ETV Bharat / city

ಶ್ರೀರಾಮ ಸೇನೆಯವರು ಸಾಧಿಸಿದ್ದೇನು? ಅನ್ನಕ್ಕೆ ಕಲ್ಲು ಹಾಕುವುದು ಯಾವ ಧರ್ಮ?: ಗುಂಡೂರಾವ್

author img

By

Published : Apr 10, 2022, 12:08 PM IST

ನುಗ್ಗಿಕೇರಿ ಆಂಜನೇಯ ದೇವಸ್ಥಾನದಲ್ಲಿ ಹಿಂದೂಯೇತರ ಅಂಗಡಿ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತೀವ್ರವಾಗಿ ಖಂಡಿಸಿದ್ದಾರೆ.

dinesh gundurao
ದಿನೇಶ್ ಗುಂಡೂರಾವ್

ಬೆಂಗಳೂರು: ಧಾರವಾಡ ಜಿಲ್ಲೆಯ ನುಗ್ಗಿಕೇರಿ ಶ್ರೀ ಆಂಜನೇಯಸ್ವಾಮಿ ದೇಗುಲ ಬಳಿ ಹಿಂದೂಯೇತರ ಅಂಗಡಿ ಮೇಲೆ ದಾಳಿ ನಡೆಸಿರುವ ಘಟನೆಯನ್ನು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತೀವ್ರವಾಗಿ ಖಂಡಿಸಿದ್ದಾರೆ. ಟ್ವೀಟ್ ಮೂಲಕ ತಮ್ಮ ಬೇಸರ ವ್ಯಕ್ತಪಡಿಸಿರುವ ಅವರು, ಧಾರವಾಡ ಜಿಲ್ಲೆಯ ಇತಿಹಾಸ ಪ್ರಸಿದ್ಧ ನುಗ್ಗಿಕೇರಿ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಶ್ರೀರಾಮ ಸೇನೆಯವರು ನಡೆಸಿರುವ ಪುಂಡಾಟ ಹೇಯ ಮತ್ತು ಹೀನ ಕೃತ್ಯ. ಬಡ ಹಿಂದೂಯೇತರರೊಬ್ಬರ ಅಂಗಡಿ ನಾಶಪಡಿಸಿ ಮಾರಾಟಕ್ಕೆ ಇಟ್ಟಿದ್ದ ಕಲ್ಲಂಗಡಿ ಹಣ್ಣುಗಳನ್ನು ಹಾಳು ಮಾಡಿದ ಶ್ರೀರಾಮ ಸೇನೆಯವರು ಸಾಧಿಸಿದ್ದೇನು? ಅನ್ನಕ್ಕೆ ಕಲ್ಲು ಹಾಕುವುದು ಯಾವ ಧರ್ಮ? ಎಂದು ಪ್ರಶ್ನಿಸಿದ್ದಾರೆ.

  • 1
    ಧಾರವಾಡ ಜಿಲ್ಲೆಯ ಇತಿಹಾಸ ಪ್ರಸಿದ್ಧ ನುಗ್ಗೆಕೇರಿ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಶ್ರೀರಾಮ ಸೇನೆಯವರು ನಡೆಸಿರುವ ಪುಂಡಾಟ ಹೇಯ ಮತ್ತು ಹೀನ ಕೃತ್ಯ.
    ಬಡ ಮು‌ಸ್ಲಿಮನೊಬ್ಬನ ಅಂಗಡಿ ನಾಶಪಡಿಸಿ,ಮಾರಾಟಕ್ಕೆ ಇಟ್ಟಿದ್ದ ಕಲ್ಲಂಗಡಿ ಹಣ್ಣುಗಳನ್ನು ಹಾಳು ಮಾಡಿದ ಶ್ರೀರಾಮ ಸೇನೆಯವರು ಸಾಧಿಸಿದ್ದೇನು?
    ಅನ್ನಕ್ಕೆ ಕಲ್ಲು ಹಾಕುವುದು ಯಾವ ಧರ್ಮ?

    — Dinesh Gundu Rao/ದಿನೇಶ್ ಗುಂಡೂರಾವ್ (@dineshgrao) April 10, 2022 " class="align-text-top noRightClick twitterSection" data=" ">

ಧಾರವಾಡದ ನುಗ್ಗಿಕೇರಿ ಆಂಜನೇಯ ದೇವಸ್ಥಾನದಲ್ಲಿ ಶ್ರೀರಾಮ ಸೇನೆಯವರು ನಡೆಸಿದ ದಾಂಧಲೆ ಭಯೋತ್ಪಾದನೆಗೆ ಸಮ. ಶ್ರೀರಾಮನ ತತ್ವಾದರ್ಶಗಳನ್ನು ನಿಜವಾಗಿ ಪಾಲಿಸುವವರು ಇಂತಹ ಕಿರಾತಕ ಕೆಲಸ ಮಾಡುವುದಿಲ್ಲ.‌ ಶ್ರೀರಾಮ ಸೇನೆಯ ಕೃತ್ಯ ರಾಮನ ಹೆಸರಿಗೆ ಕಳಂಕ ತರುವ ಯತ್ನ. ದಾಂಧಲೆ ನಡೆಸಿದ ದುಷ್ಕರ್ಮಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಲೇಬೇಕು ಎಂದು ಒತ್ತಾಯಿಸಿದ್ದಾರೆ.

  • 3
    ಸಾಮರಸ್ಯ,ಸಹಬಾಳ್ವೆ ‌ಮತ್ತು ಶಾಂತಿಗೆ ನಮ್ಮ ರಾಜ್ಯ ಇಡೀ ದೇಶಕ್ಕೆ ಮಾದರಿಯಾಗಿತ್ತು.
    ಆದರೀಗ @BSBommai ಸರ್ಕಾರದಲ್ಲಿ ರಾಜ್ಯ 'ಜಂಗಲ್ ರಾಜ್' ಆಗಿ ಬದಲಾಗುತ್ತಿದೆ. ಬೊಮ್ಮಾಯಿಯವರೆ.,ಶಾಂತಿಯ ನಾಡಾಗಿದ್ದ ಕರ್ನಾಟಕವನ್ನು ನೀವೇನು ಮಾಡಲು ಹೊರಟ್ಟಿದ್ದೀರಿ?
    ಬಸವಣ್ಣ ಶರಣಾದಿ ಪರಂಪರೆಯಿಂದ ಬಂದ ನೀವು ಮಾಡುತ್ತಿರುವುದು ನಿಮಗೆ ಸಮ್ಮತವೆ?

    — Dinesh Gundu Rao/ದಿನೇಶ್ ಗುಂಡೂರಾವ್ (@dineshgrao) April 10, 2022 " class="align-text-top noRightClick twitterSection" data="

3
ಸಾಮರಸ್ಯ,ಸಹಬಾಳ್ವೆ ‌ಮತ್ತು ಶಾಂತಿಗೆ ನಮ್ಮ ರಾಜ್ಯ ಇಡೀ ದೇಶಕ್ಕೆ ಮಾದರಿಯಾಗಿತ್ತು.
ಆದರೀಗ @BSBommai ಸರ್ಕಾರದಲ್ಲಿ ರಾಜ್ಯ 'ಜಂಗಲ್ ರಾಜ್' ಆಗಿ ಬದಲಾಗುತ್ತಿದೆ. ಬೊಮ್ಮಾಯಿಯವರೆ.,ಶಾಂತಿಯ ನಾಡಾಗಿದ್ದ ಕರ್ನಾಟಕವನ್ನು ನೀವೇನು ಮಾಡಲು ಹೊರಟ್ಟಿದ್ದೀರಿ?
ಬಸವಣ್ಣ ಶರಣಾದಿ ಪರಂಪರೆಯಿಂದ ಬಂದ ನೀವು ಮಾಡುತ್ತಿರುವುದು ನಿಮಗೆ ಸಮ್ಮತವೆ?

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) April 10, 2022 ">

ಸಾಮರಸ್ಯ, ಸಹಬಾಳ್ವೆ ‌ಮತ್ತು ಶಾಂತಿಗೆ ನಮ್ಮ ರಾಜ್ಯ ಇಡೀ ದೇಶಕ್ಕೆ ಮಾದರಿಯಾಗಿತ್ತು. ಆದರೀಗ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರದಲ್ಲಿ ರಾಜ್ಯ 'ಜಂಗಲ್ ರಾಜ್' ಆಗಿ ಬದಲಾಗುತ್ತಿದೆ. ಬೊಮ್ಮಾಯಿಯವರೇ, ಶಾಂತಿಯ ನಾಡಾಗಿದ್ದ ಕರ್ನಾಟಕವನ್ನು ನೀವೇನು ಮಾಡಲು ಹೊರಟ್ಟಿದ್ದೀರಿ? ಬಸವಣ್ಣ ಶರಣಾದಿ ಪರಂಪರೆಯಿಂದ ಬಂದ ನೀವು ಮಾಡುತ್ತಿರುವುದು ನಿಮಗೆ ಸಮ್ಮತವೇ? ಎಂದು ಕೇಳಿದ್ದಾರೆ.

ಇದನ್ನೂ ಓದಿ: ನುಗ್ಗಿಕೇರಿ ಆಂಜನೇಯ ದೇವಸ್ಥಾನದಲ್ಲಿ ಹಿಂದೂಯೇತರ ಅಂಗಡಿ ತೆರವು

ನುಗ್ಗಿಕೇರಿ ಶ್ರೀ ಆಂಜನೇಯಸ್ವಾಮಿ ದೇಗುಲ ಬಳಿ ನಿನ್ನೆ ನಡೆದ ಘಟನೆಯನ್ನು ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ಸಹ ತೀವ್ರವಾಗಿ ಖಂಡಿಸಿದ್ದರು. ಇದೊಂದು ಪರಮ ಹೇಯ, ಕಿರಾತಕ ಕೃತ್ಯ ಎಂದು ಕಿಡಿಕಾರಿದ್ದರು. ರಾಮಭಕ್ತರ ಸೋಗಿನಲ್ಲಿ ಬಂದ ದುಷ್ಕರ್ಮಿಗಳು ಉಗ್ರರಿಗಿಂತ ಕೀಳಾಗಿ ವರ್ತಿಸಿದ್ದಾರೆ. ಇವರ ವಿರುದ್ಧ ಉಗ್ರ ಕ್ರಮ ಜರುಗಿಸಬೇಕು ಎಂದು ಒತ್ತಾಯ ಮಾಡಿದ್ದರು.

ಪ್ರಕರಣ: ಕಳೆದ 15 ದಿನಗಳ ಹಿಂದೆ ಶ್ರೀರಾಮಸೇನಾ ಕಾರ್ಯಕರ್ತರು ಈ ದೇವಸ್ಥಾನದ ಆವರಣದಲ್ಲಿ ಹಿಂದೂಯೇತರ ಅಂಗಡಿಗಳ ವ್ಯಾಪಾರಕ್ಕೆ ಅವಕಾಶ ಕೊಡಬಾರದು ಎಂದು ಮನವಿ ನೀಡಿದ್ದರು. ಮನವಿ ಸ್ವೀಕರಿಸಿದ್ದ ದೇವಸ್ಥಾನದ ಆಡಳಿತ ಮಂಡಳಿ ಚರ್ಚಿಸಿ ತೀರ್ಮಾನಕ್ಕೆ ಬರುವುದಾಗಿ ಭರವಸೆ ನೀಡಿತ್ತು. ಆದರೆ ಈ ಕುರಿತು ದೇವಸ್ಥಾನ ಸಮಿತಿ ಯಾವುದೇ ಕ್ರಮಕೈಗೊಳ್ಳದ ಹಿನ್ನೆಲೆಯಲ್ಲಿ ನಿನ್ನೆ ಏಕಾಏಕಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ನುಗ್ಗಿಕೇರಿಗೆ ಬಂದು ಕೆಲ ಅಂಗಡಿಗಳ ಮೇಲೆ ದಾಳಿ ನಡೆಸಿದ್ದರು.

ಬೆಂಗಳೂರು: ಧಾರವಾಡ ಜಿಲ್ಲೆಯ ನುಗ್ಗಿಕೇರಿ ಶ್ರೀ ಆಂಜನೇಯಸ್ವಾಮಿ ದೇಗುಲ ಬಳಿ ಹಿಂದೂಯೇತರ ಅಂಗಡಿ ಮೇಲೆ ದಾಳಿ ನಡೆಸಿರುವ ಘಟನೆಯನ್ನು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತೀವ್ರವಾಗಿ ಖಂಡಿಸಿದ್ದಾರೆ. ಟ್ವೀಟ್ ಮೂಲಕ ತಮ್ಮ ಬೇಸರ ವ್ಯಕ್ತಪಡಿಸಿರುವ ಅವರು, ಧಾರವಾಡ ಜಿಲ್ಲೆಯ ಇತಿಹಾಸ ಪ್ರಸಿದ್ಧ ನುಗ್ಗಿಕೇರಿ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಶ್ರೀರಾಮ ಸೇನೆಯವರು ನಡೆಸಿರುವ ಪುಂಡಾಟ ಹೇಯ ಮತ್ತು ಹೀನ ಕೃತ್ಯ. ಬಡ ಹಿಂದೂಯೇತರರೊಬ್ಬರ ಅಂಗಡಿ ನಾಶಪಡಿಸಿ ಮಾರಾಟಕ್ಕೆ ಇಟ್ಟಿದ್ದ ಕಲ್ಲಂಗಡಿ ಹಣ್ಣುಗಳನ್ನು ಹಾಳು ಮಾಡಿದ ಶ್ರೀರಾಮ ಸೇನೆಯವರು ಸಾಧಿಸಿದ್ದೇನು? ಅನ್ನಕ್ಕೆ ಕಲ್ಲು ಹಾಕುವುದು ಯಾವ ಧರ್ಮ? ಎಂದು ಪ್ರಶ್ನಿಸಿದ್ದಾರೆ.

  • 1
    ಧಾರವಾಡ ಜಿಲ್ಲೆಯ ಇತಿಹಾಸ ಪ್ರಸಿದ್ಧ ನುಗ್ಗೆಕೇರಿ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಶ್ರೀರಾಮ ಸೇನೆಯವರು ನಡೆಸಿರುವ ಪುಂಡಾಟ ಹೇಯ ಮತ್ತು ಹೀನ ಕೃತ್ಯ.
    ಬಡ ಮು‌ಸ್ಲಿಮನೊಬ್ಬನ ಅಂಗಡಿ ನಾಶಪಡಿಸಿ,ಮಾರಾಟಕ್ಕೆ ಇಟ್ಟಿದ್ದ ಕಲ್ಲಂಗಡಿ ಹಣ್ಣುಗಳನ್ನು ಹಾಳು ಮಾಡಿದ ಶ್ರೀರಾಮ ಸೇನೆಯವರು ಸಾಧಿಸಿದ್ದೇನು?
    ಅನ್ನಕ್ಕೆ ಕಲ್ಲು ಹಾಕುವುದು ಯಾವ ಧರ್ಮ?

    — Dinesh Gundu Rao/ದಿನೇಶ್ ಗುಂಡೂರಾವ್ (@dineshgrao) April 10, 2022 " class="align-text-top noRightClick twitterSection" data=" ">

ಧಾರವಾಡದ ನುಗ್ಗಿಕೇರಿ ಆಂಜನೇಯ ದೇವಸ್ಥಾನದಲ್ಲಿ ಶ್ರೀರಾಮ ಸೇನೆಯವರು ನಡೆಸಿದ ದಾಂಧಲೆ ಭಯೋತ್ಪಾದನೆಗೆ ಸಮ. ಶ್ರೀರಾಮನ ತತ್ವಾದರ್ಶಗಳನ್ನು ನಿಜವಾಗಿ ಪಾಲಿಸುವವರು ಇಂತಹ ಕಿರಾತಕ ಕೆಲಸ ಮಾಡುವುದಿಲ್ಲ.‌ ಶ್ರೀರಾಮ ಸೇನೆಯ ಕೃತ್ಯ ರಾಮನ ಹೆಸರಿಗೆ ಕಳಂಕ ತರುವ ಯತ್ನ. ದಾಂಧಲೆ ನಡೆಸಿದ ದುಷ್ಕರ್ಮಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಲೇಬೇಕು ಎಂದು ಒತ್ತಾಯಿಸಿದ್ದಾರೆ.

  • 3
    ಸಾಮರಸ್ಯ,ಸಹಬಾಳ್ವೆ ‌ಮತ್ತು ಶಾಂತಿಗೆ ನಮ್ಮ ರಾಜ್ಯ ಇಡೀ ದೇಶಕ್ಕೆ ಮಾದರಿಯಾಗಿತ್ತು.
    ಆದರೀಗ @BSBommai ಸರ್ಕಾರದಲ್ಲಿ ರಾಜ್ಯ 'ಜಂಗಲ್ ರಾಜ್' ಆಗಿ ಬದಲಾಗುತ್ತಿದೆ. ಬೊಮ್ಮಾಯಿಯವರೆ.,ಶಾಂತಿಯ ನಾಡಾಗಿದ್ದ ಕರ್ನಾಟಕವನ್ನು ನೀವೇನು ಮಾಡಲು ಹೊರಟ್ಟಿದ್ದೀರಿ?
    ಬಸವಣ್ಣ ಶರಣಾದಿ ಪರಂಪರೆಯಿಂದ ಬಂದ ನೀವು ಮಾಡುತ್ತಿರುವುದು ನಿಮಗೆ ಸಮ್ಮತವೆ?

    — Dinesh Gundu Rao/ದಿನೇಶ್ ಗುಂಡೂರಾವ್ (@dineshgrao) April 10, 2022 " class="align-text-top noRightClick twitterSection" data=" ">

ಸಾಮರಸ್ಯ, ಸಹಬಾಳ್ವೆ ‌ಮತ್ತು ಶಾಂತಿಗೆ ನಮ್ಮ ರಾಜ್ಯ ಇಡೀ ದೇಶಕ್ಕೆ ಮಾದರಿಯಾಗಿತ್ತು. ಆದರೀಗ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರದಲ್ಲಿ ರಾಜ್ಯ 'ಜಂಗಲ್ ರಾಜ್' ಆಗಿ ಬದಲಾಗುತ್ತಿದೆ. ಬೊಮ್ಮಾಯಿಯವರೇ, ಶಾಂತಿಯ ನಾಡಾಗಿದ್ದ ಕರ್ನಾಟಕವನ್ನು ನೀವೇನು ಮಾಡಲು ಹೊರಟ್ಟಿದ್ದೀರಿ? ಬಸವಣ್ಣ ಶರಣಾದಿ ಪರಂಪರೆಯಿಂದ ಬಂದ ನೀವು ಮಾಡುತ್ತಿರುವುದು ನಿಮಗೆ ಸಮ್ಮತವೇ? ಎಂದು ಕೇಳಿದ್ದಾರೆ.

ಇದನ್ನೂ ಓದಿ: ನುಗ್ಗಿಕೇರಿ ಆಂಜನೇಯ ದೇವಸ್ಥಾನದಲ್ಲಿ ಹಿಂದೂಯೇತರ ಅಂಗಡಿ ತೆರವು

ನುಗ್ಗಿಕೇರಿ ಶ್ರೀ ಆಂಜನೇಯಸ್ವಾಮಿ ದೇಗುಲ ಬಳಿ ನಿನ್ನೆ ನಡೆದ ಘಟನೆಯನ್ನು ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ಸಹ ತೀವ್ರವಾಗಿ ಖಂಡಿಸಿದ್ದರು. ಇದೊಂದು ಪರಮ ಹೇಯ, ಕಿರಾತಕ ಕೃತ್ಯ ಎಂದು ಕಿಡಿಕಾರಿದ್ದರು. ರಾಮಭಕ್ತರ ಸೋಗಿನಲ್ಲಿ ಬಂದ ದುಷ್ಕರ್ಮಿಗಳು ಉಗ್ರರಿಗಿಂತ ಕೀಳಾಗಿ ವರ್ತಿಸಿದ್ದಾರೆ. ಇವರ ವಿರುದ್ಧ ಉಗ್ರ ಕ್ರಮ ಜರುಗಿಸಬೇಕು ಎಂದು ಒತ್ತಾಯ ಮಾಡಿದ್ದರು.

ಪ್ರಕರಣ: ಕಳೆದ 15 ದಿನಗಳ ಹಿಂದೆ ಶ್ರೀರಾಮಸೇನಾ ಕಾರ್ಯಕರ್ತರು ಈ ದೇವಸ್ಥಾನದ ಆವರಣದಲ್ಲಿ ಹಿಂದೂಯೇತರ ಅಂಗಡಿಗಳ ವ್ಯಾಪಾರಕ್ಕೆ ಅವಕಾಶ ಕೊಡಬಾರದು ಎಂದು ಮನವಿ ನೀಡಿದ್ದರು. ಮನವಿ ಸ್ವೀಕರಿಸಿದ್ದ ದೇವಸ್ಥಾನದ ಆಡಳಿತ ಮಂಡಳಿ ಚರ್ಚಿಸಿ ತೀರ್ಮಾನಕ್ಕೆ ಬರುವುದಾಗಿ ಭರವಸೆ ನೀಡಿತ್ತು. ಆದರೆ ಈ ಕುರಿತು ದೇವಸ್ಥಾನ ಸಮಿತಿ ಯಾವುದೇ ಕ್ರಮಕೈಗೊಳ್ಳದ ಹಿನ್ನೆಲೆಯಲ್ಲಿ ನಿನ್ನೆ ಏಕಾಏಕಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ನುಗ್ಗಿಕೇರಿಗೆ ಬಂದು ಕೆಲ ಅಂಗಡಿಗಳ ಮೇಲೆ ದಾಳಿ ನಡೆಸಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.