ETV Bharat / city

ಶೀಲ ಶಂಕಿಸಿ ಪತ್ನಿ ಕೊಲೆಗೈದ ಪತಿ: ಆರೋಪಿ ಪೊಲೀಸ್ ವಶಕ್ಕೆ

ಪತ್ನಿ ಶೀಲದ ಮೇಲೆ ಶಂಕೆ ವ್ಯಕ್ತಪಡಿಸಿ ಆಗಾಗ್ಗೆ ಪತಿ ಜಗಳವಾಡುತ್ತಿದ್ದ. ನಿನ್ನೆ ಕಲಹ ತಾರಕಕ್ಕೇರಿ ಪತ್ನಿಯ ಕೊಲೆಯಲ್ಲಿ ಜಗಳ ಅಂತ್ಯವಾಗಿದೆ. ಆರೋಪಿ ಪೊಲೀಸ್‌ ಠಾಣೆಯಲ್ಲಿ ಕಂಬಿ ಎಣಿಸುತ್ತಿದ್ದಾನೆ.

author img

By

Published : Apr 23, 2022, 4:54 PM IST

husband kills wife suspecting illicit relationship
ಶೀಲ ಶಂಕಿಸಿ ಪತಿಯಿಂದಲೇ ಪತ್ನಿ ಕೊಲೆ: ಆರೋಪಿ ಪೊಲೀಸ್ ವಶಕ್ಕೆ

ಬೆಂಗಳೂರು: ಶೀಲ ಶಂಕಿಸಿದ ಪತಿಯೊಬ್ಬ ತನ್ನ ಪತ್ನಿಯನ್ನು ಮುದ್ದೆ ಕೋಲಿನಿಂದ ಹೊಡೆದು ಕೊಲೆ ಮಾಡಿರುವ ಘಟನೆ ತಲಘಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ತಡರಾತ್ರಿ ನೆಡೆದಿದೆ. ನಾಗೇಗೌಡನ ಪಾಳ್ಯದ ನಿವಾಸಿ ಪದ್ಮಾ (45) ಕೊಲೆಯಾದವರು. ಆರೋಪಿ ಮಾರಪ್ಪನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ದಂಪತಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ. ಮಾರಪ್ಪ ವ್ಯವಸಾಯ ಮಾಡಿಕೊಂಡು ಕುಟುಂಬ ನಿರ್ವಹಿಸುತ್ತಿದ್ದ. ಇತ್ತೀಚೆಗೆ ಪತ್ನಿ ಶೀಲದ ಮೇಲೆ ಶಂಕೆ ವ್ಯಕ್ತಪಡಿಸಿ ಆಗಾಗ್ಗೆ ಜಗಳವಾಡುತ್ತಿದ್ದ. ನಿನ್ನೆ ಸಂಜೆಯೂ ಕಲಹ ಆರಂಭವಾಗಿ ತಾರಕಕ್ಕೇರಿದೆ. ಈ ವೇಳೆ ಕೈಗೆ ಸಿಕ್ಕ ಮುದ್ದೆ ಕೋಲಿನಿಂದ ಪತ್ನಿಗೆ ಹೊಡೆದಿದ್ದಾನೆ.

ನಂತರ ಮನೆಬಾಗಿಲ ಚಿಲಕ ಹಾಕಿಕೊಂಡು ಒಳಗೇ ಇದ್ದ. ಮಗ ಗಿರೀಶ್ ಬಾಗಿಲು ತೆಗೆಯುವಂತೆ ಕೇಳಿದಾಗ ಯಾರೂ ತೆರೆಯದ ಕಾರಣ ಪೊಲೀಸರಿಗೆ ತಿಳಿಸಿದ್ದಾನೆ. ಪೊಲೀಸರು ಸ್ಥಳ ಪರಿಶೀಲನೆ ನಡೆಸಿ, ಮೃತದೇಹವನ್ನು ಕಂಪೇಗೌಡ ಆಸ್ಪತ್ರೆಗೆ ರವಾನಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ಭಟ್ಕಳ: ಒಂದೂವರೆ ಕೋಟಿ ಹಣ ದುರುಪಯೋಗ; SBI ಬ್ಯಾಂಕ್‌ ಮ್ಯಾನೇಜರ್ ಪರಾರಿ

ಬೆಂಗಳೂರು: ಶೀಲ ಶಂಕಿಸಿದ ಪತಿಯೊಬ್ಬ ತನ್ನ ಪತ್ನಿಯನ್ನು ಮುದ್ದೆ ಕೋಲಿನಿಂದ ಹೊಡೆದು ಕೊಲೆ ಮಾಡಿರುವ ಘಟನೆ ತಲಘಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ತಡರಾತ್ರಿ ನೆಡೆದಿದೆ. ನಾಗೇಗೌಡನ ಪಾಳ್ಯದ ನಿವಾಸಿ ಪದ್ಮಾ (45) ಕೊಲೆಯಾದವರು. ಆರೋಪಿ ಮಾರಪ್ಪನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ದಂಪತಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ. ಮಾರಪ್ಪ ವ್ಯವಸಾಯ ಮಾಡಿಕೊಂಡು ಕುಟುಂಬ ನಿರ್ವಹಿಸುತ್ತಿದ್ದ. ಇತ್ತೀಚೆಗೆ ಪತ್ನಿ ಶೀಲದ ಮೇಲೆ ಶಂಕೆ ವ್ಯಕ್ತಪಡಿಸಿ ಆಗಾಗ್ಗೆ ಜಗಳವಾಡುತ್ತಿದ್ದ. ನಿನ್ನೆ ಸಂಜೆಯೂ ಕಲಹ ಆರಂಭವಾಗಿ ತಾರಕಕ್ಕೇರಿದೆ. ಈ ವೇಳೆ ಕೈಗೆ ಸಿಕ್ಕ ಮುದ್ದೆ ಕೋಲಿನಿಂದ ಪತ್ನಿಗೆ ಹೊಡೆದಿದ್ದಾನೆ.

ನಂತರ ಮನೆಬಾಗಿಲ ಚಿಲಕ ಹಾಕಿಕೊಂಡು ಒಳಗೇ ಇದ್ದ. ಮಗ ಗಿರೀಶ್ ಬಾಗಿಲು ತೆಗೆಯುವಂತೆ ಕೇಳಿದಾಗ ಯಾರೂ ತೆರೆಯದ ಕಾರಣ ಪೊಲೀಸರಿಗೆ ತಿಳಿಸಿದ್ದಾನೆ. ಪೊಲೀಸರು ಸ್ಥಳ ಪರಿಶೀಲನೆ ನಡೆಸಿ, ಮೃತದೇಹವನ್ನು ಕಂಪೇಗೌಡ ಆಸ್ಪತ್ರೆಗೆ ರವಾನಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ಭಟ್ಕಳ: ಒಂದೂವರೆ ಕೋಟಿ ಹಣ ದುರುಪಯೋಗ; SBI ಬ್ಯಾಂಕ್‌ ಮ್ಯಾನೇಜರ್ ಪರಾರಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.