ETV Bharat / city

ಬಿಬಿಎಂಪಿ ಸ್ಥಾಯಿ ಸಮಿತಿ ಚುನಾವಣೆಗೆ ಹೈಕೋರ್ಟ್ ಹಸಿರು ನಿಶಾನೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 12 ಸ್ಥಾಯಿ ಸಮಿತಿಗಳಿಗೆ ನಾಳೆ ನಡೆಯಲಿರುವ ಚುನಾವಣೆಗೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ.

author img

By

Published : Jan 17, 2020, 11:05 PM IST

High Court
ಹೈಕೋರ್ಟ್

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 12 ಸ್ಥಾಯಿ ಸಮಿತಿಗಳಿಗೆ ನಾಳೆ ನಡೆಯಲಿರುವ ಚುನಾವಣೆಗೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ.

ಸ್ಥಾಯಿ ಸಮಿತಿಗಳ ಚುನಾವಣೆಗೆ ತಡೆ ನೀಡಬೇಕು ಅಥವಾ ಚುನಾವಣೆ ಮುಂದೂಡಲು ಚುನಾವಣಾಧಿಕಾರಿಗೆ ನಿರ್ದೇಶಿಸಬೇಕು ಎಂದು ಕೋರಿ ಹಾಲಿ ಸ್ಥಾಯಿ ಸಮಿತಿಗಳ ಅಧ್ಯಕ್ಷರಾದ ಇಮ್ರಾನ್ ಪಾಷಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರಿದ್ದ ಪೀಠ, ಚುನಾವಣೆಗೆ ತಡೆ ನೀಡಲು ನಿರಾಕರಿಸಿತು. ಅಲ್ಲದೆ, ಅರ್ಜಿ ಸಂಬಂಧ ಬಿಬಿಎಂಪಿ, ಪ್ರಾದೇಶಿಕ ಆಯುಕ್ತರು ಹಾಗೂ ಪ್ರತಿವಾದಿಗಳಾಗಿರುವ 18 ಪಾಲಿಕೆ ಸದಸ್ಯರಿಗೆ ಇದೇ ವೇಳೆ ನೋಟಿಸ್ ಜಾರಿಗೊಳಿಸಲು ಆದೇಶಿಸಿತು.

ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳ 18 ಪಾಲಿಕೆ ಸದಸ್ಯರ ಅನರ್ಹತೆ ಬಾಕಿ ಇದೆ. ಈ ವಿಚಾರ ಇತ್ಯರ್ಥವಾಗುವ ವರೆಗೆ ಸ್ಥಾಯಿ ಸಮಿತಿಗಳ ಚುನಾವಣೆಗೆ ತಡೆ ನೀಡಬೇಕು. ಇಲ್ಲವೇ ಚುನಾವಣೆ ಮುಂದೂಡಬೇಕು ಎಂದು ಕೋರಿದರು. ಮನವಿ ಪುರಸ್ಕರಿಸದ ಪೀಠ, ಈಗಾಗಲೇ ಚುನಾವಣಾ ವೇಳಾ ಪಟ್ಟಿ ಪ್ರಕಟಗೊಂಡಿದೆ. ಈ ಹಂತದಲ್ಲಿ ಚುನಾವಣೆ ಪ್ರಕ್ರಿಯೆಯಲ್ಲಿ ಮಧ್ಯ ಪ್ರವೇಶ ಮಾಡಲಾಗದು. ಅನರ್ಹತೆ ದೂರು ಬಾಕಿ ಇರುವ ಹಿನ್ನೆಲೆಯಲ್ಲಿ ಆ ಸದಸ್ಯರು ಗೌಪ್ಯ ಮತದಾನ ಮಾಡಲು ಬಯಸಿದರೆ ಅದಕ್ಕೆ ವ್ಯವಸ್ಥೆ ಕಲ್ಪಿಸಬೇಕು. ಅವರ ಮತಗಳನ್ನು ಮತ್ತೆ ಮತ ಪೆಟ್ಟಿಗೆಗೆ ಹಾಕಿ ಅದನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಪ್ರಾದೇಶಿಕ ಆಯುಕ್ತರಿಗೆ ನಿರ್ದೇಶಿಸಿದೆ.

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 12 ಸ್ಥಾಯಿ ಸಮಿತಿಗಳಿಗೆ ನಾಳೆ ನಡೆಯಲಿರುವ ಚುನಾವಣೆಗೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ.

ಸ್ಥಾಯಿ ಸಮಿತಿಗಳ ಚುನಾವಣೆಗೆ ತಡೆ ನೀಡಬೇಕು ಅಥವಾ ಚುನಾವಣೆ ಮುಂದೂಡಲು ಚುನಾವಣಾಧಿಕಾರಿಗೆ ನಿರ್ದೇಶಿಸಬೇಕು ಎಂದು ಕೋರಿ ಹಾಲಿ ಸ್ಥಾಯಿ ಸಮಿತಿಗಳ ಅಧ್ಯಕ್ಷರಾದ ಇಮ್ರಾನ್ ಪಾಷಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರಿದ್ದ ಪೀಠ, ಚುನಾವಣೆಗೆ ತಡೆ ನೀಡಲು ನಿರಾಕರಿಸಿತು. ಅಲ್ಲದೆ, ಅರ್ಜಿ ಸಂಬಂಧ ಬಿಬಿಎಂಪಿ, ಪ್ರಾದೇಶಿಕ ಆಯುಕ್ತರು ಹಾಗೂ ಪ್ರತಿವಾದಿಗಳಾಗಿರುವ 18 ಪಾಲಿಕೆ ಸದಸ್ಯರಿಗೆ ಇದೇ ವೇಳೆ ನೋಟಿಸ್ ಜಾರಿಗೊಳಿಸಲು ಆದೇಶಿಸಿತು.

ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳ 18 ಪಾಲಿಕೆ ಸದಸ್ಯರ ಅನರ್ಹತೆ ಬಾಕಿ ಇದೆ. ಈ ವಿಚಾರ ಇತ್ಯರ್ಥವಾಗುವ ವರೆಗೆ ಸ್ಥಾಯಿ ಸಮಿತಿಗಳ ಚುನಾವಣೆಗೆ ತಡೆ ನೀಡಬೇಕು. ಇಲ್ಲವೇ ಚುನಾವಣೆ ಮುಂದೂಡಬೇಕು ಎಂದು ಕೋರಿದರು. ಮನವಿ ಪುರಸ್ಕರಿಸದ ಪೀಠ, ಈಗಾಗಲೇ ಚುನಾವಣಾ ವೇಳಾ ಪಟ್ಟಿ ಪ್ರಕಟಗೊಂಡಿದೆ. ಈ ಹಂತದಲ್ಲಿ ಚುನಾವಣೆ ಪ್ರಕ್ರಿಯೆಯಲ್ಲಿ ಮಧ್ಯ ಪ್ರವೇಶ ಮಾಡಲಾಗದು. ಅನರ್ಹತೆ ದೂರು ಬಾಕಿ ಇರುವ ಹಿನ್ನೆಲೆಯಲ್ಲಿ ಆ ಸದಸ್ಯರು ಗೌಪ್ಯ ಮತದಾನ ಮಾಡಲು ಬಯಸಿದರೆ ಅದಕ್ಕೆ ವ್ಯವಸ್ಥೆ ಕಲ್ಪಿಸಬೇಕು. ಅವರ ಮತಗಳನ್ನು ಮತ್ತೆ ಮತ ಪೆಟ್ಟಿಗೆಗೆ ಹಾಕಿ ಅದನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಪ್ರಾದೇಶಿಕ ಆಯುಕ್ತರಿಗೆ ನಿರ್ದೇಶಿಸಿದೆ.

Intro:Body:ಬಿಬಿಎಂಪಿ ಸ್ಥಾಯಿ ಸಮಿತಿ ಚುನಾವಣೆಗೆ ಹೈ ಗ್ರೀನ್ ಸಿಗ್ನಲ್
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 12 ಸ್ಥಾಯಿ ಸಮಿತಿಗಳಿಗೆ ಇಂದು ನಡೆಯಲಿರುವ ಚುನಾವಣೆಗೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ.
ಸ್ಥಾಯಿ ಸಮಿತಿಗಳ ಚುನಾವಣೆಗೆ ತಡೆ ನೀಡಬೇಕು ಅಥವಾ ಚುನಾವಣೆ ಮುಂದೂಡಲು ಚುನಾವಣಾಧಿಕಾರಿಗೆ ನಿರ್ದೇಶಿಸಬೇಕು ಎಂದು ಕೋರಿ ಹಾಲಿ ಸ್ಥಾಯಿ ಸಮಿತಿಗಳ ಅಧ್ಯಕ್ಷರಾದ ಇಮ್ರಾನ್ ಪಾಷಾ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರಿದ್ದ ಪೀಠ, ಚುನಾವಣೆಗೆ ತಡೆ ನೀಡಲು ನಿರಾಕರಿಸಿತು. ಅಲ್ಲದೆ, ಅರ್ಜಿ ಸಂಬಂಧ ಬಿಬಿಎಂಪಿ, ಪ್ರಾದೇಶಿಕ ಆಯುಕ್ತರು ಹಾಗೂ ಪ್ರತಿವಾದಿಗಳಾಗಿರುವ 18 ಪಾಲಿಕೆ ಸದಸ್ಯರಿಗೆ ಇದೇ ವೇಳೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ,, ಆಕ್ಷೇಪಣೆಗಳನ್ನು ಸಲ್ಲಿಸಲು ಸೂಚಿಸಿತು.
ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳ 18 ಪಾಲಿಕೆ ಸದಸ್ಯರ ಅನರ್ಹತೆ ಬಾಕಿ ಇದೆ. ಈ ವಿಚಾರ ಇತ್ಯರ್ಥವಾಗುವವರೆಗೆ ಸ್ಥಾಯಿ ಸಮಿತಿಗಳ ಚುನಾವಣೆಗೆ ತಡೆ ನೀಡಬೇಕು ಅಥವಾ ಇಲ್ಲವೇ ಚುನಾವಣೆ ಮುಂದೂಡಬೇಕು ಎಂದು ಕೋರಿದರು.
ಮನವಿ ಪುರಸ್ಕರಿಸದ ಪೀಠ, ಈಗಾಗಲೇ ಚುನಾವಣಾ ವೇಳಾ ಪಟ್ಟಿ ಪ್ರಕಟಗೊಂಡಿದೆ. ಈ ಹಂತದಲ್ಲಿ ಚುನಾವಣೆ ಪ್ರಕ್ರಿಯೆಯಲ್ಲಿ ಮಧ್ಯ ಪ್ರವೇಶ ಮಾಡಲಾಗದು. ಅನರ್ಹತೆ ದೂರು ಬಾಕಿ ಇರುವ ಹಿನ್ನೆಲೆಯಲ್ಲಿ ಆ ಸದಸ್ಯರು ಗೌಪ್ಯ ಮತದಾನ ಮಾಡಲು ಬಯಸಿದರೆ ಅದಕ್ಕೆ ವ್ಯವಸ್ಥೆ ಕಲ್ಪಿಸಬೇಕು. ಅವರ ಮತಗಳನ್ನು ಮತ್ತೆ ಮತಪೆಟ್ಟಿಗೆಗೆ ಹಾಕಿ ಅದನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಪ್ರಾದೇಶಿಕ ಆಯುಕ್ತರಿಗೆ ನಿರ್ದೇಶಿಸಿದೆ.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.