ ನಲ್ಲಿ ಪ್ರಾತಿನಿಧ್ಯ ನೀಡಿದರೆ ತಪ್ಪಿಲ್ಲ ಎನ್ನುವ ವಾದವನ್ನು ಸಿಎಂ ಮಂಡಿಸಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಲಕ್ಷ್ಮಣ ಸವದಿ, ಶಶಿಕಲಾ ಜೊಲ್ಲೆ ಅವರ ಜತೆ ಉಮೇಶ ಕತ್ತಿ ಅವರಿಗೆ ಸಚಿವ ಸ್ಥಾನ ನೀಡಲು ಇರುವ ಅಡೆತಡೆಗಳನ್ನು ಯಡಿಯೂರಪ್ಪ ನವರು ನಿವಾರಿಸಿಕೊಂಡಿದ್ದಾರೆಂದು ತಿಳಿದುಬಂದಿದೆ.


ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನದ ಪ್ರಮುಖ ಆಕಾಂಕ್ಷಿಯಾಗಿದ್ದ ಅರವಿಂದ ಲಿಂಬಾವಳಿ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ಕೈತಪ್ಪಿದ್ದರಿಂದ ಸಚಿವ ಸ್ಥಾನ ನೀಡಲು ಹಸಿರು ನಿಶಾನೆ ಸಿಎಂ ಗೆ ಸಿಕ್ಕಿದೆ ಎನ್ನಲಾಗಿದೆ.




Conclusion: ಸುಪ್ರೀಂಕೋರ್ಟ್ ನಲ್ಲಿ ಅನರ್ಹ ಶಾಸಕರ ಅರ್ಜಿ ವಿಚಾರಣೆ ಗಮನಿಸಿ ಸಂಪುಟ ವಿಸ್ತರಣೆ ಮಾಡಲು ಮುಖ್ಯಮಂತ್ರಿ ಯಡಿಯೂರಪ್ಪ ನವರು ತೀರ್ಮಾನಿಸಿದ್ದಾರೆನ್ನಲಾಗಿದೆ. ಒಂದು ವೇಳೆ ನ್ಯಾಯಾಲಯ ದಲ್ಲಿ ಶಾಸಕರ ಅನರ್ಹತೆಗೆ ತಡೆಯಾಜ್ಞೆ ದೊರೆತರೆ ಕಾನೂನು ತೊಡಕುಗಳನ್ನು ನಿವಾರಿಸಿ ಅನರ್ಹ ಶಾಸಕರನ್ನು ಮೊದಲು ಬಿಜೆಪಿಗೆ ಸೇರಿಸಿಕೊಂಡು ನಂತರ ಸಂಪುಟ ವಿಸ್ತರಣೆ ಮಾಡುವ ಆಲೋಚನೆ ಇದೆಯೆನ್ನಲಾಗಿದೆ.

ಅನರ್ಹ ಶಾಸಕರ ವಿಚಾರಣೆ ಮತ್ತಷ್ಟು ವಿಳಂಬವಾಗುವುದಾದರೆ ಶೀಘ್ರದಲ್ಲೇ ಮಂತ್ರಿ ಮಂಡಲ ವಿಸ್ತರಣೆ ಮಾಡುವ ಸಾದ್ಯತೆ ಇದೆ ಎಂದು ಹೇಳಲಾಗಿದೆ.
Last Updated : Aug 26, 2019, 1:01 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.