ETV Bharat / city

ಗ್ರಾಮ ಒನ್ ಕೇಂದ್ರಗಳ ಮೂಲಕ ಬಿಪಿಎಲ್, ಎಪಿಎಲ್ ಕಾರ್ಡ್‍ಗಳ ವಿತರಣೆ : ಸಿಎಂ ಬೊಮ್ಮಾಯಿ - ಬಿಪಿಎಲ್ ಎಪಿಎಲ್ ಕಾರ್ಡ್‍ಗಳ ವಿತರಣೆ

ಅರ್ಜಿಗಳು ಕಡಿಮೆ ಬಂದರೆ ಅಲ್ಲಿ ಪ್ರಚಾರ ಹಾಗೂ ಸ್ಪಂದನೆಯ ಕೊರತೆ ಬಿಂಬಿಸುತ್ತದೆ. ಹಿರಿಯ ನಾಗರಿಕರು, ಬಡವರು ಹಾಗೂ ಅಂಗವಿಕಲರಿಗಿರುವ ಕಾರ್ಯಕ್ರಮಗಳಿಗೆ ಹೆಚ್ಚು ಪ್ರಾಶಸ್ತ್ಯ ನೀಡಿ ಸೇವೆ ಒದಗಿಸಬೇಕು. ಆಪರೇಟರ್​ಗಳಿಗೆ ನೀಡಿರುವ ಸೌಲಭ್ಯಗಳ ಇತಿಮಿತಿಯೊಳಗೆ ಉತ್ತಮ ರೀತಿ ಕಾರ್ಯನಿರ್ವಹಿಸಲು ಸೂಚನೆ ನೀಡಿದರು..

grama one kendra progress meting
ಗ್ರಾಮ ಒನ್ ಕೇಂದ್ರ ಪ್ರಗತಿ ಪರಿಶೀಲನಾ ಸಭೆ
author img

By

Published : Feb 5, 2022, 7:16 PM IST

ಬೆಂಗಳೂರು : ರಾಜ್ಯದಲ್ಲಿ ಸುಮಾರು 4 ಲಕ್ಷ ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್‍ಗಳಿಗೆ ಮಂಜೂರಾತಿ ನೀಡಲಾಗಿದ್ದು, ಇವುಗಳನ್ನು ಗ್ರಾಮ ಒನ್ ಕೇಂದ್ರಗಳ ಮೂಲಕ ವಿತರಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ಗ್ರಾಮ ಒನ್ ಯೋಜನೆಯ ಪ್ರಗತಿ ಕುರಿತು ಜಿಲ್ಲಾಡಳಿತ ಹಾಗೂ ಗ್ರಾಮ ಒನ್ ಕಂಪ್ಯೂಟರ್ ಆಪರೇಟರ್​ಗಳೊಂದಿಗೆ ಇಂದು ನಡೆದ ವಿಡಿಯೋ ಸಂವಾದದಲ್ಲಿ, ಗ್ರಾಮ ಒನ್ ಸೇವಾ ಕೇಂದ್ರದ ಮೂಲಕ ಸರ್ಕಾರ ತನ್ನ ಅಧಿಕಾರ ಮತ್ತು ಜವಾಬ್ದಾರಿಯನ್ನು ಆಪರೇಟರ್ಸ್​ಗಳಿಗೆ ವಹಿಸಲಾಗಿದೆ. ಜನರ ಬಳಿ ಸೌಜನ್ಯದಿಂದ ವರ್ತಿಸಿ ಅವರ ಸಮಸ್ಯೆಗಳನ್ನು ಆಲಿಸಿ ಪರಿಹಾರವನ್ನು ನೀಡಬೇಕೆಂದು ಮುಖ್ಯಮಂತ್ರಿಗಳು ಕಿವಿಮಾತು ಹೇಳಿದರು.

ಕಚೇರಿಗೆ ಜನರ ಅಲೆದಾಟ ತಪ್ಪಿಸಿ : ಜನರ ಎಲ್ಲ ಮಾಹಿತಿಗಳು ಕಾಗದರೂಪದಲ್ಲಿಯೇ ಪಡೆಯುವ ಅವಶ್ಯಕತೆಯಿಲ್ಲ. ಕುಟುಂಬ ಜನಸೇವಕ ಸಾಫ್ಟ್​ವೇರ್​ನಲ್ಲಿಯೂ ಮಾಹಿತಿಗಳು ಲಭಿಸುತ್ತವೆ. ಜನರು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ ತ್ವರಿತವಾಗಿ ಸರ್ಕಾರದ ಸೇವೆಯನ್ನು ಪೂರೈಸಬೇಕು.

ಮಾಹಿತಿ ಕೊರತೆ ಇದ್ದರೆ ಸ್ಪಷ್ಟೀಕರಣ ನೀಡಬೇಕು. ಸೇವೆ ಪೂರೈಸಲು ಕಾನೂನಾತ್ಮಕವಾಗಿ ಸಾಧ್ಯವಾಗದಿದ್ದಲ್ಲಿ ಅರ್ಜಿಯ ತಿರಸ್ಕಾರಕ್ಕೆ ಸಕಾರಣವನ್ನು ನೀಡಬೇಕು. ತಿರಸ್ಕೃತ ಅರ್ಜಿಗಳ ಸಂಖ್ಯೆಯನ್ನು ಕಡಿಮೆಗೊಳಿಸಲು ಉನ್ನತ ಅಧಿಕಾರಿಗಳೊಂದಿಗೆ ಚರ್ಚಿಸಿ ಅವುಗಳನ್ನು ಬಗೆಹರಿಸಬೇಕು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ, ತಹಶೀಲ್ದಾರ್ ಸಿಬ್ಬಂದಿಗಳೊಂದಿಗೆ ಸೌಹಾರ್ದತೆಯಿಂದಿರಬೇಕು. ಗ್ರಾಮ ಪಂಚಾಯತ್‌ ವ್ಯಾಪ್ತಿಗೆ ಮೀರಿದ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಸೇವೆಗಳನ್ನು ಜನರಿಗೆ ಮುಟ್ಟಿಸುವ ಕೆಲಸವನ್ನು ಮಾಡುವ ಅರಿವು ಇರಬೇಕು ಎಂದು ತಿಳಿಸಿದರು.

ಅರ್ಜಿಗಳು ಕಡಿಮೆ ಬಂದರೆ ಅಲ್ಲಿ ಪ್ರಚಾರ ಹಾಗೂ ಸ್ಪಂದನೆಯ ಕೊರತೆ ಬಿಂಬಿಸುತ್ತದೆ. ಹಿರಿಯ ನಾಗರಿಕರು, ಬಡವರು ಹಾಗೂ ಅಂಗವಿಕಲರಿಗಿರುವ ಕಾರ್ಯಕ್ರಮಗಳಿಗೆ ಹೆಚ್ಚು ಪ್ರಾಶಸ್ತ್ಯ ನೀಡಿ ಸೇವೆ ಒದಗಿಸಬೇಕು. ಆಪರೇಟರ್​ಗಳಿಗೆ ನೀಡಿರುವ ಸೌಲಭ್ಯಗಳ ಇತಿಮಿತಿಯೊಳಗೆ ಉತ್ತಮ ರೀತಿ ಕಾರ್ಯನಿರ್ವಹಿಸಲು ಸೂಚನೆ ನೀಡಿದರು.

ಕಾರ್ಯಕ್ಷಮತೆ ಆಧರಿಸಿ ಬಹುಮಾನ : ಗ್ರಾಮ ಒನ್ ಕಂಪ್ಯೂಟರ್ ಆಪರೇಟರ್ಸ್​ಗಳು ತಮ್ಮ ಕಾರ್ಯಕ್ಷಮತೆ ಹೆಚ್ಚಿಸಿಕೊಳ್ಳಲು ಪ್ರೋತ್ಸಾಹಿಸುವ ಉದ್ದೇಶದಿಂದ ಮುಂದಿನ 12 ತಿಂಗಳ ಅವಧಿಯಲ್ಲಿ ಪ್ರತಿ ವಾರ ಮೂರು ಉತ್ತಮ ಆಪರೇಟರ್ಸ್‌ಗಳನ್ನು ಆಯ್ಕೆ ಮಾಡಿ ಪ್ರಥಮ ಬಹುಮಾನ 10,000 ರೂ. ದ್ವಿತೀಯ ಬಹುಮಾನ ರೂ.7,000 ಹಾಗೂ ತೃತೀಯ ಬಹುಮಾನ ರೂ.5,000 ಗಳನ್ನು ಇ ಆಡಳಿತ ಇಲಾಖೆ ವತಿಯಿಂದ ನೀಡಲಾಗುವುದು. ಉತ್ತಮ ಕಾರ್ಯಕ್ಷಮತೆಯನ್ನು ಪ್ರದರ್ಶಿಸಿದ ಜಿಲ್ಲೆಗೆ ತಿಂಗಳಿಗೊಮ್ಮೆ 1 ಲಕ್ಷ ರೂ. ಬಹುಮಾನ ನೀಡಲಾಗುವುದು ಎಂದರು.

ಇದನ್ನೂ ಓದಿ: ಬೇಟಿ ಬಚಾವೋ ಬೇಟಿ ಪಢಾವೋ ಬದಲಿಗೆ ಈಗ ಬೇಟಿ ಹಠಾವೋ ಮಾಡಲಾಗುತ್ತಿದೆ : ಹೆಚ್​​ಡಿಕೆ ವ್ಯಂಗ್ಯ

ಗ್ರಾಮ ಒನ್ ಕಂಪ್ಯೂಟರ್ ಆಪರೇಟರ್​ಗಳು ಸರ್ಕಾರದ ಪ್ರತಿನಿಧಿಗಳಾಗಿದ್ದಾರೆ. ತಮ್ಮ ಕಾರ್ಯವೈಖರಿಯ ಮೇಲೆ ಸರ್ಕಾರದ ವರ್ಚಸ್ಸು ಅವಲಂಬಿಸಿದೆ. ಇವರು ಗ್ರಾಮ ಒನ್ ಸೇವೆಗಳನ್ನು ಜನರಿಗೆ ಯಶಸ್ವಿಯಾಗಿ ತಲುಪಿಸುವ ವಿಶ್ವಾಸವಿದೆ ಎಂದರು.

ಜಿಲ್ಲಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಬಾಕಿ ಇರುವ ಗ್ರಾಮ ಒನ್ ಕೇಂದ್ರಗಳನ್ನು ಆದ್ಯತೆ ಮೇಲೆ ಪ್ರಾರಂಭಿಸಲು ಹಾಗೂ ಗ್ರಾಮ ಒನ್‍ನಲ್ಲಿ ಸೇವೆಗಳ ಬಗ್ಗೆ ಹೆಚ್ಚಿನ ಪ್ರಚಾರ ನೀಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.

ಬೆಂಗಳೂರು : ರಾಜ್ಯದಲ್ಲಿ ಸುಮಾರು 4 ಲಕ್ಷ ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್‍ಗಳಿಗೆ ಮಂಜೂರಾತಿ ನೀಡಲಾಗಿದ್ದು, ಇವುಗಳನ್ನು ಗ್ರಾಮ ಒನ್ ಕೇಂದ್ರಗಳ ಮೂಲಕ ವಿತರಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ಗ್ರಾಮ ಒನ್ ಯೋಜನೆಯ ಪ್ರಗತಿ ಕುರಿತು ಜಿಲ್ಲಾಡಳಿತ ಹಾಗೂ ಗ್ರಾಮ ಒನ್ ಕಂಪ್ಯೂಟರ್ ಆಪರೇಟರ್​ಗಳೊಂದಿಗೆ ಇಂದು ನಡೆದ ವಿಡಿಯೋ ಸಂವಾದದಲ್ಲಿ, ಗ್ರಾಮ ಒನ್ ಸೇವಾ ಕೇಂದ್ರದ ಮೂಲಕ ಸರ್ಕಾರ ತನ್ನ ಅಧಿಕಾರ ಮತ್ತು ಜವಾಬ್ದಾರಿಯನ್ನು ಆಪರೇಟರ್ಸ್​ಗಳಿಗೆ ವಹಿಸಲಾಗಿದೆ. ಜನರ ಬಳಿ ಸೌಜನ್ಯದಿಂದ ವರ್ತಿಸಿ ಅವರ ಸಮಸ್ಯೆಗಳನ್ನು ಆಲಿಸಿ ಪರಿಹಾರವನ್ನು ನೀಡಬೇಕೆಂದು ಮುಖ್ಯಮಂತ್ರಿಗಳು ಕಿವಿಮಾತು ಹೇಳಿದರು.

ಕಚೇರಿಗೆ ಜನರ ಅಲೆದಾಟ ತಪ್ಪಿಸಿ : ಜನರ ಎಲ್ಲ ಮಾಹಿತಿಗಳು ಕಾಗದರೂಪದಲ್ಲಿಯೇ ಪಡೆಯುವ ಅವಶ್ಯಕತೆಯಿಲ್ಲ. ಕುಟುಂಬ ಜನಸೇವಕ ಸಾಫ್ಟ್​ವೇರ್​ನಲ್ಲಿಯೂ ಮಾಹಿತಿಗಳು ಲಭಿಸುತ್ತವೆ. ಜನರು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ ತ್ವರಿತವಾಗಿ ಸರ್ಕಾರದ ಸೇವೆಯನ್ನು ಪೂರೈಸಬೇಕು.

ಮಾಹಿತಿ ಕೊರತೆ ಇದ್ದರೆ ಸ್ಪಷ್ಟೀಕರಣ ನೀಡಬೇಕು. ಸೇವೆ ಪೂರೈಸಲು ಕಾನೂನಾತ್ಮಕವಾಗಿ ಸಾಧ್ಯವಾಗದಿದ್ದಲ್ಲಿ ಅರ್ಜಿಯ ತಿರಸ್ಕಾರಕ್ಕೆ ಸಕಾರಣವನ್ನು ನೀಡಬೇಕು. ತಿರಸ್ಕೃತ ಅರ್ಜಿಗಳ ಸಂಖ್ಯೆಯನ್ನು ಕಡಿಮೆಗೊಳಿಸಲು ಉನ್ನತ ಅಧಿಕಾರಿಗಳೊಂದಿಗೆ ಚರ್ಚಿಸಿ ಅವುಗಳನ್ನು ಬಗೆಹರಿಸಬೇಕು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ, ತಹಶೀಲ್ದಾರ್ ಸಿಬ್ಬಂದಿಗಳೊಂದಿಗೆ ಸೌಹಾರ್ದತೆಯಿಂದಿರಬೇಕು. ಗ್ರಾಮ ಪಂಚಾಯತ್‌ ವ್ಯಾಪ್ತಿಗೆ ಮೀರಿದ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಸೇವೆಗಳನ್ನು ಜನರಿಗೆ ಮುಟ್ಟಿಸುವ ಕೆಲಸವನ್ನು ಮಾಡುವ ಅರಿವು ಇರಬೇಕು ಎಂದು ತಿಳಿಸಿದರು.

ಅರ್ಜಿಗಳು ಕಡಿಮೆ ಬಂದರೆ ಅಲ್ಲಿ ಪ್ರಚಾರ ಹಾಗೂ ಸ್ಪಂದನೆಯ ಕೊರತೆ ಬಿಂಬಿಸುತ್ತದೆ. ಹಿರಿಯ ನಾಗರಿಕರು, ಬಡವರು ಹಾಗೂ ಅಂಗವಿಕಲರಿಗಿರುವ ಕಾರ್ಯಕ್ರಮಗಳಿಗೆ ಹೆಚ್ಚು ಪ್ರಾಶಸ್ತ್ಯ ನೀಡಿ ಸೇವೆ ಒದಗಿಸಬೇಕು. ಆಪರೇಟರ್​ಗಳಿಗೆ ನೀಡಿರುವ ಸೌಲಭ್ಯಗಳ ಇತಿಮಿತಿಯೊಳಗೆ ಉತ್ತಮ ರೀತಿ ಕಾರ್ಯನಿರ್ವಹಿಸಲು ಸೂಚನೆ ನೀಡಿದರು.

ಕಾರ್ಯಕ್ಷಮತೆ ಆಧರಿಸಿ ಬಹುಮಾನ : ಗ್ರಾಮ ಒನ್ ಕಂಪ್ಯೂಟರ್ ಆಪರೇಟರ್ಸ್​ಗಳು ತಮ್ಮ ಕಾರ್ಯಕ್ಷಮತೆ ಹೆಚ್ಚಿಸಿಕೊಳ್ಳಲು ಪ್ರೋತ್ಸಾಹಿಸುವ ಉದ್ದೇಶದಿಂದ ಮುಂದಿನ 12 ತಿಂಗಳ ಅವಧಿಯಲ್ಲಿ ಪ್ರತಿ ವಾರ ಮೂರು ಉತ್ತಮ ಆಪರೇಟರ್ಸ್‌ಗಳನ್ನು ಆಯ್ಕೆ ಮಾಡಿ ಪ್ರಥಮ ಬಹುಮಾನ 10,000 ರೂ. ದ್ವಿತೀಯ ಬಹುಮಾನ ರೂ.7,000 ಹಾಗೂ ತೃತೀಯ ಬಹುಮಾನ ರೂ.5,000 ಗಳನ್ನು ಇ ಆಡಳಿತ ಇಲಾಖೆ ವತಿಯಿಂದ ನೀಡಲಾಗುವುದು. ಉತ್ತಮ ಕಾರ್ಯಕ್ಷಮತೆಯನ್ನು ಪ್ರದರ್ಶಿಸಿದ ಜಿಲ್ಲೆಗೆ ತಿಂಗಳಿಗೊಮ್ಮೆ 1 ಲಕ್ಷ ರೂ. ಬಹುಮಾನ ನೀಡಲಾಗುವುದು ಎಂದರು.

ಇದನ್ನೂ ಓದಿ: ಬೇಟಿ ಬಚಾವೋ ಬೇಟಿ ಪಢಾವೋ ಬದಲಿಗೆ ಈಗ ಬೇಟಿ ಹಠಾವೋ ಮಾಡಲಾಗುತ್ತಿದೆ : ಹೆಚ್​​ಡಿಕೆ ವ್ಯಂಗ್ಯ

ಗ್ರಾಮ ಒನ್ ಕಂಪ್ಯೂಟರ್ ಆಪರೇಟರ್​ಗಳು ಸರ್ಕಾರದ ಪ್ರತಿನಿಧಿಗಳಾಗಿದ್ದಾರೆ. ತಮ್ಮ ಕಾರ್ಯವೈಖರಿಯ ಮೇಲೆ ಸರ್ಕಾರದ ವರ್ಚಸ್ಸು ಅವಲಂಬಿಸಿದೆ. ಇವರು ಗ್ರಾಮ ಒನ್ ಸೇವೆಗಳನ್ನು ಜನರಿಗೆ ಯಶಸ್ವಿಯಾಗಿ ತಲುಪಿಸುವ ವಿಶ್ವಾಸವಿದೆ ಎಂದರು.

ಜಿಲ್ಲಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಬಾಕಿ ಇರುವ ಗ್ರಾಮ ಒನ್ ಕೇಂದ್ರಗಳನ್ನು ಆದ್ಯತೆ ಮೇಲೆ ಪ್ರಾರಂಭಿಸಲು ಹಾಗೂ ಗ್ರಾಮ ಒನ್‍ನಲ್ಲಿ ಸೇವೆಗಳ ಬಗ್ಗೆ ಹೆಚ್ಚಿನ ಪ್ರಚಾರ ನೀಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.