ETV Bharat / city

ಬೆಂಗಳೂರಲ್ಲಿ ಡೆಂಗ್ಯೂ ಭೀತಿ: ಮುಂಜಾಗ್ರತಾ ಕ್ರಮಕ್ಕೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಮತ್ತೆ ಡೆಂಗ್ಯೂ, ಚಿಕನ್​ ಗುನ್ಯಾ ಹರಡುವ ಆತಂಕ‌ ಶುರುವಾಗಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸುವಂತೆ ಆರೋಗ್ಯ ಇಲಾಖೆ ಸೂಚಿಸಿದೆ.

author img

By

Published : Oct 22, 2019, 9:11 PM IST

ಬೆಂಗಳೂರಲ್ಲಿ ಹೆಚ್ಚಿದ ಡೆಂಗ್ಯೂ ಭೀತಿ

ಬೆಂಗಳೂರು: ವಾರದಿಂದ ಬೆಂಗಳೂರು ನಗರ ಮುಸುಕಿನ‌ ವಾತಾವರಣದಿಂದ ಕೂಡಿದ್ದು, ಗಂಟೆಗೆ ಒಮ್ಮೆಯಂತೆ ಆಗಾಗ ಮಳೆರಾಯ ಎಂಟ್ರಿ ಕೊಡುತ್ತಿದ್ದಾನೆ. ದಿಢೀರ್ ಅಂತ ಸುರಿಯುತ್ತಿರುವ ಮಳೆಯಿಂದಾಗಿ ಈಗ ನಗರದೆಲ್ಲೆಡೆ ಡೆಂಗ್ಯೂ ಭೀತಿ‌ ಹೆಚ್ಚಿದೆ.

ಬೆಂಗಳೂರಲ್ಲಿ ಹೆಚ್ಚಿದ ಡೆಂಗ್ಯೂ ಭೀತಿ

ಕಳೆದ ಹಲವು ತಿಂಗಳಿಂದ ಡೆಂಗ್ಯೂ ಜ್ವರದ ಪ್ರಕರಣಗಳು ಕಡಿಮೆಯಾಗಿದ್ದವು. ಈಗ ಸುರಿಯುತ್ತಿರುವ ಮಳೆಯಿಂದಾಗಿ ಮತ್ತೆ ಡೆಂಗ್ಯೂ, ಚಿಕನ್​ ಗುನ್ಯಾ ಹರಡುವ ಆತಂಕ‌ ಶುರುವಾಗಿದೆ. ಹೀಗಾಗಿ ಆರೋಗ್ಯ ಇಲಾಖೆ ಮುಂಜಾಗ್ರತಾ ಕ್ರಮಕ್ಕೆ ಮುಂದಾಗಿದ್ದು, ಡೆಂಗ್ಯೂ ಪ್ರಕರಣ ಅಧಿಕವಿರುವ ತುಮಕೂರು, ದಾವಣಗೆರೆ, ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಕಲಬುರಗಿ, ಯಾದಗಿರಿ, ಬೀದರ್, ಕೊಪ್ಪಳ, ಹಾಸನ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ವರದಿಯನ್ನು ಸಲ್ಲಿಸುವಂತೆ ಸೂಚಿಸಿದೆ.

ಡೆಂಗ್ಯೂ, ಚಿಕನ್​ ಗುನ್ಯಾ ಹರಡುವ ಈಡೀಸ್ ಸೊಳ್ಳೆಗಳು ಸಂಗ್ರಹವಾದ ನೀರಿನಲ್ಲಿ ಉತ್ಪತ್ತಿಯಾಗುತ್ತವೆ. ಹೀಗಾಗಿ ಮಳೆ ಬಂದಾಗ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳುವುದು ಹಾಗೂ ನೀರಿನ ಸಂಗ್ರಹಣೆಗಳನ್ನು ಸಂಪೂರ್ಣವಾಗಿ ಮುಚ್ಚಿ, ಸೊಳ್ಳೆ ಉತ್ಪತ್ತಿಯನ್ನು ತಡೆಗಟ್ಟುವಂತೆ ಆರೋಗ್ಯ ಇಲಾಖೆಯ ಅಧಿಕಾರಿ ಷರೀಫ್ ತಿಳಿಸಿದ್ದಾರೆ.

ಡೆಂಗ್ಯೂ ಹರಡದಂತೆ ಎಚ್ಚರಿಕೆ ವಹಿಸುವುದು ಹೇಗೆ?

ಇನ್ನು ಡೆಂಗ್ಯೂ ನಿಯಂತ್ರಣ ಮಾಡಬೇಕು ಅಂದರೆ ಹೂವಿನ ಕುಂಡ, ಬಿಸಾಕಿದ ಟೈರ್‌ ಹೀಗೆ ಮನೆಯ ಸುತ್ತಮುತ್ತ ಬಿಸಾಡಿದ ತ್ಯಾಜ್ಯ ವಸ್ತುಗಳಲ್ಲಿ ನೀರು ನಿಲ್ಲದಂತೆ ಹಾಗೂ ನೀರು ಸಂಗ್ರಹಿಸುವ ತೊಟ್ಟಿಯನ್ನು ಶುಚಿಗೊಳಿಸಿ ಸೊಳ್ಳೆಗಳು ಮೊಟ್ಟೆ ಇಡಲು ಅವಕಾಶವಿರದಂತೆ ನೋಡಿಕೊಳ್ಳಬೇಕು.

ಬೆಂಗಳೂರು: ವಾರದಿಂದ ಬೆಂಗಳೂರು ನಗರ ಮುಸುಕಿನ‌ ವಾತಾವರಣದಿಂದ ಕೂಡಿದ್ದು, ಗಂಟೆಗೆ ಒಮ್ಮೆಯಂತೆ ಆಗಾಗ ಮಳೆರಾಯ ಎಂಟ್ರಿ ಕೊಡುತ್ತಿದ್ದಾನೆ. ದಿಢೀರ್ ಅಂತ ಸುರಿಯುತ್ತಿರುವ ಮಳೆಯಿಂದಾಗಿ ಈಗ ನಗರದೆಲ್ಲೆಡೆ ಡೆಂಗ್ಯೂ ಭೀತಿ‌ ಹೆಚ್ಚಿದೆ.

ಬೆಂಗಳೂರಲ್ಲಿ ಹೆಚ್ಚಿದ ಡೆಂಗ್ಯೂ ಭೀತಿ

ಕಳೆದ ಹಲವು ತಿಂಗಳಿಂದ ಡೆಂಗ್ಯೂ ಜ್ವರದ ಪ್ರಕರಣಗಳು ಕಡಿಮೆಯಾಗಿದ್ದವು. ಈಗ ಸುರಿಯುತ್ತಿರುವ ಮಳೆಯಿಂದಾಗಿ ಮತ್ತೆ ಡೆಂಗ್ಯೂ, ಚಿಕನ್​ ಗುನ್ಯಾ ಹರಡುವ ಆತಂಕ‌ ಶುರುವಾಗಿದೆ. ಹೀಗಾಗಿ ಆರೋಗ್ಯ ಇಲಾಖೆ ಮುಂಜಾಗ್ರತಾ ಕ್ರಮಕ್ಕೆ ಮುಂದಾಗಿದ್ದು, ಡೆಂಗ್ಯೂ ಪ್ರಕರಣ ಅಧಿಕವಿರುವ ತುಮಕೂರು, ದಾವಣಗೆರೆ, ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಕಲಬುರಗಿ, ಯಾದಗಿರಿ, ಬೀದರ್, ಕೊಪ್ಪಳ, ಹಾಸನ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ವರದಿಯನ್ನು ಸಲ್ಲಿಸುವಂತೆ ಸೂಚಿಸಿದೆ.

ಡೆಂಗ್ಯೂ, ಚಿಕನ್​ ಗುನ್ಯಾ ಹರಡುವ ಈಡೀಸ್ ಸೊಳ್ಳೆಗಳು ಸಂಗ್ರಹವಾದ ನೀರಿನಲ್ಲಿ ಉತ್ಪತ್ತಿಯಾಗುತ್ತವೆ. ಹೀಗಾಗಿ ಮಳೆ ಬಂದಾಗ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳುವುದು ಹಾಗೂ ನೀರಿನ ಸಂಗ್ರಹಣೆಗಳನ್ನು ಸಂಪೂರ್ಣವಾಗಿ ಮುಚ್ಚಿ, ಸೊಳ್ಳೆ ಉತ್ಪತ್ತಿಯನ್ನು ತಡೆಗಟ್ಟುವಂತೆ ಆರೋಗ್ಯ ಇಲಾಖೆಯ ಅಧಿಕಾರಿ ಷರೀಫ್ ತಿಳಿಸಿದ್ದಾರೆ.

ಡೆಂಗ್ಯೂ ಹರಡದಂತೆ ಎಚ್ಚರಿಕೆ ವಹಿಸುವುದು ಹೇಗೆ?

ಇನ್ನು ಡೆಂಗ್ಯೂ ನಿಯಂತ್ರಣ ಮಾಡಬೇಕು ಅಂದರೆ ಹೂವಿನ ಕುಂಡ, ಬಿಸಾಕಿದ ಟೈರ್‌ ಹೀಗೆ ಮನೆಯ ಸುತ್ತಮುತ್ತ ಬಿಸಾಡಿದ ತ್ಯಾಜ್ಯ ವಸ್ತುಗಳಲ್ಲಿ ನೀರು ನಿಲ್ಲದಂತೆ ಹಾಗೂ ನೀರು ಸಂಗ್ರಹಿಸುವ ತೊಟ್ಟಿಯನ್ನು ಶುಚಿಗೊಳಿಸಿ ಸೊಳ್ಳೆಗಳು ಮೊಟ್ಟೆ ಇಡಲು ಅವಕಾಶವಿರದಂತೆ ನೋಡಿಕೊಳ್ಳಬೇಕು.

Intro:‌ರಾಜ್ಯದ ಹಲವೆಡೆ ಮಳೆಯ ಆರ್ಭಟ; ಮತ್ತೆ ಡೆಂಗ್ಯು ಭೀತಿ- ಮುನ್ನೆಚ್ಚರಿಕೆ ಕ್ರಮಕ್ಕೆ ಮುಂದಾದ ಆರೋಗ್ಯ ಇಲಾಖೆ..

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಜೋರಾಗಿದೆ..‌ ವಾರದಿಂದ ಬೆಂಗಳೂರು ನಗರದಲ್ಲಿ ಮುಸುಕಿನ‌ ವಾತಾವರಣದಿಂದ ಕೂಡಿದ್ದು, ಗಂಟೆಗೆ ಒಮ್ಮೆಯಂತೆ ಆಗಾಗ ಮಳೆರಾಯ ಎಂಟ್ರಿ ಕೊಡುತ್ತಿದ್ದಾನೆ.. ದಿಢೀರ್ ಅಂತ ಸುರಿಯುತ್ತಿರುವ ಮಳೆಯಿಂದಾಗಿ ಈಗ ಡೆಂಗ್ಯೂ ಭೀತಿ‌ ಹೆಚ್ಚಿದೆ..

ಕಳೆದ ಹಲವು ತಿಂಗಳಿಂದ ಡೆಂಗ್ಯು ಜ್ವರದ ಪ್ರಕರಣಗಳು ಕಡಿಮೆಯಾಗಿದ್ದವು, ಈಗ ಸುರಿಯುತ್ತಿರುವ ಮಳೆಯಿಂದಾಗಿ ಮತ್ತೆ ಡೆಂಗ್ಯು ಚಿಕುನ್ ಗುನ್ಯ ಹರಡುವಿಕೆಯ ಆತಂಕ‌ ಶುರುವಾಗಿದೆ..‌ ಹೀಗಾಗಿ ಆರೋಗ್ಯ ಇಲಾಖೆ ಮುಂಜಾಗ್ರತಾ ಕ್ರಮಕ್ಕೆ ಮುಂದಾಗಿದ್ದು, ಡೆಂಗ್ಯು ಪ್ರಕರಣ ಅಧಿಕವಿರುವ ಜಿಲ್ಲೆಗಳಿಗೆ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ವರದಿಯನ್ನು ಸಲ್ಲಿಸುವಂತೆ ಸೂಚಿಸಿದೆ..

ಇನ್ನು ಮಳೆ ಬಂದಾಗ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳುವುದು.. ಡೆಂಗೀ, ಚಿಕನ್ ಗುನ್ಯಾ, ಹರಡುವ ಈಡೀಸ್ ಸೊಳ್ಳೆಗಳು ನೀರಿನ ಸಂಗ್ರಹಣೆಗಳಲ್ಲಿ ಉತ್ಪತ್ತಿಯಾಗುತ್ತವೆ.. ನೀರಿನ ಸಂಗ್ರಹಣೆಗಳನ್ನು ಸಂಪೂರ್ಣವಾಗಿ ಮುಚ್ಚಿ, ಸೊಳ್ಳೆ ಉತ್ಪತ್ತಿಯನ್ನು ತಡೆಗಟ್ಟುವಂತೆ ಆರೋಗ್ಯ ಇಲಾಖೆಯ ಆರೋಗ್ಯಾಧಿಕಾರಿ ಷರೀಫ್ ತಿಳಿಸಿದ್ದಾರೆ..

ಸೆಪ್ಟೆಂಬರ್‌ 13 ರಿಂದ ಅಕ್ಟೋಬರ್ 19 ರವರೆಗೆ ಡೆಂಗ್ಯು ಪ್ರಕರಣ ಹೆಚ್ಚಿದೆ.. ತುಮಕೂರು, ದಾವಣಗೆರೆ, ಶಿವಮೊಗ್ಗ , ಬೆಂಗಳೂರು ಗ್ರಾಮಾಂತರ, ಬೆಳಗಾವಿ ,ಕಲಬುರ್ಗಿ, ಯಾದಗಿರಿ, ಬೀದರ್ ,ಕೊಪ್ಪಳ, ಹಾಸನ ,ದಕ್ಷಿಣಕನ್ನಡ, ಉಡುಪಿ ಭಾಗಗಳಲ್ಲಿ ಡೆಂಗ್ಯು ಅಧಿಕವಾಗಿದೆ.. ಹೀಗಾಗಿ ಡೆಂಗ್ಯು ನಿಯಂತ್ರಣಕ್ಕೆ ತೆಗೆದುಕೊಂಡ ಕ್ರಮದ ಬಗ್ಗೆ ವರದಿ ನೀಡುವಂತೆ ಆದೇಶ ಹೊರಡಿಸಿದೆ...

ಡೆಂಗ್ಯು ಹರಡದಂತೆ ಎಚ್ಚರಿಕೆ ವಹಿಸುವುದು ಹೇಗೆ??

ಇನ್ನು ಡೆಂಗ್ಯು ನಿಯಂತ್ರಣ ಮಾಡಬೇಕು ಅಂದರೆ, ಹೂವಿನ ಕುಂಡ, ಬೀಸಾಕಿದ ಟೈರ್‌, ಹಳೆಯ ಎಣ್ಣೆಯ ಡ್ರಮ್‌, ನೀರು ಸಂಗ್ರಹಿಸುವ ತೊಟ್ಟಿ ಇವುಗಳಲ್ಲಿ ನೀರು ನಿಲ್ಲದಂತೆ ಮತ್ತು ಶುಚಿಗೊಳಿಸುವ ಕೆಲಸ ಮಾಡುತ್ತಿರಬೇಕು..‌ ಇಲ್ಲವಾದರೆ, ಸೊಳ್ಳೆಗಳು ಉತ್ಪತ್ತಿಯಾಗುತ್ತವೆ. ಆದ್ದರಿಂದಲೇ ಮಳೆ ಬಂದಾಗ ಸೋಂಕು ಹೆಚ್ಚಾಗಿ ಹರಡುತ್ತವೆ. ಆದ್ದರಿಂದ ಇವುಗಳನ್ನು ಶುಚಿಗೊಳಿಸಿ ಸೊಳ್ಳೆ ಮೊಟ್ಟೆ ಇಡಲು ಅವಕಾಶವಿರದಂತೆ ನೋಡಿಕೊಳ್ಳಬೇಕು.. ಮನೆಯ ಸುತ್ತ ಬಿಸಾಡಿದ ತ್ಯಾಜ್ಯ ವಸ್ತುಗಳಲ್ಲಿ ಮಳೆ ನೀರು ಸಂಗ್ರಹವಾಗದಂತೆ ಎಚ್ಚರ ವಹಿಸುವುದು...

KN_BNG_2_RAIN_DENGUE_SCRIPT_7201801

Byte: ಡಾ. ಷರೀಫ್- ಆರೋಗ್ಯ ಇಲಾಖೆಯ ಆರೋಗ್ಯಾಧಿಕಾರಿ
Body:..Conclusion:..
ETV Bharat Logo

Copyright © 2024 Ushodaya Enterprises Pvt. Ltd., All Rights Reserved.