ETV Bharat / city

ಐಎಂಎ ಕೇಸ್​​​​​​​​: ಬೆಂಗಳೂರಿಗೆ ಬಂದೊಡನೆ ಅಜ್ಞಾತ ಸ್ಥಳಕ್ಕೆ ತೆರಳಿದ ರೋಷನ್​​ ಬೇಗ್​​​​​​!? - undefined

ಮಾಜಿ ಸಚಿವ ಆರ್.ರೋಷನ್ ಬೇಗ್ ಪುಲಿಕೇಶಿ ನಗರದಲ್ಲಿರುವ ತಮ್ಮ ನಿವಾಸಕ್ಕೆ ಆಗಮಿಸಿದಾಗ ಮಾಧ್ಯಮಗಳಿಗೆ ನಿರ್ಬಂಧ ಹೇರಲಾಗಿತ್ತು. ಇಂದು ಬೆಳಗ್ಗೆ ಮನೆಯಿಂದ ತೆರಳಿದ ಅವರು, ಎಲ್ಲಿಗೆ ಹೋಗಿದ್ದಾರೆ, ಯಾರನ್ನು ಭೇಟಿ ಮಾಡಿದ್ದಾರೆ ಎಂಬ ಬಗ್ಗೆ ಮಾಹಿತಿ ಇಲ್ಲ. ಸದ್ಯ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎಂದು ಹೇಳಲಾಗ್ತಿದೆ.

Roshan begh
author img

By

Published : Jun 12, 2019, 5:18 PM IST

ಬೆಂಗಳೂರು: ಐಎಂಎ ವಂಚನೆ ಪ್ರಕರಣದಲ್ಲಿ ಮಾಜಿ ಸಚಿವ ಆರ್. ರೋಷನ್ ಬೇಗ್ ಹೆಸರು ಕೇಳಿಬರುತ್ತಿರುವ ಬೆನ್ನಲ್ಲೇ ಅವರು ನಿನ್ನೆ ತಡರಾತ್ರಿ ನವದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದರು.

ಪುಲಿಕೇಶಿ ನಗರದಲ್ಲಿರುವ ತಮ್ಮ ನಿವಾಸಕ್ಕೆ ಅವರು ಆಗಮಿಸಿದಾಗ ಮಾಧ್ಯಮಗಳಿಗೆ ನಿರ್ಬಂಧ ಹೇರಲಾಗಿತ್ತು. ಇಂದು ಬೆಳಗ್ಗೆ ಮನೆಯಿಂದ ತೆರಳಿದ ಅವರು, ಎಲ್ಲಿಗೆ ಹೋಗಿದ್ದಾರೆ, ಯಾರನ್ನು ಭೇಟಿ ಮಾಡಿದ್ದಾರೆ ಎಂಬ ಬಗ್ಗೆ ಮಾಹಿತಿ ಇಲ್ಲ. ಸದ್ಯ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎಂದು ಹೇಳಲಾಗ್ತಿದೆ.

ಅಜ್ಞಾತ ಸ್ಥಳಕ್ಕೆ ತೆರಳಿದ ರೋಷನ್ ಬೇಗ್​!?

ಬೆಳಿಗ್ಗೆ 10 ಗಂಟೆಗೆ ಮನೆಯಿಂದ ತೆರಳಿದ ರೋಷನ್ ಬೇಗ್, ಅಜ್ಞಾತ ಸ್ಥಳದಲ್ಲಿ ತಮ್ಮ ಆಪ್ತರ ಜತೆ ಮಾತುಕತೆ ನಡೆಸಿದ್ದಾರೆ. ಐಎಂಎ ಪ್ರಕರಣದಲ್ಲಿ ತಮ್ಮ ಹೆಸರು ಕೇಳಿ ಬರುತ್ತಿರುವ ಹಿನ್ನೆಲೆ ವಕೀಲರ ಸಲಹೆ ಪಡೆದಿದ್ದಾರೆ. ಐಎಂಎ ಸಂಸ್ಥೆಯಲ್ಲಿ ಹಣ ಹೂಡಿಕೆ ಮಾಡಿರುವುದರಿಂದ ಮಾಧ್ಯಮಗಳ ಮುಂದೆ ಬರುವ ಮುನ್ನ ಕಾನೂನು ಸಲಹೆ ಪಡೆಯುವ ಉದ್ದೇಶದಿಂದ ವಕೀಲರನ್ನು ಸಂಪರ್ಕಿಸಿದ್ದಾರೆ ಎನ್ನಲಾಗಿದೆ.

ಐಎಂಎ ವಂಚನೆ ಪ್ರಕರಣದಲ್ಲಿ ರೋಷನ್ ಬೇಗ್​ ಹೆಸರು ಕೇಳಿ ಬಂದ ನಂತರ ಇದೇ ಮೊದಲ ಬಾರಿಗೆ ಅವರು ನಗರದಲ್ಲಿ ಕಾಣಿಸಿಕೊಂಡರು. ಶಿವಾಜಿ ನಗರ ಶಾಸಕರೂ ಆಗಿರುವ ರೋಷನ್ ಬೇಗ್ ಹೆಸರನ್ನು ಐಎಎಂ ಜ್ಯುವೆಲ್ಲರ್ಸ್ ಮಾಲೀಕ ಮನ್ಸೂರ್ ಖಾನ್ ಆಡಿಯೋದಲ್ಲಿ ಪ್ರಸ್ತಾಪಿಸಿದ್ದರು. ಎರಡನೇ ಆಡಿಯೋದಲ್ಲಿ ರೋಷನ್ ಬೇಗ್​, ತನ್ನ ವಿರುದ್ಧ ಷಡ್ಯಂತ್ರ ರೂಪಿಸಿದ್ದಾರೆ ಎಂದೂ ಆರೋಪ ಮಾಡಿದ್ದರು. ಈ ಎಲ್ಲಾ ಬೆಳವಣಿಗೆಗಳು ನಡೆಯುವಾಗ ರೋಷನ್ ಬೇಗ್ ದಿಲ್ಲಿಯಲ್ಲಿದ್ದರು.

ಬೆಂಗಳೂರು: ಐಎಂಎ ವಂಚನೆ ಪ್ರಕರಣದಲ್ಲಿ ಮಾಜಿ ಸಚಿವ ಆರ್. ರೋಷನ್ ಬೇಗ್ ಹೆಸರು ಕೇಳಿಬರುತ್ತಿರುವ ಬೆನ್ನಲ್ಲೇ ಅವರು ನಿನ್ನೆ ತಡರಾತ್ರಿ ನವದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದರು.

ಪುಲಿಕೇಶಿ ನಗರದಲ್ಲಿರುವ ತಮ್ಮ ನಿವಾಸಕ್ಕೆ ಅವರು ಆಗಮಿಸಿದಾಗ ಮಾಧ್ಯಮಗಳಿಗೆ ನಿರ್ಬಂಧ ಹೇರಲಾಗಿತ್ತು. ಇಂದು ಬೆಳಗ್ಗೆ ಮನೆಯಿಂದ ತೆರಳಿದ ಅವರು, ಎಲ್ಲಿಗೆ ಹೋಗಿದ್ದಾರೆ, ಯಾರನ್ನು ಭೇಟಿ ಮಾಡಿದ್ದಾರೆ ಎಂಬ ಬಗ್ಗೆ ಮಾಹಿತಿ ಇಲ್ಲ. ಸದ್ಯ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎಂದು ಹೇಳಲಾಗ್ತಿದೆ.

ಅಜ್ಞಾತ ಸ್ಥಳಕ್ಕೆ ತೆರಳಿದ ರೋಷನ್ ಬೇಗ್​!?

ಬೆಳಿಗ್ಗೆ 10 ಗಂಟೆಗೆ ಮನೆಯಿಂದ ತೆರಳಿದ ರೋಷನ್ ಬೇಗ್, ಅಜ್ಞಾತ ಸ್ಥಳದಲ್ಲಿ ತಮ್ಮ ಆಪ್ತರ ಜತೆ ಮಾತುಕತೆ ನಡೆಸಿದ್ದಾರೆ. ಐಎಂಎ ಪ್ರಕರಣದಲ್ಲಿ ತಮ್ಮ ಹೆಸರು ಕೇಳಿ ಬರುತ್ತಿರುವ ಹಿನ್ನೆಲೆ ವಕೀಲರ ಸಲಹೆ ಪಡೆದಿದ್ದಾರೆ. ಐಎಂಎ ಸಂಸ್ಥೆಯಲ್ಲಿ ಹಣ ಹೂಡಿಕೆ ಮಾಡಿರುವುದರಿಂದ ಮಾಧ್ಯಮಗಳ ಮುಂದೆ ಬರುವ ಮುನ್ನ ಕಾನೂನು ಸಲಹೆ ಪಡೆಯುವ ಉದ್ದೇಶದಿಂದ ವಕೀಲರನ್ನು ಸಂಪರ್ಕಿಸಿದ್ದಾರೆ ಎನ್ನಲಾಗಿದೆ.

ಐಎಂಎ ವಂಚನೆ ಪ್ರಕರಣದಲ್ಲಿ ರೋಷನ್ ಬೇಗ್​ ಹೆಸರು ಕೇಳಿ ಬಂದ ನಂತರ ಇದೇ ಮೊದಲ ಬಾರಿಗೆ ಅವರು ನಗರದಲ್ಲಿ ಕಾಣಿಸಿಕೊಂಡರು. ಶಿವಾಜಿ ನಗರ ಶಾಸಕರೂ ಆಗಿರುವ ರೋಷನ್ ಬೇಗ್ ಹೆಸರನ್ನು ಐಎಎಂ ಜ್ಯುವೆಲ್ಲರ್ಸ್ ಮಾಲೀಕ ಮನ್ಸೂರ್ ಖಾನ್ ಆಡಿಯೋದಲ್ಲಿ ಪ್ರಸ್ತಾಪಿಸಿದ್ದರು. ಎರಡನೇ ಆಡಿಯೋದಲ್ಲಿ ರೋಷನ್ ಬೇಗ್​, ತನ್ನ ವಿರುದ್ಧ ಷಡ್ಯಂತ್ರ ರೂಪಿಸಿದ್ದಾರೆ ಎಂದೂ ಆರೋಪ ಮಾಡಿದ್ದರು. ಈ ಎಲ್ಲಾ ಬೆಳವಣಿಗೆಗಳು ನಡೆಯುವಾಗ ರೋಷನ್ ಬೇಗ್ ದಿಲ್ಲಿಯಲ್ಲಿದ್ದರು.

Intro:newsBody:ಊರಿಗೆ ಬಂದ ರೋಷನ್ ಬೇಗ್; ಬೆಳಗ್ಗೆಯೇ ಮನೆಯಿಂದ ತೆರಳಿ ಅಜ್ಞಾತ ಸ್ಥಳದಲ್ಲಿ ಸಭೆ!?

ಬೆಂಗಳೂರು: ದಿಲ್ಲಿಗೆ ತೆರಳಿದ್ದ ಮಾಜಿ ಸಚಿವ ಆರ್. ರೋಷನ್ ಬೇಗ್ ನಿನ್ನೆ ತಡರಾತ್ರಿಯೇ ನಗರಕ್ಕೆ ಆಗಮಿಸಿದ್ದು, ಇಂದು ಬೆಳಗ್ಗೆ ಮನೆಯಿಂದ ಆಚೆ ತೆರಳಿದ್ದು, ಎಲ್ಲಿಗೆ ಹೋಗಿದ್ದಾರೆ, ಯಾರನ್ನು ಭೇಟಿ ಮಾಡಿದ್ದಾರೆ ಎಂಬ ಬಗ್ಗೆ ಮಾಹಿತಿ ಇಲ್ಲ.
ಐಎಂಎ ವಂಚನೆ ಪ್ರಕರಣದಲ್ಲಿ ಇವರ ಹೆಸರು ಕೇಳಿ ಬಂದ ನಂತರ ಎರಡು ದಿನದ ನಂತರ ಇದೇ ಮೊದಲ ಬಾರಿಗೆ ಅವರು ನಗರದಲ್ಲಿ ಕಾಣಿಸಿಕೊಂಡಿದ್ದಾರೆ. ಶಿವಾಜಿ ನಗರ ಶಾಸಕರೂ ಆಗಿರುವ ರೋಷನ್ ಬೇಗ್ ಹೆಸರನ್ನು ಐಎಎಂ ಜ್ಯುವೆಲ್ಲರ್ಸ್ ಮಾಲೀಕ ಮನ್ಸೂರ್ ಖಾನ್ ಆಡಿಯೊದಲ್ಲಿ ಪ್ರಸ್ತಾಪಿಸಿದ್ದರು. ಈ ಸಂದರ್ಭ ರೋಷನ್ ಬೇಗ್ ದಿಲ್ಲಿಯಲ್ಲಿದ್ದರು. ನಿನ್ನೆ ತಡರಾತ್ರಿ ಪುಲಿಕೇಶಿ ನಗರದಲ್ಲಿರುವ ತಮ್ಮ ನಿವಾಸಕ್ಕೆ ಆಗಮಿಸಿದ್ದ ಅವರು ಬೆಳಗ್ಗೆ ತೆರಳಿದ್ದಾರೆ. ಇಂದು ಬೆಳಿಗ್ಗೆ ಮನೆ ಬಳಿ ಮಾಧ್ಯಮಗಳ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿತ್ತು.
ಬೆಳಿಗ್ಗೆ ಹತ್ತು ಗಂಟೆಗೆ ಮನೆ ಬಿಟ್ಟಿದ್ದ ರೋಷನ್ ಬೇಗ್ ಅಜ್ಞಾತ ಸ್ಥಳದಲ್ಲಿ ತಮ್ಮ ಕೆಲ ಆಪ್ತರ ಜತೆ ನಾಲ್ಕು ಗಂಟೆಗೂ ಹೆಚ್ಚುಕಾಲ ಚರ್ಚಿಸಿದ್ದಾರೆ. ಐಎಂಎ ಪ್ರಕರಣದಲ್ಲಿ ಹೆಸರು ಕೇಳಿ ಬರುತ್ತಿರುವ ಹಿನ್ನೆಲೆ ತಮ್ಮ ವಕೀಲರ ಸಲಹೆ ಪಡೆದಿದ್ದಾರೆ ಎನ್ನಲಾಗಿದೆ.
ರೋಷನ್ ಬೇಗ್ ಮತ್ತು ಐಎಂಎ ಸಂಸ್ಥೆ ನಡುವೆ ಪಿಪಿಪಿ ಅಡಿ ಹಣ ಹೂಡಿಕೆ ಮಾಡಿರುವುದರಿಂದ ವಕೀಲರನ್ನ ಸಂಪರ್ಕ ಮಾಡಿ ಚರ್ಚೆ ಮಾಡಿದ ರೋಷನ್ ಬೇಗ್, ಮಾಧ್ಯಮ ಗಳ ಮುಂದೆ ಬರುವ ಮೊದಲು ಕಾನೂನು ಸಲಹೆ ಪಡೆದು ನಂತರ ಸುದ್ದಿಗೋಷ್ಠಿ ನಡೆಸಲು ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.

Conclusion:news

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.