ETV Bharat / city

ಕಟ್ಟಡ ಕಾರ್ಮಿಕರಿಗೆ ವಿತರಿಸುತ್ತಿದ್ದ ಸಹಾಯಹಸ್ತ ಪಾಸು ಸ್ಥಗಿತ.. ಬಿಎಂಟಿಸಿ ಆದೇಶ

author img

By

Published : May 31, 2022, 6:01 PM IST

ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಖಾಯಂ ಆಗಿ ವಾಸವಾಗಿರುವ ನೋಂದಾಯಿತ ನಿರ್ಮಾಣ ಕಾರ್ಮಿಕನು ಬೆಂಗಳೂರಿನಲ್ಲಿ ಕೆಲಸದ ಸ್ಥಳಕ್ಕೆ ಪ್ರಯಾಣಿಸಲು ಬಿಎಂಟಿಸಿ ಬಸ್ ಪಾಸ್ ಪಡೆಯಬಹುದಾಗಿತ್ತು. ಆದರೆ ಈಗ ಬಿಎಂಟಿಸಿ ಅದನ್ನು ಸ್ಥಗಿತಗೊಳಿಸುವಂತೆ ನಿರ್ದೇಶನ ನೀಡಿದೆ.

discontinued-delivery-of-building-laborers-bus-pass
ಕಟ್ಟಡ ಕಾರ್ಮಿಕರಿಗೆ ವಿತರಿಸುತ್ತಿದ್ದ ಸಹಾಯಹಸ್ತ ಪಾಸು ಸ್ಥಗಿತ!

ಬೆಂಗಳೂರು: ಸಹಾಯಹಸ್ತ ಪಾಸುಗಳ ವಿತರಣೆಯನ್ನು ಸ್ಥಗಿತಗೊಳಿಸುವಂತೆ ಬಿಎಂಟಿಸಿಯ ಮುಖ್ಯ ಸಂಚಾರ ವ್ಯವಸ್ಥಾಪಕರು ಆದೇಶ ಹೊರಡಿಸಿದ್ದಾರೆ. ಬೆಂಗಳೂರು ನಗರದ ಕಟ್ಟಡ ಮತ್ತು ಇತರೆ ನಿರ್ಮಾಣ ಕೆಲಸದ ಕಾರ್ಮಿಕರಿಗೆ ಉಚಿತವಾಗಿ ಸಹಾಯಹಸ್ತ ಪಾಸುಗಳನ್ನು ವಿತರಿಸಲಾಗುತ್ತಿತ್ತು. ಇದೀಗ ಸಹಾಯಹಸ್ತ ಪಾಸುಗಳ ವಿತರಣೆಯನ್ನು ಸೂಕ್ತಾಧಿಕಾರಿಗಳ ನಿರ್ದೇಶನದಂತೆ ಜೂನ್ 1 ರಿಂದ ಜಾರಿಗೆ ಬರುವಂತೆ ಸ್ಥಗಿತಗೊಳಿಸಲು ಸೂಚಿಸಿದೆ.

ಅಂದಹಾಗೇ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ(ಬಿಎಂಟಿಸಿ) ಬಸ್ಸುಗಳಲ್ಲಿ ಪ್ರಯಾಣಿಸಲು ನೋಂದಾಯಿತ ನಿರ್ಮಾಣ ಕಾರ್ಮಿಕರಿಗೆ ನೀಡುವ ರಿಯಾಯಿತಿ ಬಸ್ ಪಾಸ್ ಇದಾಗಿದೆ. ಈ ಸೌಲಭ್ಯವು ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಖಾಯಂ ಆಗಿ ವಾಸವಾಗಿರುವ ನೋಂದಾಯಿತ ನಿರ್ಮಾಣ ಕಾರ್ಮಿಕರು ಬೆಂಗಳೂರಿನಲ್ಲಿ ಕೆಲಸದ ಸ್ಥಳಕ್ಕೆ ಪ್ರಯಾಣಿಸಲು ಬಿಎಂಟಿಸಿ ಬಸ್ ಪಾಸ್ ಪಡೆಯಲು ಈ ನಿಯಮದಡಿ ಅರ್ಹರಾಗಿರುತ್ತಾರೆ.

Directive issued by BMTC
ಬಿಎಂಟಿಸಿ ಹೊರಡಿಸಿದ ನಿರ್ದೇಶನ

ಸೂಕ್ತ ಫಲಾನುಭವಿಗಳಿಗೆ ಸಿಗ್ತಿಲ್ವಾ ಪಾಸ್: ನೋಂದಾಯಿತ ಫಲಾನುಭವಿಯ ಗುರುತಿನ ಚೀಟಿ, ಆಧಾರ್ ಕಾರ್ಡ್ ನೀಡಿ ಪಾಸ್ ಮಾಡಿಸಿಕೊಳ್ಳಬೇಕು. ಆದರೆ ಇತ್ತೀಚೆಗೆ ಕಾರ್ಮಿಕರೆಂದು ಹೇಳಿಕೊಂಡು ಸಿಕ್ಕ ಸಿಕ್ಕವರೆಲ್ಲ ಸಹಾಯ ಹಸ್ತ ಪಾಸ್​ಗಳನ್ನು ಪಡೆಯುತ್ತಿದ್ದಾರೆ. ಇದರಿಂದ ನಿಜಕ್ಕೂ ಅಗತ್ಯವಿರುವ ಸೂಕ್ತ ಫಲಾನುಭವಿಗಳಿಗೆ ಬಸ್ ಪಾಸ್ ಸಿಗದಂತಾಗಿದೆ. ಹೀಗಾಗಿ ಬಿಎಂಟಿಸಿ ದಿಢೀರ್ ಸಹಾಯ ಹಸ್ತ ಪಾಸ್ ಸ್ಥಗಿತ ಮಾಡಲು ಸೂಚಿಸಿದೆ ಎಂದು ಹೇಳಲಾಗ್ತಿದೆ.

ಇದನ್ನೂ ಓದಿ: ಬಿಎಂಟಿಸಿ ಬಸ್ ಮಾಸಿಕ ಪಾಸ್ ​ನಿಯಮದಲ್ಲಿ ಮಹತ್ವದ ಬದಲಾವಣೆ!

ಬೆಂಗಳೂರು: ಸಹಾಯಹಸ್ತ ಪಾಸುಗಳ ವಿತರಣೆಯನ್ನು ಸ್ಥಗಿತಗೊಳಿಸುವಂತೆ ಬಿಎಂಟಿಸಿಯ ಮುಖ್ಯ ಸಂಚಾರ ವ್ಯವಸ್ಥಾಪಕರು ಆದೇಶ ಹೊರಡಿಸಿದ್ದಾರೆ. ಬೆಂಗಳೂರು ನಗರದ ಕಟ್ಟಡ ಮತ್ತು ಇತರೆ ನಿರ್ಮಾಣ ಕೆಲಸದ ಕಾರ್ಮಿಕರಿಗೆ ಉಚಿತವಾಗಿ ಸಹಾಯಹಸ್ತ ಪಾಸುಗಳನ್ನು ವಿತರಿಸಲಾಗುತ್ತಿತ್ತು. ಇದೀಗ ಸಹಾಯಹಸ್ತ ಪಾಸುಗಳ ವಿತರಣೆಯನ್ನು ಸೂಕ್ತಾಧಿಕಾರಿಗಳ ನಿರ್ದೇಶನದಂತೆ ಜೂನ್ 1 ರಿಂದ ಜಾರಿಗೆ ಬರುವಂತೆ ಸ್ಥಗಿತಗೊಳಿಸಲು ಸೂಚಿಸಿದೆ.

ಅಂದಹಾಗೇ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ(ಬಿಎಂಟಿಸಿ) ಬಸ್ಸುಗಳಲ್ಲಿ ಪ್ರಯಾಣಿಸಲು ನೋಂದಾಯಿತ ನಿರ್ಮಾಣ ಕಾರ್ಮಿಕರಿಗೆ ನೀಡುವ ರಿಯಾಯಿತಿ ಬಸ್ ಪಾಸ್ ಇದಾಗಿದೆ. ಈ ಸೌಲಭ್ಯವು ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಖಾಯಂ ಆಗಿ ವಾಸವಾಗಿರುವ ನೋಂದಾಯಿತ ನಿರ್ಮಾಣ ಕಾರ್ಮಿಕರು ಬೆಂಗಳೂರಿನಲ್ಲಿ ಕೆಲಸದ ಸ್ಥಳಕ್ಕೆ ಪ್ರಯಾಣಿಸಲು ಬಿಎಂಟಿಸಿ ಬಸ್ ಪಾಸ್ ಪಡೆಯಲು ಈ ನಿಯಮದಡಿ ಅರ್ಹರಾಗಿರುತ್ತಾರೆ.

Directive issued by BMTC
ಬಿಎಂಟಿಸಿ ಹೊರಡಿಸಿದ ನಿರ್ದೇಶನ

ಸೂಕ್ತ ಫಲಾನುಭವಿಗಳಿಗೆ ಸಿಗ್ತಿಲ್ವಾ ಪಾಸ್: ನೋಂದಾಯಿತ ಫಲಾನುಭವಿಯ ಗುರುತಿನ ಚೀಟಿ, ಆಧಾರ್ ಕಾರ್ಡ್ ನೀಡಿ ಪಾಸ್ ಮಾಡಿಸಿಕೊಳ್ಳಬೇಕು. ಆದರೆ ಇತ್ತೀಚೆಗೆ ಕಾರ್ಮಿಕರೆಂದು ಹೇಳಿಕೊಂಡು ಸಿಕ್ಕ ಸಿಕ್ಕವರೆಲ್ಲ ಸಹಾಯ ಹಸ್ತ ಪಾಸ್​ಗಳನ್ನು ಪಡೆಯುತ್ತಿದ್ದಾರೆ. ಇದರಿಂದ ನಿಜಕ್ಕೂ ಅಗತ್ಯವಿರುವ ಸೂಕ್ತ ಫಲಾನುಭವಿಗಳಿಗೆ ಬಸ್ ಪಾಸ್ ಸಿಗದಂತಾಗಿದೆ. ಹೀಗಾಗಿ ಬಿಎಂಟಿಸಿ ದಿಢೀರ್ ಸಹಾಯ ಹಸ್ತ ಪಾಸ್ ಸ್ಥಗಿತ ಮಾಡಲು ಸೂಚಿಸಿದೆ ಎಂದು ಹೇಳಲಾಗ್ತಿದೆ.

ಇದನ್ನೂ ಓದಿ: ಬಿಎಂಟಿಸಿ ಬಸ್ ಮಾಸಿಕ ಪಾಸ್ ​ನಿಯಮದಲ್ಲಿ ಮಹತ್ವದ ಬದಲಾವಣೆ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.