ETV Bharat / city

ಬಂದ್‌ ಮಾಡಿ ಜನರಿಗೆ ತೊಂದರೆ ಕೊಡುವ ಕೆಲಸ ಬೇಡ: ಯಡಿಯೂರಪ್ಪ

author img

By

Published : Dec 4, 2020, 11:17 AM IST

ಕನ್ನಡ ಪರ ಸಂಘಟನೆಗಳು ನಾಳೆ‌ ಕರ್ನಾಟಕ ಬಂದ್​ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಬಂದ್ ಮಾಡದಂತೆ ಸಂಘಟನೆಗಳಿಗೆ ಮನವಿ ಮಾಡಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ

ಬೆಂಗಳೂರು: ಮರಾಠ ಅಭಿವೃದ್ಧಿ ‌ನಿಗಮ ರಚನೆ ವಿರೋಧಿಸಿ ಕನ್ನಡ ಪರ ಸಂಘಟನೆಗಳು ನಾಳೆ‌ ಕರ್ನಾಟಕ ಬಂದ್​ಗೆ ಕರೆ ನೀಡಿದ್ದು, ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಬಂದ್ ಮಾಡದಂತೆ ಮನವಿ ಮಾಡಿದ್ದಾರೆ.

ನಾಳೆಯ‌ ಬಂದ್ ಕುರಿತು ಸಿಎಂ ಪ್ರತಿಕ್ರಿಯೆ

ಬೆಂಗಳೂರಲ್ಲಿ ಈ ಕುರಿತು ಮಾತನಾಡಿದ ಅವರು, ಬಂದ್ ಮಾಡಿ ಜನರಿಗೆ ತೊಂದರೆ ಕೊಡುವ ಕೆಲಸ ಬೇಡ. ವಾಟಾಳ್ ನಾಗರಾಜ್ ಬಂದ್ ಮಾಡುವ ಅವಶ್ಯಕತೆ ‌ಇಲ್ಲ, ನಾಳೆ ಬಂದ್​ಗೆ ಯಾವುದೇ ರೀತಿಯ ಅವಕಾಶ ಕೊಡಬೇಡಿ ಎಂದು ಮನವಿ ಮಾಡಿದರು.

ಓದಿ: ಬಿಎಸ್​ವೈ ಪರಭಾಷೆ ಏಜೆಂಟ್, ಡಿ.5ಕ್ಕೆ ಸಂಪೂರ್ಣ ಬಂದ್ ಶತಃಸಿದ್ಧ : ವಾಟಾಳ್ ನಾಗರಾಜ್‌ ಗುಡುಗು

ಇನ್ನು ಕನ್ನಡ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದ್ದು, ನಾವು ಹೆಚ್ಚಿನ ಆದ್ಯತೆ ನೀಡುತ್ತೇವೆ. ಹಾಗಾಗಿ ಬಂದ್ ಮಾಡಬೇಡಿ ಎಂದು ಕನ್ನಡ ಪರ ಸಂಘಟನೆಗಳಿಗೆ ಮನವಿ ಮಾಡುತ್ತೇನೆ ಎಂದು ಸಿಎಂ ತಿಳಿಸಿದ್ದಾರೆ.

ಓದಿ: ನಾಳೆ ಕರ್ನಾಟಕ ಬಂದ್: ಬೆಂಗಳೂರಲ್ಲಿ ಹದ್ದಿನ ಕಣ್ಣಿಡಲು ಪೊಲೀಸರಿಗೆ​ ಪಂತ್​ ಸೂಚನೆ

ಬೆಂಗಳೂರು: ಮರಾಠ ಅಭಿವೃದ್ಧಿ ‌ನಿಗಮ ರಚನೆ ವಿರೋಧಿಸಿ ಕನ್ನಡ ಪರ ಸಂಘಟನೆಗಳು ನಾಳೆ‌ ಕರ್ನಾಟಕ ಬಂದ್​ಗೆ ಕರೆ ನೀಡಿದ್ದು, ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಬಂದ್ ಮಾಡದಂತೆ ಮನವಿ ಮಾಡಿದ್ದಾರೆ.

ನಾಳೆಯ‌ ಬಂದ್ ಕುರಿತು ಸಿಎಂ ಪ್ರತಿಕ್ರಿಯೆ

ಬೆಂಗಳೂರಲ್ಲಿ ಈ ಕುರಿತು ಮಾತನಾಡಿದ ಅವರು, ಬಂದ್ ಮಾಡಿ ಜನರಿಗೆ ತೊಂದರೆ ಕೊಡುವ ಕೆಲಸ ಬೇಡ. ವಾಟಾಳ್ ನಾಗರಾಜ್ ಬಂದ್ ಮಾಡುವ ಅವಶ್ಯಕತೆ ‌ಇಲ್ಲ, ನಾಳೆ ಬಂದ್​ಗೆ ಯಾವುದೇ ರೀತಿಯ ಅವಕಾಶ ಕೊಡಬೇಡಿ ಎಂದು ಮನವಿ ಮಾಡಿದರು.

ಓದಿ: ಬಿಎಸ್​ವೈ ಪರಭಾಷೆ ಏಜೆಂಟ್, ಡಿ.5ಕ್ಕೆ ಸಂಪೂರ್ಣ ಬಂದ್ ಶತಃಸಿದ್ಧ : ವಾಟಾಳ್ ನಾಗರಾಜ್‌ ಗುಡುಗು

ಇನ್ನು ಕನ್ನಡ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದ್ದು, ನಾವು ಹೆಚ್ಚಿನ ಆದ್ಯತೆ ನೀಡುತ್ತೇವೆ. ಹಾಗಾಗಿ ಬಂದ್ ಮಾಡಬೇಡಿ ಎಂದು ಕನ್ನಡ ಪರ ಸಂಘಟನೆಗಳಿಗೆ ಮನವಿ ಮಾಡುತ್ತೇನೆ ಎಂದು ಸಿಎಂ ತಿಳಿಸಿದ್ದಾರೆ.

ಓದಿ: ನಾಳೆ ಕರ್ನಾಟಕ ಬಂದ್: ಬೆಂಗಳೂರಲ್ಲಿ ಹದ್ದಿನ ಕಣ್ಣಿಡಲು ಪೊಲೀಸರಿಗೆ​ ಪಂತ್​ ಸೂಚನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.