ETV Bharat / city

ನಾಳೆ ವಿಜಯಪುರಕ್ಕೆ ಸಿಎಂ ಬಸವರಾಜ ಬೊಮ್ಮಾಯಿ.. ನಾಡಿದ್ದು ಮೂಡಬಿದಿರೆಗೆ..

author img

By

Published : Apr 25, 2022, 10:41 AM IST

ಸಿಎಂ ಬೊಮ್ಮಾಯಿಯಿಂದ ಜಿಲ್ಲಾ ಪ್ರವಾಸ ಮುಂದುವರಿದಿದ್ದು, ನಾಳೆ ವಿಜಯಪುರ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.

Continued District Tour from CM Bommai, CM Bommai Visit to Vijayapur district tomorrow, CM Bommai news, ಸಿಎಂ ಬೊಮ್ಮಾಯಿಯಿಂದ ಮುಂದುವರಿದ ಜಿಲ್ಲಾ ಪ್ರವಾಸ, ನಾಳೆ ವಿಜಯಪುರ ಜಿಲ್ಲೆಗೆ ಸಿಎಂ ಬೊಮ್ಮಾಯಿ ಭೇಟಿ, ಸಿಎಂ ಬೊಮ್ಮಾಯಿ ಸುದ್ದಿ,
ಸಿಎಂ ಬೊಮ್ಮಾಯಿಯಿಂದ ಮುಂದುವರಿದ ಜಿಲ್ಲಾ ಪ್ರವಾಸ

ಬೆಂಗಳೂರು : ಕಳೆದ ಎರಡು ವಾರಗಳಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿರಂತರವಾಗಿ ಜಿಲ್ಲಾ ಪ್ರವಾಸದಲ್ಲಿ ತೊಡಗಿದ್ದು, ನಾಳೆ ಮತ್ತು ನಾಡಿದ್ದು ಎರಡು ದಿನ ವಿಜಯಪುರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದಾರೆ.

ನಾಳೆ ಬೆಳಗ್ಗೆ 11.30ಕ್ಕೆ ವಿಜಯಪುರದ ದೇವರ ಹಿಪ್ಪರಗಿಗೆ ತೆರಳಲಿರುವ ಸಿಎಂ ಬಸವರಾಜ ಬೊಮ್ಮಾಯಿ, ಬೂದಿಹಾಳ-ಪೀರಾಪುರ ಏತ ನೀರಾವರಿ ಯೋಜನೆಗೆ ಚಾಲನೆ ಕೊಡಲಿದ್ದಾರೆ. ನಂತರ ಮಧ್ಯಾಹ್ನ 2.30ಕ್ಕೆ ತಾಳಿಕೋಟಿಯ ಹೇಮರೆಡ್ಡಿ ಮಲ್ಲಮ್ಮ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ನಾಳೆ ಸಂಜೆ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.

ಓದಿ: ಡಾ.ರಾಜ್​​ಕುಮಾರ್ ಭಾರತೀಯ ಚಿತ್ರರಂಗದ ಅತ್ಯಂತ ಶ್ರೇಷ್ಠ ಶೋಮ್ಯಾನ್: ಸಿಎಂ ಬೊಮ್ಮಾಯಿ

ಬುಧವಾರ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಗೆ ಭೇಟಿ ನೀಡಲಿರುವ ಸಿಎಂ ಬೊಮ್ಮಾಯಿ, ಅಲ್ಲಿ ಅನ್ನದಾಸೋಹ ಕಟ್ಟಡದ ಉದ್ಘಾಟನೆ ಮಾಡಲಿದ್ದಾರೆ. ಬಳಿಕ ಜೈನ್ ಬಸದಿಗೆ ಭೇಟಿ ಕೊಡಲಿದ್ದು, ಮಧ್ಯಾಹ್ನ 1ಗಂಟೆಗೆ ಮೂಡಿಬಿದರೆ ಪ್ರೆಸ್ ಕ್ಲಬ್​ನಲ್ಲಿ ನೂತನ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಲಿದ್ದಾರೆ.

ಮಧ್ಯಾಹ್ನ 3 ಗಂಟೆಗೆ ಮೂಡಬಿದಿರೆ ತಾಲೂಕು ಆಡಳಿತ ಸೌಧ ಉದ್ಘಾಟನೆ ಹಾಗೂ ಮುಲ್ಕಿ ವಿಧಾನಸಭೆ ಕ್ಷೇತ್ರದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಸಂಜೆ 5.30ಕ್ಕೆ ಮೂಡುಬಿದರೆಯಿಂದ ಹೊರಟು ರಾತ್ರಿ 7.45ಕ್ಕೆ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.

ಮೂಡಬಿದಿರೆಯಿಂದಲೇ ಪಿಎಂ ವೀಡಿಯೋ ಕಾನ್ಫ್‌ರೆನ್ಸ್​ನಲ್ಲಿ ಭಾಗಿ : ಮೂಡಬಿದಿರೆಯಿಂದಲೇ ಪ್ರಧಾನಿ ನರೇಂದ್ರ ಮೋದಿ ನಡೆಸಲಿರುವ ವಿಡಿಯೋ ಕಾನ್ಫ್‌ರೆನ್ಸ್​ನಲ್ಲಿ ಭಾಗಿಯಾಗಲಿರುವ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯದ ಕೊವೀಡ್ ಸ್ಥಿತಿಗತಿ ಬಗ್ಗೆ ಮಾಹಿತಿ ನೀಡಲಿದ್ದಾರೆ. ನಾಲ್ಕನೇ ಅಲೆ ನಿಯಂತ್ರಣ ಬಗ್ಗೆ ಮುಂಜಾಗ್ರತಾ ಕ್ರಮಗಳ ಕುರಿತು ಪಿಎಂ ಜೊತೆ ಸಮಾಲೋಚನೆ ನಡೆಸಲಿದ್ದಾರೆ.

ಬೆಂಗಳೂರು : ಕಳೆದ ಎರಡು ವಾರಗಳಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿರಂತರವಾಗಿ ಜಿಲ್ಲಾ ಪ್ರವಾಸದಲ್ಲಿ ತೊಡಗಿದ್ದು, ನಾಳೆ ಮತ್ತು ನಾಡಿದ್ದು ಎರಡು ದಿನ ವಿಜಯಪುರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದಾರೆ.

ನಾಳೆ ಬೆಳಗ್ಗೆ 11.30ಕ್ಕೆ ವಿಜಯಪುರದ ದೇವರ ಹಿಪ್ಪರಗಿಗೆ ತೆರಳಲಿರುವ ಸಿಎಂ ಬಸವರಾಜ ಬೊಮ್ಮಾಯಿ, ಬೂದಿಹಾಳ-ಪೀರಾಪುರ ಏತ ನೀರಾವರಿ ಯೋಜನೆಗೆ ಚಾಲನೆ ಕೊಡಲಿದ್ದಾರೆ. ನಂತರ ಮಧ್ಯಾಹ್ನ 2.30ಕ್ಕೆ ತಾಳಿಕೋಟಿಯ ಹೇಮರೆಡ್ಡಿ ಮಲ್ಲಮ್ಮ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ನಾಳೆ ಸಂಜೆ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.

ಓದಿ: ಡಾ.ರಾಜ್​​ಕುಮಾರ್ ಭಾರತೀಯ ಚಿತ್ರರಂಗದ ಅತ್ಯಂತ ಶ್ರೇಷ್ಠ ಶೋಮ್ಯಾನ್: ಸಿಎಂ ಬೊಮ್ಮಾಯಿ

ಬುಧವಾರ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಗೆ ಭೇಟಿ ನೀಡಲಿರುವ ಸಿಎಂ ಬೊಮ್ಮಾಯಿ, ಅಲ್ಲಿ ಅನ್ನದಾಸೋಹ ಕಟ್ಟಡದ ಉದ್ಘಾಟನೆ ಮಾಡಲಿದ್ದಾರೆ. ಬಳಿಕ ಜೈನ್ ಬಸದಿಗೆ ಭೇಟಿ ಕೊಡಲಿದ್ದು, ಮಧ್ಯಾಹ್ನ 1ಗಂಟೆಗೆ ಮೂಡಿಬಿದರೆ ಪ್ರೆಸ್ ಕ್ಲಬ್​ನಲ್ಲಿ ನೂತನ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಲಿದ್ದಾರೆ.

ಮಧ್ಯಾಹ್ನ 3 ಗಂಟೆಗೆ ಮೂಡಬಿದಿರೆ ತಾಲೂಕು ಆಡಳಿತ ಸೌಧ ಉದ್ಘಾಟನೆ ಹಾಗೂ ಮುಲ್ಕಿ ವಿಧಾನಸಭೆ ಕ್ಷೇತ್ರದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಸಂಜೆ 5.30ಕ್ಕೆ ಮೂಡುಬಿದರೆಯಿಂದ ಹೊರಟು ರಾತ್ರಿ 7.45ಕ್ಕೆ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.

ಮೂಡಬಿದಿರೆಯಿಂದಲೇ ಪಿಎಂ ವೀಡಿಯೋ ಕಾನ್ಫ್‌ರೆನ್ಸ್​ನಲ್ಲಿ ಭಾಗಿ : ಮೂಡಬಿದಿರೆಯಿಂದಲೇ ಪ್ರಧಾನಿ ನರೇಂದ್ರ ಮೋದಿ ನಡೆಸಲಿರುವ ವಿಡಿಯೋ ಕಾನ್ಫ್‌ರೆನ್ಸ್​ನಲ್ಲಿ ಭಾಗಿಯಾಗಲಿರುವ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯದ ಕೊವೀಡ್ ಸ್ಥಿತಿಗತಿ ಬಗ್ಗೆ ಮಾಹಿತಿ ನೀಡಲಿದ್ದಾರೆ. ನಾಲ್ಕನೇ ಅಲೆ ನಿಯಂತ್ರಣ ಬಗ್ಗೆ ಮುಂಜಾಗ್ರತಾ ಕ್ರಮಗಳ ಕುರಿತು ಪಿಎಂ ಜೊತೆ ಸಮಾಲೋಚನೆ ನಡೆಸಲಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.