ETV Bharat / city

ಬೆಂಗಳೂರು : ಆನೆ ಕಾಲಿನ ಪಾದ ಸೇರಿ ಪ್ರಾಚೀನ ಕಾಲದ ವಸ್ತು ಮಾರುತ್ತಿದ್ದ ಆರೋಪಿ ಬಂಧನ - ಅರಣ್ಯ ಇಲಾಖೆಯಿಂದ ನಿರಾಕ್ಷೇಪಣ ಪ್ರಮಾಣಪತ್ರ

ಅನಧಿಕೃತವಾಗಿ ನಗರದಲ್ಲಿ ಆನೆಯ ಕಾಲಿನ ಪಾದ ಸೇರಿದಂತೆ ಸುಮಾರು 1 ಕೋಟಿ ರೂಪಾಯಿ ಮೌಲ್ಯದ ಪ್ರಾಚೀನ ಕಾಲದ ವಸ್ತುಗಳ (Ancient items ) ಮಾರಾಟಕ್ಕೆ ಯತ್ನಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ವಶಪಡಿಸಿಕೊಂಡಿರುವ ವಸ್ತುಗಳಿಗೆ ಪಾಶ್ಚಿಮಾತ್ಯ ದೇಶಗಳಲ್ಲಿ ಅಪಾರ ಬೇಡಿಕೆ ಇದೆ ಎಂದು ತಿಳಿದು ಬಂದಿದೆ..

Ancient itemsMan arrested while selling Ancient items in Bangalore
ಪ್ರಾಚೀನ ಕಾಲದ ವಸ್ತು ಮಾರುತ್ತಿದ್ದ ಆರೋಪಿ ಬಂಧನ
author img

By

Published : Nov 12, 2021, 4:30 PM IST

Updated : Nov 12, 2021, 4:37 PM IST

ಬೆಂಗಳೂರು : ಅರಣ್ಯ ಇಲಾಖೆಯಿಂದ (Forest Department) ನಿರಾಕ್ಷೇಪಣ ಪ್ರಮಾಣಪತ್ರ ಪಡೆದುಕೊಳ್ಳದೆ ಅನಧಿಕೃತವಾಗಿ ನಗರದಲ್ಲಿ ಆನೆಯ ಕಾಲಿನ ಪಾದ ಸೇರಿದಂತೆ ಸುಮಾರು 1 ಕೋಟಿ ರೂಪಾಯಿ ಮೌಲ್ಯದ ಪ್ರಾಚೀನ ಕಾಲದ ವಸ್ತುಗಳ (Ancient items ) ಮಾರಾಟಕ್ಕೆ ಯತ್ನಿಸಿದ ಆರೋಪಿಯನ್ನು ಕಾಡುಗೊಂಡನಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಪ್ರಕರಣದ ಕುರಿತಂತೆ ನಗರ ಪೂರ್ವ ವಿಭಾಗದ ಡಿಸಿಪಿ ಶರಣಪ್ಪ ಮಾಹಿತಿ ನೀಡಿರುವುದು..

ಕೆಜಿಹಳ್ಳಿಯ ಹೆಚ್​ಬಿಆರ್ ಲೇಔಟ್ ನಿವಾಸಿ ಆರ್ಯನ್ ಖಾನ್ ಬಂಧಿತ ಆರೋಪಿ. ಬಂಧಿತನಿಂದ ಆನೆ ಕಾಲಿನ ಪಾದ, ತಾಮ್ರದ ಪ್ಲೇಟ್, ಒಂದು ಮಿಲ್ಕ್ ಜಗ್, ಒಂದು ಟೀ ಪಾಟ್, ಒಂದು ಮಗರ್ ಸ್ಟೇಯರ್, ಭೂತಾನ್ ಶೋ ಪೀಸ್, ಐರೀಷ್ ಟೀ ಮೇಕರ್, ಶುಗರ್ ಪಾಟ್, ಸ್ಮಾಲ್ ಮಿಲ್ಕ್ ಜಗ್, ಒಂದು ಜರ್ಮನ್ ಸಿಲ್ವರ್ ಸೌಟು, ಎರಡು ಜರ್ಮನ್ ಸಿಲ್ವರ್ ಆಶ್ ಟ್ರೇ, 5 ಚಿಕ್ಕ ಮಸ್ಟರ್ಡ್ ಟ್ರೇ, ಎರಡು ಚಿಕ್ಕ ಮಂಚಗಳು, ಎರಡು ಆಫ್ರಿಕನ್ ಆರ್ಟ್‌ವುಡ್ ಸ್ಪೂನ್, ಪ್ರಾಣಿಯ ಮೂಳೆಯಿಂದ ಮಾಡಿದ ಸ್ಪೂನ್, ಎರಡು ಜರ್ಮನ್ ಸಿಲ್ವರ್‌ ಫೋರ್ಕ್, ಟೇಬಲ್ ನೈಫ್ ಶಾರ್ಪ್‌ನರ್ ಹಾಗೂ ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದೆ.

ಆರೋಪಿಯು ತನ್ನ ಅಣ್ಣನ ಮಗನ ವೈದ್ಯಕೀಯ ಚಿಕಿತ್ಸೆ(Medical Treatment) ಕೊಡಿಸುವ ಸಲುವಾಗಿ ಮತ್ತು ತನ್ನ ಮನೆಯ ಬಾಡಿಗೆ ಕಟ್ಟಲು ಮಾಡಿಕೊಂಡಿರುವ ಸಾಲ ತೀರಿಸಲು ಈ ವಸ್ತುಗಳ ಮಾರಾಟಕ್ಕೆ ಪ್ರಯತ್ನಿಸುತ್ತಿರುವುದಾಗಿ ಪೊಲೀಸರ ಮುಂದೆ ತಿಳಿಸಿದ್ದಾನೆ.

ವಶಪಡಿಸಿಕೊಂಡಿರುವ ವಸ್ತುಗಳಿಗೆ ಪಾಶ್ಚಿಮಾತ್ಯ ದೇಶಗಳಲ್ಲಿ ಅಪಾರ ಬೇಡಿಕೆ ಇದೆ ಎಂದು ತಿಳಿದು ಬಂದಿದೆ. ಸದ್ಯ ಪ್ರಕರಣ ಕುರಿತು ಕಾಡುಗೊಂಡನಹಳ್ಳಿ ಪೊಲೀಸ್ ಠಾಣೆಯಲ್ಲಿ ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.

ಪ್ರಾಚೀನ ಕಾಲದ ವಸ್ತುಗಳು ಸಿಕ್ಕಿದ್ದು ಹೇಗೆ? : ಆರೋಪಿ ಆರ್ಯನ್ ಖಾನ್ ತಾತ ಕೆಜಿ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನೆಲೆಸಿದ್ದ ಆಂಗ್ಲೋ-ಇಂಡಿಯನ್ (Anglo Indian) ಮಹಿಳೆ ಮನೆಯಲ್ಲಿ ಕೆಲಸ ಮಾಡುತ್ತಿದ್ದರು. ಇಂಗ್ಲೆಂಡ್​ಗೆ ಹೋಗುವಾಗ ಮನೆಯಲ್ಲಿದ್ದ ಪ್ರಾಚೀನ ವಸ್ತುಗಳನ್ನು ಉಡುಗೊರೆಯಾಗಿ ಆ ಮಹಿಳೆ ನೀಡಿದ್ದರು.

ಕಾನೂನು ಪ್ರಕಾರ ವನ್ಯಜೀವಿಗೆ ಸಂಬಂಧಿಸಿ ವಸ್ತುಗಳನ್ನು ಇಟ್ಟುಕೊಳ್ಳಬೇಕಾದರೆ ಅರಣ್ಯ ಇಲಾಖೆಯಿಂದ (Forest Department) ಪ್ರಮಾಣಪತ್ರ ಪಡೆಯಬೇಕಾಗುತ್ತದೆ. ಜೊತೆಗೆ ಇನ್ನೊಬ್ಬರಿಗೆ ಮಾರಾಟ ಮಾಡಬೇಕಾದರೂ ದಾಖಲಾತಿ ಮಾಡಿಸಿಕೊಳ್ಳಬೇಕಿದೆ.

ಆದರೆ, ಆರೋಪಿಯು ಯಾವುದೇ ರೀತಿಯ ನಿಯಮಗಳನ್ನ ಪಾಲಿಸದೆ ಅಕ್ರಮವಾಗಿ ಕೋಟ್ಯಂತರ ಹಣಕ್ಕೆ ಮಾರಾಟ ಮಾಡಲು ಯತ್ನಿಸುತ್ತಿದ್ದ ಎಂದು ನಗರ ಪೂರ್ವ ವಿಭಾಗದ ಡಿಸಿಪಿ ಶರಣಪ್ಪ ತಿಳಿಸಿದ್ದಾರೆ.

ಓದಿ: ಕುಖ್ಯಾತ ರೌಡಿಶೀಟರ್ ಕಾಲಿಯಾ ರಫೀಕ್ ಹತ್ಯೆ ಪ್ರಕರಣದ ಮತ್ತೋರ್ವ ಆರೋಪಿ ಜಿಯಾ ಬಂಧನ

ಬೆಂಗಳೂರು : ಅರಣ್ಯ ಇಲಾಖೆಯಿಂದ (Forest Department) ನಿರಾಕ್ಷೇಪಣ ಪ್ರಮಾಣಪತ್ರ ಪಡೆದುಕೊಳ್ಳದೆ ಅನಧಿಕೃತವಾಗಿ ನಗರದಲ್ಲಿ ಆನೆಯ ಕಾಲಿನ ಪಾದ ಸೇರಿದಂತೆ ಸುಮಾರು 1 ಕೋಟಿ ರೂಪಾಯಿ ಮೌಲ್ಯದ ಪ್ರಾಚೀನ ಕಾಲದ ವಸ್ತುಗಳ (Ancient items ) ಮಾರಾಟಕ್ಕೆ ಯತ್ನಿಸಿದ ಆರೋಪಿಯನ್ನು ಕಾಡುಗೊಂಡನಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಪ್ರಕರಣದ ಕುರಿತಂತೆ ನಗರ ಪೂರ್ವ ವಿಭಾಗದ ಡಿಸಿಪಿ ಶರಣಪ್ಪ ಮಾಹಿತಿ ನೀಡಿರುವುದು..

ಕೆಜಿಹಳ್ಳಿಯ ಹೆಚ್​ಬಿಆರ್ ಲೇಔಟ್ ನಿವಾಸಿ ಆರ್ಯನ್ ಖಾನ್ ಬಂಧಿತ ಆರೋಪಿ. ಬಂಧಿತನಿಂದ ಆನೆ ಕಾಲಿನ ಪಾದ, ತಾಮ್ರದ ಪ್ಲೇಟ್, ಒಂದು ಮಿಲ್ಕ್ ಜಗ್, ಒಂದು ಟೀ ಪಾಟ್, ಒಂದು ಮಗರ್ ಸ್ಟೇಯರ್, ಭೂತಾನ್ ಶೋ ಪೀಸ್, ಐರೀಷ್ ಟೀ ಮೇಕರ್, ಶುಗರ್ ಪಾಟ್, ಸ್ಮಾಲ್ ಮಿಲ್ಕ್ ಜಗ್, ಒಂದು ಜರ್ಮನ್ ಸಿಲ್ವರ್ ಸೌಟು, ಎರಡು ಜರ್ಮನ್ ಸಿಲ್ವರ್ ಆಶ್ ಟ್ರೇ, 5 ಚಿಕ್ಕ ಮಸ್ಟರ್ಡ್ ಟ್ರೇ, ಎರಡು ಚಿಕ್ಕ ಮಂಚಗಳು, ಎರಡು ಆಫ್ರಿಕನ್ ಆರ್ಟ್‌ವುಡ್ ಸ್ಪೂನ್, ಪ್ರಾಣಿಯ ಮೂಳೆಯಿಂದ ಮಾಡಿದ ಸ್ಪೂನ್, ಎರಡು ಜರ್ಮನ್ ಸಿಲ್ವರ್‌ ಫೋರ್ಕ್, ಟೇಬಲ್ ನೈಫ್ ಶಾರ್ಪ್‌ನರ್ ಹಾಗೂ ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದೆ.

ಆರೋಪಿಯು ತನ್ನ ಅಣ್ಣನ ಮಗನ ವೈದ್ಯಕೀಯ ಚಿಕಿತ್ಸೆ(Medical Treatment) ಕೊಡಿಸುವ ಸಲುವಾಗಿ ಮತ್ತು ತನ್ನ ಮನೆಯ ಬಾಡಿಗೆ ಕಟ್ಟಲು ಮಾಡಿಕೊಂಡಿರುವ ಸಾಲ ತೀರಿಸಲು ಈ ವಸ್ತುಗಳ ಮಾರಾಟಕ್ಕೆ ಪ್ರಯತ್ನಿಸುತ್ತಿರುವುದಾಗಿ ಪೊಲೀಸರ ಮುಂದೆ ತಿಳಿಸಿದ್ದಾನೆ.

ವಶಪಡಿಸಿಕೊಂಡಿರುವ ವಸ್ತುಗಳಿಗೆ ಪಾಶ್ಚಿಮಾತ್ಯ ದೇಶಗಳಲ್ಲಿ ಅಪಾರ ಬೇಡಿಕೆ ಇದೆ ಎಂದು ತಿಳಿದು ಬಂದಿದೆ. ಸದ್ಯ ಪ್ರಕರಣ ಕುರಿತು ಕಾಡುಗೊಂಡನಹಳ್ಳಿ ಪೊಲೀಸ್ ಠಾಣೆಯಲ್ಲಿ ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.

ಪ್ರಾಚೀನ ಕಾಲದ ವಸ್ತುಗಳು ಸಿಕ್ಕಿದ್ದು ಹೇಗೆ? : ಆರೋಪಿ ಆರ್ಯನ್ ಖಾನ್ ತಾತ ಕೆಜಿ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನೆಲೆಸಿದ್ದ ಆಂಗ್ಲೋ-ಇಂಡಿಯನ್ (Anglo Indian) ಮಹಿಳೆ ಮನೆಯಲ್ಲಿ ಕೆಲಸ ಮಾಡುತ್ತಿದ್ದರು. ಇಂಗ್ಲೆಂಡ್​ಗೆ ಹೋಗುವಾಗ ಮನೆಯಲ್ಲಿದ್ದ ಪ್ರಾಚೀನ ವಸ್ತುಗಳನ್ನು ಉಡುಗೊರೆಯಾಗಿ ಆ ಮಹಿಳೆ ನೀಡಿದ್ದರು.

ಕಾನೂನು ಪ್ರಕಾರ ವನ್ಯಜೀವಿಗೆ ಸಂಬಂಧಿಸಿ ವಸ್ತುಗಳನ್ನು ಇಟ್ಟುಕೊಳ್ಳಬೇಕಾದರೆ ಅರಣ್ಯ ಇಲಾಖೆಯಿಂದ (Forest Department) ಪ್ರಮಾಣಪತ್ರ ಪಡೆಯಬೇಕಾಗುತ್ತದೆ. ಜೊತೆಗೆ ಇನ್ನೊಬ್ಬರಿಗೆ ಮಾರಾಟ ಮಾಡಬೇಕಾದರೂ ದಾಖಲಾತಿ ಮಾಡಿಸಿಕೊಳ್ಳಬೇಕಿದೆ.

ಆದರೆ, ಆರೋಪಿಯು ಯಾವುದೇ ರೀತಿಯ ನಿಯಮಗಳನ್ನ ಪಾಲಿಸದೆ ಅಕ್ರಮವಾಗಿ ಕೋಟ್ಯಂತರ ಹಣಕ್ಕೆ ಮಾರಾಟ ಮಾಡಲು ಯತ್ನಿಸುತ್ತಿದ್ದ ಎಂದು ನಗರ ಪೂರ್ವ ವಿಭಾಗದ ಡಿಸಿಪಿ ಶರಣಪ್ಪ ತಿಳಿಸಿದ್ದಾರೆ.

ಓದಿ: ಕುಖ್ಯಾತ ರೌಡಿಶೀಟರ್ ಕಾಲಿಯಾ ರಫೀಕ್ ಹತ್ಯೆ ಪ್ರಕರಣದ ಮತ್ತೋರ್ವ ಆರೋಪಿ ಜಿಯಾ ಬಂಧನ

Last Updated : Nov 12, 2021, 4:37 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.