ETV Bharat / city

ಕಾರು ಅಪಘಾತ ಪ್ರಕರಣ: ಸ್ಟೇಷನ್ ಬೇಲ್​ ಆಧಾರದ ಮೇಲೆ ಐವರು ಆರೋಪಿಗಳು ಬಿಡುಗಡೆ

author img

By

Published : May 25, 2020, 8:40 PM IST

ನಿನ್ನೆ ನ್ಯೂ ಬಿಇಎಲ್ ರಸ್ತೆಯ ಬಳಿ ವೇಗವಾಗಿ ಕಾರ್ ಚಲಾಯಿಸಿಕೊಂಡು ನಿಯಂತ್ರಣಕ್ಕೆ ಸಿಗದೆ ರಸ್ತೆಯ ಡಿವೈಡರ್​ಗೆ ಡಿಕ್ಕಿ ಹೊಡೆದ ಪ್ರಕರಣದ ಐವರು ಆರೋಪಿಗಳನ್ನು ಇಂದು ಸ್ಟೇಷನ್ ಬೇಲ್​ ಆಧಾರದ ಮೇಲೆ ಪೊಲೀಸರು ಬಿಟ್ಟು ಕಳುಹಿಸಿದ್ದಾರೆ.

ನಿನ್ನೆ ನಡೆದ ಕಾರು ಅಪಘಾತ
ನಿನ್ನೆ ನಡೆದ ಕಾರು ಅಪಘಾತ

ಬೆಂಗಳೂರು: ನಗರದಲ್ಲಿ ನಿನ್ನೆ ನಡೆದ ಅಪಘಾತದಲ್ಲಿ ಕಾರು ತಲೆ ಕೆಳಗಾಗಿ ಬಿದ್ದು ಬೆಂಕಿ ಹೊತ್ತಿಕೊಂಡಿದ್ದು ಈ ಸಂಬಂಧ ಕಾರು ಚಾಲಕ ಪ್ರದೀಪ್ ಸೇರಿದಂತೆ ಐವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದ ಜಾಲಹಳ್ಳಿ ಸಂಚಾರ ಪೊಲೀಸರು ಠಾಣಾ ಜಾಮೀನಿನ ಆಧಾರದ ಮೇಲೆ ಆರೋಪಿಗಳನ್ನು ಬಿಟ್ಟು ಕಳುಹಿಸಿದ್ದಾರೆ.

ನಿನ್ನೆ ನಡೆದ ಕಾರು ಅಪಘಾತ

ಗರುಡಾಚಾರ್ ಪಾಳ್ಯ ಮೋಹಿತ್ ಬಾರ್​ನಲ್ಲಿ ಕೆಲಸ‌‌ ಮಾಡುತ್ತಿದ್ದ ಚಾಲಕ ಸೇರಿದಂತೆ ಐವರು‌ ಆರೋಪಿಗಳು ನಿನ್ನೆ ನ್ಯೂ ಬಿಇಎಲ್ ರಸ್ತೆಯ ಬಳಿ ವೇಗವಾಗಿ ಕಾರ್ ಚಲಾಯಿಸಿಕೊಂಡು ನಿಯಂತ್ರಣಕ್ಕೆ ಸಿಗದೆ ರಸ್ತೆಯ ಡಿವೈಡರ್​ಗೆ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ಪಲ್ಟಿ ಹೊಡೆದು ಪೆಟ್ರೋಲ್ ಸೋರಿಕೆಯಾಗಿ ಏಕಾಏಕಿ ಕಾರಿಗೆ ಬೆಂಕಿ ಹತ್ತಿಕೊಂಡು ನೋಡು ನೋಡುತ್ತಿದ್ದಂತೆ ಹೊತ್ತಿ ಉರಿದಿತ್ತು.

ಘಟನೆಯಲ್ಲಿ ಚಾಲಕ ಪ್ರದೀಪ್ ಸೇರಿದಂತೆ ಅಶೋಕ್​, ಸತೀಶ್​, ತಿಪ್ಪೇಶ್​ ಐವರು ಪ್ರಾಣಾಪಾಯದಿಂದ‌ ಪಾರಾಗಿದ್ದರು. ಈ ಸಂಬಂಧ ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 279 ರ ಅಡಿ ವೇಗ ಹಾಗೂ ನಿರ್ಲಕ್ಷ್ಯ ಕಾರು ಚಾಲನೆ ಆರೋಪದಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಇಂದು ಜಾಮೀನಿನ ಆಧಾರದ ಮೇಲೆ ಪೊಲೀಸರು ಆರೋಪಿಗಳನ್ನು ಬಿಟ್ಟು ಕಳುಹಿಸಿದ್ದಾರೆ.

ಬೆಂಗಳೂರು: ನಗರದಲ್ಲಿ ನಿನ್ನೆ ನಡೆದ ಅಪಘಾತದಲ್ಲಿ ಕಾರು ತಲೆ ಕೆಳಗಾಗಿ ಬಿದ್ದು ಬೆಂಕಿ ಹೊತ್ತಿಕೊಂಡಿದ್ದು ಈ ಸಂಬಂಧ ಕಾರು ಚಾಲಕ ಪ್ರದೀಪ್ ಸೇರಿದಂತೆ ಐವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದ ಜಾಲಹಳ್ಳಿ ಸಂಚಾರ ಪೊಲೀಸರು ಠಾಣಾ ಜಾಮೀನಿನ ಆಧಾರದ ಮೇಲೆ ಆರೋಪಿಗಳನ್ನು ಬಿಟ್ಟು ಕಳುಹಿಸಿದ್ದಾರೆ.

ನಿನ್ನೆ ನಡೆದ ಕಾರು ಅಪಘಾತ

ಗರುಡಾಚಾರ್ ಪಾಳ್ಯ ಮೋಹಿತ್ ಬಾರ್​ನಲ್ಲಿ ಕೆಲಸ‌‌ ಮಾಡುತ್ತಿದ್ದ ಚಾಲಕ ಸೇರಿದಂತೆ ಐವರು‌ ಆರೋಪಿಗಳು ನಿನ್ನೆ ನ್ಯೂ ಬಿಇಎಲ್ ರಸ್ತೆಯ ಬಳಿ ವೇಗವಾಗಿ ಕಾರ್ ಚಲಾಯಿಸಿಕೊಂಡು ನಿಯಂತ್ರಣಕ್ಕೆ ಸಿಗದೆ ರಸ್ತೆಯ ಡಿವೈಡರ್​ಗೆ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ಪಲ್ಟಿ ಹೊಡೆದು ಪೆಟ್ರೋಲ್ ಸೋರಿಕೆಯಾಗಿ ಏಕಾಏಕಿ ಕಾರಿಗೆ ಬೆಂಕಿ ಹತ್ತಿಕೊಂಡು ನೋಡು ನೋಡುತ್ತಿದ್ದಂತೆ ಹೊತ್ತಿ ಉರಿದಿತ್ತು.

ಘಟನೆಯಲ್ಲಿ ಚಾಲಕ ಪ್ರದೀಪ್ ಸೇರಿದಂತೆ ಅಶೋಕ್​, ಸತೀಶ್​, ತಿಪ್ಪೇಶ್​ ಐವರು ಪ್ರಾಣಾಪಾಯದಿಂದ‌ ಪಾರಾಗಿದ್ದರು. ಈ ಸಂಬಂಧ ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 279 ರ ಅಡಿ ವೇಗ ಹಾಗೂ ನಿರ್ಲಕ್ಷ್ಯ ಕಾರು ಚಾಲನೆ ಆರೋಪದಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಇಂದು ಜಾಮೀನಿನ ಆಧಾರದ ಮೇಲೆ ಪೊಲೀಸರು ಆರೋಪಿಗಳನ್ನು ಬಿಟ್ಟು ಕಳುಹಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.