ETV Bharat / city

ನಿಮ್ಮ ಪಕ್ಕದಲ್ಲಿ ಬಿಜೆಪಿ ನಾಯಕರು ಹೋಗುವಾಗ ವಿಡಿಯೋ ಮಾಡಿಕೊಳ್ಳಿ: ಜನರಿಗೆ ಡಿಕೆಶಿ ಸಲಹೆ

ಲಖೀಮ್​ಪುರ ಹಿಂಸಾಚಾರ ಪ್ರಕರಣದ ಬಗ್ಗೆ ಮಾತನಾಡಿರುವ ಡಿ.ಕೆ.ಶಿವಕುಮಾರ್, ಬಿಜೆಪಿ ನಾಯಕರು ಯಾರ ಮೇಲೆ ಯಾವಾಗ ಕಾರು ಹತ್ತಿಸುತ್ತಾರೆ ಗೊತ್ತಾಗಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

author img

By

Published : Oct 8, 2021, 3:01 AM IST

dks
dks

ಬೆಂಗಳೂರು: ಬಿಜೆಪಿ ನಾಯಕರ ಕಾರು ನಿಮ್ಮ ಪಕ್ಕದಲ್ಲಿ ಹೋಗುವಾಗ ನಿಮ್ಮ ಫೋನ್ ಕ್ಯಾಮರಾದಿಂದ ರೆಕಾರ್ಡ್ ಮಾಡಿಕೊಳ್ಳಿ ಎಂದು ಸಾರ್ವಜನಿಕರಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮನವಿ ಮಾಡಿಕೊಂಡಿದ್ದಾರೆ.

ತುಳಸಿ ಪೂಜೆ ವಿಶೇಷ ವಿಡಿಯೋ ಬಿಡುಗಡೆ ಮಾಡಿರುವ ಅವರು ಲಖೀಮ್​ಪುರ ಹಿಂಸಾಚಾರದಲ್ಲಿ ರೈತರು ಮೃತಪಟ್ಟ ಘಟನೆಯನ್ನು ಉದ್ದೇಶವಾಗಿಟ್ಟುಕೊಂಡು ಮಾತನಾಡಿರುವ ಶಿವಕುಮಾರ್, ನಿಮ್ಮ ಸಮೀಪದಲ್ಲಿ ಬಿಜೆಪಿ ನಾಯಕರು ವಾಹನದಲ್ಲಿ ತೆರಳುತ್ತಿದ್ದರೆ ವಿಡಿಯೋ ಮಾಡಿಕೊಳ್ಳಿ. ಯಾವಾಗ, ಯಾರ ಮೇಲೆ ಕಾರು ಹತ್ತಿಸಿ ಕೊಲ್ಲುತ್ತಾರೆ ತಿಳಿಯುವುದಿಲ್ಲ. ಹೀಗಿದ್ದಾಗ, ನಿಮ್ಮ ವಿಡಿಯೋ ಮುಂದೆ ಮಹತ್ವದ ಸಾಕ್ಷ್ಯವಾಗಿರಲಿದೆ. ಇದು ದೇಶಕ್ಕೆ ನೀವು ನೀಡುವ ಉತ್ತಮ ಕೊಡುಗೆಯಾಗಿರಲಿದೆ ಎಂದಿದ್ದಾರೆ.

ಬಿಜೆಪಿ ನಾಯಕರು ತೆರಳುವಾಗ ಸಾರ್ವಜನಿಕರು ಜಾಗೃತರಾಗಿರಬೇಕು ಎಂದಿರುವ ಅವರು, ಯಾರ ಮೇಲೆ, ಯಾವತ್ತು, ಎಷ್ಟು ಗಂಟೆಗೆ ವಾಹನ ಚಲಾಯಿಸಿ ಸಾಯಿಸುತ್ತಾರೆ ಎನ್ನುವುದು ತಿಳಿಯುವುದಿಲ್ಲ. ಇತ್ತೀಚಿನ ದಿನಗಳಲ್ಲಿ ತಾವು ಎಲ್ಲವನ್ನು ಗಮನಿಸುತ್ತಿದ್ದೀರಿ. ಇಂತಹ ಸಂದರ್ಭಗಳು ಎದುರಾದ ವೇಳೆ ವಿಡಿಯೋ ಚಿತ್ರಿಸಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ.

ಉತ್ತರಪ್ರದೇಶ ಘಟನೆಯನ್ನು ದೇಶಾದ್ಯಂತ ಖಂಡಿಸುತ್ತಿರುವ ಕಾಂಗ್ರೆಸ್ ನಾಯಕರು ನಿರಂತರವಾಗಿ ಬಿಜೆಪಿ ಸರ್ಕಾರದ ಇದು ತೀವ್ರ ವಾಗ್ದಾಳಿ ನಡೆಸುತ್ತಿದ್ದಾರೆ.

ಬೆಂಗಳೂರು: ಬಿಜೆಪಿ ನಾಯಕರ ಕಾರು ನಿಮ್ಮ ಪಕ್ಕದಲ್ಲಿ ಹೋಗುವಾಗ ನಿಮ್ಮ ಫೋನ್ ಕ್ಯಾಮರಾದಿಂದ ರೆಕಾರ್ಡ್ ಮಾಡಿಕೊಳ್ಳಿ ಎಂದು ಸಾರ್ವಜನಿಕರಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮನವಿ ಮಾಡಿಕೊಂಡಿದ್ದಾರೆ.

ತುಳಸಿ ಪೂಜೆ ವಿಶೇಷ ವಿಡಿಯೋ ಬಿಡುಗಡೆ ಮಾಡಿರುವ ಅವರು ಲಖೀಮ್​ಪುರ ಹಿಂಸಾಚಾರದಲ್ಲಿ ರೈತರು ಮೃತಪಟ್ಟ ಘಟನೆಯನ್ನು ಉದ್ದೇಶವಾಗಿಟ್ಟುಕೊಂಡು ಮಾತನಾಡಿರುವ ಶಿವಕುಮಾರ್, ನಿಮ್ಮ ಸಮೀಪದಲ್ಲಿ ಬಿಜೆಪಿ ನಾಯಕರು ವಾಹನದಲ್ಲಿ ತೆರಳುತ್ತಿದ್ದರೆ ವಿಡಿಯೋ ಮಾಡಿಕೊಳ್ಳಿ. ಯಾವಾಗ, ಯಾರ ಮೇಲೆ ಕಾರು ಹತ್ತಿಸಿ ಕೊಲ್ಲುತ್ತಾರೆ ತಿಳಿಯುವುದಿಲ್ಲ. ಹೀಗಿದ್ದಾಗ, ನಿಮ್ಮ ವಿಡಿಯೋ ಮುಂದೆ ಮಹತ್ವದ ಸಾಕ್ಷ್ಯವಾಗಿರಲಿದೆ. ಇದು ದೇಶಕ್ಕೆ ನೀವು ನೀಡುವ ಉತ್ತಮ ಕೊಡುಗೆಯಾಗಿರಲಿದೆ ಎಂದಿದ್ದಾರೆ.

ಬಿಜೆಪಿ ನಾಯಕರು ತೆರಳುವಾಗ ಸಾರ್ವಜನಿಕರು ಜಾಗೃತರಾಗಿರಬೇಕು ಎಂದಿರುವ ಅವರು, ಯಾರ ಮೇಲೆ, ಯಾವತ್ತು, ಎಷ್ಟು ಗಂಟೆಗೆ ವಾಹನ ಚಲಾಯಿಸಿ ಸಾಯಿಸುತ್ತಾರೆ ಎನ್ನುವುದು ತಿಳಿಯುವುದಿಲ್ಲ. ಇತ್ತೀಚಿನ ದಿನಗಳಲ್ಲಿ ತಾವು ಎಲ್ಲವನ್ನು ಗಮನಿಸುತ್ತಿದ್ದೀರಿ. ಇಂತಹ ಸಂದರ್ಭಗಳು ಎದುರಾದ ವೇಳೆ ವಿಡಿಯೋ ಚಿತ್ರಿಸಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ.

ಉತ್ತರಪ್ರದೇಶ ಘಟನೆಯನ್ನು ದೇಶಾದ್ಯಂತ ಖಂಡಿಸುತ್ತಿರುವ ಕಾಂಗ್ರೆಸ್ ನಾಯಕರು ನಿರಂತರವಾಗಿ ಬಿಜೆಪಿ ಸರ್ಕಾರದ ಇದು ತೀವ್ರ ವಾಗ್ದಾಳಿ ನಡೆಸುತ್ತಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.