ETV Bharat / city

ಮತಾಂತರ ನಿಷೇಧ ಮಸೂದೆ ನಾಗಪುರದ ಆರ್​ಎಸ್​ಎಸ್​ ಕಚೇರಿಯದ್ದು: ಸಿ.ಎಸ್‌.ದ್ವಾರಕನಾಥ್

author img

By

Published : Jan 3, 2022, 4:24 PM IST

ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ ಎಸಗಲಾಗುತ್ತಿದೆ ಎಂದು ಆರೋಪಿಸಿ ರಾಜ್ಯ ಕಾಂಗ್ರೆಸ್ ನಾಯಕರು ಬೆಂಗಳೂರಿನ ರೇಸ್​ಕೋರ್ಸ್​ ರಸ್ತೆಯಲ್ಲಿನ ಪಕ್ಷದ ಭವನದಲ್ಲಿ ಸಾಂಕೇತಿಕ ಪ್ರತಿಭಟನೆ ನಡೆಸಿದರು.

conversion
ಮತಾಂತರ ನಿಷೇಧ ಮಸೂದೆ

ಬೆಂಗಳೂರು: ಮಂಡ್ಯ, ಚಿಕ್ಕಬಳ್ಳಾಪುರದಲ್ಲಿ ಪ್ರಾರ್ಥನಾ ಮಂದಿರಗಳಿಗೆ ಬಲವಂತವಾಗಿ ಬೀಗ ಜಡಿದು ದೌರ್ಜನ್ಯ ಎಸಗಲಾಗುತ್ತಿದೆ ಎಂದು ಆರೋಪಿಸಿ ರಾಜ್ಯ ಕಾಂಗ್ರೆಸ್ ನಾಯಕರು ಬೆಂಗಳೂರಿನ ರೇಸ್​ಕೋರ್ಸ್​ ರಸ್ತೆಯಲ್ಲಿನ ಕಾಂಗ್ರೆಸ್ ಭವನದಲ್ಲಿ ಸಾಂಕೇತಿಕ ಪ್ರತಿಭಟನೆ ನಡೆಸಿದರು.

ಈ ವೇಳೆ ಚಿಂತಕ ಸಿ.ಎಸ್.ದ್ವಾರಕನಾಥ್ ಮಾತನಾಡಿ, ಉತ್ತರಪ್ರದೇಶ ಮತ್ತು ಇಲ್ಲಿಯ ಮತಾಂತರ ನಿಷೇಧ ಕಾಯ್ದೆ ಒಂದೇ ಆಗಿದೆ. ನಾನು 2 ಬಿಲ್ ಡ್ರಾಫ್ಟ್ ಓದಿದ್ದೇನೆ. ನಾಗಪುರದ ಆರ್​ಎಸ್​ಎಸ್ ಕಚೇರಿಯಲ್ಲಿ ಮಸೂದೆ ರೆಡಿಯಾಗಿದೆ ಎಂದು ಆರೋಪಿಸಿದರು.

ಮತಾಂತರ ಕಾಯ್ದೆ ದಲಿತ ಸಮುದಾಯಗಳ ಮೇಲೆ ಪರಿಣಾಮ ಬೀರಲಿದೆ. ದಲಿತರ ಸ್ವಾತಂತ್ರ್ಯವನ್ನು ಕಿತ್ತುಕೊಳ್ತಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಸವಧರ್ಮದಿಂದ ಬಂದವರು. ಮಸೂದೆಗೆ ಹೇಗೆ ಸಹಿ ಮಾಡಿದಿರಿ ಎಂದು ಪ್ರಶ್ನಿಸಿದರು.

ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್ ಜಬ್ಬಾರ್ ಮಾತನಾಡಿ, ಕ್ರೈಸ್ತ ಕೇಂದ್ರಗಳ ಮೇಲೆ ದಾಳಿಯಾಗ್ತಿದೆ. ಮಂಡ್ಯದ ನಿರ್ಮಲಾ ಶಾಲೆ ಮೇಲೆ ದಾಳಿ ನಡೆದಿದೆ. ಅಲ್ಲಿನ ಶಿಕ್ಷಕರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. 23 ರಂದು ಗೋಕಾಕ್ ಚರ್ಚ್ ಮೇಲೆ ದಾಳಿ ಆಗಿದೆ. ಪ್ರಾರ್ಥನೆ ವೇಳೆ ಒಳ ನುಗ್ಗಿ ದಾಂಧಲೆ ನಡೆಸಿದ್ದಾರೆ. ಚಿಕ್ಕಬಳ್ಳಾಪುರ, ಮಂಡ್ಯದಲ್ಲಿ ಚರ್ಚ್​ಗಳಿಗೆ ಬೀಗ ಹಾಕಲಾಗಿದೆ. ಸ್ಥಳೀಯ ಅಧಿಕಾರಿಗಳೇ ಬೀಗ ಹಾಕಿಸಿದ್ದಾರೆ ಎಂದು ಆರೋಪಿಸಿದರು.

ಮಾಜಿ ಶಾಸಕ ಮುಖ್ಯಮಂತ್ರಿ ಚಂದ್ರು ಮಾತನಾಡಿ, ಈ ದೇಶದಲ್ಲಿ ಅರಾಜಕತೆ ಹೆಚ್ಚಾಗಿದೆ. ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ ನಡೆಯುತ್ತಿದೆ. ಹಿಂದೂಗಳಲ್ಲಿ ಕೂಡ ಅಲ್ಪಸಂಖ್ಯಾತರಿದ್ದಾರೆ. ನಾನು ಕೂಡ ಅಲ್ಪಸಂಖ್ಯಾತ ಹಿಂದೂ. ಶಾಲೆಯಲ್ಲಿ ಮಕ್ಕಳಿಗೆ ಮೊಟ್ಟೆ ಕೊಡಬೇಡಿ ಅಂತಿದ್ದಾರೆ. ಅಂಬೇಡ್ಕರ್, ಬಸವಣ್ಣ ಇದ್ದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರು ಎಂದರು.

ಸಾಹಿತಿ ಪ್ರೊ.ಎಸ್.ಜಿ. ಸಿದ್ದರಾಮಯ್ಯ ಮಾತನಾಡಿ, ಮತಾಂತರ 2 ಸಾವಿರ ವರ್ಷಗಳಿಂದ ಇದೆ. ನಾಥ ಪಂಥದ ಒಕ್ಕಲಿಗರು ಮತಾಂತರವಾದವರೇ. ಶ್ರೇಷ್ಠ, ಕನಿಷ್ಠ ಕಲ್ಪನೆಯಲ್ಲಿ ಮತಾಂತರವಾದವರು. ಜಗತ್ತಿನ ಬೇರೆ ಎಲ್ಲೂ ಇಂತಹ ಅಸಮಾನತೆ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್ ಜಬ್ಬಾರ್ ಪ್ರತಿಭಟನಾ ಸಭೆಯ ನೇತೃತ್ವ ವಹಿಸಿದ್ದರು. ಶಾಸಕ ಎನ್.ಎ.ಹ್ಯಾರಿಸ್ ಇನ್ನಿತರರಿದ್ದಾರೆ.

ಇದನ್ನೂ ಓದಿ: ಸಂಕ್ರಾಂತಿ ಒಳಗಾಗಿ ಸಚಿವ ಸಂಪುಟ ವಿಸ್ತರಣೆ: ಯತ್ನಾಳ್​ ಪುನರುಚ್ಚಾರ

ಬೆಂಗಳೂರು: ಮಂಡ್ಯ, ಚಿಕ್ಕಬಳ್ಳಾಪುರದಲ್ಲಿ ಪ್ರಾರ್ಥನಾ ಮಂದಿರಗಳಿಗೆ ಬಲವಂತವಾಗಿ ಬೀಗ ಜಡಿದು ದೌರ್ಜನ್ಯ ಎಸಗಲಾಗುತ್ತಿದೆ ಎಂದು ಆರೋಪಿಸಿ ರಾಜ್ಯ ಕಾಂಗ್ರೆಸ್ ನಾಯಕರು ಬೆಂಗಳೂರಿನ ರೇಸ್​ಕೋರ್ಸ್​ ರಸ್ತೆಯಲ್ಲಿನ ಕಾಂಗ್ರೆಸ್ ಭವನದಲ್ಲಿ ಸಾಂಕೇತಿಕ ಪ್ರತಿಭಟನೆ ನಡೆಸಿದರು.

ಈ ವೇಳೆ ಚಿಂತಕ ಸಿ.ಎಸ್.ದ್ವಾರಕನಾಥ್ ಮಾತನಾಡಿ, ಉತ್ತರಪ್ರದೇಶ ಮತ್ತು ಇಲ್ಲಿಯ ಮತಾಂತರ ನಿಷೇಧ ಕಾಯ್ದೆ ಒಂದೇ ಆಗಿದೆ. ನಾನು 2 ಬಿಲ್ ಡ್ರಾಫ್ಟ್ ಓದಿದ್ದೇನೆ. ನಾಗಪುರದ ಆರ್​ಎಸ್​ಎಸ್ ಕಚೇರಿಯಲ್ಲಿ ಮಸೂದೆ ರೆಡಿಯಾಗಿದೆ ಎಂದು ಆರೋಪಿಸಿದರು.

ಮತಾಂತರ ಕಾಯ್ದೆ ದಲಿತ ಸಮುದಾಯಗಳ ಮೇಲೆ ಪರಿಣಾಮ ಬೀರಲಿದೆ. ದಲಿತರ ಸ್ವಾತಂತ್ರ್ಯವನ್ನು ಕಿತ್ತುಕೊಳ್ತಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಸವಧರ್ಮದಿಂದ ಬಂದವರು. ಮಸೂದೆಗೆ ಹೇಗೆ ಸಹಿ ಮಾಡಿದಿರಿ ಎಂದು ಪ್ರಶ್ನಿಸಿದರು.

ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್ ಜಬ್ಬಾರ್ ಮಾತನಾಡಿ, ಕ್ರೈಸ್ತ ಕೇಂದ್ರಗಳ ಮೇಲೆ ದಾಳಿಯಾಗ್ತಿದೆ. ಮಂಡ್ಯದ ನಿರ್ಮಲಾ ಶಾಲೆ ಮೇಲೆ ದಾಳಿ ನಡೆದಿದೆ. ಅಲ್ಲಿನ ಶಿಕ್ಷಕರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. 23 ರಂದು ಗೋಕಾಕ್ ಚರ್ಚ್ ಮೇಲೆ ದಾಳಿ ಆಗಿದೆ. ಪ್ರಾರ್ಥನೆ ವೇಳೆ ಒಳ ನುಗ್ಗಿ ದಾಂಧಲೆ ನಡೆಸಿದ್ದಾರೆ. ಚಿಕ್ಕಬಳ್ಳಾಪುರ, ಮಂಡ್ಯದಲ್ಲಿ ಚರ್ಚ್​ಗಳಿಗೆ ಬೀಗ ಹಾಕಲಾಗಿದೆ. ಸ್ಥಳೀಯ ಅಧಿಕಾರಿಗಳೇ ಬೀಗ ಹಾಕಿಸಿದ್ದಾರೆ ಎಂದು ಆರೋಪಿಸಿದರು.

ಮಾಜಿ ಶಾಸಕ ಮುಖ್ಯಮಂತ್ರಿ ಚಂದ್ರು ಮಾತನಾಡಿ, ಈ ದೇಶದಲ್ಲಿ ಅರಾಜಕತೆ ಹೆಚ್ಚಾಗಿದೆ. ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ ನಡೆಯುತ್ತಿದೆ. ಹಿಂದೂಗಳಲ್ಲಿ ಕೂಡ ಅಲ್ಪಸಂಖ್ಯಾತರಿದ್ದಾರೆ. ನಾನು ಕೂಡ ಅಲ್ಪಸಂಖ್ಯಾತ ಹಿಂದೂ. ಶಾಲೆಯಲ್ಲಿ ಮಕ್ಕಳಿಗೆ ಮೊಟ್ಟೆ ಕೊಡಬೇಡಿ ಅಂತಿದ್ದಾರೆ. ಅಂಬೇಡ್ಕರ್, ಬಸವಣ್ಣ ಇದ್ದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರು ಎಂದರು.

ಸಾಹಿತಿ ಪ್ರೊ.ಎಸ್.ಜಿ. ಸಿದ್ದರಾಮಯ್ಯ ಮಾತನಾಡಿ, ಮತಾಂತರ 2 ಸಾವಿರ ವರ್ಷಗಳಿಂದ ಇದೆ. ನಾಥ ಪಂಥದ ಒಕ್ಕಲಿಗರು ಮತಾಂತರವಾದವರೇ. ಶ್ರೇಷ್ಠ, ಕನಿಷ್ಠ ಕಲ್ಪನೆಯಲ್ಲಿ ಮತಾಂತರವಾದವರು. ಜಗತ್ತಿನ ಬೇರೆ ಎಲ್ಲೂ ಇಂತಹ ಅಸಮಾನತೆ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್ ಜಬ್ಬಾರ್ ಪ್ರತಿಭಟನಾ ಸಭೆಯ ನೇತೃತ್ವ ವಹಿಸಿದ್ದರು. ಶಾಸಕ ಎನ್.ಎ.ಹ್ಯಾರಿಸ್ ಇನ್ನಿತರರಿದ್ದಾರೆ.

ಇದನ್ನೂ ಓದಿ: ಸಂಕ್ರಾಂತಿ ಒಳಗಾಗಿ ಸಚಿವ ಸಂಪುಟ ವಿಸ್ತರಣೆ: ಯತ್ನಾಳ್​ ಪುನರುಚ್ಚಾರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.