ETV Bharat / city

ದಿನ್ನೆ ಆಂಜನೇಯ ದೇವಸ್ಥಾನಕ್ಕೆ ರಸ್ತೆ ನಿರ್ಮಾಣಕ್ಕೆ ಅರಣ್ಯ ಇಲಾಖೆ ತಡೆ.. ಭಕ್ತರ ಪ್ರತಿಭಟನೆ

author img

By

Published : Aug 14, 2022, 5:59 PM IST

ದಿನ್ನೆ ಆಂಜನೇಯ ದೇವಸ್ಥಾನದ ಅಭಿವೃದ್ಧಿಗೆ ವಿಶೇಷ ಅನುದಾನದಲ್ಲಿ ರಸ್ತೆ ಕಾಮಗಾರಿ ಪ್ರಾರಂಭವಾಗಿದ್ದು, ಇದೀಗ ರಸ್ತೆ ಜಾಗ ಅರಣ್ಯ ಇಲಾಖೆಗೆ ಸೇರಿದೆ ಎಂದು ಹೇಳಿ ಕಾಮಗಾರಿಗೆ ಅರಣ್ಯ ಇಲಾಖೆ ತಡೆಯೊಡ್ಡಿದೆ.

Devotees Protest near dinne Anjaneya temple
ದಿನ್ನೆ ಆಂಜನೇಯ ದೇವಸ್ಥಾನದ ಬಳಿ ಭಕ್ತರಿಂದ ಪ್ರತಿಭಟನೆ

ದೊಡ್ಡಬಳ್ಳಾಪುರ : ಮುಜರಾಯಿ ಇಲಾಖೆಗೆ ಸೇರಿದ ದೊಡ್ಡಬಳ್ಳಾಪುರ ತಾಲೂಕಿನ ಪೆರಮಗೊಂಡನಹಳ್ಳಿಯ ಬಳಿಯ ದಿನ್ನೆ ಆಂಜನೇಯ ದೇವಸ್ಥಾನಕ್ಕೆ 900 ವರ್ಷಗಳ ಇತಿಹಾಸವಿದೆ. ದೊಡ್ಡಬಳ್ಳಾಪುರ ಸೇರಿದಂತೆ ಹೊರ ರಾಜ್ಯದವರು ಆಂಜನೇಯ ಸ್ವಾಮಿಯ ದರ್ಶನಕ್ಕೆ ಬರುತ್ತಾರೆ. ಶ್ರೀ ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ಅನುದಾನದಲ್ಲಿ ರಸ್ತೆ ಕಾಮಗಾರಿ ಸಹ ಪ್ರಾರಂಭವಾಗಿದೆ. ಆದರೆ ಇದೀಗ ರಸ್ತೆ ಜಾಗ ಅರಣ್ಯ ಇಲಾಖೆಗೆ ಸೇರಿದೆ ಎಂದು ಹೇಳಿ ಕಾಮಗಾರಿಗೆ ಅರಣ್ಯ ಇಲಾಖೆ ತಡೆಯೊಡ್ಡಿದೆ.

ದೇವಸ್ಥಾನದ ಸುತ್ತಮುತ್ತ 30 ಎಕರೆ ಜಮೀನು ಇದ್ದು, ರೈತರು ಸಾಗುವಳಿ ಮಾಡಿಕೊಂಡು ಬರುತ್ತಿದ್ದಾರೆ. ದೇವಸ್ಥಾನ ಮತ್ತು ಸಾಗುವಳಿ ಜಮೀನು ಅರಣ್ಯ ಇಲಾಖೆಗೆ ಸೇರಿದೆ ಎಂದು ಅರಣ್ಯ ಇಲಾಖೆ ಸಿಬ್ಬಂದಿ ರೈತರಿಗೆ ವಿನಾ ಕಾರಣ ತೊಂದರೆ ಕೊಡುತ್ತಿದ್ದಾರೆ. ಈಗ ದೇವಸ್ಥಾನಕ್ಕೆ ರಸ್ತೆ ನಿರ್ಮಿಸಲು ಸಹ ತೊಂದರೆ ಕೊಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದರಿಂದ ಕೆರಳಿದ ಭಕ್ತರು ರಸ್ತೆಗೆ ಜೆಲ್ಲಿಕಲ್ಲು ಹಾಕುವ ಮೂಲಕ ಪ್ರತಿಭಟನೆ ನಡೆಸಿದರು.

ದಿನ್ನೆ ಆಂಜನೇಯ ದೇವಸ್ಥಾನದ ಬಳಿ ಭಕ್ತರಿಂದ ಪ್ರತಿಭಟನೆ

ತಮಟೆ ಹೊಡೆಯುವ ಮೂಲಕ ಗ್ರಾಮಸ್ಥರು ತಮ್ಮ ಅಕ್ರೋಶ ವ್ಯಕ್ತಪಡಿಸಿದರು. ಅರಣ್ಯ ಇಲಾಖೆಗೆ ಸೇರಿದ ಜಾಗವನ್ನು ರೈತರು ಬಿಟ್ಟುಕೊಡಲು ಸಿದ್ಧರಿದ್ದಾರೆ. ಆದರೆ ದೇವಸ್ಥಾನಕ್ಕೆ ರಸ್ತೆ ನಿರ್ಮಿಸಬೇಕೆಂಬುದು ರೈತರ ಬೇಡಿಕೆಯಾಗಿದೆ.

ಇದನ್ನೂ ಓದಿ : ರಸ್ತೆ ಹೊಂಡದಿಂದ ಯುವಕನ‌ ಸಾವು: ಪಾಲಿಕೆ ಮುಂದೆ ಸ್ನೇಹಿತನ ಏಕಾಂಗಿ ಪ್ರತಿಭಟನೆ

ದೊಡ್ಡಬಳ್ಳಾಪುರ : ಮುಜರಾಯಿ ಇಲಾಖೆಗೆ ಸೇರಿದ ದೊಡ್ಡಬಳ್ಳಾಪುರ ತಾಲೂಕಿನ ಪೆರಮಗೊಂಡನಹಳ್ಳಿಯ ಬಳಿಯ ದಿನ್ನೆ ಆಂಜನೇಯ ದೇವಸ್ಥಾನಕ್ಕೆ 900 ವರ್ಷಗಳ ಇತಿಹಾಸವಿದೆ. ದೊಡ್ಡಬಳ್ಳಾಪುರ ಸೇರಿದಂತೆ ಹೊರ ರಾಜ್ಯದವರು ಆಂಜನೇಯ ಸ್ವಾಮಿಯ ದರ್ಶನಕ್ಕೆ ಬರುತ್ತಾರೆ. ಶ್ರೀ ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ಅನುದಾನದಲ್ಲಿ ರಸ್ತೆ ಕಾಮಗಾರಿ ಸಹ ಪ್ರಾರಂಭವಾಗಿದೆ. ಆದರೆ ಇದೀಗ ರಸ್ತೆ ಜಾಗ ಅರಣ್ಯ ಇಲಾಖೆಗೆ ಸೇರಿದೆ ಎಂದು ಹೇಳಿ ಕಾಮಗಾರಿಗೆ ಅರಣ್ಯ ಇಲಾಖೆ ತಡೆಯೊಡ್ಡಿದೆ.

ದೇವಸ್ಥಾನದ ಸುತ್ತಮುತ್ತ 30 ಎಕರೆ ಜಮೀನು ಇದ್ದು, ರೈತರು ಸಾಗುವಳಿ ಮಾಡಿಕೊಂಡು ಬರುತ್ತಿದ್ದಾರೆ. ದೇವಸ್ಥಾನ ಮತ್ತು ಸಾಗುವಳಿ ಜಮೀನು ಅರಣ್ಯ ಇಲಾಖೆಗೆ ಸೇರಿದೆ ಎಂದು ಅರಣ್ಯ ಇಲಾಖೆ ಸಿಬ್ಬಂದಿ ರೈತರಿಗೆ ವಿನಾ ಕಾರಣ ತೊಂದರೆ ಕೊಡುತ್ತಿದ್ದಾರೆ. ಈಗ ದೇವಸ್ಥಾನಕ್ಕೆ ರಸ್ತೆ ನಿರ್ಮಿಸಲು ಸಹ ತೊಂದರೆ ಕೊಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದರಿಂದ ಕೆರಳಿದ ಭಕ್ತರು ರಸ್ತೆಗೆ ಜೆಲ್ಲಿಕಲ್ಲು ಹಾಕುವ ಮೂಲಕ ಪ್ರತಿಭಟನೆ ನಡೆಸಿದರು.

ದಿನ್ನೆ ಆಂಜನೇಯ ದೇವಸ್ಥಾನದ ಬಳಿ ಭಕ್ತರಿಂದ ಪ್ರತಿಭಟನೆ

ತಮಟೆ ಹೊಡೆಯುವ ಮೂಲಕ ಗ್ರಾಮಸ್ಥರು ತಮ್ಮ ಅಕ್ರೋಶ ವ್ಯಕ್ತಪಡಿಸಿದರು. ಅರಣ್ಯ ಇಲಾಖೆಗೆ ಸೇರಿದ ಜಾಗವನ್ನು ರೈತರು ಬಿಟ್ಟುಕೊಡಲು ಸಿದ್ಧರಿದ್ದಾರೆ. ಆದರೆ ದೇವಸ್ಥಾನಕ್ಕೆ ರಸ್ತೆ ನಿರ್ಮಿಸಬೇಕೆಂಬುದು ರೈತರ ಬೇಡಿಕೆಯಾಗಿದೆ.

ಇದನ್ನೂ ಓದಿ : ರಸ್ತೆ ಹೊಂಡದಿಂದ ಯುವಕನ‌ ಸಾವು: ಪಾಲಿಕೆ ಮುಂದೆ ಸ್ನೇಹಿತನ ಏಕಾಂಗಿ ಪ್ರತಿಭಟನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.