ETV Bharat / city

ರಾಜ್ಯಕ್ಕೆ ಕೋವಿಡ್, ನೆರೆ ಸಂಕಷ್ಟ: ಹುಟ್ಟುಹಬ್ಬ ಆಚರಣೆಯಿಂದ ದೂರ ಉಳಿದ ಹೆಚ್.ಡಿ.ಕುಮಾರಸ್ವಾಮಿ

author img

By

Published : Dec 16, 2021, 10:01 AM IST

ಕೋವಿಡ್​​ ಸಂಕಷ್ಟ ಜನರನ್ನು ಬಾಧಿಸುತ್ತಿರುವ ಈ ಹೊತ್ತಿನಲ್ಲಿ ಜನ್ಮದಿನ ಆಚರಿಸದಿರಲು ನಿರ್ಧರಿಸಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ಧಾರೆ.

Hd Kumaraswamy
ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಕೋವಿಡ್ ಮತ್ತು ನೆರೆ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಈ ವರ್ಷ ಜನ್ಮದಿನ ಆಚರಿಸಿಕೊಳ್ಳದಿರಲು ನಿರ್ಧರಿಸಿದ್ದಾರೆ. ಕೋವಿಡ್ ಹಿನ್ನೆಲೆಯಲ್ಲಿ ಜನರು ಸಂಕಷ್ಟಕ್ಕೆ ಸಿಲುಕಿದ್ದು, ಜತೆಗೆ ಮಳೆ-ನೆರೆ ವಿಕೋಪಗಳಿಂದ ತತ್ತರಿಸಿದ್ದಾರೆ. ಹೀಗಾಗಿ ವಿಜೃಂಭಣೆಯಿಂದ ನನ್ನ ಹುಟ್ಟುಹಬ್ಬ ಮಾಡುವುದು ಬೇಡ ಎಂದು ಅವರು ಮನವಿ ಮಾಡಿದ್ದಾರೆ.

  • ನನ್ನ ಪಕ್ಷದ ಎಲ್ಲ ಕಾರ್ಯಕರ್ತರು, ಮುಖಂಡರು, ಹಿತೈಷಿಗಳಲ್ಲಿ ನನ್ನದೊಂದು ಕಳಕಳಿಯ ಮನವಿ. 1/4 pic.twitter.com/aqxpRwB3qX

    — H D Kumaraswamy (@hd_kumaraswamy) December 14, 2021 " class="align-text-top noRightClick twitterSection" data=" ">

ಕೋವಿಡ್ ಕಾರಣಕ್ಕೆ ನಾವೆಲ್ಲರೂ ಸಂಕಷ್ಟದಲ್ಲಿದ್ದೇವೆ. ಅಪಾರ ಸಾವು-ನೋವು ಕಂಡಿದ್ದೇವೆ. ಮಳೆ-ನೆರೆ ವಿಕೋಪಗಳಿಂದ ತತ್ತರಿಸಿದ್ದೇವೆ. ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದಾರೆ. ಈ ಕಷ್ಟದಲ್ಲಿ ಅದ್ಧೂರಿ ಜನ್ಮದಿನ ಆಚರಣೆ ನನ್ನ ಮನಸ್ಸಿಗೆ ಒಪ್ಪುವುದಿಲ್ಲ ಎಂದಿದ್ದಾರೆ.

  • ಈ ಕಷ್ಟದ ಸಮಯದಲ್ಲಿ ಅದ್ಧೂರಿ ಜನ್ಮದಿನ ಆಚರಣೆ ನನ್ನ ಮನಸ್ಸಿಗೆ ಒಪ್ಪುವ ವಿಚಾರವಲ್ಲ. ಹಾರ ತುರಾಯಿ ಹಾಕಿ, ಕೇಕ್‌ ಕತ್ತರಿಸಿ ವಿಜೃಂಭಣೆ ಮಾಡುವುದು ಬೇಡ. ಅಭಿಮಾನಿಗಳು, ಕಾರ್ಯಕರ್ತರು ಹಣ ಖರ್ಚು ಮಾಡಿಕೊಂಡು ನನ್ನಲ್ಲಿಗೆ ಬರುವುದು ಬೇಡ. ನೀವಿದ್ದಲ್ಲಿಯೇ ಬಡವರಿಗೆ, ದೀನ ದಲಿತರಿಗೆ, ಮಳೆ-ನೆರೆಯಿಂದ ತತ್ತರಿಸಿದ ಜನರಿಗೆ ನೆರವಾಗಿ. 3/4

    — H D Kumaraswamy (@hd_kumaraswamy) December 14, 2021 " class="align-text-top noRightClick twitterSection" data=" ">

ಹಾರ-ತುರಾಯಿ ಹಾಕಿ, ಕೇಕ್ ಕತ್ತರಿಸಿ ಸಂಭ್ರಮಿಸುವುದು ಬೇಡ. ನಮ್ಮ ಪಕ್ಷದ ಎಲ್ಲ ಕಾರ್ಯಕರ್ತರು, ಮುಖಂಡರು, ಹಿತೈಷಿಗಳು, ಅಭಿಮಾನಿಗಳು, ಕಾರ್ಯಕರ್ತರು ಹಣ ಖರ್ಚು ಮಾಡಿಕೊಂಡು ನನ್ನಲ್ಲಿಗೆ ಬರುವುದು ಬೇಡ. ನೀವಿದ್ದಲ್ಲಿಯೇ ಬಡವರಿಗೆ, ದೀನ ದಲಿತರಿಗೆ, ಮಳೆ-ನೆರೆಯಿಂದ ತತ್ತರಿಸಿದ ಜನರಿಗೆ ನೆರವಾಗುವ ಮೂಲಕ ನನ್ನ ಜನ್ಮದಿನಕ್ಕೆ ಸಾರ್ಥಕತೆ ತನ್ನಿ ಎಂದು ಹೆಚ್​​ಡಿಕೆ ಮನವಿ ಮಾಡಿದ್ದಾರೆ.

ಶುಭ ಕೋರಿದ ಮುಖಂಡರು: ಇಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಜನ್ಮದಿನದ ಅಂಗವಾಗಿ ಪಕ್ಷದ ಮುಖಂಡರು, ಅಭಿಮಾನಿಗಳು ಶುಭ ಕೋರಿದ್ದಾರೆ.

ಇದನ್ನೂ ಓದಿ:ರಾಜ್ಯದಲ್ಲೇ ಮೊದಲ ಬಾರಿಗೆ ಕಪ್ಪು ಶಿಲೆಯಲ್ಲಿ ಅಪ್ಪು ಪುತ್ಥಳಿ ನಿರ್ಮಾಣ.. ದಾವಣಗೆರೆಯಲ್ಲಿ ಪ್ರತಿಮೆ ಅನಾವರಣ

ಬೆಂಗಳೂರು: ಕೋವಿಡ್ ಮತ್ತು ನೆರೆ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಈ ವರ್ಷ ಜನ್ಮದಿನ ಆಚರಿಸಿಕೊಳ್ಳದಿರಲು ನಿರ್ಧರಿಸಿದ್ದಾರೆ. ಕೋವಿಡ್ ಹಿನ್ನೆಲೆಯಲ್ಲಿ ಜನರು ಸಂಕಷ್ಟಕ್ಕೆ ಸಿಲುಕಿದ್ದು, ಜತೆಗೆ ಮಳೆ-ನೆರೆ ವಿಕೋಪಗಳಿಂದ ತತ್ತರಿಸಿದ್ದಾರೆ. ಹೀಗಾಗಿ ವಿಜೃಂಭಣೆಯಿಂದ ನನ್ನ ಹುಟ್ಟುಹಬ್ಬ ಮಾಡುವುದು ಬೇಡ ಎಂದು ಅವರು ಮನವಿ ಮಾಡಿದ್ದಾರೆ.

  • ನನ್ನ ಪಕ್ಷದ ಎಲ್ಲ ಕಾರ್ಯಕರ್ತರು, ಮುಖಂಡರು, ಹಿತೈಷಿಗಳಲ್ಲಿ ನನ್ನದೊಂದು ಕಳಕಳಿಯ ಮನವಿ. 1/4 pic.twitter.com/aqxpRwB3qX

    — H D Kumaraswamy (@hd_kumaraswamy) December 14, 2021 " class="align-text-top noRightClick twitterSection" data=" ">

ಕೋವಿಡ್ ಕಾರಣಕ್ಕೆ ನಾವೆಲ್ಲರೂ ಸಂಕಷ್ಟದಲ್ಲಿದ್ದೇವೆ. ಅಪಾರ ಸಾವು-ನೋವು ಕಂಡಿದ್ದೇವೆ. ಮಳೆ-ನೆರೆ ವಿಕೋಪಗಳಿಂದ ತತ್ತರಿಸಿದ್ದೇವೆ. ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದಾರೆ. ಈ ಕಷ್ಟದಲ್ಲಿ ಅದ್ಧೂರಿ ಜನ್ಮದಿನ ಆಚರಣೆ ನನ್ನ ಮನಸ್ಸಿಗೆ ಒಪ್ಪುವುದಿಲ್ಲ ಎಂದಿದ್ದಾರೆ.

  • ಈ ಕಷ್ಟದ ಸಮಯದಲ್ಲಿ ಅದ್ಧೂರಿ ಜನ್ಮದಿನ ಆಚರಣೆ ನನ್ನ ಮನಸ್ಸಿಗೆ ಒಪ್ಪುವ ವಿಚಾರವಲ್ಲ. ಹಾರ ತುರಾಯಿ ಹಾಕಿ, ಕೇಕ್‌ ಕತ್ತರಿಸಿ ವಿಜೃಂಭಣೆ ಮಾಡುವುದು ಬೇಡ. ಅಭಿಮಾನಿಗಳು, ಕಾರ್ಯಕರ್ತರು ಹಣ ಖರ್ಚು ಮಾಡಿಕೊಂಡು ನನ್ನಲ್ಲಿಗೆ ಬರುವುದು ಬೇಡ. ನೀವಿದ್ದಲ್ಲಿಯೇ ಬಡವರಿಗೆ, ದೀನ ದಲಿತರಿಗೆ, ಮಳೆ-ನೆರೆಯಿಂದ ತತ್ತರಿಸಿದ ಜನರಿಗೆ ನೆರವಾಗಿ. 3/4

    — H D Kumaraswamy (@hd_kumaraswamy) December 14, 2021 " class="align-text-top noRightClick twitterSection" data=" ">

ಹಾರ-ತುರಾಯಿ ಹಾಕಿ, ಕೇಕ್ ಕತ್ತರಿಸಿ ಸಂಭ್ರಮಿಸುವುದು ಬೇಡ. ನಮ್ಮ ಪಕ್ಷದ ಎಲ್ಲ ಕಾರ್ಯಕರ್ತರು, ಮುಖಂಡರು, ಹಿತೈಷಿಗಳು, ಅಭಿಮಾನಿಗಳು, ಕಾರ್ಯಕರ್ತರು ಹಣ ಖರ್ಚು ಮಾಡಿಕೊಂಡು ನನ್ನಲ್ಲಿಗೆ ಬರುವುದು ಬೇಡ. ನೀವಿದ್ದಲ್ಲಿಯೇ ಬಡವರಿಗೆ, ದೀನ ದಲಿತರಿಗೆ, ಮಳೆ-ನೆರೆಯಿಂದ ತತ್ತರಿಸಿದ ಜನರಿಗೆ ನೆರವಾಗುವ ಮೂಲಕ ನನ್ನ ಜನ್ಮದಿನಕ್ಕೆ ಸಾರ್ಥಕತೆ ತನ್ನಿ ಎಂದು ಹೆಚ್​​ಡಿಕೆ ಮನವಿ ಮಾಡಿದ್ದಾರೆ.

ಶುಭ ಕೋರಿದ ಮುಖಂಡರು: ಇಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಜನ್ಮದಿನದ ಅಂಗವಾಗಿ ಪಕ್ಷದ ಮುಖಂಡರು, ಅಭಿಮಾನಿಗಳು ಶುಭ ಕೋರಿದ್ದಾರೆ.

ಇದನ್ನೂ ಓದಿ:ರಾಜ್ಯದಲ್ಲೇ ಮೊದಲ ಬಾರಿಗೆ ಕಪ್ಪು ಶಿಲೆಯಲ್ಲಿ ಅಪ್ಪು ಪುತ್ಥಳಿ ನಿರ್ಮಾಣ.. ದಾವಣಗೆರೆಯಲ್ಲಿ ಪ್ರತಿಮೆ ಅನಾವರಣ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.