ETV Bharat / city

ಎಲ್ಲ ನ್ಯಾಯಾಲಯಗಳಲ್ಲಿ ಅಂಬೇಡ್ಕರ್ ಫೋಟೋ ಅಳವಡಿಸುವಂತೆ ಹೈಕೋರ್ಟ್​ಗೆ ಅರ್ಜಿ

author img

By

Published : Feb 3, 2022, 1:15 AM IST

ಹೈಕೋರ್ಟ್‌ ಸೇರಿದಂತೆ ರಾಜ್ಯದ ಎಲ್ಲ ನ್ಯಾಯಾಲಯಗಳಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ ಅವರ ಭಾವಚಿತ್ರ ಅಳವಡಿಸಲು ರಿಜಿಸ್ಟ್ರಾರ್ ಜನರಲ್‌ ಅವರಿಗೆ ನಿರ್ದೇಶಿಸಬೇಕು ಎಂದು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಲಾಗಿದೆ.

ಅಂಬೇಡ್ಕರ್ ಫೋಟೋ
ಅಂಬೇಡ್ಕರ್ ಫೋಟೋ

ಬೆಂಗಳೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ ಅವರ ಭಾವಚಿತ್ರವನ್ನು ಹೈಕೋರ್ಟ್‌ ಸೇರಿದಂತೆ ರಾಜ್ಯದ ಎಲ್ಲ ನ್ಯಾಯಾಲಯಗಳಲ್ಲಿ ಅಳವಡಿಸಲು ಹೈಕೋರ್ಟ್‌ ರಿಜಿಸ್ಟ್ರಾರ್ ಜನರಲ್‌ ಅವರಿಗೆ ನಿರ್ದೇಶಿಸಬೇಕು ಎಂದು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ.

ಈ ಕುರಿತು ಬೆಂಗಳೂರಿನ ಜೆ. ಜಗನ್‌ ಕುಮಾರ್, ವಿ. ಪರಮೇಶ್ ಎಂಬುವರು ಹೈಕೋರ್ಟ್​ಗೆ ರಿಟ್‌ ಅರ್ಜಿ ಸಲ್ಲಿಸಿದ್ದು, ಇನ್ನಷ್ಟೇ ವಿಚಾರಣೆಗೆ ನಿಗದಿಯಾಗಬೇಕಿದೆ.
ಅರ್ಜಿದಾರರ ಕೋರಿಕೆ: ದೇಶದ ಮಹಾನ್ ವ್ಯಕ್ತಿಗಳಲ್ಲಿ ಅಂಬೇಡ್ಕರ್‌ ಕೂಡ ಒಬ್ಬರು. ಸಂವಿಧಾನ ರಚನಾ ಕರಡು ಸಮಿತಿ ಅಧ್ಯಕ್ಷರಾಗಿದ್ದವರು. ಸ್ವತಂತ್ರ ಭಾರತದ ಪ್ರಥಮ ಕೇಂದ್ರ ಕಾನೂನು ಸಚಿವರು. 1920ರಿಂದಲೂ ಸಂವಿಧಾನ ರಚನೆಯಲ್ಲಿ ಅವರು ನಿರ್ವಹಿಸುತ್ತಾ ಬಂದ ಪಾತ್ರ ಮಹತ್ತರವಾದದ್ದು. ಅವರ ಸಂಘಟನೆ ಮತ್ತು ನಾಯಕತ್ವದ ಕೌಶಲ್ಯಕ್ಕೆ ಸಾಟಿಯಿಲ್ಲ. 1990ರಲ್ಲಿ ಅವರಿಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಆದರೆ ಗಾಂಧೀಜಿ ಅವರಿಗೆ ದೊರೆತ ಪ್ರಾಧಾನ್ಯತೆ ಅಂಬೇಡ್ಕರ್‌ ಅವರಿಗೆ ಲಭಿಸಿಲ್ಲ.

ಸಂವಿಧಾನ ರಚಿಸಿದ ಅಂಬೇಡ್ಕರರ ಭಾವಚಿತ್ರ ಯಾವುದೇ ಕೋರ್ಟ್‌ ಹಾಲ್‌ನಲ್ಲಿ ಕಾಣಿಸದಿರುವುದು ದುರಾದೃಷ್ಟಕರ. ಈ ನಿಟ್ಟಿನಲ್ಲಿ ಅವರ ಭಾವಚಿತ್ರವನ್ನು ರಾಜ್ಯದ ಎಲ್ಲ ಕೋರ್ಟ್‌ ಹಾಲ್‌ಗಳಲ್ಲಿ ಹಾಕುವಂತೆ 2019ರ ಡಿಸೆಂಬರ್ 27ರಂದು ರಿಜಿಸ್ಟ್ರಾರ್‌ ಜನರಲ್‌ ಅವರಿಗೆ ಪತ್ರ ಬರೆದಿದ್ದೆವು. ಆದರೆ, ಈವರೆಗೆ ಪತ್ರಕ್ಕೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಆದ್ದರಿಂದ, ಈ ವಿಚಾರವಾಗಿ ರಿಜಿಸ್ಟ್ರಾರ್‌ ಜನರಲ್‌ ಅವರಿಗೆ ಸೂಕ್ತ ನಿರ್ದೇಶನ ನೀಡಬೇಕು ಹಾಗೂ ಅಂಬೇಡ್ಕರರ ಭಾವಚಿತ್ರವನ್ನು ರಾಜ್ಯದ ಎಲ್ಲ ನ್ಯಾಯಾಲಯಗಳಲ್ಲಿ ಅಳವಡಿಸಲು ಆದೇಶಿಸಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ಬೆಂಗಳೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ ಅವರ ಭಾವಚಿತ್ರವನ್ನು ಹೈಕೋರ್ಟ್‌ ಸೇರಿದಂತೆ ರಾಜ್ಯದ ಎಲ್ಲ ನ್ಯಾಯಾಲಯಗಳಲ್ಲಿ ಅಳವಡಿಸಲು ಹೈಕೋರ್ಟ್‌ ರಿಜಿಸ್ಟ್ರಾರ್ ಜನರಲ್‌ ಅವರಿಗೆ ನಿರ್ದೇಶಿಸಬೇಕು ಎಂದು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ.

ಈ ಕುರಿತು ಬೆಂಗಳೂರಿನ ಜೆ. ಜಗನ್‌ ಕುಮಾರ್, ವಿ. ಪರಮೇಶ್ ಎಂಬುವರು ಹೈಕೋರ್ಟ್​ಗೆ ರಿಟ್‌ ಅರ್ಜಿ ಸಲ್ಲಿಸಿದ್ದು, ಇನ್ನಷ್ಟೇ ವಿಚಾರಣೆಗೆ ನಿಗದಿಯಾಗಬೇಕಿದೆ.
ಅರ್ಜಿದಾರರ ಕೋರಿಕೆ: ದೇಶದ ಮಹಾನ್ ವ್ಯಕ್ತಿಗಳಲ್ಲಿ ಅಂಬೇಡ್ಕರ್‌ ಕೂಡ ಒಬ್ಬರು. ಸಂವಿಧಾನ ರಚನಾ ಕರಡು ಸಮಿತಿ ಅಧ್ಯಕ್ಷರಾಗಿದ್ದವರು. ಸ್ವತಂತ್ರ ಭಾರತದ ಪ್ರಥಮ ಕೇಂದ್ರ ಕಾನೂನು ಸಚಿವರು. 1920ರಿಂದಲೂ ಸಂವಿಧಾನ ರಚನೆಯಲ್ಲಿ ಅವರು ನಿರ್ವಹಿಸುತ್ತಾ ಬಂದ ಪಾತ್ರ ಮಹತ್ತರವಾದದ್ದು. ಅವರ ಸಂಘಟನೆ ಮತ್ತು ನಾಯಕತ್ವದ ಕೌಶಲ್ಯಕ್ಕೆ ಸಾಟಿಯಿಲ್ಲ. 1990ರಲ್ಲಿ ಅವರಿಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಆದರೆ ಗಾಂಧೀಜಿ ಅವರಿಗೆ ದೊರೆತ ಪ್ರಾಧಾನ್ಯತೆ ಅಂಬೇಡ್ಕರ್‌ ಅವರಿಗೆ ಲಭಿಸಿಲ್ಲ.

ಸಂವಿಧಾನ ರಚಿಸಿದ ಅಂಬೇಡ್ಕರರ ಭಾವಚಿತ್ರ ಯಾವುದೇ ಕೋರ್ಟ್‌ ಹಾಲ್‌ನಲ್ಲಿ ಕಾಣಿಸದಿರುವುದು ದುರಾದೃಷ್ಟಕರ. ಈ ನಿಟ್ಟಿನಲ್ಲಿ ಅವರ ಭಾವಚಿತ್ರವನ್ನು ರಾಜ್ಯದ ಎಲ್ಲ ಕೋರ್ಟ್‌ ಹಾಲ್‌ಗಳಲ್ಲಿ ಹಾಕುವಂತೆ 2019ರ ಡಿಸೆಂಬರ್ 27ರಂದು ರಿಜಿಸ್ಟ್ರಾರ್‌ ಜನರಲ್‌ ಅವರಿಗೆ ಪತ್ರ ಬರೆದಿದ್ದೆವು. ಆದರೆ, ಈವರೆಗೆ ಪತ್ರಕ್ಕೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಆದ್ದರಿಂದ, ಈ ವಿಚಾರವಾಗಿ ರಿಜಿಸ್ಟ್ರಾರ್‌ ಜನರಲ್‌ ಅವರಿಗೆ ಸೂಕ್ತ ನಿರ್ದೇಶನ ನೀಡಬೇಕು ಹಾಗೂ ಅಂಬೇಡ್ಕರರ ಭಾವಚಿತ್ರವನ್ನು ರಾಜ್ಯದ ಎಲ್ಲ ನ್ಯಾಯಾಲಯಗಳಲ್ಲಿ ಅಳವಡಿಸಲು ಆದೇಶಿಸಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.