ETV Bharat / city

ಭಾರತ-ಶ್ರೀಲಂಕಾ ಟೆಸ್ಟ್​: ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ - ಭಾರತ ಹಾಗೂ ಶ್ರೀಲಂಕಾ ತಂಡಗಳ ನಡುವಿನ ಟೆಸ್ಟ್​ ಸರಣಿಯ ಎರಡನೇ ಪಂದ್ಯವು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರಂಭ

ಸುಮಾರು ಎರಡೂವರೆ ವರ್ಷಗಳ ಬಳಿಕ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಪಂದ್ಯ ಆಯೋಜನೆಗೊಂಡಿದ್ದು, ಭಾರತ ಹಾಗೂ ಶ್ರೀಲಂಕಾ ತಂಡಗಳ ನಡುವಿನ ಟೆಸ್ಟ್​ ಸರಣಿಯ ಎರಡನೇ ಪಂದ್ಯ ನಡೆಯುತ್ತಿದೆ.

india sri lanka test seriesindia sri lanka test series
ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತ ಟೆಸ್ಟ್​ ಹಿನ್ನೆಲೆ ಬಿಗಿ ಪೊಲೀಸ್ ಬಂದೋಬಸ್ತ್
author img

By

Published : Mar 12, 2022, 4:06 PM IST

ಬೆಂಗಳೂರು: ಭಾರತ ಹಾಗೂ ಶ್ರೀಲಂಕಾ ತಂಡಗಳ ನಡುವಿನ ಟೆಸ್ಟ್​ ಸರಣಿಯ ಎರಡನೇ ಪಂದ್ಯವು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರಂಭಗೊಂಡಿದ್ದು, ಮೈದಾನದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತ ಟೆಸ್ಟ್​ ಹಿನ್ನೆಲೆ ಬಿಗಿ ಪೊಲೀಸ್ ಬಂದೋಬಸ್ತ್

ಈಗಾಗಲೇ ಮೊಹಾಲಿ ಟೆಸ್ಟ್ ಪಂದ್ಯವನ್ನು ಇನ್ನಿಂಗ್ಸ್​ ಹಾಗೂ 222 ರನ್​ಗಳ ಅಂತರದಿಂದ ಜಯಿಸಿರುವ ರೋಹಿತ್​ ಪಡೆ ಸರಣಿ ಗೆಲುವಿನ ಮೇಲೆ ಕಣ್ಣಿಟ್ಟಿದೆ. ಅಹರ್ನಿಶಿ ಟೆಸ್ಟ್ ಪಂದ್ಯವಾಗಿದ್ದು, ಸುಮಾರು ಎರಡುವರೆ ವರ್ಷಗಳ ಬಳಿಕ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಪಂದ್ಯ ಆಯೋಜನೆಗೊಂಡಿದೆ.

ಪಂದ್ಯದ ಹಿನ್ನೆಲೆಯಲ್ಲಿ ಇಬ್ಬರು ಡಿಸಿಪಿಗಳ ನೇತೃತ್ವದಲ್ಲಿ 10 ಎಸಿಪಿಗಳು, 34 ಇನ್ಸ್‌ಪೆಕ್ಟರ್​​ಗಳು, ಪಿಎಸ್ಐ, ಕಾನ್ಸ್‌ಟೇಬಲ್ಸ್, ಕೆಎಸ್ಆರ್​​ಪಿ ಮತ್ತು ಸಿಎಆರ್ ತುಕಡಿಗಳು ಸೇರಿ ಇಂದಿನಿಂದ ಐದು ದಿನ 700 ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ.

ಕೋವಿಡ್​ ಇಳಿಮುಖ ಹಿನ್ನೆಲೆಯಲ್ಲಿ ಸಂಪೂರ್ಣ ಪ್ರಮಾಣದಲ್ಲಿ ವೀಕ್ಷಕರಿಗೆ ಅವಕಾಶ ನೀಡಲಾಗಿದೆ. ವಾರಾಂತ್ಯ ಹಿನ್ನೆಲೆಯಲ್ಲಿ ಇಂದು ಮತ್ತು ನಾಳೆ ಹೆಚ್ಚು ಕ್ರಿಕೆಟ್​ ಪ್ರೇಮಿಗಳು ಆಗಮಿಸುವ ಸಾಧ್ಯತೆಯಿದೆ. ಸಂಚಾರ ದಟ್ಟಣೆಯಾಗದಂತೆ ಟ್ರಾಫಿಕ್ ಪೊಲೀಸರು ಬದಲಿ ಮಾರ್ಗಗಳ ವ್ಯವಸ್ಥೆ ಮಾಡಿದ್ದಾರೆ.

ಇದನ್ನೂ ಓದಿ: ವನಿತೆಯರ ವಿಶ್ವಕಪ್ ಕ್ರಿಕೆಟ್‌ : ಅಬ್ಬರಿಸಿ ನೆಲಕಚ್ಚಿದ ವೆಸ್ಟ್​ಇಂಡೀಸ್​, ಭಾರತಕ್ಕೆ 155 ರನ್​ಗಳ ಭರ್ಜರಿ ಗೆಲುವು!

ಬೆಂಗಳೂರು: ಭಾರತ ಹಾಗೂ ಶ್ರೀಲಂಕಾ ತಂಡಗಳ ನಡುವಿನ ಟೆಸ್ಟ್​ ಸರಣಿಯ ಎರಡನೇ ಪಂದ್ಯವು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರಂಭಗೊಂಡಿದ್ದು, ಮೈದಾನದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತ ಟೆಸ್ಟ್​ ಹಿನ್ನೆಲೆ ಬಿಗಿ ಪೊಲೀಸ್ ಬಂದೋಬಸ್ತ್

ಈಗಾಗಲೇ ಮೊಹಾಲಿ ಟೆಸ್ಟ್ ಪಂದ್ಯವನ್ನು ಇನ್ನಿಂಗ್ಸ್​ ಹಾಗೂ 222 ರನ್​ಗಳ ಅಂತರದಿಂದ ಜಯಿಸಿರುವ ರೋಹಿತ್​ ಪಡೆ ಸರಣಿ ಗೆಲುವಿನ ಮೇಲೆ ಕಣ್ಣಿಟ್ಟಿದೆ. ಅಹರ್ನಿಶಿ ಟೆಸ್ಟ್ ಪಂದ್ಯವಾಗಿದ್ದು, ಸುಮಾರು ಎರಡುವರೆ ವರ್ಷಗಳ ಬಳಿಕ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಪಂದ್ಯ ಆಯೋಜನೆಗೊಂಡಿದೆ.

ಪಂದ್ಯದ ಹಿನ್ನೆಲೆಯಲ್ಲಿ ಇಬ್ಬರು ಡಿಸಿಪಿಗಳ ನೇತೃತ್ವದಲ್ಲಿ 10 ಎಸಿಪಿಗಳು, 34 ಇನ್ಸ್‌ಪೆಕ್ಟರ್​​ಗಳು, ಪಿಎಸ್ಐ, ಕಾನ್ಸ್‌ಟೇಬಲ್ಸ್, ಕೆಎಸ್ಆರ್​​ಪಿ ಮತ್ತು ಸಿಎಆರ್ ತುಕಡಿಗಳು ಸೇರಿ ಇಂದಿನಿಂದ ಐದು ದಿನ 700 ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ.

ಕೋವಿಡ್​ ಇಳಿಮುಖ ಹಿನ್ನೆಲೆಯಲ್ಲಿ ಸಂಪೂರ್ಣ ಪ್ರಮಾಣದಲ್ಲಿ ವೀಕ್ಷಕರಿಗೆ ಅವಕಾಶ ನೀಡಲಾಗಿದೆ. ವಾರಾಂತ್ಯ ಹಿನ್ನೆಲೆಯಲ್ಲಿ ಇಂದು ಮತ್ತು ನಾಳೆ ಹೆಚ್ಚು ಕ್ರಿಕೆಟ್​ ಪ್ರೇಮಿಗಳು ಆಗಮಿಸುವ ಸಾಧ್ಯತೆಯಿದೆ. ಸಂಚಾರ ದಟ್ಟಣೆಯಾಗದಂತೆ ಟ್ರಾಫಿಕ್ ಪೊಲೀಸರು ಬದಲಿ ಮಾರ್ಗಗಳ ವ್ಯವಸ್ಥೆ ಮಾಡಿದ್ದಾರೆ.

ಇದನ್ನೂ ಓದಿ: ವನಿತೆಯರ ವಿಶ್ವಕಪ್ ಕ್ರಿಕೆಟ್‌ : ಅಬ್ಬರಿಸಿ ನೆಲಕಚ್ಚಿದ ವೆಸ್ಟ್​ಇಂಡೀಸ್​, ಭಾರತಕ್ಕೆ 155 ರನ್​ಗಳ ಭರ್ಜರಿ ಗೆಲುವು!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.