ETV Bharat / city

ಜಯದೇವದಲ್ಲಿ 150 ಬಡ ರೋಗಿಗಳಿಗೆ ಉಚಿತ ಸ್ಟಂಟ್ ಅಳವಡಿಕೆ: ನೋಂದಣಿಗೆ ಜೂ. 20 ಕೊನೆ ದಿನ

author img

By

Published : Jun 1, 2022, 12:13 PM IST

ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಿಂದ 150 ಮಂದಿ ಬಡರೋಗಿಗಳಿಗೆ ಉಚಿತ ಸ್ಟಂಟ್ ಅಳವಡಿಕೆ ಮಾಡುವ ಆಂಜಿಯೋಪ್ಲಾಸ್ಟಿ ಕಾರ್ಯಾಗಾರವನ್ನು ಜೂನ್ 24 ರಿಂದ 26 ರವರೆಗೆ ಹಮ್ಮಿಕೊಳ್ಳಲಾಗಿದೆ.

Jayadeva hospital
Jayadeva hospital

ಬೆಂಗಳೂರು: ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಉಚಿತ ಆಂಜಿಯೋಪ್ಲಾಸ್ಟಿ ಕಾರ್ಯಾಗಾರ ನಡೆಸಲಾಗ್ತಿದೆ. ಈ ನಿಟ್ಟಿನಲ್ಲಿ 150 ಬಡರೋಗಿಗಳಿಗೆ ಉಚಿತ ಸ್ಟಂಟ್ ಅಳವಡಿಕೆ ಮಾಡಲಾಗುತ್ತದೆ.‌ ಜಯದೇವ ಸಂಸ್ಥೆಯು ಮಾನಿಕ್ಸ್, ಅಮೆರಿಕ ಹಾಗೂ ಡಾ.ಗೋವಿಂದರಾಜು ಸುಬ್ರಮಣಿ ಪಾರ್ಟ್ ಫೌಂಡೇಷನ್, ವಿನ್ ಸನ್ ಸಹಯೋಗದೊಂದಿಗೆ ಈ ಕಾರ್ಯಾಗಾರವನ್ನು ಜೂನ್ 24 ರಿಂದ 26 ರವರೆಗೆ ಹಮ್ಮಿಕೊಂಡಿದೆ.

ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್‌ ಮಾಹಿತಿ ನೀಡಿದ್ದು, ಈ ಕಾರ್ಯಾಗಾರದಲ್ಲಿ 150 ಜನ ಬಡರೋಗಿಗಳ ಹಾಗೂ ಬಡತನ ರೇಖೆಗಿಂತ ಕೆಳಗಿರುವ ಹಿರಿಯ ನಾಗರಿಕರಿಗೆ ಉಚಿತ ಸ್ಟಂಟ್ ಅಳವಡಿಕೆ ಮಾಡಲಾಗುತ್ತದೆ. ಪ್ರತಿ ರೋಗಿಗೂ ಉನ್ನತ ಗುಣಮಟ್ಟದ ಮೆಡಿಕೇಟೆಡ್ ಸ್ಟಂಟ್‌ಗಳನ್ನು ಉಚಿತವಾಗಿ ಅಳವಡಿಸಲಾಗುವುದು. ಈ ಸೌಲಭ್ಯವನ್ನು ಈಗಾಗಲೇ ಅಂಜಿಯೋಗ್ರಾಂ ತಪಾಸಣೆಗೆ ಒಳಪಟ್ಟಿರುವ ರೋಗಿಗಳು ಪಡೆಯಬಹುದಾಗಿದೆ. ಅವಶ್ಯಕ ರೋಗಿಗಳು ದಾಖಲಾತಿ ಸಂದರ್ಭದಲ್ಲಿ ಬಿಪಿಎಲ್ ಕಾರ್ಡ್ ಅಥವಾ ಕಡಿಮೆ ಆದಾಯ ಪ್ರಮಾಣ ಪತ್ರವನ್ನು ಹೊಂದಿರಬೇಕು ಎಂದಿದ್ದಾರೆ.

ಬಡತನ ರೇಖೆಗಿಂತ ಕೆಳಗಿರುವ ರೋಗಿಗಳು ಮತ್ತು ಹಣಕಾಸಿನ ಮುಗ್ಗಟ್ಟಿನಿಂದ ಚಿಕಿತ್ಸೆ ಮಾಡಿಸಿಕೊಳ್ಳಲು ನಿಸ್ಸಹಾಯಕ ರೋಗಿಗಳು ತಮ್ಮ ಹೆಸರನ್ನು ಜೂನ್ 20 ರೊಳಗೆ ನೋ೦ದಾಯಿಸಿಕೊಳ್ಳಲು ಸೂಚಿಸಲಾಗಿದೆ. ಬೆಳಗ್ಗೆ 10.00 ಗಂಟೆಯಿಂದ ಸಂಜೆ 4.00 ವರೆಗೆ ಸಮಯ ನಿಗದಿ ಮಾಡಲಾಗಿದೆ.‌

ಇದನ್ನೂ ಓದಿ: 'ಭಾರತಿ ಡ್ರೈವಿಂಗ್​ ಸ್ವರಾಜ್'.. ಮದುವೆ ಮಂಟಪಕ್ಕೆ ಟ್ರ್ಯಾಕ್ಟರ್​ನಲ್ಲಿ ಬಂದ ಯುವತಿ ನಡೆಗೆ ಆನಂದ್ ಮಹೀಂದ್ರಾ ಫಿದಾ!

ಬೆಂಗಳೂರು: ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಉಚಿತ ಆಂಜಿಯೋಪ್ಲಾಸ್ಟಿ ಕಾರ್ಯಾಗಾರ ನಡೆಸಲಾಗ್ತಿದೆ. ಈ ನಿಟ್ಟಿನಲ್ಲಿ 150 ಬಡರೋಗಿಗಳಿಗೆ ಉಚಿತ ಸ್ಟಂಟ್ ಅಳವಡಿಕೆ ಮಾಡಲಾಗುತ್ತದೆ.‌ ಜಯದೇವ ಸಂಸ್ಥೆಯು ಮಾನಿಕ್ಸ್, ಅಮೆರಿಕ ಹಾಗೂ ಡಾ.ಗೋವಿಂದರಾಜು ಸುಬ್ರಮಣಿ ಪಾರ್ಟ್ ಫೌಂಡೇಷನ್, ವಿನ್ ಸನ್ ಸಹಯೋಗದೊಂದಿಗೆ ಈ ಕಾರ್ಯಾಗಾರವನ್ನು ಜೂನ್ 24 ರಿಂದ 26 ರವರೆಗೆ ಹಮ್ಮಿಕೊಂಡಿದೆ.

ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್‌ ಮಾಹಿತಿ ನೀಡಿದ್ದು, ಈ ಕಾರ್ಯಾಗಾರದಲ್ಲಿ 150 ಜನ ಬಡರೋಗಿಗಳ ಹಾಗೂ ಬಡತನ ರೇಖೆಗಿಂತ ಕೆಳಗಿರುವ ಹಿರಿಯ ನಾಗರಿಕರಿಗೆ ಉಚಿತ ಸ್ಟಂಟ್ ಅಳವಡಿಕೆ ಮಾಡಲಾಗುತ್ತದೆ. ಪ್ರತಿ ರೋಗಿಗೂ ಉನ್ನತ ಗುಣಮಟ್ಟದ ಮೆಡಿಕೇಟೆಡ್ ಸ್ಟಂಟ್‌ಗಳನ್ನು ಉಚಿತವಾಗಿ ಅಳವಡಿಸಲಾಗುವುದು. ಈ ಸೌಲಭ್ಯವನ್ನು ಈಗಾಗಲೇ ಅಂಜಿಯೋಗ್ರಾಂ ತಪಾಸಣೆಗೆ ಒಳಪಟ್ಟಿರುವ ರೋಗಿಗಳು ಪಡೆಯಬಹುದಾಗಿದೆ. ಅವಶ್ಯಕ ರೋಗಿಗಳು ದಾಖಲಾತಿ ಸಂದರ್ಭದಲ್ಲಿ ಬಿಪಿಎಲ್ ಕಾರ್ಡ್ ಅಥವಾ ಕಡಿಮೆ ಆದಾಯ ಪ್ರಮಾಣ ಪತ್ರವನ್ನು ಹೊಂದಿರಬೇಕು ಎಂದಿದ್ದಾರೆ.

ಬಡತನ ರೇಖೆಗಿಂತ ಕೆಳಗಿರುವ ರೋಗಿಗಳು ಮತ್ತು ಹಣಕಾಸಿನ ಮುಗ್ಗಟ್ಟಿನಿಂದ ಚಿಕಿತ್ಸೆ ಮಾಡಿಸಿಕೊಳ್ಳಲು ನಿಸ್ಸಹಾಯಕ ರೋಗಿಗಳು ತಮ್ಮ ಹೆಸರನ್ನು ಜೂನ್ 20 ರೊಳಗೆ ನೋ೦ದಾಯಿಸಿಕೊಳ್ಳಲು ಸೂಚಿಸಲಾಗಿದೆ. ಬೆಳಗ್ಗೆ 10.00 ಗಂಟೆಯಿಂದ ಸಂಜೆ 4.00 ವರೆಗೆ ಸಮಯ ನಿಗದಿ ಮಾಡಲಾಗಿದೆ.‌

ಇದನ್ನೂ ಓದಿ: 'ಭಾರತಿ ಡ್ರೈವಿಂಗ್​ ಸ್ವರಾಜ್'.. ಮದುವೆ ಮಂಟಪಕ್ಕೆ ಟ್ರ್ಯಾಕ್ಟರ್​ನಲ್ಲಿ ಬಂದ ಯುವತಿ ನಡೆಗೆ ಆನಂದ್ ಮಹೀಂದ್ರಾ ಫಿದಾ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.