ETV Bharat / city

ಸ್ಪೀಕರ್​​ ತೀರ್ಪು ಪ್ರಶ್ನಿಸಿ ಸುಪ್ರೀಂ ಮೊರೆ ಹೋದ ಅನರ್ಹಗೊಂಡ ಶಾಸಕರು

author img

By

Published : Aug 1, 2019, 11:44 PM IST

ಶಾಸಕ ಸ್ಥಾನದಿಂದ ಅನರ್ಹತೆಗೊಳಿಸಿದ ಹಿಂದಿನ ಸ್ಪೀಕರ್ ರಮೇಶ್​ ಕುಮಾರ್ ತೀರ್ಪಿನ ವಿರುದ್ಧ ಇಂದು ಅನರ್ಹಗೊಂಡಿರುವ ಶಾಸಕರಾದ ಭೈರತಿ ಬಸವರಾಜ್, ಮುನಿರತ್ನ, ಎಸ್.ಟಿ.ಸೋಮಶೇಖರ್, ಬಿ.ಸಿ.ಪಾಟೀಲ್, ಶಿವರಾಮ್ ಹೆಬ್ಬಾರ್, ಪ್ರತಾಪ್ ಗೌಡ ಪಾಟೀಲ್, ಹೆಚ್.ವಿಶ್ವನಾಥ್, ನಾರಾಯಣಗೌಡ, ಕೆ.ಗೋಪಾಲಯ್ಯ ಅವರು ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ.

ಅತೃಪ್ತರು ಶಾಸಕರು

ಬೆಂಗಳೂರು: ಶಾಸಕ ಸ್ಥಾನದಿಂದ ಅನರ್ಹತೆಗೊಳಿಸಿದ ​ಹಿಂದಿನ ಸ್ಪೀಕರ್ ರಮೇಶ್​ ಕುಮಾರ್​ ತೀರ್ಪಿನ ವಿರುದ್ಧ ಅನರ್ಹಗೊಂಡಿರುವ ಶಾಸಕರು ಇಂದು ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ.

ಅನರ್ಹಗೊಂಡಿರುವ ಶಾಸಕರಾದ ಭೈರತಿ ಬಸವರಾಜ್, ಮುನಿರತ್ನ, ಎಸ್.ಟಿ.ಸೋಮಶೇಖರ್, ಬಿ.ಸಿ.ಪಾಟೀಲ್, ಶಿವರಾಮ್ ಹೆಬ್ಬಾರ್, ಪ್ರತಾಪ್ ಗೌಡ ಪಾಟೀಲ್, ಹೆಚ್.ವಿಶ್ವನಾಥ್, ನಾರಾಯಣಗೌಡ, ಕೆ.ಗೋಪಾಲಯ್ಯ ಅವರು ಅರ್ಜಿ ಸಲ್ಲಿಸಿ, ಸ್ಪೀಕರ್ ಆದೇಶ ರದ್ದುಪಡಿಸುವಂತೆ ಕೋರಿದ್ದಾರೆ.

ಅನರ್ಹತೆಗೆ ಮೊದಲು ವಿಧಾನಸಭಾಧ್ಯಕ್ಷರು ಶಾಸಕ ಸ್ಥಾನಕ್ಕೆ ತಾವುಗಳು ನೀಡಿದ ರಾಜೀನಾಮೆ ಬಗ್ಗೆ ನಿರ್ಧಾರ ತಗೆದುಕೊಳ್ಳಬೇಕಿತ್ತು. ಆದರೆ ಹಾಗೆ ಮಾಡದೇ ರಾಜೀನಾಮೆ ಪತ್ರವನ್ನು ಪರಿಗಣಿಸದೆ ಕಾಂಗ್ರೆಸ್ ಹಾಗೂ ಜೆಡಿಎಸ್ ನೀಡಿದ ದೂರಿನ ಆಧಾರದ ಮೇಲೆ ಪಕ್ಷಾಂತರ ನಿಷೇಧ ಕಾಯ್ದೆಯಡಿ ಅನರ್ಹತೆ ಮಾಡಿದ್ದಾರೆ. ಇದು ಕಾನೂನು ಬಾಹಿರ ಕ್ರಮವಾಗಿದೆ. ಸ್ಪೀಕರ್ ಅವರ ಆದೇಶ ರದ್ದುಪಡಿಸಿ ತಮ್ಮ ರಾಜೀನಾಮೆ ಅಂಗೀಕರಿಸಲು ಆದೇಶ ನೀಡಬೇಕೆಂದು ಅರ್ಜಿಯಲ್ಲಿ ಕೋರಿದ್ದಾರೆ.

ಇನ್ನು ಸುಪ್ರೀಂಕೋರ್ಟ್​ಗೆ ಈಗಾಗಲೇ ಮಾಜಿ ಸಚಿವ ರಮೇಶ್​ ಜಾರಕಿಹೊಳಿ, ಮಹೇಶ್ ಕುಮಟಳ್ಳಿ ಅರ್ಜಿ ಸಲ್ಲಿಸಿದ್ದು, ನಾಳೆ ಅಥವ ಮುಂದಿನ ವಾರ ಈ ಎಲ್ಲಾ ಅರ್ಜಿಗಳ ವಿಚಾರಣೆ ನಡೆಯುವ ಸಾಧ್ಯತೆ ಇದೆ.

ಬೆಂಗಳೂರು: ಶಾಸಕ ಸ್ಥಾನದಿಂದ ಅನರ್ಹತೆಗೊಳಿಸಿದ ​ಹಿಂದಿನ ಸ್ಪೀಕರ್ ರಮೇಶ್​ ಕುಮಾರ್​ ತೀರ್ಪಿನ ವಿರುದ್ಧ ಅನರ್ಹಗೊಂಡಿರುವ ಶಾಸಕರು ಇಂದು ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ.

ಅನರ್ಹಗೊಂಡಿರುವ ಶಾಸಕರಾದ ಭೈರತಿ ಬಸವರಾಜ್, ಮುನಿರತ್ನ, ಎಸ್.ಟಿ.ಸೋಮಶೇಖರ್, ಬಿ.ಸಿ.ಪಾಟೀಲ್, ಶಿವರಾಮ್ ಹೆಬ್ಬಾರ್, ಪ್ರತಾಪ್ ಗೌಡ ಪಾಟೀಲ್, ಹೆಚ್.ವಿಶ್ವನಾಥ್, ನಾರಾಯಣಗೌಡ, ಕೆ.ಗೋಪಾಲಯ್ಯ ಅವರು ಅರ್ಜಿ ಸಲ್ಲಿಸಿ, ಸ್ಪೀಕರ್ ಆದೇಶ ರದ್ದುಪಡಿಸುವಂತೆ ಕೋರಿದ್ದಾರೆ.

ಅನರ್ಹತೆಗೆ ಮೊದಲು ವಿಧಾನಸಭಾಧ್ಯಕ್ಷರು ಶಾಸಕ ಸ್ಥಾನಕ್ಕೆ ತಾವುಗಳು ನೀಡಿದ ರಾಜೀನಾಮೆ ಬಗ್ಗೆ ನಿರ್ಧಾರ ತಗೆದುಕೊಳ್ಳಬೇಕಿತ್ತು. ಆದರೆ ಹಾಗೆ ಮಾಡದೇ ರಾಜೀನಾಮೆ ಪತ್ರವನ್ನು ಪರಿಗಣಿಸದೆ ಕಾಂಗ್ರೆಸ್ ಹಾಗೂ ಜೆಡಿಎಸ್ ನೀಡಿದ ದೂರಿನ ಆಧಾರದ ಮೇಲೆ ಪಕ್ಷಾಂತರ ನಿಷೇಧ ಕಾಯ್ದೆಯಡಿ ಅನರ್ಹತೆ ಮಾಡಿದ್ದಾರೆ. ಇದು ಕಾನೂನು ಬಾಹಿರ ಕ್ರಮವಾಗಿದೆ. ಸ್ಪೀಕರ್ ಅವರ ಆದೇಶ ರದ್ದುಪಡಿಸಿ ತಮ್ಮ ರಾಜೀನಾಮೆ ಅಂಗೀಕರಿಸಲು ಆದೇಶ ನೀಡಬೇಕೆಂದು ಅರ್ಜಿಯಲ್ಲಿ ಕೋರಿದ್ದಾರೆ.

ಇನ್ನು ಸುಪ್ರೀಂಕೋರ್ಟ್​ಗೆ ಈಗಾಗಲೇ ಮಾಜಿ ಸಚಿವ ರಮೇಶ್​ ಜಾರಕಿಹೊಳಿ, ಮಹೇಶ್ ಕುಮಟಳ್ಳಿ ಅರ್ಜಿ ಸಲ್ಲಿಸಿದ್ದು, ನಾಳೆ ಅಥವ ಮುಂದಿನ ವಾರ ಈ ಎಲ್ಲಾ ಅರ್ಜಿಗಳ ವಿಚಾರಣೆ ನಡೆಯುವ ಸಾಧ್ಯತೆ ಇದೆ.

Intro: ಅನರ್ಹತೆ ತೀರ್ಪಿನ ವಿರುದ್ದ ಸುಪ್ರೀಂ ಮೊರೆ ಹೋದ
ಅತೃಪ್ತರು...

ಬೆಂಗಳೂರು : ಶಾಸಕ ಸ್ಥಾನದಿಂದ ಅನರ್ಹತೆಗೊಳಿಸಿದ ಸ್ಪೀಕರ್ ತೀರ್ಪಿನ ವಿರುದ್ದ ಅತೃಪ್ತ ಶಾಸಕರು ಗುರುವಾರ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

ಅನರ್ಹಗೊಂಡ ಶಾಸಕರಾದ ಭೈರತಿ ಬಸವರಾಜ್, ಮುನಿರತ್ನ, ಎಸ್.ಟಿ ಸೋಮಶೇಖರ್, ಬಿ.ಸಿ.ಪಾಟೀಲ್, ಶಿವರಾಮ್ ಹೆಬ್ಬಾರ್, ಪ್ರತಾಪ್ ಗೌಡ ಪಾಟೀಲ್ ಜೆಡಿಎಸ್ ನ ಎಚ್ ವಿಶ್ವನಾಥ್, ನಾರಾಯಣಗೌಡ, ಕೆ.ಗೋಪಾಲಯ್ಯ ಅವರು ಅರ್ಜಿ ಸಲ್ಲಿಸಿ ಸ್ಪೀಕರ್ ಆದೇಶ ರದ್ದುಪಡಿಸುವಂತೆ ನ್ಯಾಯಾಲಯವನ್ನು ಕೋರಿದ್ದಾರೆ.


Body: ಅನರ್ಹತೆ ಮೊದಲು ವಿಧಾನಸಭಾಧ್ಯಕ್ಷರು ಶಾಸಕ ಸ್ಥಾನಕ್ಕೆ ತಾವುಗಳು ನೀಡಿದ ರಾಜೀನಾಮೆ ಬಗ್ಗೆ ನಿರ್ದಾರ ತಗೆದುಕೊಳ್ಳಬೇಕಿತ್ತು. ಆದರೆ ಹಾಗೆ ಮಾಡದೇ ರಾಜೀನಾಮೆ ಪತ್ರವನ್ನು ಪರಿಗಣಿಸದೇ ಕಾಂಗ್ರೆಸ್ ಹಾಗು ಜೆಡಿಎಸ್ ನೀಡಿದ ದೂರಿನ ಆದಾರದ ಮೇಲೆ ಪಕ್ಷಾಂತರ ನಿಷೇಧ ಕಾಯ್ದೆಯಡಿ ಅನರ್ಹತೆ ಮಾಡಲಾಗಿದೆ. ಇದು ಕಾನೂನು ಬಾಹಿರ ಕ್ರಮವಾಗಿದೆ. ಸ್ಪೀಕರ್ ಅವರ ಆದೇಶ ರದ್ದುಪಡಿಸಿ ತಮ್ಮ ರಾಜೀನಾಮೆ ಅಂಗೀಕರಿಸಲು ಆದೇಶ ನೀಡಬೇಕೆಂದು ಅರ್ಜಿಯಲ್ಲಿ ಅತೃಪ್ತರು ಕೋರಿದ್ದಾರೆ.

ಸುಪ್ರೀಂಕೋರ್ಟ್ ಗೆ ಈಗಾಗಲೇ ಮಾಜಿ ಸಚಿವ ರಮೇಶ ಜಾರಕಿಹೊಳಿ, ಮಹೇಶ್ ಕುಮಟಳ್ಳಿ ಅರ್ಜಿ ಸಲ್ಲಿಸಿದ್ದು ನಾಳೆ ಅಥವಾ ಮುಂದಿನ ವಾರ ಈ ಎಲ್ಲ ಅರ್ಜಿಗಳು ವಿಚಾರಣೆಗೆ ಬರುವ ಸಾಧ್ಯತೆ ಇದೆ.


Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.