ETV Bharat / city

ಮಾಣಿಕ್ ಷಾ ಮೈದಾನದಲ್ಲಿ ಧ್ವಜಾರೋಹಣ: ಸ್ವಾತಂತ್ರ್ಯ ದಿನಾಚರಣೆಗೆ ಸಾರ್ವಜನಿಕರಿಗಿಲ್ಲ ಅವಕಾಶ

author img

By

Published : Jul 31, 2020, 1:48 PM IST

Updated : Jul 31, 2020, 1:56 PM IST

ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮಗಳು, ಹೆಲಿಕಾಪ್ಟರ್​ನಿಂದ ಪುಷ್ಪವೃಷ್ಟಿ, ಪಥಸಂಚಲನ ಇರುವುದಿಲ್ಲ. ಮಾಣಿಕ್ ಷಾ ಮೈದಾನದಲ್ಲಿ ಧ್ವಜಾರೋಹಣ ನಡೆಯಲಿದೆ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ತಿಳಿಸಿದರು.

Bengaluru Independence day
ಸ್ವಾತಂತ್ರ್ಯ ದಿನಾಚರಣೆ

ಬೆಂಗಳೂರು: ಕೋವಿಡ್​ ಭೀತಿ ಹಿನ್ನೆಲೆ ಈ ಬಾರಿಯ ಸ್ವಾತಂತ್ರ್ಯೋತ್ಸವವನ್ನು ಸರಳವಾಗಿ ಆಚರಿಸಲು ಕೇಂದ್ರ ಸರ್ಕಾರ ಸೂಚನೆ ನೀಡಿದ್ದು, ಈ ಕುರಿತು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಹಾಗೂ ನಗರ ಜಿಲ್ಲಾಧಿಕಾರಿ ಶಿವಮೂರ್ತಿ ನೇತೃತ್ವದಲ್ಲಿ ಸಭೆ ನಡೆಯಿತು.

ಬಿಬಿಎಂಪಿ ಆಯುಕ್ತ - ನಗರ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಭೆ

ಸಭೆ ಬಳಿಕ ಮಾತನಾಡಿದ ಮಂಜುನಾಥ್ ಪ್ರಸಾದ್, ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ ಸ್ವಾತಂತ್ರ್ಯ ದಿನಾಚರಣೆ ಮಾಡಲಾಗುವುದು. ಈ ಬಾರಿ ಸಾಂಸ್ಕೃತಿಕ ಕಾರ್ಯಕ್ರಮಗಳು ಇರುವುದಿಲ್ಲ. ಬೆಳಗ್ಗೆ 9 ಗಂಟೆಗೆ ಮಾಣಿಕ್ ಷಾ ಮೈದಾನದಲ್ಲಿ ಸಿಎಂ ಬಿಎಸ್​ವೈ ಧ್ವಜಾರೋಹಣ ನಡೆಸಲಿದ್ದಾರೆ. 10:30ರೊಳಗೆ ಕಾರ್ಯಕ್ರಮ ಮುಗಿಯಲಿದೆ. ಪ್ರತಿ ವರ್ಷದಂತೆ ಹೆಲಿಕಾಪ್ಟರ್​ನಿಂದ ಪುಷ್ಪವೃಷ್ಟಿ ಇರುವುದಿಲ್ಲ. ಧ್ವಜಾರೋಹಣದ ಬಳಿಕ ಪಥಸಂಚಲನ ಕೂಡ ಇರುವುದಿಲ್ಲ. ಪೊಲೀಸರಿಂದ ಗಾಡ್ ಆಫ್ ಹಾನರ್ ಸಾಮಾಜಿಕ ಅಂತರದಲ್ಲಿ ನಡೆಯಲಿದೆ ಎಂದರು.

Bengaluru Independence day
ಬಿಬಿಎಂಪಿ ಆಯುಕ್ತ - ನಗರ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಭೆ

ಪ್ರತಿ ವರ್ಷ 16 ಸಾವಿರ ಆಹ್ವಾನ ಪತ್ರಿಕೆ ಹಂಚಲಾಗುತ್ತಿತ್ತು. ಕೊರೊನಾ ಹಿನ್ನೆಲೆ ದೈಹಿಕ ಅಂತರ ಕಾಪಾಡುವುದು ಅಗತ್ಯವಾದ್ದರಿಂದ ಈ ಬಾರಿ 200 ಜನಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಕಾರ್ಯಕ್ರಮಕ್ಕೆ 75 ಮಂದಿ ಕೊರೊನಾ ವಾರಿಯರ್ಸ್​, ಕೋವಿಡ್​​ನಿಂದ ಗುಣಮುಖರಾದ 25 ಜನರನ್ನು ಆಹ್ವಾನಿಸಲಾಗುವುದು. ಹಿರಿಯ ಅಧಿಕಾರಿಗಳು, ಜನಪ್ರತಿನಿಧಿಗಳಿಗೆ ಮಾತ್ರ ಕಾರ್ಯಕ್ರಮಕ್ಕೆ ಬರಲು ಅವಕಾಶವಿದೆ. ಮಾಣಿಕ್ ಷಾ ಮೈದಾನದಲ್ಲಿ ಆ್ಯಂಟಿಜೆನ್ ಟೆಸ್ಟ್ ಕಿಟ್, ಥರ್ಮಲ್ ಸ್ಕ್ಯಾನರ್ ವ್ಯವಸ್ಥೆ ಇರಲಿದೆ ಎಂದು ತಿಳಿಸಿದರು.

ಬೆಂಗಳೂರು: ಕೋವಿಡ್​ ಭೀತಿ ಹಿನ್ನೆಲೆ ಈ ಬಾರಿಯ ಸ್ವಾತಂತ್ರ್ಯೋತ್ಸವವನ್ನು ಸರಳವಾಗಿ ಆಚರಿಸಲು ಕೇಂದ್ರ ಸರ್ಕಾರ ಸೂಚನೆ ನೀಡಿದ್ದು, ಈ ಕುರಿತು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಹಾಗೂ ನಗರ ಜಿಲ್ಲಾಧಿಕಾರಿ ಶಿವಮೂರ್ತಿ ನೇತೃತ್ವದಲ್ಲಿ ಸಭೆ ನಡೆಯಿತು.

ಬಿಬಿಎಂಪಿ ಆಯುಕ್ತ - ನಗರ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಭೆ

ಸಭೆ ಬಳಿಕ ಮಾತನಾಡಿದ ಮಂಜುನಾಥ್ ಪ್ರಸಾದ್, ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ ಸ್ವಾತಂತ್ರ್ಯ ದಿನಾಚರಣೆ ಮಾಡಲಾಗುವುದು. ಈ ಬಾರಿ ಸಾಂಸ್ಕೃತಿಕ ಕಾರ್ಯಕ್ರಮಗಳು ಇರುವುದಿಲ್ಲ. ಬೆಳಗ್ಗೆ 9 ಗಂಟೆಗೆ ಮಾಣಿಕ್ ಷಾ ಮೈದಾನದಲ್ಲಿ ಸಿಎಂ ಬಿಎಸ್​ವೈ ಧ್ವಜಾರೋಹಣ ನಡೆಸಲಿದ್ದಾರೆ. 10:30ರೊಳಗೆ ಕಾರ್ಯಕ್ರಮ ಮುಗಿಯಲಿದೆ. ಪ್ರತಿ ವರ್ಷದಂತೆ ಹೆಲಿಕಾಪ್ಟರ್​ನಿಂದ ಪುಷ್ಪವೃಷ್ಟಿ ಇರುವುದಿಲ್ಲ. ಧ್ವಜಾರೋಹಣದ ಬಳಿಕ ಪಥಸಂಚಲನ ಕೂಡ ಇರುವುದಿಲ್ಲ. ಪೊಲೀಸರಿಂದ ಗಾಡ್ ಆಫ್ ಹಾನರ್ ಸಾಮಾಜಿಕ ಅಂತರದಲ್ಲಿ ನಡೆಯಲಿದೆ ಎಂದರು.

Bengaluru Independence day
ಬಿಬಿಎಂಪಿ ಆಯುಕ್ತ - ನಗರ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಭೆ

ಪ್ರತಿ ವರ್ಷ 16 ಸಾವಿರ ಆಹ್ವಾನ ಪತ್ರಿಕೆ ಹಂಚಲಾಗುತ್ತಿತ್ತು. ಕೊರೊನಾ ಹಿನ್ನೆಲೆ ದೈಹಿಕ ಅಂತರ ಕಾಪಾಡುವುದು ಅಗತ್ಯವಾದ್ದರಿಂದ ಈ ಬಾರಿ 200 ಜನಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಕಾರ್ಯಕ್ರಮಕ್ಕೆ 75 ಮಂದಿ ಕೊರೊನಾ ವಾರಿಯರ್ಸ್​, ಕೋವಿಡ್​​ನಿಂದ ಗುಣಮುಖರಾದ 25 ಜನರನ್ನು ಆಹ್ವಾನಿಸಲಾಗುವುದು. ಹಿರಿಯ ಅಧಿಕಾರಿಗಳು, ಜನಪ್ರತಿನಿಧಿಗಳಿಗೆ ಮಾತ್ರ ಕಾರ್ಯಕ್ರಮಕ್ಕೆ ಬರಲು ಅವಕಾಶವಿದೆ. ಮಾಣಿಕ್ ಷಾ ಮೈದಾನದಲ್ಲಿ ಆ್ಯಂಟಿಜೆನ್ ಟೆಸ್ಟ್ ಕಿಟ್, ಥರ್ಮಲ್ ಸ್ಕ್ಯಾನರ್ ವ್ಯವಸ್ಥೆ ಇರಲಿದೆ ಎಂದು ತಿಳಿಸಿದರು.

Last Updated : Jul 31, 2020, 1:56 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.