ಬೆಂಗಳೂರು: ಹೋಟೆಲ್ಗಳನ್ನು ಅಗತ್ಯ ಸೇವೆಗಳಡಿ ಪರಿಗಣಿಸಿ ದಿನಪೂರ್ತಿ ಪಾರ್ಸೆಲ್ ನೀಡಲು ಅವಕಾಶ ಮಾಡಿಕೊಡಬೇಕೆಂದು ಬಿಬಿಎಂಪಿ ವ್ಯಾಪ್ತಿಯ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಪಿ.ಸಿ.ರಾವ್ ಸರ್ಕಾರಕ್ಕೆ ಮನವಿ ಮಾಡಿದರು.
ಕರ್ನಾಟಕದಲ್ಲಿ ಕಳೆದ ಕೆಲ ದಿನಗಳಿಂದ ಕೋವಿಡ್ ಸೋಂಕಿತ ಪ್ರಕರಣ ಹೆಚ್ಚಾಗುತ್ತಿರುವ ಕಾರಣ 14 ದಿನಗಳ ಕಾಲ ಕೋವಿಡ್ ಕರ್ಫ್ಯೂ ವಿಧಿಸಿ ಘೋಷಣೆ ಮಾಡಲಾಗಿದೆ. ಸರ್ಕಾರದ ಮಾರ್ಗಸೂಚಿಯಲ್ಲಿ ಹೋಟೆಲ್ಗಳಲ್ಲಿ ಪಾರ್ಸೆಲ್ಗೆ ಬೆಳಿಗ್ಗೆ 10ವರೆಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. 10 ಗಂಟೆಯ ನಂತರ ಸ್ವಿಗ್ಗಿ, ಜೊಮ್ಯಾಟೋ ಸೇರಿದಂತೆ ವಿವಿಧ ಫುಡ್ ಡೆಲಿವರಿ ಸಂಸ್ಥೆಗಳ ಮೂಲಕ ಆಹಾರ ಡೆಲಿವರಿ ಮಾಡಲು ಅವಕಾಶ ಕಲ್ಪಿಸಲಾಗಿದೆ.
ಆದರೆ, ಹಿರಿಯ ನಾಗರಿಕರಿಗೆ, ಕಟ್ಟಡ ಕಾರ್ಮಿಕರಿಗೆ, ಅವಿದ್ಯಾವಂತರಿಗೆ ಈ ಆ್ಯಪ್ಗಳ ಮೂಲಕ ಆಹಾರ ತೆಗೆದುಕೊಳ್ಳಲು ಅನುಭವವಿರುವುದಿಲ್ಲ ಮತ್ತು ಬೆಲೆಯಲ್ಲಿಯೂ ಹೆಚ್ಚಳವಾಗಬಹುದು. ಈ ಹೋಟೆಲ್ಗಳನ್ನು ಅಗತ್ಯ ಸೇವೆಗಳಡಿ ಪರಿಗಣಿಸಿ ದಿನಪೂರ್ತಿ ಪಾರ್ಸೆಲ್ ನೀಡಲು ಅವಕಾಶ ಮಾಡಿಕೊಡಬೇಕೆಂದು ಸರ್ಕಾರಕ್ಕೆ ಮನವಿ ಮಾಡಿದರು.
ಇದನ್ನೂ ಓದಿ: ವರನಿಗೆ ಕೊರೊನಾ, ಪಿಪಿಇ ಕಿಟ್ ಧರಿಸಿ ಹಸೆಮಣೆ ಏರಿದ ಜೋಡಿ