ದೇವನಹಳ್ಳಿ (ಬೆಂಗಳೂರು ಗ್ರಾಮಾಂತರ): ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುವವರು ಹಾಗೂ ಹೋಗುವವರು ಸ್ವಂತ ವಾಹನ ಅಥವಾ ಬಿಎಂಟಿಸಿ ಬಸ್ಗಳನ್ನ ಬಳಸಿ ಎಂದು ಕೆಐಎಬಿ ಪ್ರಯಾಣಿಕರಿಗೆ ಮನವಿ ಮಾಡಿದೆ.
ಕೊರೊನಾ ಕಾರಣದಿಂದ ಬಾಡಿಗೆ ಸಿಗದೇ ಆರ್ಥಿಕ ಸಂಕಷ್ಟಕ್ಕೊಳಗಾಗಿದ್ದ ಟ್ಯಾಕ್ಸಿ ಚಾಲಕನೋರ್ವ, ಮಂಗಳವಾರ ಸಂಜೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆಗಮನ ದ್ವಾರದ ಮುಂಭಾಗ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ. ಕೂಡಲೇ ಸ್ಥಳಕ್ಕಾಗಮಿಸಿದ ವಿಮಾನ ನಿಲ್ದಾಣ ಪೊಲೀಸರು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಇಂದು ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೇ ಚಾಲಕ ಮೃಪಟ್ಟಿದ್ದಾನೆ.
ಘಟನೆಯಿಂದ ಆಕ್ರೋಶಗೊಂಡಿರುವ ಟ್ಯಾಕ್ಸಿ ಚಾಲಕರು, ಟ್ಯಾಕ್ಸಿ ಸೇವೆ ಸ್ಥಗಿತಗೊಳಿಸಿ ಏರ್ಪೋರ್ಟ್ ಬಳಿ ಪ್ರತಿಭಟನೆ ನಡೆಸುವ ಸಾಧ್ಯತೆಯಿದೆ. ಹೀಗಾಗಿ, ವಿಮಾನ ನಿಲ್ದಾಣಕ್ಕೆ ಬರುವವರು ಹಾಗೂ ಹೋಗುವವರು ಸ್ವಂತ ವಾಹನ ಅಥವಾ ಬಿಎಂಟಿಸಿ ಬಸ್ಗಳನ್ನ ಬಳಸಿ ಎಂದು ಕೆಐಎಬಿ ಪ್ರಯಾಣಿಕರಿಗೆ ಮನವಿ ಮಾಡಿದೆ.
ಓದಿ: ಏರ್ ಪೋರ್ಟ್ ಮುಂದೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಚಾಲಕ ಸಾವು