ETV Bharat / city

ಡಿ ದರ್ಜೆ ಸಿಬ್ಬಂದಿ ಮೂಲಕ ನೂತನ ಕಟ್ಟಡ ಉದ್ಘಾಟನೆ: ಹೊಸ ಅಧ್ಯಾಯ ಬರೆದ ರಾಜ್ಯ ನ್ಯಾಯಾಂಗ - ದೊಡ್ಡಬಳ್ಳಾಪುರ ನೂತನ ನ್ಯಾಯಾಲಯ ಸಂಕೀರ್ಣ ಉದ್ಘಾಟನೆ ಸುದ್ದಿ

ನಗರದ ರೋಜಿಪುರದಲ್ಲಿ ನಿರ್ಮಾಣವಾಗಿರುವ ನೂತನ ಹೈಕೋರ್ಟ್​ ಸಂಕೀರ್ಣವನ್ನು ರಾಜ್ಯ ಹೈಕೋರ್ಟ್​ನ ಮುಖ್ಯ ನ್ಯಾಯಮೂರ್ತಿಗಳ ಜೊತೆ ಡಿ ದರ್ಜೆ ಸಿಬ್ಬಂದಿ ಜಯಂತಿ ಕುಮಾರಿ ಉದ್ಘಾಟಿಸುವ ಮೂಲಕ ರಾಜ್ಯ ನ್ಯಾಯಾಂಗ ಹಿಂದೆಂದೂ ನಡೆಯದ ಅಪರೂಪದ ಘಟನೆಗೆ ಸಾಕ್ಷಿಯಾಗಿದ್ದಾರೆ.

ಡಿ. ದರ್ಜೆ ಸಿಬ್ಬಂದಿ ಮೂಲಕ ನೂತನ ಕಟ್ಟಡ ಉದ್ಘಾಟಿಸಿ ಹೊಸ ಅಧ್ಯಾಯ ಬರೆದ ರಾಜ್ಯ ನ್ಯಾಯಾಂಗ
author img

By

Published : Nov 23, 2019, 8:58 AM IST

Updated : Nov 23, 2019, 5:40 PM IST

ದೊಡ್ಡಬಳ್ಳಾಪುರ : ನ್ಯಾಯಾಂಗ ಇತಿಹಾಸದಲ್ಲೇ ಪ್ರಥಮ ಬಾರಿಗೆ ಡಿ ದರ್ಜೆ ನೌಕರರೊಬ್ಬರು ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳ ಜೊತೆ ನಿಂತು ನೂತನ ನ್ಯಾಯಾಲಯ ಕಟ್ಟಡವನ್ನು ಉದ್ಘಾಟಿಸಿದ್ದು ಎಲ್ಲರ ಹುಬ್ಬೆರುವಂತೆ ಮಾಡಿದೆ.

ನಗರದ ರೊಜಿಪುರದಲ್ಲಿ ಸುಮಾರು 14 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗಿರುವ ನೂತನ ನ್ಯಾಯಾಲಯ ಸಂಕಿರ್ಣ ಉದ್ಘಾಟನ ಸಮಾರಂಭ ಶುಕ್ರವಾರ ಸಂಜೆ ನೆರೆವೇರಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯದ ಹಿರಿಯ ಡಿ. ದರ್ಜೆ ಸಿಬ್ಬಂದಿ ಜಯಂತಿ ಕುಮಾರಿ, ರಾಜ್ಯ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳಾದ ಅಭಯ್‌ ಶ್ರೀನಿವಾಸ್‌ ಓಕ್ ಜೊತೆ ನ್ಯಾಯಾಲಯದ ಮುಖ್ಯದ್ವಾರವನ್ನು ಉದ್ಘಾಟಿಸುವ ಮೂಲಕ ಕರ್ನಾಟಕ ನ್ಯಾಯಾಂಗದಲ್ಲಿ ಹೊಸ ಅಧ್ಯಾಯಕ್ಕೆ ಮುನ್ನುಡಿ ಬರೆದಿದ್ದಾರೆ.

ಡಿ. ದರ್ಜೆ ಸಿಬ್ಬಂದಿ ಮೂಲಕ ನೂತನ ಕಟ್ಟಡ ಉದ್ಘಾಟಿಸಿ ಹೊಸ ಅಧ್ಯಾಯ ಬರೆದ ರಾಜ್ಯ ನ್ಯಾಯಾಂಗ

ಕಳೆದ ಮೂವತ್ತು ವರ್ಷಗಳಿಂದ ಅಟೆಂಡರ್​ ಆಗಿ ಕೆಲಸ ಮಾಡುತ್ತಿರುವ ಜಯಂತಿ ಕುಮಾರಿ ಮುಂದಿನ ವರ್ಷ ನಿವೃತ್ತಿಯಾಗಲಿದ್ದು, ಇವರಿಗೆ ಹೈಕೋರ್ಟ್​ ಮುಖ್ಯ ನ್ಯಾಯಮೂರ್ತಿಗಳ ಜೊತೆ ಕಟ್ಟಡ ಉದ್ಘಾಟಿಸುವ ಭಾಗ್ಯ ಸಿಗುತ್ತೆ ಅನ್ನು ಕನಸೇ ಇರಲಿಲ್ಲವಂತೆ. ಸ್ವತಃ ಮುಖ್ಯ ನ್ಯಾಯಮೂರ್ತಿಗಳೇ ಆಹ್ವಾನಿಸಿ, ಅಭಯ ನೀಡಿ ನನ್ನ ಕೈಯಲ್ಲಿ ಉದ್ಘಾಟನೆ ಮಾಡಿಸಿದ್ರು ಅಂತಾರೆ ಜಯಂತಿ ಕುಮಾರಿಯವರು.

ನೂತನವಾಗಿ ನಿರ್ಮಿತವಾದ ನ್ಯಾಯಾಲಯದಲ್ಲಿ, 4 ನ್ಯಾಯಾಲಯವು ಸೇರಿದಂತೆ ಇನ್ನು 2 ಹೆಚ್ಚುವರಿ ನ್ಯಾಯಾಲಯಗಳು ಆರಂಭವಾಗಲಿದೆ. ವಕೀಲರಿಗೆ ಪ್ರತ್ಯೇಕ ಗ್ರಂಥಾಲಯ, ವಕೀಲರು ವಿಶ್ರಾಂತಿ ಗೃಹ, ಹೈಟೆಕ್ ಶೌಚಾಲಯ ಸೇರಿದಂತೆ ಹಲವು ಸೌಲಭ್ಯಗಳು ನೂತನ ನ್ಯಾಯಾಲಯ ಕಟ್ಟಡದಲ್ಲಿದೆ.

ದೊಡ್ಡಬಳ್ಳಾಪುರ : ನ್ಯಾಯಾಂಗ ಇತಿಹಾಸದಲ್ಲೇ ಪ್ರಥಮ ಬಾರಿಗೆ ಡಿ ದರ್ಜೆ ನೌಕರರೊಬ್ಬರು ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳ ಜೊತೆ ನಿಂತು ನೂತನ ನ್ಯಾಯಾಲಯ ಕಟ್ಟಡವನ್ನು ಉದ್ಘಾಟಿಸಿದ್ದು ಎಲ್ಲರ ಹುಬ್ಬೆರುವಂತೆ ಮಾಡಿದೆ.

ನಗರದ ರೊಜಿಪುರದಲ್ಲಿ ಸುಮಾರು 14 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗಿರುವ ನೂತನ ನ್ಯಾಯಾಲಯ ಸಂಕಿರ್ಣ ಉದ್ಘಾಟನ ಸಮಾರಂಭ ಶುಕ್ರವಾರ ಸಂಜೆ ನೆರೆವೇರಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯದ ಹಿರಿಯ ಡಿ. ದರ್ಜೆ ಸಿಬ್ಬಂದಿ ಜಯಂತಿ ಕುಮಾರಿ, ರಾಜ್ಯ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳಾದ ಅಭಯ್‌ ಶ್ರೀನಿವಾಸ್‌ ಓಕ್ ಜೊತೆ ನ್ಯಾಯಾಲಯದ ಮುಖ್ಯದ್ವಾರವನ್ನು ಉದ್ಘಾಟಿಸುವ ಮೂಲಕ ಕರ್ನಾಟಕ ನ್ಯಾಯಾಂಗದಲ್ಲಿ ಹೊಸ ಅಧ್ಯಾಯಕ್ಕೆ ಮುನ್ನುಡಿ ಬರೆದಿದ್ದಾರೆ.

ಡಿ. ದರ್ಜೆ ಸಿಬ್ಬಂದಿ ಮೂಲಕ ನೂತನ ಕಟ್ಟಡ ಉದ್ಘಾಟಿಸಿ ಹೊಸ ಅಧ್ಯಾಯ ಬರೆದ ರಾಜ್ಯ ನ್ಯಾಯಾಂಗ

ಕಳೆದ ಮೂವತ್ತು ವರ್ಷಗಳಿಂದ ಅಟೆಂಡರ್​ ಆಗಿ ಕೆಲಸ ಮಾಡುತ್ತಿರುವ ಜಯಂತಿ ಕುಮಾರಿ ಮುಂದಿನ ವರ್ಷ ನಿವೃತ್ತಿಯಾಗಲಿದ್ದು, ಇವರಿಗೆ ಹೈಕೋರ್ಟ್​ ಮುಖ್ಯ ನ್ಯಾಯಮೂರ್ತಿಗಳ ಜೊತೆ ಕಟ್ಟಡ ಉದ್ಘಾಟಿಸುವ ಭಾಗ್ಯ ಸಿಗುತ್ತೆ ಅನ್ನು ಕನಸೇ ಇರಲಿಲ್ಲವಂತೆ. ಸ್ವತಃ ಮುಖ್ಯ ನ್ಯಾಯಮೂರ್ತಿಗಳೇ ಆಹ್ವಾನಿಸಿ, ಅಭಯ ನೀಡಿ ನನ್ನ ಕೈಯಲ್ಲಿ ಉದ್ಘಾಟನೆ ಮಾಡಿಸಿದ್ರು ಅಂತಾರೆ ಜಯಂತಿ ಕುಮಾರಿಯವರು.

ನೂತನವಾಗಿ ನಿರ್ಮಿತವಾದ ನ್ಯಾಯಾಲಯದಲ್ಲಿ, 4 ನ್ಯಾಯಾಲಯವು ಸೇರಿದಂತೆ ಇನ್ನು 2 ಹೆಚ್ಚುವರಿ ನ್ಯಾಯಾಲಯಗಳು ಆರಂಭವಾಗಲಿದೆ. ವಕೀಲರಿಗೆ ಪ್ರತ್ಯೇಕ ಗ್ರಂಥಾಲಯ, ವಕೀಲರು ವಿಶ್ರಾಂತಿ ಗೃಹ, ಹೈಟೆಕ್ ಶೌಚಾಲಯ ಸೇರಿದಂತೆ ಹಲವು ಸೌಲಭ್ಯಗಳು ನೂತನ ನ್ಯಾಯಾಲಯ ಕಟ್ಟಡದಲ್ಲಿದೆ.

Intro:ಕರ್ನಾಟಕ ನ್ಯಾಯಾಂಗ ಇತಿಹಾಸದಲ್ಲೇ ಪ್ರಥಮ

ಡಿ.ದರ್ಜೆ ಸಿಬ್ಬಂದಿಯಿಂದ ನೂತನ ನ್ಯಾಯಾಲಯ ಕಟ್ಟಡ ಉದ್ಘಾಟನೆ
Body:ದೊಡ್ಡಬಳ್ಳಾಪುರ : ನ್ಯಾಯಾಂಗ ಇತಿಹಾಸದಲ್ಲೇ ಪ್ರಥಮ ಬಾರಿಗೆ ಡಿ.ದರ್ಜೆ ನೌಕರರೊಬ್ಬರು ಹೈಕೋರ್ಟ್‌ನ ಮುಖ್ಯನಾಯಮೂರ್ತಿಗಳ ಜೊತೆ ನಿಂತು
ನೂತನ ನ್ಯಾಯಾಲಯ ಕಟ್ಟಡವನ್ನು ಉದ್ಘಾಟಿಸಿದರು

ದೊಡ್ಡಬಳ್ಳಾಪುರ ನಗರದ ರೊಜಿಪುರದಲ್ಲಿ ಸುಮಾರು 14 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ನೂತನ ನ್ಯಾಯಾಲಯ ಸಂಕಿರ್ಣ ಉದ್ಘಾಟನ ಸಮಾರಂಭ ಶುಕ್ರವಾರ ಸಂಜೆ ನೆರೆವೇರಿತು. ಉದ್ಘಾಟನಾ ಸಮಾರಂಭದ ಪ್ರಮುಖ ಆಕರ್ಷಣೆ ಮತ್ತು ರಾಜ್ಯ ನ್ಯಾಯಾಂಗ ವ್ಯವಸ್ಥೆಯಲ್ಲೇ ಷ್ರಥಮ ಅನ್ನು ಘಟನೆಗೆ ಸಾಕ್ಷಿಯಾಗಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯದ ಹಿರಿಯ ಡಿ ದರ್ಜೆ ಸಿಬ್ಬಂದಿ ಜಯಂತಿ ಕುಮಾರಿ ಎಂಬುವರು ಉದ್ಘಾಟಿಸಿದ್ದು. ರಾಜ್ಯ ಹೈಕೋರ್ಟ್‌ನ ಮುಖ್ಯ ನಾಯಮೂರ್ತಿಗಳಾದ ಅಭಯ್‌ ಶ್ರೀನಿವಾಸ್‌ ಓಕ್ ರವರ ಜೊತೆ ನಿಂತ ಜಯಂತಿ ಕುಮಾರಿ ನ್ಯಾಯಾಲಯದ ಮುಖ್ಯದ್ವಾರವನ್ನು ಉದ್ಘಾಟಿಸುವ ಮೂಲಕ ಕರ್ನಾಟಕ ನ್ಯಾಯಾಂಗದಲ್ಲಿ ಹೊಸ ಇತಿಹಾಸ ಬರೆದರು. ಅಂದಹಾಗೇ ಉದ್ಘಾಟನೆಯಾದ ನ್ಯಾಯಾಲಯದಲ್ಲಿ ಈಗ ಕಾರ್ಯನಿರ್ವಹಿಸುತ್ತಿರುವ 4 ನ್ಯಾಯಾಲಯವು ಸೇರಿದಂತೆ ಇನ್ನು 2 ಹೆಚ್ಚುವರಿ ನ್ಯಾಯಾಲಯಗಳು ಆರಂಭವಾಗಲಿದೆ. ವಕೀಲರಿಗೆ ಪ್ರತ್ಯೇಕ ಗ್ರಂಥಾಲಯ, ವಕೀಲರು ನ್ಯಾಯಾಲಯದ ವಿಶ್ರಾಂತಿ ಪಡೆಯಲು ಪ್ರತ್ಯೇಕ ಹಾಲ್‌, ಹೈಟೆಕ್ ಶೌಚಾಲಯ ಸೇರಿದಂತೆ ಹಲವು ಸೌಲಭ್ಯಗಳು ನೂತನ ನ್ಯಾಯಲಯ ಕಟ್ಟಡದಲ್ಲಿದೆ.

01a-ಬೈಟ್ : ವಿ.ಶ್ರೀಶಾನಂದ, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅನೇಕಲ್ ಜಿಲ್ಲಾ ಕೋರ್ಟ್ ನಲ್ಲಿ ಕಳೆದ ಮೂವತ್ತು ವರ್ಷಗಳಿಂದ ಅಟೆಂಡರ್ ಆಗಿ ಕೆಲಸ ಮಾಡುತ್ತಿರುವ ಜಯಂತಿ ಕುಮಾರಿ ನೂತನ ನ್ಯಾಯಾಲಯ ಕಟ್ಟಡ ಉದ್ಘಾಟಿಸಿದ್ದಾರೆ. ಈ ಮೂಲಕ ಕರ್ನಾಟಕ ನ್ಯಾಯಾಂಗದಲ್ಲಿ ಹೊಸದೊಂದು ಇತಿಹಾಸಕ್ಕೆ ಸಾಕ್ಷಿಯಾದ್ರು. ಮುಂದಿನ ವರ್ಷ ನಿವೃತ್ತರಾಗುವ ಜಯಂತಿ ಕುಮಾರಿಯವರಿಗೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಜೊತೆ ಕಟ್ಟಡ ಉದ್ಘಾಟಿಸುವ ಭಾಗ್ಯ ಸಿಗುತ್ತೆ ಅನ್ನುವ ಕನಸೇ ಕಂಡಿರಲಿಲ್ಲ. ನೂತನ ಕಟ್ಟಡ ಉದ್ಘಾಟಿಸಲು ಸ್ವತಂಹ ಮುಖ್ಯ ನ್ಯಾಯಮೂರ್ತಿಗಳು ಅಹ್ವಾನಿಸಿದ್ದು ಭಯವನ್ನುಂಟು ಮಾಡಿದಂತೆ. ಕೊನೆಗೆ ನ್ಯಾಯಮೂರ್ತಿಗಳು ಧೈರ್ಯ ತುಂಬಿದ ಮೇಲೆ ಬಹಳ ಖುಷಿಯಿಂದ ಉದ್ಘಾಟನೆ ನೆರೆವೆರಿಸಿದರು.

01b-ಬೈಟ್ : ಜಯಂತಿ ಕುಮಾರಿ, ಡಿ, ದರ್ಜೆ ಸಿಬ್ಬಂದಿ.

ನ್ಯಾಯಾದೇವತೆಯ ದೃಷ್ಠಿಯಲ್ಲಿ ಯಾರು ಮೇಲಾಲ್ಲ ಕೀಳಲ್ಲ. ಸಮಾಜದಲ್ಲಿ ಪ್ರತಿಯೊಬ್ಬರು ಸಮಾನರು ಎಂಬ ಸಂದೇಶ ಸಾರುವ ಕಾರಣಕ್ಕೆ ಹೈಕೋರ್ಟ್‌ನ ಮುಖ್ಯ ನಾಯಮೂರ್ತಿಗಳಾದ ಅಭಯ್‌ ಶ್ರೀನಿವಾಸ್‌ ಓಕ್ ರವರ ಇಚ್ಚೆಯಂತೆ ನೂತನ ಕಟ್ಟಡ ಉದ್ಘಾಟನೆಯನ್ನ ಡಿ.ದರ್ಜೆ ಸಿಬ್ಬಂದಿಯಿಂದ ಮಾಡಲಾಗಿದೆ.

Conclusion:
Last Updated : Nov 23, 2019, 5:40 PM IST

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.