ETV Bharat / city

ಜೆಡಿಎಸ್ ಕಚೇರಿಯಲ್ಲಿ ದಾಸಶ್ರೇಷ್ಠ ಕನಕದಾಸರ 532ನೇ ಜಯಂತ್ಯುತ್ಸವ.. - ಬೆಂಗಳೂರು ಸುದ್ದಿ

ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ಭಕ್ತ ಕನಕದಾಸರ 532ನೇ ಜಯಂತ್ಯುತ್ಸವ ಆಚರಿಸಲಾಯಿತು.

ಜೆಡಿಎಸ್ ಕಚೇರಿಯಲ್ಲಿ ಕನಕದಾಸರ 532ನೇ ಜಯಂತ್ಯೋತ್ಸವ
author img

By

Published : Nov 15, 2019, 5:22 PM IST

ಬೆಂಗಳೂರು: ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ದಾಸ ಶ್ರೇಷ್ಠ ಭಕ್ತ ಕನಕದಾಸರ 532ನೇ ಜಯಂತ್ಯುತ್ಸವ ಆಚರಿಸಲಾಯಿತು.

ಜೆಡಿಎಸ್ ಕಚೇರಿಯಲ್ಲಿ ಕನಕದಾಸರ 532ನೇ ಜಯಂತ್ಯುತ್ಸವ..

ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಜೆಡಿಎಸ್ ಕಾರ್ಯಾಧ್ಯಕ್ಷ ಎಂ.ಎಸ್.ನಾರಾಯಣರಾವ್, ಕನಕದಾಸರು ಜಾತಿ ಮತ್ತು ವರ್ಗಗಳನ್ನು ಮೀರಿದ ವ್ಯಕ್ತಿಯಾಗಿದ್ದರು. ಅವರ ಜಾತ್ಯಾತೀತ ಮನೋಭಾವನೆಯನ್ನು ಎಲ್ಲಾ ಸಮುದಾಯದವರು ಅರ್ಥ ಮಾಡಿಕೊಂಡು ಜಾರಿಗೆ ತರುವಂತಾಗಬೇಕು ಎಂದರು.

ಇನ್ನು, ಕಾರ್ಯಕ್ರಮಕ್ಕೆ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ,ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ ಸೇರಿ ಹಲವಾರು ಮುಖಂಡರು ಭಾಗವಹಿಸಬೇಕಿತ್ತು.ಆದರೆ, ಉಪಚುನಾವಣೆ ಒತ್ತಡದಿಂದಾಗಿ ಕಾರ್ಯಕ್ರಮಕ್ಕೆ ಬರಲು ಸಾಧ್ಯವಾಗಿಲ್ಲವೆಂದು ಜೆಡಿಎಸ್ ಮುಖಂಡರು ತಿಳಿಸಿದ್ದಾರೆ.

ಬೆಂಗಳೂರು: ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ದಾಸ ಶ್ರೇಷ್ಠ ಭಕ್ತ ಕನಕದಾಸರ 532ನೇ ಜಯಂತ್ಯುತ್ಸವ ಆಚರಿಸಲಾಯಿತು.

ಜೆಡಿಎಸ್ ಕಚೇರಿಯಲ್ಲಿ ಕನಕದಾಸರ 532ನೇ ಜಯಂತ್ಯುತ್ಸವ..

ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಜೆಡಿಎಸ್ ಕಾರ್ಯಾಧ್ಯಕ್ಷ ಎಂ.ಎಸ್.ನಾರಾಯಣರಾವ್, ಕನಕದಾಸರು ಜಾತಿ ಮತ್ತು ವರ್ಗಗಳನ್ನು ಮೀರಿದ ವ್ಯಕ್ತಿಯಾಗಿದ್ದರು. ಅವರ ಜಾತ್ಯಾತೀತ ಮನೋಭಾವನೆಯನ್ನು ಎಲ್ಲಾ ಸಮುದಾಯದವರು ಅರ್ಥ ಮಾಡಿಕೊಂಡು ಜಾರಿಗೆ ತರುವಂತಾಗಬೇಕು ಎಂದರು.

ಇನ್ನು, ಕಾರ್ಯಕ್ರಮಕ್ಕೆ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ,ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ ಸೇರಿ ಹಲವಾರು ಮುಖಂಡರು ಭಾಗವಹಿಸಬೇಕಿತ್ತು.ಆದರೆ, ಉಪಚುನಾವಣೆ ಒತ್ತಡದಿಂದಾಗಿ ಕಾರ್ಯಕ್ರಮಕ್ಕೆ ಬರಲು ಸಾಧ್ಯವಾಗಿಲ್ಲವೆಂದು ಜೆಡಿಎಸ್ ಮುಖಂಡರು ತಿಳಿಸಿದ್ದಾರೆ.

Intro:ಬೆಂಗಳೂರು : ಕನಕದಾಸರ 532 ನೇ ಜಯಂತ್ಯೋತ್ಸವವನ್ನು ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ಇಂದು ಆಚರಿಸಲಾಯಿತು.Body:ಈ ಕಾರ್ಯಕ್ರಮದಲ್ಲಿ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ, ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ. ಕುಮಾರಸ್ವಾಮಿ ಸೇರಿದಂತೆ ಹಲವಾರು ಮುಖಂಡರು ಭಾಗವಹಿಸಬೇಕಿತ್ತು. ಆದರೆ, ಉಪಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಒತ್ತಡದಿಂದಾಗಿ ಕಾರ್ಯಕ್ರಮಕ್ಕೆ ಬರಲು ಸಾಧ್ಯವಾಗಿಲ್ಲವೆಂದು ಜೆಡಿಎಸ್ ಮುಖಂಡರು ಸ್ಪಷ್ಟನೆ ನೀಡಿದರು.
ನಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಮಾಜಿ ಶಾಸಕ, ಜೆಡಿಎಸ್ ಕಾರ್ಯಾಧ್ಯಕ್ಷ ಎಂ.ಎಸ್. ನಾರಾಯಣರಾವ್ ಮಾತನಾಡಿ, ಕನಕದಾಸರು ಜಾತಿ, ವರ್ಗಗಳನ್ನು ಮೀರಿದ ವ್ಯಕ್ತಿಯಾಗಿದ್ದು, ಅವರ ಜಾತ್ಯಾತೀತ ಮನೋಭಾವನೆಯನ್ನು ಎಲ್ಲಾ ಸಮುದಾಯದವರು ಅರ್ಥ ಮಾಡಿಕೊಂಡು ಜಾರಿಗೆ ತರುವಂತಾಗಬೇಕೆಂದರು.
ಹಿಂದುಳಿದ ವರ್ಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಎಂ. ನಾಗರಾಜ್, ಜೆಡಿಎಸ್ ಬೆಂಗಳೂರು ನಗರ ಕಾರ್ಯಾಧ್ಯಕ್ಷ ಕೆ.ವಿ. ನಾರಾಯಣಸ್ವಾಮಿ, ಜೆಡಿಎಸ್ ಪರಿಶಿಷ್ಟ ಪಂಗಡ ವಿಭಾಗದ ಅಧ್ಯಕ್ಷ ಕೆ.ಎ. ಆನಂದ್, ಮುಖಂಡರಾದ ಕನ್ಯಾಕುಮಾರಿ, ಶಾಂತಲಾ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.