ETV Bharat / city

ಮತಾಂತರ ನಿಷೇಧ ಕಾಯ್ದೆಗೆ ನಮ್ಮ ವಿರೋಧವಿದೆ : ಡಿಕೆಶಿ

author img

By

Published : Dec 11, 2021, 3:05 PM IST

Updated : Dec 11, 2021, 11:03 PM IST

ಬಿಜೆಪಿಯವರು ಎರಡು ಪ್ಲ್ಯಾನ್ ಮಾಡಿದ್ದಾರೆ. ಒಂದು ಅಫೀಶಿಯಲ್ ಆಗಿ ಕಾಯ್ದೆ ಜಾರಿ ಮಾಡೋದು. ಎರಡನೆಯದ್ದು ಖಾಸಗಿಯಾಗಿ ಮಸೂದೆ ಮಂಡನೆ‌ ಮಾಡೋಡು. ಈ ಎರಡು ಪ್ಲ್ಯಾನ್ ಮಾಡಿಕೊಂಡಿರುವ ಬಿಜೆಪಿಯವರು ಈ‌ ಬಿಲ್​​ ಅನ್ನು ಮೂವ್ ಮಾಡಲು ಹೊರಟಿದ್ದಾರೆ ಎಂದು ಡಿಕೆಶಿ ಹೇಳಿದರು..

Congress Membership Registration Campaign
ಕಾಂಗ್ರೆಸ್ ಸದಸ್ಯತ್ವ ನೋಂದಣಿ ಬೃಹತ್ ಅಭಿಯಾನ

ಬೆಂಗಳೂರು : ಕರ್ನಾಟಕದಲ್ಲಿ ಕಾಂಗ್ರೆಸ್ ಸದಸ್ಯತ್ವ ನೋಂದಣಿಗೆ 2,000ಕ್ಕಿಂತಲೂ ಹೆಚ್ಚು ಸ್ಥಳಗಳಲ್ಲಿ ಬೃಹತ್ ಅಭಿಯಾನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಜೂಮ್ ಸಂವಾದದ ಮೂಲಕ ಚಾಲನೆ ನೀಡಿದರು.

ಎಐಸಿಸಿ ಮಾಹಿತಿ ವಿಶ್ಲೇಷಣೆ ವಿಭಾಗದ ಮುಖ್ಯಸ್ಥ ಪ್ರವೀಣ್ ಚಕ್ರವರ್ತಿ, ಎಐಸಿಸಿ ಕಾರ್ಯದರ್ಶಿ ಪಿ.ವಿ. ಮೋಹನ್, ಶಾಸಕ ವಿ. ಮುನಿಯಪ್ಪ, ಕೆಪಿಸಿಸಿ ಸದಸ್ಯತ್ವ ನೋಂದಣಿ ಅಭಿಯಾನ ಸಮಿತಿ ಸಂಚಾಲಕ ಆರ್.ವಿ. ವೆಂಕಟೇಶ್, ಡಿಜಿಟಲ್ ಸದಸ್ಯತ್ವ ನೋಂದಣಿ ವಿಭಾಗದ ಸಂಚಾಲಕ ರಘುನಂದನ್ ರಾಮಣ್ಣ, ಎಐಸಿಸಿ ಮಾಜಿ ಕಾರ್ಯದರ್ಶಿ ಸೂರಜ್ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.

ಎಐಸಿಸಿ ಪ್ರಧಾನ ಕಾರ್ಯದರ್ಶಿ, ಕರ್ನಾಟಕದ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೇವಾಲ, ಮಾಜಿ ಡಿಸಿಎಂ ಡಾ.ಜಿ. ಪರಮೇಶ್ವರ್​​, ಮಾಜಿ ಸಚಿವರಾದ ಟಿ.ಬಿ. ಜಯಚಂದ್ರ, ಚಲುವರಾಯಸ್ವಾಮಿ, ರಾಮಲಿಂಗಾರೆಡ್ಡಿ, ಕೃಷ್ಣಬೈರೇಗೌಡ ಮತ್ತಿತರರು ಜೂಮ್ ಸಂವಾದದಲ್ಲಿ ಪಾಲ್ಗೊಂಡು ಸದಸ್ಯತ್ವ ಅಭಿಯಾನ ಕುರಿತು ಸಂದೇಶ ನೀಡಿದರು.

ಕಾರ್ಯಕ್ರಮದ ಬಳಿಕ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಮೇಕೆದಾಟು ಪಾದಯಾತ್ರೆ ಜನವರಿ ಮೊದಲನೇ ವಾರದಲ್ಲಿ ಪ್ರಾರಂಭವಾಗುತ್ತದೆ. ಸದ್ಯಕ್ಕೆ ದಿನಾಂಕದ ಬಗ್ಗೆ ಪ್ಲ್ಯಾನ್ ನಡೆಯುತ್ತಿದೆ‌. ಈ ವಿಚಾರವಾಗಿ 13ಕ್ಕೆ ಸಭೆ ಮಾಡಲಾಗುತ್ತದೆ ಎಂದರು.

ಸದಸ್ಯತ್ವ ಅಭಿಯಾನಕ್ಕೆ ಚಾಲನೆ : ಇಂದು ರಾಜ್ಯಾದ್ಯಂತ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಸಿಎಂ ಇಬ್ರಾಹಿಂ ಸದಸ್ಯತ್ವ ಪಡೆಯಲು ಬಂದಿದ್ದರು. ಅವರು ವೋಟರ್ ಐಡಿ ತಂದಿರಲಿಲ್ಲ. ವೋಟರ್ ಐಡಿ‌ ತಂದು ಬೂತ್​ನಲ್ಲಿ ಸದಸ್ಯತ್ವ ಪಡೆಯುತ್ತೇನೆ ಎಂದು ಹೇಳಿದ್ದಾರೆ. ಇದರ ಜೊತೆಗೆ ಪಕ್ಷ ಸಂಘಟನೆ ಬಗ್ಗೆ ಚರ್ಚೆ ಮಾಡಿದ್ದೇವೆ ಎಂದು ವಿವರಿಸಿದರು.

ಮತಾಂತರ ನಿಷೇಧ ಕಾಯ್ದೆ ಕುರಿತು ಡಿಕೆಶಿ ಅಸಮಧಾನ

ಪಾಲಿಗೆ ಬಂದಿದ್ದು ಪಂಚಾಮೃತ : ಪರಿಷತ್ ಚುನಾವಣೆಯಲ್ಲಿ 15 ಸ್ಥಾನ ಗೆಲ್ಲುತ್ತೇವೆ ಎಂದು ಯಡಿಯೂರಪ್ಪ ಹೇಳಿದ್ದಾರೆ. ಉಳಿದ ಸ್ಥಾನ ನಾವು ಗೆಲ್ಲುತ್ತೇವೆ. ಅವರಿಗೆ ಎಷ್ಟು ಸ್ಥಾನ ಬೇಕೋ ಅಷ್ಟು ಇಟ್ಟುಕೊಂಡು ಮಿಕ್ಕಿದ್ದು ನಮಗೆ ಬಿಟ್ಟಿದ್ದಾರೆ. ಪಾಲಿಗೆ ಬಂದಿದ್ದು ಪಂಚಾಮೃತ ಎಂದು ಭಾವಿಸುತ್ತೇವೆ ಎಂದು ಬಿಎಸ್​ವೈ ಹೇಳಿಕೆಗೆ ಪ್ರತಿಕ್ರಿಯಿಸಿದರು.

ನಾನು ಮುಂದಿನ ಸಿಎಂ ಎಂಬ ಶಾಮನೂರು ಶಿವಶಂಕರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿ, ಅವರ ಹೇಳಿಕೆಯನ್ನು ನಾನು ನೋಡಿಲ್ಲ. ಯಾರಿಗೆ ಏನು ಆಸೆಯಿದೆ ನೋಡೋಣ. ಎಐಸಿಸಿ ಅವರ ಗೈಡ್​ಲೈನ್ಸ್ ಇದೆ. ಅದರ ಬಗ್ಗೆ ಮುಂದೆ ಮಾತನಾಡೋಣ ಎಂದರು.

ಮತಾಂತರ ಕಾಯ್ದೆ ವಿಚಾರಕ್ಕೆ ಪ್ರತಿಕ್ರಿಯೆ : ಬೆಳಗಾವಿ ಅಧಿವೇಶನದಲ್ಲಿ ಮತಾಂತರ ಕಾಯ್ದೆ ಜಾರಿ ಮಾಡುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ಬಿಜೆಪಿಯವರು ಎರಡು ಪ್ಲ್ಯಾನ್ ಮಾಡಿದ್ದಾರೆ. ಒಂದು ಅಫೀಶಿಯಲ್ ಆಗಿ ಕಾಯ್ದೆ ಜಾರಿ ಮಾಡೋದು. ಎರಡನೆಯದ್ದು ಖಾಸಗಿಯಾಗಿ ಮಸೂದೆ ಮಂಡನೆ‌ ಮಾಡೋಡು.

ಈ ಎರಡು ಪ್ಲ್ಯಾನ್ ಮಾಡಿಕೊಂಡಿರುವ ಬಿಜೆಪಿಯವರು ಈ‌ ಬಿಲ್​​ ಅನ್ನು ಮೂವ್ ಮಾಡಲು ಹೊರಟಿದ್ದಾರೆ. ಇದು ರಾಜಕೀಯವಾಗಿ ಎಫೆಕ್ಟ್ ಅಗುತ್ತದೆ‌. ಇದು ಕೇವಲ ರಾಜ್ಯಕ್ಕೆ ಮಾತ್ರ ಸಂಬಂಧಿಸಿದ ವಿಷಯವಲ್ಲ. ಇದು ಅಂತಾರಾಷ್ಟ್ರೀಯ ವಿಷಯವಾಗಿದೆ. ಇಡೀ ಪ್ರಪಂಚವೇ ನಮ್ಮ ರಾಜ್ಯದಲ್ಲಿ ಇಂತಹ ಕೆಲಸ ಆಗ್ತಾ ಇದೆ ಎಂದು ಬೈಯುತ್ತಿದ್ದಾರೆ ಎಂದರು.

ನಮ್ಮ ವಿರೋಧವಿದೆ : ಅವರು ಖಾಸಗಿ ಮಸೂದೆಯಾದ್ರು ತರಲಿ, ಸರ್ಕಾರವೇ ತರಲಿ. ನಾವು ಆ ಬಿಲ್​ಗೆ ಖಂಡಿತವಾಗಿ ವಿರೋಧ ಮಾಡ್ತೇವೆ. ಎಲೆಕ್ಷನ್ ಬರುತ್ತಿದೆಯೆಂದು ಬಿಲ್ ತರಲು ಹೊರಟಿದ್ದಾರೆ. ಒಂದೊಂದು ಸಮುದಾಯವನ್ನು ಟಾರ್ಗೆಟ್ ಮಾಡಿ, ಹಿಂಸೆ ಮಾಡುತ್ತಿದ್ದಾರೆ. ಕ್ರಿಶ್ಚಿಯನ್ ಸಮುದಾಯದ ಕೊಡುಗೆ ಗೊತ್ತಾ ಅವರಿಗೆ? ಶಿಕ್ಷಣ ಮತ್ತು ಆರೋಗ್ಯಕ್ಕೆ ಸಂಬಂಧಿಸಿದಂತೆ ಅವರ ಕೊಡುಗೆ ಹೆಚ್ಚಾಗಿದೆ. ಕ್ರಿಶ್ಚಿಯನ್ ಸಮುದಾಯದವರು ಮಾನವೀಯತೆಗಾಗಿ ಕೆಲಸ ‌ಮಾಡುತ್ತಿದ್ದಾರೆ ಎಂದು ವಿವರಿಸಿದರು.

ಮೂರು ಸಿಎಂ ಮಾಡೋದು ಬಿಜೆಪಿ ಸಂಪ್ರದಾಯ : ಬಿಜೆಪಿಯಲ್ಲಿ ಸಿಎಂ ಬದಲಾವಣೆ ವಿಚಾರವಾಗಿ ಮಾತನಾಡಿ, ಮೂರು ಜನರನ್ನು ಸಿಎಂ ಮಾಡೋದು ಬಿಜೆಪಿ ಸಂಪ್ರದಾಯ. ಮೊದಲಿಂದಲೂ ಈ ಸಂಪ್ರದಾಯವಿದೆ. ಅವರ ಪಕ್ಷದ ಆಂತರಿಕ ವಿಚಾರದ ಬಗ್ಗೆ ಮಾತನಾಡುವುದಿಲ್ಲ. ಅವರು ಏನು ಬೇಕಾದರೂ ಮಾಡಲಿ, ನಾನು ಅದನ್ನು ಅಭಿನಂದಿಸುತ್ತೇನೆ. ಮೂರಾದರೂ ಮಾಡಲಿ, ಆರಾದರೂ ಮಾಡಲಿ. ಒಳ್ಳೆಯ ಸರ್ಕಾರ ಅಂತೂ ಕೊಡಲಿಲ್ಲ. ಜನ ಸರ್ಕಾರವನ್ನು ಕಿತ್ತು ಒಗೆಯಲಿ ಎಂದು ಹೇಳಿದರು.

ಇದನ್ನೂ ಓದಿ: ಮಂಗಳೂರಿನ ಒಂದೇ ಕುಟುಂಬದ ನಾಲ್ವರ ಸಾವು ಪ್ರಕರಣ..ಮತಾಂತರ ಆರೋಪದಡಿ ಮಹಿಳೆ ಬಂಧನ

ಬೆಂಗಳೂರು : ಕರ್ನಾಟಕದಲ್ಲಿ ಕಾಂಗ್ರೆಸ್ ಸದಸ್ಯತ್ವ ನೋಂದಣಿಗೆ 2,000ಕ್ಕಿಂತಲೂ ಹೆಚ್ಚು ಸ್ಥಳಗಳಲ್ಲಿ ಬೃಹತ್ ಅಭಿಯಾನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಜೂಮ್ ಸಂವಾದದ ಮೂಲಕ ಚಾಲನೆ ನೀಡಿದರು.

ಎಐಸಿಸಿ ಮಾಹಿತಿ ವಿಶ್ಲೇಷಣೆ ವಿಭಾಗದ ಮುಖ್ಯಸ್ಥ ಪ್ರವೀಣ್ ಚಕ್ರವರ್ತಿ, ಎಐಸಿಸಿ ಕಾರ್ಯದರ್ಶಿ ಪಿ.ವಿ. ಮೋಹನ್, ಶಾಸಕ ವಿ. ಮುನಿಯಪ್ಪ, ಕೆಪಿಸಿಸಿ ಸದಸ್ಯತ್ವ ನೋಂದಣಿ ಅಭಿಯಾನ ಸಮಿತಿ ಸಂಚಾಲಕ ಆರ್.ವಿ. ವೆಂಕಟೇಶ್, ಡಿಜಿಟಲ್ ಸದಸ್ಯತ್ವ ನೋಂದಣಿ ವಿಭಾಗದ ಸಂಚಾಲಕ ರಘುನಂದನ್ ರಾಮಣ್ಣ, ಎಐಸಿಸಿ ಮಾಜಿ ಕಾರ್ಯದರ್ಶಿ ಸೂರಜ್ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.

ಎಐಸಿಸಿ ಪ್ರಧಾನ ಕಾರ್ಯದರ್ಶಿ, ಕರ್ನಾಟಕದ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೇವಾಲ, ಮಾಜಿ ಡಿಸಿಎಂ ಡಾ.ಜಿ. ಪರಮೇಶ್ವರ್​​, ಮಾಜಿ ಸಚಿವರಾದ ಟಿ.ಬಿ. ಜಯಚಂದ್ರ, ಚಲುವರಾಯಸ್ವಾಮಿ, ರಾಮಲಿಂಗಾರೆಡ್ಡಿ, ಕೃಷ್ಣಬೈರೇಗೌಡ ಮತ್ತಿತರರು ಜೂಮ್ ಸಂವಾದದಲ್ಲಿ ಪಾಲ್ಗೊಂಡು ಸದಸ್ಯತ್ವ ಅಭಿಯಾನ ಕುರಿತು ಸಂದೇಶ ನೀಡಿದರು.

ಕಾರ್ಯಕ್ರಮದ ಬಳಿಕ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಮೇಕೆದಾಟು ಪಾದಯಾತ್ರೆ ಜನವರಿ ಮೊದಲನೇ ವಾರದಲ್ಲಿ ಪ್ರಾರಂಭವಾಗುತ್ತದೆ. ಸದ್ಯಕ್ಕೆ ದಿನಾಂಕದ ಬಗ್ಗೆ ಪ್ಲ್ಯಾನ್ ನಡೆಯುತ್ತಿದೆ‌. ಈ ವಿಚಾರವಾಗಿ 13ಕ್ಕೆ ಸಭೆ ಮಾಡಲಾಗುತ್ತದೆ ಎಂದರು.

ಸದಸ್ಯತ್ವ ಅಭಿಯಾನಕ್ಕೆ ಚಾಲನೆ : ಇಂದು ರಾಜ್ಯಾದ್ಯಂತ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಸಿಎಂ ಇಬ್ರಾಹಿಂ ಸದಸ್ಯತ್ವ ಪಡೆಯಲು ಬಂದಿದ್ದರು. ಅವರು ವೋಟರ್ ಐಡಿ ತಂದಿರಲಿಲ್ಲ. ವೋಟರ್ ಐಡಿ‌ ತಂದು ಬೂತ್​ನಲ್ಲಿ ಸದಸ್ಯತ್ವ ಪಡೆಯುತ್ತೇನೆ ಎಂದು ಹೇಳಿದ್ದಾರೆ. ಇದರ ಜೊತೆಗೆ ಪಕ್ಷ ಸಂಘಟನೆ ಬಗ್ಗೆ ಚರ್ಚೆ ಮಾಡಿದ್ದೇವೆ ಎಂದು ವಿವರಿಸಿದರು.

ಮತಾಂತರ ನಿಷೇಧ ಕಾಯ್ದೆ ಕುರಿತು ಡಿಕೆಶಿ ಅಸಮಧಾನ

ಪಾಲಿಗೆ ಬಂದಿದ್ದು ಪಂಚಾಮೃತ : ಪರಿಷತ್ ಚುನಾವಣೆಯಲ್ಲಿ 15 ಸ್ಥಾನ ಗೆಲ್ಲುತ್ತೇವೆ ಎಂದು ಯಡಿಯೂರಪ್ಪ ಹೇಳಿದ್ದಾರೆ. ಉಳಿದ ಸ್ಥಾನ ನಾವು ಗೆಲ್ಲುತ್ತೇವೆ. ಅವರಿಗೆ ಎಷ್ಟು ಸ್ಥಾನ ಬೇಕೋ ಅಷ್ಟು ಇಟ್ಟುಕೊಂಡು ಮಿಕ್ಕಿದ್ದು ನಮಗೆ ಬಿಟ್ಟಿದ್ದಾರೆ. ಪಾಲಿಗೆ ಬಂದಿದ್ದು ಪಂಚಾಮೃತ ಎಂದು ಭಾವಿಸುತ್ತೇವೆ ಎಂದು ಬಿಎಸ್​ವೈ ಹೇಳಿಕೆಗೆ ಪ್ರತಿಕ್ರಿಯಿಸಿದರು.

ನಾನು ಮುಂದಿನ ಸಿಎಂ ಎಂಬ ಶಾಮನೂರು ಶಿವಶಂಕರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿ, ಅವರ ಹೇಳಿಕೆಯನ್ನು ನಾನು ನೋಡಿಲ್ಲ. ಯಾರಿಗೆ ಏನು ಆಸೆಯಿದೆ ನೋಡೋಣ. ಎಐಸಿಸಿ ಅವರ ಗೈಡ್​ಲೈನ್ಸ್ ಇದೆ. ಅದರ ಬಗ್ಗೆ ಮುಂದೆ ಮಾತನಾಡೋಣ ಎಂದರು.

ಮತಾಂತರ ಕಾಯ್ದೆ ವಿಚಾರಕ್ಕೆ ಪ್ರತಿಕ್ರಿಯೆ : ಬೆಳಗಾವಿ ಅಧಿವೇಶನದಲ್ಲಿ ಮತಾಂತರ ಕಾಯ್ದೆ ಜಾರಿ ಮಾಡುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ಬಿಜೆಪಿಯವರು ಎರಡು ಪ್ಲ್ಯಾನ್ ಮಾಡಿದ್ದಾರೆ. ಒಂದು ಅಫೀಶಿಯಲ್ ಆಗಿ ಕಾಯ್ದೆ ಜಾರಿ ಮಾಡೋದು. ಎರಡನೆಯದ್ದು ಖಾಸಗಿಯಾಗಿ ಮಸೂದೆ ಮಂಡನೆ‌ ಮಾಡೋಡು.

ಈ ಎರಡು ಪ್ಲ್ಯಾನ್ ಮಾಡಿಕೊಂಡಿರುವ ಬಿಜೆಪಿಯವರು ಈ‌ ಬಿಲ್​​ ಅನ್ನು ಮೂವ್ ಮಾಡಲು ಹೊರಟಿದ್ದಾರೆ. ಇದು ರಾಜಕೀಯವಾಗಿ ಎಫೆಕ್ಟ್ ಅಗುತ್ತದೆ‌. ಇದು ಕೇವಲ ರಾಜ್ಯಕ್ಕೆ ಮಾತ್ರ ಸಂಬಂಧಿಸಿದ ವಿಷಯವಲ್ಲ. ಇದು ಅಂತಾರಾಷ್ಟ್ರೀಯ ವಿಷಯವಾಗಿದೆ. ಇಡೀ ಪ್ರಪಂಚವೇ ನಮ್ಮ ರಾಜ್ಯದಲ್ಲಿ ಇಂತಹ ಕೆಲಸ ಆಗ್ತಾ ಇದೆ ಎಂದು ಬೈಯುತ್ತಿದ್ದಾರೆ ಎಂದರು.

ನಮ್ಮ ವಿರೋಧವಿದೆ : ಅವರು ಖಾಸಗಿ ಮಸೂದೆಯಾದ್ರು ತರಲಿ, ಸರ್ಕಾರವೇ ತರಲಿ. ನಾವು ಆ ಬಿಲ್​ಗೆ ಖಂಡಿತವಾಗಿ ವಿರೋಧ ಮಾಡ್ತೇವೆ. ಎಲೆಕ್ಷನ್ ಬರುತ್ತಿದೆಯೆಂದು ಬಿಲ್ ತರಲು ಹೊರಟಿದ್ದಾರೆ. ಒಂದೊಂದು ಸಮುದಾಯವನ್ನು ಟಾರ್ಗೆಟ್ ಮಾಡಿ, ಹಿಂಸೆ ಮಾಡುತ್ತಿದ್ದಾರೆ. ಕ್ರಿಶ್ಚಿಯನ್ ಸಮುದಾಯದ ಕೊಡುಗೆ ಗೊತ್ತಾ ಅವರಿಗೆ? ಶಿಕ್ಷಣ ಮತ್ತು ಆರೋಗ್ಯಕ್ಕೆ ಸಂಬಂಧಿಸಿದಂತೆ ಅವರ ಕೊಡುಗೆ ಹೆಚ್ಚಾಗಿದೆ. ಕ್ರಿಶ್ಚಿಯನ್ ಸಮುದಾಯದವರು ಮಾನವೀಯತೆಗಾಗಿ ಕೆಲಸ ‌ಮಾಡುತ್ತಿದ್ದಾರೆ ಎಂದು ವಿವರಿಸಿದರು.

ಮೂರು ಸಿಎಂ ಮಾಡೋದು ಬಿಜೆಪಿ ಸಂಪ್ರದಾಯ : ಬಿಜೆಪಿಯಲ್ಲಿ ಸಿಎಂ ಬದಲಾವಣೆ ವಿಚಾರವಾಗಿ ಮಾತನಾಡಿ, ಮೂರು ಜನರನ್ನು ಸಿಎಂ ಮಾಡೋದು ಬಿಜೆಪಿ ಸಂಪ್ರದಾಯ. ಮೊದಲಿಂದಲೂ ಈ ಸಂಪ್ರದಾಯವಿದೆ. ಅವರ ಪಕ್ಷದ ಆಂತರಿಕ ವಿಚಾರದ ಬಗ್ಗೆ ಮಾತನಾಡುವುದಿಲ್ಲ. ಅವರು ಏನು ಬೇಕಾದರೂ ಮಾಡಲಿ, ನಾನು ಅದನ್ನು ಅಭಿನಂದಿಸುತ್ತೇನೆ. ಮೂರಾದರೂ ಮಾಡಲಿ, ಆರಾದರೂ ಮಾಡಲಿ. ಒಳ್ಳೆಯ ಸರ್ಕಾರ ಅಂತೂ ಕೊಡಲಿಲ್ಲ. ಜನ ಸರ್ಕಾರವನ್ನು ಕಿತ್ತು ಒಗೆಯಲಿ ಎಂದು ಹೇಳಿದರು.

ಇದನ್ನೂ ಓದಿ: ಮಂಗಳೂರಿನ ಒಂದೇ ಕುಟುಂಬದ ನಾಲ್ವರ ಸಾವು ಪ್ರಕರಣ..ಮತಾಂತರ ಆರೋಪದಡಿ ಮಹಿಳೆ ಬಂಧನ

Last Updated : Dec 11, 2021, 11:03 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.