ETV Bharat / city

ಕೋವಿಡ್ 4ನೇ ಅಲೆ ಭೀತಿ: ರಾಜ್ಯದಲ್ಲಿ ಮಾಸ್ಕ್ ಕಡ್ಡಾಯ... ಎಲ್ಲೆಂದರಲ್ಲಿ ಉಗುಳಿದ್ರೆ ಬೀಳುತ್ತೆ ದಂಡ!

author img

By

Published : Apr 25, 2022, 3:39 PM IST

Updated : Apr 25, 2022, 9:22 PM IST

ಕೋವಿಡ್ ನಾಲ್ಕನೇ ಅಲೆ ಭೀತಿ ಹಿನ್ನೆಲೆಯಲ್ಲಿ ಮಾಸ್ಕ್ ಕಡ್ಡಾಯ ಮಾಡಲು ಇಂದು ಸರ್ಕಾರ ನಿರ್ಧರಿಸಿದೆ. ಜೊತೆಗೆ ಪ್ರಧಾನಿ ಸಭೆ ಬಳಿಕ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡುತ್ತೇವೆ ಎಂದು ಸಚಿವ ಸುಧಾಕರ್ ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ಮಾಸ್ಕ್ ಕಡ್ಡಾಯ
ರಾಜ್ಯದಲ್ಲಿ ಮಾಸ್ಕ್ ಕಡ್ಡಾಯ

ಬೆಂಗಳೂರು: ನಾಲ್ಕನೇ ಅಲೆ ಭೀತಿ ಹಿನ್ನೆಲೆ ಮಾಸ್ಕ್ ಧಾರಣೆಯನ್ನು ಕಡ್ಡಾಯಗೊಳಿಸಿ ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ. ರಾಜ್ಯ ತಾಂತ್ರಿಕ ಸಲಹಾ ಸಮಿತಿಯ ಶಿಫಾರಸ್ಸಿನಂತೆ ಸಾರ್ವಜನಿಕ ಸ್ಥಳ, ಸಂಚಾರದ ವೇಳೆ, ಕೆಲಸದ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯಗೊಳಿಸಲಾಗಿದೆ. ಅದೇ ರೀತಿ ಸಾರ್ವಜನಿಕ ಸ್ಥಳಗಳಲ್ಲಿ ಉಗಿಯುವುದನ್ನು ನಿಷೇಧಿಸಲಾಗಿದ್ದು, ನಿಯಮ ಉಲ್ಲಂಘಿಸುವವರಿಗೆ ದಂಡ ವಿಧಿಸಲಾಗುವುದು. ಜೊತೆಗೆ ಸಾರ್ವಜನಿಕ ಸ್ಥಳಗಳಲ್ಲಿ ಎರಡು ಅಡಿ ಅಂತರ ಕಾಯ್ದುಕೊಳ್ಳುವಂತೆ ಆದೇಶ ಮಾಡಲಾಗಿದೆ.

ದಿಲ್ಲಿ, ಹರಿಯಾಣ, ತಮಿಳುನಾಡಿನಲ್ಲಿ ಕೋವಿಡ್ ಪ್ರಕರಣ ಹೆಚ್ಚಾಗುತ್ತಿರುವುದರ ಜೊತೆಗೆ, ಕರ್ನಾಟಕದಲ್ಲೂ ನಿಧಾನವಾಗಿ ಕೋವಿಡ್ ಪ್ರಕರಣಗಳು ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮಾಸ್ಕ್ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕೋವಿಡ್ ನಾಲ್ಕನೇ ಅಲೆ ಭೀತಿ ಹಿನ್ನೆಲೆಯಲ್ಲಿ ಮಾಸ್ಕ್ ಕಡ್ಡಾಯ, ಸಾಮಾಜಿಕ ಅಂತರ ಪಾಲನೆ ಕಟ್ಟುನಿಟ್ಟಾಗಿ ಪಾಲಿಸಲು ಕ್ರಮ ಕೈಗೊಳ್ಳಲು ನಿರ್ಧರಿಸಿದ್ದೇವೆ. ಜೊತೆಗೆ ಪ್ರಧಾನಿ ಸಭೆ ಬಳಿಕ ಮತ್ತೊಂದು ಸಭೆ ಸೇರಿ ಪ್ರಧಾನಿ ನೀಡುವ ನಿರ್ದೇಶನಗಳನ್ನು ಆಧರಿಸಿ ಮುಂದುವರೆಯುವ ಬಗ್ಗೆ ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.

ಸರ್ಕಾರದ ಆದೇಶ
ಸರ್ಕಾರದ ಆದೇಶ

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಕೋವಿಡ್ ಪರಿಶೀಲನಾ ಸಭೆ ನಡೆಯಿತು. ಸಭೆಯಲ್ಲಿ ರಾಜ್ಯದಲ್ಲಿನ ಕೋವಿಡ್ ನಿಯಂತ್ರಣ ಸ್ಥಿತಿಗತಿ ಕುರಿತು ಅವಲೋಕಿಸಲಾಯಿತು. ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಆರೋಗ್ಯ ಸಚಿವ ಸುಧಾಕರ್, ಕೋವಿಡ್ ನಾಲ್ಕನೇ ಅಲೆ ಬರಬಹುದೆಂಬ ಸಾಧ್ಯತೆ ಹಿನ್ನೆಲೆಯನ್ನು ಸಿಎಂ ಅಧ್ಯಕ್ಷತೆಯಲ್ಲಿ ಸಭೆ ನಡೆಸಿದ್ದೇವೆ.

ಪ್ರಮುಖವಾಗಿ ಕೆಲವು ಕ್ರಮಗಳ ಬಗ್ಗೆ ನಿರ್ಧಾರ ಕೈಗೊಳ್ಳಲಾಯಿತು. ಕಡ್ಡಾಯವಾಗಿ ಮಾಸ್ಕ್​ ಧರಿಸಲು ಮಾರ್ಗಸೂಚಿ ಹೊರಡಿಸುತ್ತೇವೆ, ಪ್ರಧಾನಿ ವರ್ಚುಯಲ್ ಸಭೆ ಬಳಿಕ ಹೊಸ ಮಾರ್ಗಸೂಚಿ ಪ್ರಕಟವಾಗುವ ಸಾಧ್ಯತೆ ಇದೆ ಎಂದರು. ಮಾಸ್ಕ್ ಕಡ್ಡಾಯ ಮಾಡಬೇಕು ಎಂದು ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದ್ದರೂ ಸದ್ಯಕ್ಕೆ ದಂಡ ವಿಧಿಸಲ್ಲ ಅದನ್ನ ಮುಂದಿನ ದಿನಗಳಲ್ಲಿ ಪರಿಶೀಲಿಸಿ ನಿರ್ಧರಿಸಲಾಗುತ್ತದೆ.

ಶೇ.1.9ರಷ್ಟು ಪ್ರಮಾಣದಲ್ಲಿ ಪಾಸಿಟಿವಿಟಿ‌ ದರ ಬೆಂಗಳೂರಿನಲ್ಲಿ ದಾಖಲಾಗಿದೆ. ಹಾಗಾಗಿ ಲಸಿಕೆ, ಬೂಸ್ಟರ್ ಲಸಿಕೆ ಹಾಕಿಸಿಕೊಳ್ಳಲು ಜನತೆಗೆ ಮನವಿ ಮಾಡುತ್ತಿದ್ದೇವೆ, ನಾಲ್ಕನೇ ಅಲೆವರೆಗೆ ಕಾಯದೆ ಲಸಿಕೆ ಹಾಕಿಸಿಕೊಳ್ಳಿ ಎಂದು ಕರೆ ನೀಡಿದರು.

ಸಿಎಂ ನೇತೃತ್ವದಲ್ಲಿ ಸಭೆ
ಸಿಎಂ ನೇತೃತ್ವದಲ್ಲಿ ಸಭೆ

ದಕ್ಷಿಣ ಕೊರಿಯಾ, ಥಾಯ್ಲೆಂಡ್​, ಜಪಾನ್​ಗಳಿಂದ ಬೆಂಗಳೂರಿಗೆ ಬರುವವರ ಮೇಲೆ ನಿಗಾ ಇರಿಸಬೇಕು, ಏರ್​​ಪೋರ್ಟ್​ಗಳಲ್ಲಿ ನಿಗಾ ಇಡಲು ನಿರ್ಧರಿಸಲಾಗಿದೆ. ಬಿಬಿಎಂಪಿಗೂ ವಿದೇಶಿ ಪ್ರವಾಸ ಹಿನ್ನೆಲೆಯವರ ಮೇಲೆ ನಿಗಾ ಇಡಲು ಸೂಚನೆ ನೀಡಲು ನಿರ್ಧರಿಸಲಾಗಿದೆ. ಲ್ಯಾಬ್ ವರದಿ ಬರುವವರಗೆ ರಾಜ್ಯದಲ್ಲಿ ಯಾವ ತಳಿ ಇದೆ ಅಂತ ಹೇಳೋದಿಕ್ಕೆ ಆಗಲ್ಲ‌. ಸದ್ಯ ಲ್ಯಾಬ್ ನವರು ಜಿನೋಮಿಕ್ ಸೀಕ್ವೆನ್ಸ್​​ಗೆ ಮಾದರಿ ಪಡೆದಿದ್ದಾರೆ ಅದರ ವರದಿ ಬರಲಿದೆ. ಒಮಿಕ್ರಾನ್​ನ ತಳಿಯೇ ಆದರೆ, ರೋಗ ಲಕ್ಷಣಗಳು ಒಂದೇ ಇರುತ್ತವೆ. ವರದಿ ಬರುವವರೆಗೂ ಕಾದು ನೋಡಬೇಕು ಎಂದರು.

ದೆಹಲಿ, ಮಹಾರಾಷ್ಟ್ರ, ಕೇರಳ, ತಮಿಳುನಾಡುಗಳಿಂದ ಬರುವವರ ವಿಚಾರದ ಬಗ್ಗೆ ಏಪ್ರಿಲ್ 27 ರ ಬಳಿಕ‌ ಸಭೆ ನಡೆಸಲಾಗುತ್ತದೆ. ಪ್ರಧಾನಿ ಸಭೆ ಬಳಿಕ ಮತ್ತೊಂದು ಸಭೆ ಸೇರುತ್ತೇವೆ. ಪ್ರಧಾನಿಯವರು ನೀಡುವ ನಿರ್ದೇಶನಗಳನ್ನು ನೋಡಿಕೊಂಡು ಮುಂದುವರೆಯುತ್ತೇವೆ. ಆ ರಾಜ್ಯಗಳಿಂದ ಬರುವವರ ಮೇಲೆ ಯಾವ ರೀತಿ‌‌ ನಿಗಾ ಇಡಬೇಕೆಂದು ಆ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುತ್ತದೆ.

ಎಲ್ಲ ಪಕ್ಷಗಳೂ ಸಭೆ, ಸಮಾರಂಭಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು, ಸಾರ್ವಜನಿಕರೂ ಸಾಮಾಜಿಕ ಅಂತರ ಪಾಲಿಸಿ ಕೋವಿಡ್ ನಿಯಂತ್ರಣಕ್ಕೆ ಸಹಕಾರ ನೀಡಬೇಕು ಎಂದು ಸುಧಾಕರ್ ಮನವಿ ಮಾಡಿದರು.

(ಇದನ್ನೂ ಓದಿ: ದೆಹಲಿ-ತಮಿಳುನಾಡಿನಲ್ಲಿ ಮತ್ತೆ ಮಾಸ್ಕ್​​ ಕಡ್ಡಾಯ: ₹500 ದಂಡ ಎಚ್ಚರಿಕೆ)

ಬೆಂಗಳೂರು: ನಾಲ್ಕನೇ ಅಲೆ ಭೀತಿ ಹಿನ್ನೆಲೆ ಮಾಸ್ಕ್ ಧಾರಣೆಯನ್ನು ಕಡ್ಡಾಯಗೊಳಿಸಿ ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ. ರಾಜ್ಯ ತಾಂತ್ರಿಕ ಸಲಹಾ ಸಮಿತಿಯ ಶಿಫಾರಸ್ಸಿನಂತೆ ಸಾರ್ವಜನಿಕ ಸ್ಥಳ, ಸಂಚಾರದ ವೇಳೆ, ಕೆಲಸದ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯಗೊಳಿಸಲಾಗಿದೆ. ಅದೇ ರೀತಿ ಸಾರ್ವಜನಿಕ ಸ್ಥಳಗಳಲ್ಲಿ ಉಗಿಯುವುದನ್ನು ನಿಷೇಧಿಸಲಾಗಿದ್ದು, ನಿಯಮ ಉಲ್ಲಂಘಿಸುವವರಿಗೆ ದಂಡ ವಿಧಿಸಲಾಗುವುದು. ಜೊತೆಗೆ ಸಾರ್ವಜನಿಕ ಸ್ಥಳಗಳಲ್ಲಿ ಎರಡು ಅಡಿ ಅಂತರ ಕಾಯ್ದುಕೊಳ್ಳುವಂತೆ ಆದೇಶ ಮಾಡಲಾಗಿದೆ.

ದಿಲ್ಲಿ, ಹರಿಯಾಣ, ತಮಿಳುನಾಡಿನಲ್ಲಿ ಕೋವಿಡ್ ಪ್ರಕರಣ ಹೆಚ್ಚಾಗುತ್ತಿರುವುದರ ಜೊತೆಗೆ, ಕರ್ನಾಟಕದಲ್ಲೂ ನಿಧಾನವಾಗಿ ಕೋವಿಡ್ ಪ್ರಕರಣಗಳು ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮಾಸ್ಕ್ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕೋವಿಡ್ ನಾಲ್ಕನೇ ಅಲೆ ಭೀತಿ ಹಿನ್ನೆಲೆಯಲ್ಲಿ ಮಾಸ್ಕ್ ಕಡ್ಡಾಯ, ಸಾಮಾಜಿಕ ಅಂತರ ಪಾಲನೆ ಕಟ್ಟುನಿಟ್ಟಾಗಿ ಪಾಲಿಸಲು ಕ್ರಮ ಕೈಗೊಳ್ಳಲು ನಿರ್ಧರಿಸಿದ್ದೇವೆ. ಜೊತೆಗೆ ಪ್ರಧಾನಿ ಸಭೆ ಬಳಿಕ ಮತ್ತೊಂದು ಸಭೆ ಸೇರಿ ಪ್ರಧಾನಿ ನೀಡುವ ನಿರ್ದೇಶನಗಳನ್ನು ಆಧರಿಸಿ ಮುಂದುವರೆಯುವ ಬಗ್ಗೆ ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.

ಸರ್ಕಾರದ ಆದೇಶ
ಸರ್ಕಾರದ ಆದೇಶ

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಕೋವಿಡ್ ಪರಿಶೀಲನಾ ಸಭೆ ನಡೆಯಿತು. ಸಭೆಯಲ್ಲಿ ರಾಜ್ಯದಲ್ಲಿನ ಕೋವಿಡ್ ನಿಯಂತ್ರಣ ಸ್ಥಿತಿಗತಿ ಕುರಿತು ಅವಲೋಕಿಸಲಾಯಿತು. ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಆರೋಗ್ಯ ಸಚಿವ ಸುಧಾಕರ್, ಕೋವಿಡ್ ನಾಲ್ಕನೇ ಅಲೆ ಬರಬಹುದೆಂಬ ಸಾಧ್ಯತೆ ಹಿನ್ನೆಲೆಯನ್ನು ಸಿಎಂ ಅಧ್ಯಕ್ಷತೆಯಲ್ಲಿ ಸಭೆ ನಡೆಸಿದ್ದೇವೆ.

ಪ್ರಮುಖವಾಗಿ ಕೆಲವು ಕ್ರಮಗಳ ಬಗ್ಗೆ ನಿರ್ಧಾರ ಕೈಗೊಳ್ಳಲಾಯಿತು. ಕಡ್ಡಾಯವಾಗಿ ಮಾಸ್ಕ್​ ಧರಿಸಲು ಮಾರ್ಗಸೂಚಿ ಹೊರಡಿಸುತ್ತೇವೆ, ಪ್ರಧಾನಿ ವರ್ಚುಯಲ್ ಸಭೆ ಬಳಿಕ ಹೊಸ ಮಾರ್ಗಸೂಚಿ ಪ್ರಕಟವಾಗುವ ಸಾಧ್ಯತೆ ಇದೆ ಎಂದರು. ಮಾಸ್ಕ್ ಕಡ್ಡಾಯ ಮಾಡಬೇಕು ಎಂದು ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದ್ದರೂ ಸದ್ಯಕ್ಕೆ ದಂಡ ವಿಧಿಸಲ್ಲ ಅದನ್ನ ಮುಂದಿನ ದಿನಗಳಲ್ಲಿ ಪರಿಶೀಲಿಸಿ ನಿರ್ಧರಿಸಲಾಗುತ್ತದೆ.

ಶೇ.1.9ರಷ್ಟು ಪ್ರಮಾಣದಲ್ಲಿ ಪಾಸಿಟಿವಿಟಿ‌ ದರ ಬೆಂಗಳೂರಿನಲ್ಲಿ ದಾಖಲಾಗಿದೆ. ಹಾಗಾಗಿ ಲಸಿಕೆ, ಬೂಸ್ಟರ್ ಲಸಿಕೆ ಹಾಕಿಸಿಕೊಳ್ಳಲು ಜನತೆಗೆ ಮನವಿ ಮಾಡುತ್ತಿದ್ದೇವೆ, ನಾಲ್ಕನೇ ಅಲೆವರೆಗೆ ಕಾಯದೆ ಲಸಿಕೆ ಹಾಕಿಸಿಕೊಳ್ಳಿ ಎಂದು ಕರೆ ನೀಡಿದರು.

ಸಿಎಂ ನೇತೃತ್ವದಲ್ಲಿ ಸಭೆ
ಸಿಎಂ ನೇತೃತ್ವದಲ್ಲಿ ಸಭೆ

ದಕ್ಷಿಣ ಕೊರಿಯಾ, ಥಾಯ್ಲೆಂಡ್​, ಜಪಾನ್​ಗಳಿಂದ ಬೆಂಗಳೂರಿಗೆ ಬರುವವರ ಮೇಲೆ ನಿಗಾ ಇರಿಸಬೇಕು, ಏರ್​​ಪೋರ್ಟ್​ಗಳಲ್ಲಿ ನಿಗಾ ಇಡಲು ನಿರ್ಧರಿಸಲಾಗಿದೆ. ಬಿಬಿಎಂಪಿಗೂ ವಿದೇಶಿ ಪ್ರವಾಸ ಹಿನ್ನೆಲೆಯವರ ಮೇಲೆ ನಿಗಾ ಇಡಲು ಸೂಚನೆ ನೀಡಲು ನಿರ್ಧರಿಸಲಾಗಿದೆ. ಲ್ಯಾಬ್ ವರದಿ ಬರುವವರಗೆ ರಾಜ್ಯದಲ್ಲಿ ಯಾವ ತಳಿ ಇದೆ ಅಂತ ಹೇಳೋದಿಕ್ಕೆ ಆಗಲ್ಲ‌. ಸದ್ಯ ಲ್ಯಾಬ್ ನವರು ಜಿನೋಮಿಕ್ ಸೀಕ್ವೆನ್ಸ್​​ಗೆ ಮಾದರಿ ಪಡೆದಿದ್ದಾರೆ ಅದರ ವರದಿ ಬರಲಿದೆ. ಒಮಿಕ್ರಾನ್​ನ ತಳಿಯೇ ಆದರೆ, ರೋಗ ಲಕ್ಷಣಗಳು ಒಂದೇ ಇರುತ್ತವೆ. ವರದಿ ಬರುವವರೆಗೂ ಕಾದು ನೋಡಬೇಕು ಎಂದರು.

ದೆಹಲಿ, ಮಹಾರಾಷ್ಟ್ರ, ಕೇರಳ, ತಮಿಳುನಾಡುಗಳಿಂದ ಬರುವವರ ವಿಚಾರದ ಬಗ್ಗೆ ಏಪ್ರಿಲ್ 27 ರ ಬಳಿಕ‌ ಸಭೆ ನಡೆಸಲಾಗುತ್ತದೆ. ಪ್ರಧಾನಿ ಸಭೆ ಬಳಿಕ ಮತ್ತೊಂದು ಸಭೆ ಸೇರುತ್ತೇವೆ. ಪ್ರಧಾನಿಯವರು ನೀಡುವ ನಿರ್ದೇಶನಗಳನ್ನು ನೋಡಿಕೊಂಡು ಮುಂದುವರೆಯುತ್ತೇವೆ. ಆ ರಾಜ್ಯಗಳಿಂದ ಬರುವವರ ಮೇಲೆ ಯಾವ ರೀತಿ‌‌ ನಿಗಾ ಇಡಬೇಕೆಂದು ಆ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುತ್ತದೆ.

ಎಲ್ಲ ಪಕ್ಷಗಳೂ ಸಭೆ, ಸಮಾರಂಭಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು, ಸಾರ್ವಜನಿಕರೂ ಸಾಮಾಜಿಕ ಅಂತರ ಪಾಲಿಸಿ ಕೋವಿಡ್ ನಿಯಂತ್ರಣಕ್ಕೆ ಸಹಕಾರ ನೀಡಬೇಕು ಎಂದು ಸುಧಾಕರ್ ಮನವಿ ಮಾಡಿದರು.

(ಇದನ್ನೂ ಓದಿ: ದೆಹಲಿ-ತಮಿಳುನಾಡಿನಲ್ಲಿ ಮತ್ತೆ ಮಾಸ್ಕ್​​ ಕಡ್ಡಾಯ: ₹500 ದಂಡ ಎಚ್ಚರಿಕೆ)

Last Updated : Apr 25, 2022, 9:22 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.