ETV Bharat / city

ಕೋವಿಡ್ ವಾರ್ ರೂಮ್​ನಲ್ಲಿ 24 ಗಂಟೆಯೂ ಸೋಂಕಿತರಿಗೆ‌ ವೈದ್ಯಕೀಯ ವ್ಯವಸ್ಥೆ: ಸಚಿವ ಕೆ.ಗೋಪಾಲಯ್ಯ ಭರವಸೆ - covid war room

ಈಗಾಗಲೇ ಕೋವಿಡ್ ಕೇರ್ ಸೆಂಟರ್ ಆಗಿ ಪರಿವರ್ತನೆಗೊಂಡಿರುವ ಕೆಂಪೇಗೌಡ ಸಮುದಾಯ‌ಭವನದಲ್ಲಿ ಸಿಎಸ್‌ಆರ್ ಅನುದಾನದಲ್ಲಿ 1.20 ಕೋಟಿ ರೂ. ವೆಚ್ಚ ಮಾಡಿ ಅಗತ್ಯ ವೈದ್ಯಕೀಯ ವ್ಯವಸ್ಥೆ ಮಾಡಲಾಗಿದೆ. ಇಲ್ಲಿ ಆಕ್ಸಿಜನ್ ಸಹಿತ ಎಲ್ಲ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ.‌ ಅಲ್ಲದೇ ಇಲ್ಲಿ ಹಾಸಿಗೆಗೆಗಳು ಭರ್ತಿಯಾದರೆ ಬೇರೆ ಆಸ್ಪತ್ರೆಗಳಿಗೆ ರೋಗಿಗಳನ್ನು ಸ್ಥಳಾಂತರ ಮಾಡಲಾಗುವುದು..

minister K. Gopalaiah
ಅಬಕಾರಿ ಸಚಿವ ಕೆ.ಗೋಪಾಲಯ್ಯ
author img

By

Published : Jan 17, 2022, 4:09 PM IST

ಬೆಂಗಳೂರು : ನಗರದ ಮಹಾಲಕ್ಷ್ಮಿಲೇಔಟ್ ವಿಧಾನಸಭಾ ಕ್ಷೇತ್ರದ ಜನರನ್ನು ಕೋವಿಡ್ ಮೂರನೆಯ ಅಲೆಯಿಂದ ರಕ್ಷಿಸಿಲು ಮತ್ತು ಅವರ ಆರೋಗ್ಯ ಸುರಕ್ಷತೆಗಾಗಿ ದಿನದ 24 ಗಂಟೆಗಳು ಸಹ ಅಗತ್ಯ ವೈದ್ಯಕೀಯ ವ್ಯವಸ್ಥೆ ಒದಗಿಸಲಾಗುವುದು ಎಂದು ಸ್ಥಳೀಯ ಶಾಸಕ ಹಾಗೂ ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು‌.

ಮಹಾಲಕ್ಷ್ಮಿಲೇಔಟ್ ವಿಧಾನಸಭಾ ವ್ಯಾಪ್ತಿಯ ನಾಗಪುರದಲ್ಲಿರುವ ಶಾಸಕರ ಭವನದಲ್ಲಿಂದು ಕೋವಿಡ್ ವಾರ್ ರೂಂಗೆ ಚಾಲನೆ ನೀಡಿ ಮಾತನಾಡಿದ ಅವರು, ಕ್ಷೇತ್ರ ವ್ಯಾಪ್ತಿಯಲ್ಲಿ ಯಾವುದೇ ನಾಗರಿಕರಿಗೆ ಕೋವಿಡ್ ಲಕ್ಷಣಗಳು ಕಂಡು ಬಂದ ತಕ್ಷಣ ಸ್ಪಂದಿಸುವ ನಿಟ್ಟಿನಲ್ಲಿ ವಾರ್ ರೂಂ ಆರಂಭಿಸಲಾಗಿದೆ.

ಇಲ್ಲಿ ದಿನದ 24 ಗಂಟೆಗಳ‌ ಕಾಲ ಕೆಲಸ ಮಾಡುವ ಸಿಬ್ಬಂದಿ ಇರಲಿದ್ದಾರೆ. ಆಕ್ಸಿಜನ್ ಸೇರಿದಂತೆ ಯಾವುದೇ ವೈದ್ಯಕೀಯ ವ್ಯವಸ್ಥೆ ಬೇಕಾದವರು ಕರೆ ಮಾಡಿದರೆ ಅರ್ಧಗಂಟೆಯಲ್ಲಿ ಮನೆ ಬಾಗಿಲಿಗೆ ಔಷಧಿ, ಮಾತ್ರೆ, ಆಕ್ಸಿಜನ್ ಹಾಗೂ ಇನ್ನಿತರ ತುರ್ತು ಅಗತ್ಯ ಸೇವೆಗಳಾದ ಆ್ಯಂಬುಲೆನ್ಸ್ ವ್ಯವಸ್ಥೆ ಕೂಡ ಮಾಡಲಾಗುವುದು ಎಂದರು.

ಈಗಾಗಲೇ ಕೋವಿಡ್ ಕೇರ್ ಸೆಂಟರ್ ಆಗಿ ಪರಿವರ್ತನೆಗೊಂಡಿರುವ ಕೆಂಪೇಗೌಡ ಸಮುದಾಯ‌ಭವನದಲ್ಲಿ ಸಿಎಸ್‌ಆರ್ ಅನುದಾನದಲ್ಲಿ 1.20 ಕೋಟಿ ರೂ. ವೆಚ್ಚ ಮಾಡಿ ಅಗತ್ಯ ವೈದ್ಯಕೀಯ ವ್ಯವಸ್ಥೆ ಮಾಡಲಾಗಿದೆ. ಇಲ್ಲಿ ಆಕ್ಸಿಜನ್ ಸಹಿತ ಎಲ್ಲ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ.‌ ಅಲ್ಲದೇ ಇಲ್ಲಿ ಹಾಸಿಗೆಗೆಗಳು ಭರ್ತಿಯಾದರೆ ಬೇರೆ ಆಸ್ಪತ್ರೆಗಳಿಗೆ ರೋಗಿಗಳನ್ನು ಸ್ಥಳಾಂತರ ಮಾಡಲಾಗುವುದು ಎಂದು ಹೇಳಿದರು.

ಇದೀಗ ಆರಂಭಗೊಂಡಿರುವ ವಾರ್ ರೂಂನಲ್ಲಿ 5 ದೂರವಾಣಿ ಸೌಲಭ್ಯ ಒದಗಿಸಲಾಗಿದೆ. ಈ ದೂರವಾಣಿಗಳು ದಿನದ 24 ಗಂಟೆಗಳ ಕಾಲ‌ ಕಾರ್ಯನಿರ್ವಹಿಸಲಿವೆ. ಇದರ ಪ್ರಚಾರಕ್ಕಾಗಿ ಕರಪತ್ರಗಳನ್ನು ಕ್ಷೇತ್ರದ ಮನೆ ಮನೆಗಳಿಗೆ ಹಂಚಲಾಗುವುದು. ಎರಡೂ ಅಲೆಗಳನ್ನು ಎದುರಿಸಿದ ರೀತಿಯಲ್ಲಿಯೇ ಮೂರನೆ ಅಲೆಯನ್ನು ಎದುರಿಸುವ ಸಂಕಲ್ಪವನ್ನು ಎಲ್ಲರೂ ಮಾಡೋಣ ಎಂದು ಅವರು ಕರೆ ನೀಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಒಬಿಸಿ ಮೋರ್ಚಾ ರಾಜ್ಯ ಅಧ್ಯಕ್ಷ ನೆ.ಲ.ನರೇಂದ್ರಬಾಬು, ಬೆಂಗಳೂರು ಉತ್ತರ ಜಿಲ್ಲಾ ಘಟಕದ ಉಪಾಧ್ಯಕ್ಷ ಜಯರಾಮಯ್ಯ, ಬಿಬಿಎಂಪಿ ಮಾಜಿ ಉಪಮೇಯರ್ ಎಸ್.ಹರೀಶ್, ಮಂಡಲದ ಅಧ್ಯಕ್ಷ ರಾಘವೇಂದ್ರ ಶೆಟ್ಟಿ, ಜಯಸಿಂಹ, ಶ್ರೀನಿವಾಸ್, ವೆಂಕಟೇಶ್ ಮೂರ್ತಿ, ವೆಂಕಟೇಶ್, ಶಿವಾನಂದ್ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

ಇದನ್ನೂ ಓದಿ :ಮೇಕೆದಾಟು ಪಾದಯಾತ್ರೆಯಲ್ಲಿ ಕಾಂಗ್ರೆಸ್ ಪಕ್ಷದವರಿಗೆ ಇಲಿಯೂ ಸಿಕ್ಕಿಲ್ಲ : ಸಚಿವ ಅಶೋಕ್ ವ್ಯಂಗ್ಯ

ಬೆಂಗಳೂರು : ನಗರದ ಮಹಾಲಕ್ಷ್ಮಿಲೇಔಟ್ ವಿಧಾನಸಭಾ ಕ್ಷೇತ್ರದ ಜನರನ್ನು ಕೋವಿಡ್ ಮೂರನೆಯ ಅಲೆಯಿಂದ ರಕ್ಷಿಸಿಲು ಮತ್ತು ಅವರ ಆರೋಗ್ಯ ಸುರಕ್ಷತೆಗಾಗಿ ದಿನದ 24 ಗಂಟೆಗಳು ಸಹ ಅಗತ್ಯ ವೈದ್ಯಕೀಯ ವ್ಯವಸ್ಥೆ ಒದಗಿಸಲಾಗುವುದು ಎಂದು ಸ್ಥಳೀಯ ಶಾಸಕ ಹಾಗೂ ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು‌.

ಮಹಾಲಕ್ಷ್ಮಿಲೇಔಟ್ ವಿಧಾನಸಭಾ ವ್ಯಾಪ್ತಿಯ ನಾಗಪುರದಲ್ಲಿರುವ ಶಾಸಕರ ಭವನದಲ್ಲಿಂದು ಕೋವಿಡ್ ವಾರ್ ರೂಂಗೆ ಚಾಲನೆ ನೀಡಿ ಮಾತನಾಡಿದ ಅವರು, ಕ್ಷೇತ್ರ ವ್ಯಾಪ್ತಿಯಲ್ಲಿ ಯಾವುದೇ ನಾಗರಿಕರಿಗೆ ಕೋವಿಡ್ ಲಕ್ಷಣಗಳು ಕಂಡು ಬಂದ ತಕ್ಷಣ ಸ್ಪಂದಿಸುವ ನಿಟ್ಟಿನಲ್ಲಿ ವಾರ್ ರೂಂ ಆರಂಭಿಸಲಾಗಿದೆ.

ಇಲ್ಲಿ ದಿನದ 24 ಗಂಟೆಗಳ‌ ಕಾಲ ಕೆಲಸ ಮಾಡುವ ಸಿಬ್ಬಂದಿ ಇರಲಿದ್ದಾರೆ. ಆಕ್ಸಿಜನ್ ಸೇರಿದಂತೆ ಯಾವುದೇ ವೈದ್ಯಕೀಯ ವ್ಯವಸ್ಥೆ ಬೇಕಾದವರು ಕರೆ ಮಾಡಿದರೆ ಅರ್ಧಗಂಟೆಯಲ್ಲಿ ಮನೆ ಬಾಗಿಲಿಗೆ ಔಷಧಿ, ಮಾತ್ರೆ, ಆಕ್ಸಿಜನ್ ಹಾಗೂ ಇನ್ನಿತರ ತುರ್ತು ಅಗತ್ಯ ಸೇವೆಗಳಾದ ಆ್ಯಂಬುಲೆನ್ಸ್ ವ್ಯವಸ್ಥೆ ಕೂಡ ಮಾಡಲಾಗುವುದು ಎಂದರು.

ಈಗಾಗಲೇ ಕೋವಿಡ್ ಕೇರ್ ಸೆಂಟರ್ ಆಗಿ ಪರಿವರ್ತನೆಗೊಂಡಿರುವ ಕೆಂಪೇಗೌಡ ಸಮುದಾಯ‌ಭವನದಲ್ಲಿ ಸಿಎಸ್‌ಆರ್ ಅನುದಾನದಲ್ಲಿ 1.20 ಕೋಟಿ ರೂ. ವೆಚ್ಚ ಮಾಡಿ ಅಗತ್ಯ ವೈದ್ಯಕೀಯ ವ್ಯವಸ್ಥೆ ಮಾಡಲಾಗಿದೆ. ಇಲ್ಲಿ ಆಕ್ಸಿಜನ್ ಸಹಿತ ಎಲ್ಲ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ.‌ ಅಲ್ಲದೇ ಇಲ್ಲಿ ಹಾಸಿಗೆಗೆಗಳು ಭರ್ತಿಯಾದರೆ ಬೇರೆ ಆಸ್ಪತ್ರೆಗಳಿಗೆ ರೋಗಿಗಳನ್ನು ಸ್ಥಳಾಂತರ ಮಾಡಲಾಗುವುದು ಎಂದು ಹೇಳಿದರು.

ಇದೀಗ ಆರಂಭಗೊಂಡಿರುವ ವಾರ್ ರೂಂನಲ್ಲಿ 5 ದೂರವಾಣಿ ಸೌಲಭ್ಯ ಒದಗಿಸಲಾಗಿದೆ. ಈ ದೂರವಾಣಿಗಳು ದಿನದ 24 ಗಂಟೆಗಳ ಕಾಲ‌ ಕಾರ್ಯನಿರ್ವಹಿಸಲಿವೆ. ಇದರ ಪ್ರಚಾರಕ್ಕಾಗಿ ಕರಪತ್ರಗಳನ್ನು ಕ್ಷೇತ್ರದ ಮನೆ ಮನೆಗಳಿಗೆ ಹಂಚಲಾಗುವುದು. ಎರಡೂ ಅಲೆಗಳನ್ನು ಎದುರಿಸಿದ ರೀತಿಯಲ್ಲಿಯೇ ಮೂರನೆ ಅಲೆಯನ್ನು ಎದುರಿಸುವ ಸಂಕಲ್ಪವನ್ನು ಎಲ್ಲರೂ ಮಾಡೋಣ ಎಂದು ಅವರು ಕರೆ ನೀಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಒಬಿಸಿ ಮೋರ್ಚಾ ರಾಜ್ಯ ಅಧ್ಯಕ್ಷ ನೆ.ಲ.ನರೇಂದ್ರಬಾಬು, ಬೆಂಗಳೂರು ಉತ್ತರ ಜಿಲ್ಲಾ ಘಟಕದ ಉಪಾಧ್ಯಕ್ಷ ಜಯರಾಮಯ್ಯ, ಬಿಬಿಎಂಪಿ ಮಾಜಿ ಉಪಮೇಯರ್ ಎಸ್.ಹರೀಶ್, ಮಂಡಲದ ಅಧ್ಯಕ್ಷ ರಾಘವೇಂದ್ರ ಶೆಟ್ಟಿ, ಜಯಸಿಂಹ, ಶ್ರೀನಿವಾಸ್, ವೆಂಕಟೇಶ್ ಮೂರ್ತಿ, ವೆಂಕಟೇಶ್, ಶಿವಾನಂದ್ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

ಇದನ್ನೂ ಓದಿ :ಮೇಕೆದಾಟು ಪಾದಯಾತ್ರೆಯಲ್ಲಿ ಕಾಂಗ್ರೆಸ್ ಪಕ್ಷದವರಿಗೆ ಇಲಿಯೂ ಸಿಕ್ಕಿಲ್ಲ : ಸಚಿವ ಅಶೋಕ್ ವ್ಯಂಗ್ಯ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.