ETV Bharat / city

ಮತ್ತೆ ಸಮನ್ಸ್ ನೀಡಿದ ಇಡಿ.. ಬಂಧನದ ಭೀತಿಯಲ್ಲಿ ಡಿಕೆಶಿ:  ಇಂದು ಸುದ್ದಿಗೋಷ್ಠಿ

author img

By

Published : Aug 29, 2019, 11:59 PM IST

Updated : Aug 30, 2019, 7:07 AM IST

ಅಕ್ರಮ ಹಣ ವರ್ಗಾವಣೆ ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ಶುಕ್ರವಾರ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಮಾಜಿ ಸಚಿವ ಡಿ.ಕೆ.ಶಿವಕುಮಾರ್​ಗೆ ಮತ್ತೊಮ್ಮೆ ಸಮನ್ಸ್ ಜಾರಿಗೊಳಿಸಿದೆ.

issued summons again ED against former minister d.k.shivakumar

ಬೆಂಗಳೂರು: ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ನೀಡಿದ ಸಮನ್ಸ್ ರದ್ದು ಕೋರಿ ಹೈಕೋರ್ಟ್​ಗೆ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಬೆನ್ನಲ್ಲೇ ಮತ್ತೆ ಅಧಿಕಾರಿಗಳು ಮಾಜಿ ಸಚಿವ ಡಿ.ಕೆ.ಶಿವಕುಮಾರ್​ಗೆ ಸಮನ್ಸ್ ಜಾರಿಗೊಳಿಸಿದ್ದಾರೆ.

ನಿನ್ನೆ ರಾತ್ರಿ (ಗುರುವಾರ) 10ಕ್ಕೆ ನಾಲ್ವರು ಇಡಿ ಅಧಿಕಾರಿಗಳು ಸದಾಶಿವನಗರದಲ್ಲಿರುವ ಡಿಕೆಶಿ ನಿವಾಸಕ್ಕೆ ಆಗಮಿಸಿ ವಿಚಾರಣೆಗೆ ಹಾಜರಾಗುವಂತೆ ಡಿ.ಕೆ.ಶಿವಕುಮಾರ್​​ಗೆ ಸೂಚಿಸಿದ್ದಾರೆ.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ, ಎಲ್ಲರೂ (ಮಾಧ್ಯಮ) ಚೆನ್ನಾಗಿ ವ್ಯಾಖ್ಯಾನ ಮಾಡ್ತಿದ್ದೀರಿ. ಏನು ವ್ಯಾಖ್ಯಾನ ಮಾಡ್ತಿರೋ ಮಾಡಿ. ಸುದ್ದಿಗೋಷ್ಠಿ ಕರೆದು ಎಲ್ಲವನ್ನೂ ಮಾತಾಡುತ್ತೇನೆ ಎಂದು ಕಿಡಿಕಾರಿದರು.

ವಕೀಲರನ್ನ ಭೇಟಿ ಮಾಡಿದ್ದೀರಾ? ಎಂಬ ವರದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, 'ನೀನೇನು ನನ್ನ ವಕೀಲನಾ ಏನಪ್ಪ' ಎಂದು ಮಾಧ್ಯಮಗಳಿಗೆ‌ ಪ್ರತಿಕ್ರಿಯಿಸಿ ನಿರ್ಗಮಿಸಿದರು.

ಮಾಜಿ ಸಚಿವ ಡಿ.ಕೆ.ಶಿವಕುಮಾರ್

ಸಮನ್ಸ್ ಜಾರಿ ಮಾಡುತ್ತಿದ್ದಂತೆ ಮಾಜಿ ಪ್ರಧಾನಿ ಹೆಚ್​.ಡಿ.ದೇವೇಗೌಡ ಅವರನ್ನು ಭೇಟಿ ಮಾಡಿದ ಡಿ‌.ಕೆ‌.ಶಿವಕುಮಾರ್, ಈ ಬಗ್ಗೆ ಚರ್ಚಿಸಿದ್ದಾರೆ. ನಂತರ ಖಾಸಗಿ ಹೋಟೆಲ್​​ನಲ್ಲಿ ಕಾನೂನು ತಜ್ಞರನ್ನು ಸಂಪರ್ಕಿಸಿ ತಮ್ಮ ಸ್ವಕ್ಷೇತ್ರ ಕನಕಪುರಕ್ಕೆ ತೆರಳಿದ್ದಾರೆ ಎನ್ನಲಾಗಿದೆ.

ಬಂಧನ ಭೀತಿಯಲ್ಲಿ ಡಿಕೆಶಿ?:

ವಿಚಾರಣೆಗೆ ಕರೆಸಿ ಇಡಿ ತಮ್ಮನ್ನ ವಶಕ್ಕೆ ಪಡೆಯಬಹುದಾ ಅಥವಾ ಬಂಧಿಸಲಿದೆಯಾ ಎಂದು ಆತಂಕಕ್ಕೆ ಒಳಗಾಗಿದ್ದಾರೆ ಎಂದು ಹೇಳಲಾಗಿದೆ.

ಬೆಂಗಳೂರು: ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ನೀಡಿದ ಸಮನ್ಸ್ ರದ್ದು ಕೋರಿ ಹೈಕೋರ್ಟ್​ಗೆ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಬೆನ್ನಲ್ಲೇ ಮತ್ತೆ ಅಧಿಕಾರಿಗಳು ಮಾಜಿ ಸಚಿವ ಡಿ.ಕೆ.ಶಿವಕುಮಾರ್​ಗೆ ಸಮನ್ಸ್ ಜಾರಿಗೊಳಿಸಿದ್ದಾರೆ.

ನಿನ್ನೆ ರಾತ್ರಿ (ಗುರುವಾರ) 10ಕ್ಕೆ ನಾಲ್ವರು ಇಡಿ ಅಧಿಕಾರಿಗಳು ಸದಾಶಿವನಗರದಲ್ಲಿರುವ ಡಿಕೆಶಿ ನಿವಾಸಕ್ಕೆ ಆಗಮಿಸಿ ವಿಚಾರಣೆಗೆ ಹಾಜರಾಗುವಂತೆ ಡಿ.ಕೆ.ಶಿವಕುಮಾರ್​​ಗೆ ಸೂಚಿಸಿದ್ದಾರೆ.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ, ಎಲ್ಲರೂ (ಮಾಧ್ಯಮ) ಚೆನ್ನಾಗಿ ವ್ಯಾಖ್ಯಾನ ಮಾಡ್ತಿದ್ದೀರಿ. ಏನು ವ್ಯಾಖ್ಯಾನ ಮಾಡ್ತಿರೋ ಮಾಡಿ. ಸುದ್ದಿಗೋಷ್ಠಿ ಕರೆದು ಎಲ್ಲವನ್ನೂ ಮಾತಾಡುತ್ತೇನೆ ಎಂದು ಕಿಡಿಕಾರಿದರು.

ವಕೀಲರನ್ನ ಭೇಟಿ ಮಾಡಿದ್ದೀರಾ? ಎಂಬ ವರದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, 'ನೀನೇನು ನನ್ನ ವಕೀಲನಾ ಏನಪ್ಪ' ಎಂದು ಮಾಧ್ಯಮಗಳಿಗೆ‌ ಪ್ರತಿಕ್ರಿಯಿಸಿ ನಿರ್ಗಮಿಸಿದರು.

ಮಾಜಿ ಸಚಿವ ಡಿ.ಕೆ.ಶಿವಕುಮಾರ್

ಸಮನ್ಸ್ ಜಾರಿ ಮಾಡುತ್ತಿದ್ದಂತೆ ಮಾಜಿ ಪ್ರಧಾನಿ ಹೆಚ್​.ಡಿ.ದೇವೇಗೌಡ ಅವರನ್ನು ಭೇಟಿ ಮಾಡಿದ ಡಿ‌.ಕೆ‌.ಶಿವಕುಮಾರ್, ಈ ಬಗ್ಗೆ ಚರ್ಚಿಸಿದ್ದಾರೆ. ನಂತರ ಖಾಸಗಿ ಹೋಟೆಲ್​​ನಲ್ಲಿ ಕಾನೂನು ತಜ್ಞರನ್ನು ಸಂಪರ್ಕಿಸಿ ತಮ್ಮ ಸ್ವಕ್ಷೇತ್ರ ಕನಕಪುರಕ್ಕೆ ತೆರಳಿದ್ದಾರೆ ಎನ್ನಲಾಗಿದೆ.

ಬಂಧನ ಭೀತಿಯಲ್ಲಿ ಡಿಕೆಶಿ?:

ವಿಚಾರಣೆಗೆ ಕರೆಸಿ ಇಡಿ ತಮ್ಮನ್ನ ವಶಕ್ಕೆ ಪಡೆಯಬಹುದಾ ಅಥವಾ ಬಂಧಿಸಲಿದೆಯಾ ಎಂದು ಆತಂಕಕ್ಕೆ ಒಳಗಾಗಿದ್ದಾರೆ ಎಂದು ಹೇಳಲಾಗಿದೆ.

Intro:Body:ಇಡಿಯಿಂದ ಮತ್ತೆ ಸಮನ್ಸ್ ಜಾರಿ: ನಾಳೆ ಸುದ್ದಿಗೋಷ್ಠಿ ಕರೆದು ಎಲ್ಲವನ್ನು ಹೇಳುವೆ ಎಂದ ಡಿಕೆಶಿ

ಬೆಂಗಳೂರು:
ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ನೀಡಿದ ಸಮನ್ಸ್ ರದ್ದು ಕೋರಿ ಹೈಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ್ದ ಬೆನ್ನಲೇ ಇಡಿ ಅಧಿಕಾರಿಗಳು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಗೆ ಸಮನ್ಸ್ ಜಾರಿ ಮಾಡಿದ್ದಾರೆ.
ಸದಾಶಿವ ನಗರದಲ್ಲಿರುವ ಡಿಕೆಶಿ ಅವರ ನಿವಾಸದಲ್ಲಿ ರಾತ್ರಿ 10 ಗಂಟೆ ವೇಳೆ ನಾಲ್ಕು ಮಂದಿ ಇಡಿ ಅಧಿಕಾರಿಗಳ ತಂಡ ಆಗಮಿಸಿ ಡಿ.ಕೆ. ಶಿವಕುಮಾರ್ ಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದೆ.‌
ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿ ಎಲ್ಲರೂ (ಮಾಧ್ಯಮ) ಚೆನ್ನಾಗಿ ವ್ಯಾಖ್ಯಾನ ಮಾಡ್ತಿದ್ದೀರಿ. ಏನು ವ್ಯಾಖ್ಯಾನ ಮಾಡ್ತಿರೋ ಮಾಡಿ.. ನಾಳೆ ಸುದ್ದಿಗೋಷ್ಠಿ ಕರೆದು ಎಲ್ಲವನ್ನೂ ಮಾತಾಡುತ್ತೇನೆ ಎಂದ ಅವರ ವಕೀಲರನ್ನ ಭೇಟಿ ಮಾಡಿದ್ರ ಪ್ರಶ್ನೆಗೆ ಉತ್ತರಿಸಿ ನೀನು ಏನು ನನ್ನ ವಕೀಲ ಏನಪ್ಪ ಎಂದು ಮಾಧ್ಯಮಗಳಿಗೆ‌ ಪ್ರತಿಕ್ರಿಯಿಸಿ ನಿರ್ಗಮಿಸಿದರು.

Conclusion:
Last Updated : Aug 30, 2019, 7:07 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.