ETV Bharat / city

ಕೊರೊನಾಗೆ ಸಬ್ ರಿಜಿಸ್ಟರ್ ಬಲಿ: ಮಗನ ಸಾವಿನ ಸುದ್ದಿ ಕೇಳಿ ಮೃತಪಟ್ಟ ತಾಯಿ

author img

By

Published : Aug 1, 2020, 6:24 PM IST

ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಮಗನ ಸಾವಿನ ಸುದ್ದಿ ಕೇಳಿ ತಾಯಿಯೊಬ್ಬರು ಮೃತಪಟ್ಟ ಘಟನೆ ರಾಯಚೂರು ಜಿಲ್ಲೆಯ ಮಾನವಿ ಪಟ್ಟಣದಲ್ಲಿ ಜರುಗಿದೆ. ಸದ್ಯ ತಾಯಿಗೂ ಕೊರೊನಾ ಸೋಂಕು ತಗುಲಿರುವುದು ವರದಿಯಿಂದ ತಿಳಿದು ಬಂದಿದೆ.

manavi-sub-register-death
ಕೊರೊನಾಗೆ ಸಬ್ ರಿಜಿಸ್ಟರ್ ಬಲಿ

ರಾಯಚೂರು : ಕೊರೊನಾ ಸೋಂಕಿತ ಮಗನ ಸಾವಿನ ಸುದ್ದಿ ಕೇಳಿ ತಾಯಿಯೊಬ್ಬರು ಮೃತಪಟ್ಟ ಘಟನೆ ಜಿಲ್ಲೆಯ ಮಾನವಿಯಲ್ಲಿ ನಡೆದಿದೆ.

ಜಿಲ್ಲೆಯ ಮಾನವಿಯಲ್ಲಿ ಸಬ್ ರಿಜಿಸ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ 45 ವರ್ಷದ ಅಧಿಕಾರಿಗೆ, ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಈ ಹಿನ್ನೆಲೆ ಸ್ಥಳೀಯವಾಗಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದ್ರೆ ಉಸಿರಾಟದ ಸಮಸ್ಯೆ ಹೆಚ್ಚಾದ ಕಾರಣ ಹೈದರಾಬಾದ್​ನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ನಿನ್ನೆ ತಡರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಸಬ್ ರಿಜಿಸ್ಟರ್ ಸಾವನ್ನಪ್ಪಿದ್ದಾರೆ.

ಮಗನ ಸಾವಿನ ಸುದ್ದಿ ತಿಳಿದ ತಾಯಿ ಆಘಾತಕ್ಕೊಳಗಾಗಿ ಇಂದು ರಾಯಚೂರಿನಲ್ಲಿರುವ ತಮ್ಮ ಮನೆಯಲ್ಲಿ ಮೃತಪಟ್ಟಿದ್ದಾರೆ. ಬಳಿಕ ಅವರ ಗಂಟಲು ದ್ರವ ಪರೀಕ್ಷಿಸಿದಾಗ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಸಬ್ ರಿಜಿಸ್ಟರ್ ತಮ್ಮನಿಗೂ ಕೋವಿಡ್​​ ಸೋಂಕು ತಗುಲಿದೆ. ಸದ್ಯ ಶವವನ್ನು ಹೈದರಾಬಾದ್​​ನಿಂದ ರಾಯಚೂರಿಗೆ ತರಲಾಗುತ್ತಿದ್ದು, ಕೊರೊನಾ ಮಾರ್ಗಸೂಚಿ ಅನ್ವಯ ಶವ ಸಂಸ್ಕಾರ ನಡೆಯಲಿದೆ.

ರಾಯಚೂರು : ಕೊರೊನಾ ಸೋಂಕಿತ ಮಗನ ಸಾವಿನ ಸುದ್ದಿ ಕೇಳಿ ತಾಯಿಯೊಬ್ಬರು ಮೃತಪಟ್ಟ ಘಟನೆ ಜಿಲ್ಲೆಯ ಮಾನವಿಯಲ್ಲಿ ನಡೆದಿದೆ.

ಜಿಲ್ಲೆಯ ಮಾನವಿಯಲ್ಲಿ ಸಬ್ ರಿಜಿಸ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ 45 ವರ್ಷದ ಅಧಿಕಾರಿಗೆ, ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಈ ಹಿನ್ನೆಲೆ ಸ್ಥಳೀಯವಾಗಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದ್ರೆ ಉಸಿರಾಟದ ಸಮಸ್ಯೆ ಹೆಚ್ಚಾದ ಕಾರಣ ಹೈದರಾಬಾದ್​ನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ನಿನ್ನೆ ತಡರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಸಬ್ ರಿಜಿಸ್ಟರ್ ಸಾವನ್ನಪ್ಪಿದ್ದಾರೆ.

ಮಗನ ಸಾವಿನ ಸುದ್ದಿ ತಿಳಿದ ತಾಯಿ ಆಘಾತಕ್ಕೊಳಗಾಗಿ ಇಂದು ರಾಯಚೂರಿನಲ್ಲಿರುವ ತಮ್ಮ ಮನೆಯಲ್ಲಿ ಮೃತಪಟ್ಟಿದ್ದಾರೆ. ಬಳಿಕ ಅವರ ಗಂಟಲು ದ್ರವ ಪರೀಕ್ಷಿಸಿದಾಗ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಸಬ್ ರಿಜಿಸ್ಟರ್ ತಮ್ಮನಿಗೂ ಕೋವಿಡ್​​ ಸೋಂಕು ತಗುಲಿದೆ. ಸದ್ಯ ಶವವನ್ನು ಹೈದರಾಬಾದ್​​ನಿಂದ ರಾಯಚೂರಿಗೆ ತರಲಾಗುತ್ತಿದ್ದು, ಕೊರೊನಾ ಮಾರ್ಗಸೂಚಿ ಅನ್ವಯ ಶವ ಸಂಸ್ಕಾರ ನಡೆಯಲಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.