ETV Bharat / city

ಕೋಟಿ..ಕೋಟಿ ಮೌಲ್ಯದ ಚಿನ್ನ ತೆಗೆದುಕೊಂಡು ನಾಪತ್ತೆ: ಮಗಳ ವಿರುದ್ಧವೇ ದೂರು ಕೊಟ್ಟ ತಾಯಿ

author img

By

Published : Nov 13, 2021, 1:52 PM IST

4 ಕೋಟಿ ರೂ. ಮೌಲ್ಯದ 7.5 ಕೆಜಿ ವಜ್ರ ಹಾಗೂ ಚಿನ್ನಾಭರಣ ತೆಗೆದುಕೊಂಡು ಮಗಳು ನಾಪತ್ತೆಯಾಗಿದ್ದಾಳೆ (daughter escaped) ಎಂದು ಮಗಳ ವಿರುದ್ಧವೇ ತಾಯಿ ಜೆ.ಪಿ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

bangalore fraud case
ಬೆಂಗಳೂರು ವಂಚನೆ ಪ್ರಕರಣ

ಬೆಂಗಳೂರು: ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಚಿನ್ನಾಭರಣ ತೆಗೆದುಕೊಂಡು ವಂಚಿಸಿರುವ(bangalore fraud case) ಆರೋಪದ ಮೇಲೆ ತಾಯಿಯೇ ಮಗಳ ಮೇಲೆ ದೂರು(lady complaint against her daughter) ದಾಖಲಿಸಿರುವ ಘಟನೆ ರಾಜಧಾನಿಯ ಜೆಪಿ ನಗರ ಪೊಲೀಸ್ ಠಾಣೆ(jp nagar police station) ವ್ಯಾಪ್ತಿಯಲ್ಲಿ ನಡೆದಿದೆ.

ಸುಮಾರು 4 ಕೋಟಿ ರೂ. ಮೌಲ್ಯದ 7.5 ಕೆಜಿ ವಜ್ರ ಹಾಗೂ ಚಿನ್ನಾಭರಣ ತೆಗೆದುಕೊಂಡು ಮಗಳು ನಾಪತ್ತೆಯಾಗಿದ್ದಾಳೆ (daughter escaped) ಎಂದು ಮಗಳ ವಿರುದ್ಧವೇ ತಾಯಿ ದೂರು ನೀಡಿದ್ದಾರೆ. ವಿಜಯಲಕ್ಷ್ಮಿ ಎನ್ನುವವರು ಮಗಳು ತೇಜವಂತಿ(Accused tejavanti) ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಈ ಸಂಬಂಧ ಜೆ.ಪಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‌.ಐ.ಆರ್ ದಾಖಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: Rafael Scam: ಜಂಟಿ ಸದನ ಸಮಿತಿ ಮೂಲಕ ರಫೇಲ್ ಹಗರಣದ ತನಿಖೆಗೆ ಕೇಂದ್ರ ಸರ್ಕಾರ ಮುಂದಾಗಲಿ: ಪವನ್ ಖೇರಾ ಒತ್ತಾಯ

ವಿಜಯಲಕ್ಷ್ಮಿ ಕೆಲ ದಿನಗಳ ಹಿಂದೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಈ ವೇಳೆ, ಮನೆಗೆ ಬಂದಿದ್ದ ತೇಜವಂತಿ ಲಾಕರ್‌ನಲ್ಲಿ ಸುರಕ್ಷಿತವಾಗಿ ಇಡುವುದಾಗಿ ಹೇಳಿ ಚಿನ್ನ ತೆಗೆದುಕೊಂಡು ಹೋಗಿದ್ದಳು. ಆದರೆ ಚಿನ್ನ ತೆಗೆದುಕೊಂಡು ಹೋದ ನಂತರ ತೇಜವಂತಿ ನಾಪತ್ತೆಯಾಗಿದ್ದಾಳೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಭಾರತೀಯ ದಂಡಸಂಹಿತೆಯ ಸೆಕ್ಷನ್ 420ರ ಅಡಿ ಎಫ್‌ಐಆರ್ ದಾಖಲಾಗಿದ್ದು, ಮಗಳು ತೇಜವಂತಿ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಬೆಂಗಳೂರು: ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಚಿನ್ನಾಭರಣ ತೆಗೆದುಕೊಂಡು ವಂಚಿಸಿರುವ(bangalore fraud case) ಆರೋಪದ ಮೇಲೆ ತಾಯಿಯೇ ಮಗಳ ಮೇಲೆ ದೂರು(lady complaint against her daughter) ದಾಖಲಿಸಿರುವ ಘಟನೆ ರಾಜಧಾನಿಯ ಜೆಪಿ ನಗರ ಪೊಲೀಸ್ ಠಾಣೆ(jp nagar police station) ವ್ಯಾಪ್ತಿಯಲ್ಲಿ ನಡೆದಿದೆ.

ಸುಮಾರು 4 ಕೋಟಿ ರೂ. ಮೌಲ್ಯದ 7.5 ಕೆಜಿ ವಜ್ರ ಹಾಗೂ ಚಿನ್ನಾಭರಣ ತೆಗೆದುಕೊಂಡು ಮಗಳು ನಾಪತ್ತೆಯಾಗಿದ್ದಾಳೆ (daughter escaped) ಎಂದು ಮಗಳ ವಿರುದ್ಧವೇ ತಾಯಿ ದೂರು ನೀಡಿದ್ದಾರೆ. ವಿಜಯಲಕ್ಷ್ಮಿ ಎನ್ನುವವರು ಮಗಳು ತೇಜವಂತಿ(Accused tejavanti) ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಈ ಸಂಬಂಧ ಜೆ.ಪಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‌.ಐ.ಆರ್ ದಾಖಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: Rafael Scam: ಜಂಟಿ ಸದನ ಸಮಿತಿ ಮೂಲಕ ರಫೇಲ್ ಹಗರಣದ ತನಿಖೆಗೆ ಕೇಂದ್ರ ಸರ್ಕಾರ ಮುಂದಾಗಲಿ: ಪವನ್ ಖೇರಾ ಒತ್ತಾಯ

ವಿಜಯಲಕ್ಷ್ಮಿ ಕೆಲ ದಿನಗಳ ಹಿಂದೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಈ ವೇಳೆ, ಮನೆಗೆ ಬಂದಿದ್ದ ತೇಜವಂತಿ ಲಾಕರ್‌ನಲ್ಲಿ ಸುರಕ್ಷಿತವಾಗಿ ಇಡುವುದಾಗಿ ಹೇಳಿ ಚಿನ್ನ ತೆಗೆದುಕೊಂಡು ಹೋಗಿದ್ದಳು. ಆದರೆ ಚಿನ್ನ ತೆಗೆದುಕೊಂಡು ಹೋದ ನಂತರ ತೇಜವಂತಿ ನಾಪತ್ತೆಯಾಗಿದ್ದಾಳೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಭಾರತೀಯ ದಂಡಸಂಹಿತೆಯ ಸೆಕ್ಷನ್ 420ರ ಅಡಿ ಎಫ್‌ಐಆರ್ ದಾಖಲಾಗಿದ್ದು, ಮಗಳು ತೇಜವಂತಿ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.