ETV Bharat / city

ಪ್ರತಿದಿನ ಬೆಳಗ್ಗೆ 5ಕ್ಕೆ ಬದಲಾಗಿ 6 ಗಂಟೆಗೆ ಅಜಾನ್ ಕೂಗಲು ಒಮ್ಮತದ ತೀರ್ಮಾನ

author img

By

Published : May 17, 2022, 1:08 PM IST

'ಮುಸ್ಲಿಮರು ಕಾನೂನಿಗೆ ಬೆಲೆ ಕೊಡುವುದಿಲ್ಲ ಎಂಬ ವದಂತಿ ಹರಡಿತ್ತು. ನಾವು ಕಾನೂನು ಪಾಲಿಸುತ್ತೇವೆ. ಕಾನೂನಿಗೆ ಬೆಲೆ ಕೊಡುವುದಿಲ್ಲವೆಂಬ ವದಂತಿಯನ್ನು ಈ ನಿರ್ಧಾರದ ಮೂಲಕ ಸುಳ್ಳು ಎಂದು ಸಾಬೀತು ಮಾಡಿದಂತೆ ಆಗಿದೆ'- ಕರ್ನಾಟಕ ವಕ್ಫ್ ಮಂಡಳಿ ಅಧ್ಯಕ್ಷ ಮೊಹಮ್ಮದ್‌ ಷಫಿ ಸಾ ಅದಿ

Decision to do Ajan at 6 am
ಬೆಳಗ್ಗೆ 6 ಗಂಟೆಗೆ ಅಜಾನ್ ಕೂಗಲು ತೀರ್ಮಾನ

ಬೆಂಗಳೂರು: ರಾಜ್ಯದ ಎಲ್ಲಾ ಪ್ರಾರ್ಥನಾ ಮಂದಿರಗಳಲ್ಲಿ ಪ್ರತಿದಿನ ಬೆಳಗಿನ ಜಾವ 5 ಗಂಟೆಯ ಬದಲಾಗಿ 6 ಗಂಟೆಗೆ ಅಜಾನ್ ಕೂಗಲು ತೀರ್ಮಾನಿಸಲಾಗಿದೆ. ರಾಜ್ಯ ಸರ್ಕಾರ ಮತ್ತು ಸುಪ್ರೀಂಕೋರ್ಟ್ ನೀಡಿರುವ ಆದೇಶ ಮತ್ತು ಮಾರ್ಗಸೂಚಿಗಳನ್ನು ಪಾಲಿಸಲು ಮುಸ್ಲಿಂ ಧರ್ಮಗುರುಗಳು, ಮೌಲ್ವಿಗಳು ಮತ್ತು ಮುಖಂಡರ ಸಭೆಯಲ್ಲಿ ನಿರ್ಧರಿಸಲಾಗಿದೆ.

ಇದಕ್ಕೆ ಸಂಬಂಧಿಸಿದಂತೆ ಅಮೀರ್‌-ಎ-ಷರಿಯತ್‌ ಆಗಿರುವ ಮೌಲಾನ ಸಗೀರ್‌ ಅಹಮದ್‌ ಅಧ್ಯಕ್ಷತೆಯಲ್ಲಿ ಷರಿಯತ್‌-ಎ-ಹಿಂದ್‌ ಸಂಘಟನೆ ಏರ್ಪಡಿಸಿದ್ದ ಸಭೆಯಲ್ಲಿ ಒಮ್ಮತದ ತೀರ್ಮಾನ ಮೂಡಿದೆ. ಸಭೆಯಲ್ಲಿ ತೆಗೆದುಕೊಂಡಿರುವ ತೀರ್ಮಾನ ರಾಜ್ಯದ ಎಲ್ಲ ಭಾಗಗಳಿಗೂ ಅನ್ವಯವಾಗಲಿದೆ. ಎಲ್ಲ ಮಸೀದಿಗಳ ಮುಖಂಡರೂ ಕೂಡ ಒಪ್ಪಿಗೆ ನೀಡಿದ್ದಾರೆ. ಇದಕ್ಕೆ ಯಾರ ವಿರೋಧವೂ ವ್ಯಕ್ತವಾಗಿಲ್ಲ. ಉಳಿದ ಸಮಯದಲ್ಲಿ ಸರ್ಕಾರ ಮತ್ತು ಸುಪ್ರೀಂಕೋರ್ಟ್‌ ತೀರ್ಮಾನವನ್ನು ಚಾಚೂ ತಪ್ಪದೇ ಪಾಲಿಸಲು ನಿರ್ಧರಿಸಿದ್ದೇವೆ ಎಂದು ಸಭೆ ಬಳಿಕ ಸಂಘಟನೆಯ ಉಮರ್ ಶರೀಫ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ತುಮಕೂರಿನಲ್ಲಿ ಮಕ್ಕಳೊಂದಿಗೆ ಸಿಎಂ ಬೊಮ್ಮಾಯಿ ಸಂವಾದ: ಬೇಡಿಕೆ ಈಡೇರಿಸುವ ಭರವಸೆ

ಮುಸ್ಲಿಮರು ಕಾನೂನಿಗೆ ಬೆಲೆ ಕೊಡುವುದಿಲ್ಲ ಎಂಬ ವದಂತಿ ಹರಡಿತ್ತು. ನಾವು ಕಾನೂನು ಪಾಲಿಸುತ್ತೇವೆ. ಕಾನೂನಿಗೆ ಬೆಲೆ ಕೊಡುವುದಿಲ್ಲವೆಂಬ ವದಂತಿಯನ್ನು ಈ ನಿರ್ಧಾರದ ಮೂಲಕ ಸುಳ್ಳು ಎಂದು ಸಾಬೀತು ಮಾಡಿದಂತೆ ಆಗಿದೆ. ಬೆಳಗಿನ ಜಾವ 5ಗಂಟೆಗೆ ಅಜಾನ್ ಕೂಗುವುದು ಪ್ರಾರ್ಥನೆ ಅಲ್ಲ. ಪ್ರಾರ್ಥನೆ ಮಾಡಲು ಕರೆಯುವ ಸಂದೇಶ. ಇದಕ್ಕೆ ಸರ್ಕಾರ ಅಥವಾ ಸುಪ್ರೀಂಕೋರ್ಟ್‌ನ ವಿರೋಧವಿಲ್ಲ. ಬೆಳಿಗ್ಗೆ 6 ಗಂಟೆ ಬಳಿಕ ಮೈಕ್‌ ಬಳಸಲು ಎಲ್ಲ ಮಸೀದಿಗಳೂ ಪೊಲೀಸರಿಂದ ಅನುಮತಿ ಪಡೆಯುವಂತೆ ಸೂಚನೆ ನೀಡಲಾಗುವುದು ಎಂದು ಕರ್ನಾಟಕ ವಕ್ಫ್ ಮಂಡಳಿ ಅಧ್ಯಕ್ಷ ಮೊಹಮ್ಮದ್‌ ಷಫಿ ಸಾ ಅದಿ ತಿಳಿಸಿದ್ದಾರೆ.

ಬೆಂಗಳೂರು: ರಾಜ್ಯದ ಎಲ್ಲಾ ಪ್ರಾರ್ಥನಾ ಮಂದಿರಗಳಲ್ಲಿ ಪ್ರತಿದಿನ ಬೆಳಗಿನ ಜಾವ 5 ಗಂಟೆಯ ಬದಲಾಗಿ 6 ಗಂಟೆಗೆ ಅಜಾನ್ ಕೂಗಲು ತೀರ್ಮಾನಿಸಲಾಗಿದೆ. ರಾಜ್ಯ ಸರ್ಕಾರ ಮತ್ತು ಸುಪ್ರೀಂಕೋರ್ಟ್ ನೀಡಿರುವ ಆದೇಶ ಮತ್ತು ಮಾರ್ಗಸೂಚಿಗಳನ್ನು ಪಾಲಿಸಲು ಮುಸ್ಲಿಂ ಧರ್ಮಗುರುಗಳು, ಮೌಲ್ವಿಗಳು ಮತ್ತು ಮುಖಂಡರ ಸಭೆಯಲ್ಲಿ ನಿರ್ಧರಿಸಲಾಗಿದೆ.

ಇದಕ್ಕೆ ಸಂಬಂಧಿಸಿದಂತೆ ಅಮೀರ್‌-ಎ-ಷರಿಯತ್‌ ಆಗಿರುವ ಮೌಲಾನ ಸಗೀರ್‌ ಅಹಮದ್‌ ಅಧ್ಯಕ್ಷತೆಯಲ್ಲಿ ಷರಿಯತ್‌-ಎ-ಹಿಂದ್‌ ಸಂಘಟನೆ ಏರ್ಪಡಿಸಿದ್ದ ಸಭೆಯಲ್ಲಿ ಒಮ್ಮತದ ತೀರ್ಮಾನ ಮೂಡಿದೆ. ಸಭೆಯಲ್ಲಿ ತೆಗೆದುಕೊಂಡಿರುವ ತೀರ್ಮಾನ ರಾಜ್ಯದ ಎಲ್ಲ ಭಾಗಗಳಿಗೂ ಅನ್ವಯವಾಗಲಿದೆ. ಎಲ್ಲ ಮಸೀದಿಗಳ ಮುಖಂಡರೂ ಕೂಡ ಒಪ್ಪಿಗೆ ನೀಡಿದ್ದಾರೆ. ಇದಕ್ಕೆ ಯಾರ ವಿರೋಧವೂ ವ್ಯಕ್ತವಾಗಿಲ್ಲ. ಉಳಿದ ಸಮಯದಲ್ಲಿ ಸರ್ಕಾರ ಮತ್ತು ಸುಪ್ರೀಂಕೋರ್ಟ್‌ ತೀರ್ಮಾನವನ್ನು ಚಾಚೂ ತಪ್ಪದೇ ಪಾಲಿಸಲು ನಿರ್ಧರಿಸಿದ್ದೇವೆ ಎಂದು ಸಭೆ ಬಳಿಕ ಸಂಘಟನೆಯ ಉಮರ್ ಶರೀಫ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ತುಮಕೂರಿನಲ್ಲಿ ಮಕ್ಕಳೊಂದಿಗೆ ಸಿಎಂ ಬೊಮ್ಮಾಯಿ ಸಂವಾದ: ಬೇಡಿಕೆ ಈಡೇರಿಸುವ ಭರವಸೆ

ಮುಸ್ಲಿಮರು ಕಾನೂನಿಗೆ ಬೆಲೆ ಕೊಡುವುದಿಲ್ಲ ಎಂಬ ವದಂತಿ ಹರಡಿತ್ತು. ನಾವು ಕಾನೂನು ಪಾಲಿಸುತ್ತೇವೆ. ಕಾನೂನಿಗೆ ಬೆಲೆ ಕೊಡುವುದಿಲ್ಲವೆಂಬ ವದಂತಿಯನ್ನು ಈ ನಿರ್ಧಾರದ ಮೂಲಕ ಸುಳ್ಳು ಎಂದು ಸಾಬೀತು ಮಾಡಿದಂತೆ ಆಗಿದೆ. ಬೆಳಗಿನ ಜಾವ 5ಗಂಟೆಗೆ ಅಜಾನ್ ಕೂಗುವುದು ಪ್ರಾರ್ಥನೆ ಅಲ್ಲ. ಪ್ರಾರ್ಥನೆ ಮಾಡಲು ಕರೆಯುವ ಸಂದೇಶ. ಇದಕ್ಕೆ ಸರ್ಕಾರ ಅಥವಾ ಸುಪ್ರೀಂಕೋರ್ಟ್‌ನ ವಿರೋಧವಿಲ್ಲ. ಬೆಳಿಗ್ಗೆ 6 ಗಂಟೆ ಬಳಿಕ ಮೈಕ್‌ ಬಳಸಲು ಎಲ್ಲ ಮಸೀದಿಗಳೂ ಪೊಲೀಸರಿಂದ ಅನುಮತಿ ಪಡೆಯುವಂತೆ ಸೂಚನೆ ನೀಡಲಾಗುವುದು ಎಂದು ಕರ್ನಾಟಕ ವಕ್ಫ್ ಮಂಡಳಿ ಅಧ್ಯಕ್ಷ ಮೊಹಮ್ಮದ್‌ ಷಫಿ ಸಾ ಅದಿ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.