ETV Bharat / city

ಬಿಎಸ್​ವೈ ವಿಡಿಯೋ ವಿವಾದ, ಉಪಚುನಾವಣೆ ಎದುರಿಸಲು ವಕ್ತಾರರಿಗೆ‌ ಬಿಜೆಪಿ ತರಬೇತಿ - Karnataka political development

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಡಿಯೋ ಬಹಿರಂಗ, ಅಯೋಧ್ಯೆ ತೀರ್ಪು ಹಾಗೂ ಉಪಚುನಾವಣಾ ಪೂರ್ಣಗೊಳ್ಳುವವರೆಗೂ ವಕ್ತಾರರು ಹೇಗೆ ಸಮರ್ಥಿಸಿಕೊಳ್ಳಬೇಕು ಎಂಬ ಕುರಿತು ಬಿಜೆಪಿಯಿಂದ ತನ್ನ ವಕ್ತಾರರಿಗೆ ತರಬೇತಿ ನೀಡಲಾಗಿದೆ.

Important meeting in bjp office
author img

By

Published : Nov 4, 2019, 4:25 PM IST

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಡಿಯೋ ಬಹಿರಂಗ, ಅಯೋಧ್ಯೆ ತೀರ್ಪು ಸೇರಿದಂತೆ ಉಪಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಪಕ್ಷದ ವಕ್ತಾರರು ಯಾವ ರೀತಿ ಸಮರ್ಥಿಸಿಕೊಳ್ಳಬೇಕು ಎಂಬ ಕುರಿತು ಬಿಜೆಪಿ ಕಚೇರಿಯಲ್ಲಿ ಮಹತ್ವದ ಸಭೆ ನಡೆಯಿತು.

ಬಿಎಸ್​ವೈ ವಿಡಿಯೋ ವೈರಲ್ ಹಿನ್ನೆಲೆಯಲ್ಲಿ ಬಿಜೆಪಿ ಸಂಘಟನಾ ಕಾರ್ಯದರ್ಶಿ ಅರುಣ್​ಕುಮಾರ್, ಬಿಜೆಪಿ ಉಪಾಧ್ಯಕ್ಷ ನಿರ್ಮಲ್​ಕುಮಾರ್ ಸುರಾನಾ ನೇತೃತ್ವದಲ್ಲಿ ವಕ್ತಾರರ ಸಭೆ ಜರುಗಿತು.

ವಿಡಿಯೋ ಬಗ್ಗೆ ಕಾಂಗ್ರೆಸ್ ಆರೋಪಗಳಿಗೆ ಕೌಂಟರ್ ಯಾವ ರೀತಿ ಕೊಡಬೇಕು ಎನ್ನುವುದರ ಬಗ್ಗೆ ಚರ್ಚಿಸಿದರು. ನಂತರ ಸದ್ಯದಲ್ಲೇ ಪ್ರಕಟವಾಗುವ ಅಯೋಧ್ಯೆ ಕುರಿತ ಸುಪ್ರೀಂಕೋರ್ಟ್ ತೀರ್ಪು ಬಳಿಕ ಪಕ್ಷದ ಅಭಿಪ್ರಾಯಗಳು ಏನಿರಬೇಕೆಂಬ ಎಂಬುದರ ಕುರಿತೂ ಚರ್ಚಿಸಿದರು.

ಉಪಚುನಾವಣೆಯಲ್ಲಿ ಪಕ್ಷಕ್ಕೆ ಡ್ಯಾಮೇಜ್ ಆಗುವ ವಿಷಯಗಳನ್ನು ಯಾವ ರೀತಿ ನಿಭಾಯಿಸಬೇಕು ಎನ್ನುವ ಕುರಿತು ಸಭೆಯಲ್ಲಿ ಮಾಹಿತಿ ನೀಡಲಾಗಿದೆ ಎಂದು ತಿಳಿದುಬಂದಿದೆ. ಪಕ್ಷದ ಪರವಾಗಿ ಬಿಜೆಪಿ ಸಂಘಟನಾ ಕಾರ್ಯದರ್ಶಿ ಅರುಣ್​ಕುಮಾರ್ ಹಾಗೂ ಹಿರಿಯ ಮುಖಂಡ ರವೀಂದ್ರ ಅವರು ಸಮಗ್ರವಾಗಿ ತರಬೇತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಡಿಯೋ ಬಹಿರಂಗ, ಅಯೋಧ್ಯೆ ತೀರ್ಪು ಸೇರಿದಂತೆ ಉಪಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಪಕ್ಷದ ವಕ್ತಾರರು ಯಾವ ರೀತಿ ಸಮರ್ಥಿಸಿಕೊಳ್ಳಬೇಕು ಎಂಬ ಕುರಿತು ಬಿಜೆಪಿ ಕಚೇರಿಯಲ್ಲಿ ಮಹತ್ವದ ಸಭೆ ನಡೆಯಿತು.

ಬಿಎಸ್​ವೈ ವಿಡಿಯೋ ವೈರಲ್ ಹಿನ್ನೆಲೆಯಲ್ಲಿ ಬಿಜೆಪಿ ಸಂಘಟನಾ ಕಾರ್ಯದರ್ಶಿ ಅರುಣ್​ಕುಮಾರ್, ಬಿಜೆಪಿ ಉಪಾಧ್ಯಕ್ಷ ನಿರ್ಮಲ್​ಕುಮಾರ್ ಸುರಾನಾ ನೇತೃತ್ವದಲ್ಲಿ ವಕ್ತಾರರ ಸಭೆ ಜರುಗಿತು.

ವಿಡಿಯೋ ಬಗ್ಗೆ ಕಾಂಗ್ರೆಸ್ ಆರೋಪಗಳಿಗೆ ಕೌಂಟರ್ ಯಾವ ರೀತಿ ಕೊಡಬೇಕು ಎನ್ನುವುದರ ಬಗ್ಗೆ ಚರ್ಚಿಸಿದರು. ನಂತರ ಸದ್ಯದಲ್ಲೇ ಪ್ರಕಟವಾಗುವ ಅಯೋಧ್ಯೆ ಕುರಿತ ಸುಪ್ರೀಂಕೋರ್ಟ್ ತೀರ್ಪು ಬಳಿಕ ಪಕ್ಷದ ಅಭಿಪ್ರಾಯಗಳು ಏನಿರಬೇಕೆಂಬ ಎಂಬುದರ ಕುರಿತೂ ಚರ್ಚಿಸಿದರು.

ಉಪಚುನಾವಣೆಯಲ್ಲಿ ಪಕ್ಷಕ್ಕೆ ಡ್ಯಾಮೇಜ್ ಆಗುವ ವಿಷಯಗಳನ್ನು ಯಾವ ರೀತಿ ನಿಭಾಯಿಸಬೇಕು ಎನ್ನುವ ಕುರಿತು ಸಭೆಯಲ್ಲಿ ಮಾಹಿತಿ ನೀಡಲಾಗಿದೆ ಎಂದು ತಿಳಿದುಬಂದಿದೆ. ಪಕ್ಷದ ಪರವಾಗಿ ಬಿಜೆಪಿ ಸಂಘಟನಾ ಕಾರ್ಯದರ್ಶಿ ಅರುಣ್​ಕುಮಾರ್ ಹಾಗೂ ಹಿರಿಯ ಮುಖಂಡ ರವೀಂದ್ರ ಅವರು ಸಮಗ್ರವಾಗಿ ತರಬೇತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

Intro:



ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವೀಡಿಯೋ ಬಹಿರಂಗ, ಅಯೋಧ್ಯೆ ತೀರ್ಪು ಸೇರಿದಂತೆ ಉಪ ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಪಕ್ಷದ ವಕ್ತಾರರು ಯಾವ ರೀತಿ ಸಮರ್ಥನೆ ಮಾಡಿಕೊಳ್ಳಬೇಕು ಎನ್ನುವ ಕುರಿತು ಬಿಜೆಪಿ ಕಚೇರಿಯಲ್ಲಿ ಮಹತ್ವದ ಸಭೆ ನಡೆಯಿತು.

ಬಿಎಸ್ವೈ ಆಡಿಯೋ ವೈರಲ್ ಹಿನ್ನೆಲೆಯಲ್ಲಿ ಬಿಜೆಪಿ ಕಚೇರಿಯಲ್ಲಿ ಪಕ್ಷದ ಮಾಧ್ಯಮ ವಕ್ತಾರರ ಸಭೆ ನಡೆಸಲಾಯಿತು. ಸಭೆಯಲ್ಲಿ ಬಿಜೆಪಿ ಸಂಘಟನಾ ಕಾರ್ಯದರ್ಶಿ ಅರುಣ್ ಕುಮಾರ್, ಬಿಜೆಪಿ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನಾ ನೇತೃತ್ವದಲ್ಲಿ ವಕ್ತಾರರ ಸಭೆ ನಡೆಯಿತು.

ಬಿಎಸ್ವೈ ವೀಡಿಯೋ ಕುರಿತು ಪಕ್ಷದ ಕಡೆಯಿಂದ ಯಾವ ರೀತಿ ಸಮರ್ಥನೆ ಮಾಡಿಕೊಳ್ಳಬೇಕೆಂಬ ಕುರಿತು ವಕ್ತಾರರಿಗೆ ಮಾಹಿತಿ ನೀಡಲಾಯಿತು.ಬಿಎಸ್ವೈ ವೀಡಿಯೋ ಬಗ್ಗೆ ಕಾಂಗ್ರೆಸ್ ಆರೋಪಗಳಿಗೆ ಯಾವ ರೀತಿ ಕೌಂಟರ್ ಕೊಡಬೇಕು ಅನ್ನೋದ್ರ ಬಗ್ಗೆ ಚರ್ಚಿಸಿದ ನಂತರ ಸಧ್ಯದಲ್ಲೇ ಪ್ರಕಟವಾಗುವ ಅಯೋಧ್ಯೆ ಕುರಿತ ಸುಪ್ರೀಂಕೋರ್ಟ್ ತೀರ್ಪು ವಿಚಾರದ ಬಗ್ಗೆಯೂ ಚರ್ಚೆ ನಡೆಸಲಾಯಿತು. ಅಯೋಧ್ಯೆ ತೀರ್ಪು ಬಳಿಕ ಪಕ್ಷದ ಅಭಿಪ್ರಾಯಗಳು ಏನಿರಬೇಕೆಂಬ ಬಗ್ಗೆ ಚರ್ಚೆ ನಡೆಯಿತು.

ನಂತರ ಉಪ ಚುನಾವಣೆಯಲ್ಲಿ ಪಕ್ಷ ಬಂಡಾಯ ಎದುರಿಸಬೇಕಾಗಲಿದೆ ಇಂತಹ ಸನ್ನಿವೇಶದಲ್ಲಿ ಹೇಗೆ ಪಕ್ಷವನ್ನು ಸಮರ್ಥನೆ ಮಾಡಿಕೊಳ್ಳಬೇಕು, ಉಪ ಚುನಾವಣೆಯಲ್ಲಿ ಪಕ್ಷಕ್ಕೆ ಡ್ಯಾಮೇಜ್ ಆಗುವ ವಿಷಯಗಳನ್ನು ಯಾವ ರೀತಿ ನಿಭಾಯಿಸಬೇಕು ಎನ್ನುವ ಕುರಿತು ಸಭೆಯಲ್ಲಿ ಮಾಹಿತಿ ನೀಡಲಾಗಿದೆ ಎಂದು ತಿಳಿದುಬಂದಿದೆ.

ಪಕ್ಷದ ಪರವಾಗಿ ಬಿಜೆಪಿ ಸಂಘಟನಾ ಕಾರ್ಯದರ್ಶಿ ಅರುಣ್ ಕುಮಾರ್ ಹಾಗು ಸಂಘದ ಪರವಾಗಿ ಹಿರಿಯ ಮುಖಂಡ ರವೀಂದ್ರ ಸಮಗ್ರವಾಗಿ ತರಬೇತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.
Body:.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.