ETV Bharat / city

ಸೋಮವಾರ ನವೀನ್ ಮೃತದೇಹ ತಾಯ್ನಾಡಿಗೆ: ಸಿಎಂ ಬೊಮ್ಮಾಯಿ

author img

By

Published : Mar 18, 2022, 6:30 PM IST

Updated : Mar 18, 2022, 7:46 PM IST

ಉಕ್ರೇನ್​ನಲ್ಲಿ ಮೃತಪಟ್ಟಿರುವ ವೈದ್ಯಕೀಯ ವಿದ್ಯಾರ್ಥಿ ನವೀನ್ ಮೃತದೇಹ ಸೋಮವಾರ ಬೆಳಗ್ಗೆ ಬೆಂಗಳೂರಿಗೆ ಆಗಮಿಸಲಿದ್ದು, ತದನಂತರ ಹಾವೇರಿಗೆ ತೆಗೆದುಕೊಂಡು ಹೋಗಲಾಗುತ್ತದೆ ಎಂದು ಸಿಎಂ ಇಂದು ತಿಳಿಸಿದರು.

Medical Student Naveen body
Medical Student Naveen body

ಬೆಂಗಳೂರು: ಉಕ್ರೇನ್‌ನ ಖಾರ್ಕಿವ್‌ನಲ್ಲಿ ಸಾವಿಗೀಡಾದ ಹಾವೇರಿ ವಿದ್ಯಾರ್ಥಿ ನವೀನ್‌ ಗ್ಯಾನಗೌಡರ್‌ ಮೃತದೇಹ ಸೋಮವಾರ ಕರ್ನಾಟಕಕ್ಕೆ ಆಗಮಿಸಲಿದೆ. ಇಂದು ವಿಧಾನಸೌಧದಲ್ಲಿ ನಡೆದ ಸರ್ವಪಕ್ಷಗಳ ಸಭೆ ಬಳಿಕ ಸುದ್ದಿಗೋಷ್ಟಿಯಲ್ಲಿ ಭಾಗಿಯಾದ ಸಿಎಂ ಬೊಮ್ಮಾಯಿ ಈ ಮಾಹಿತಿ ಹಂಚಿಕೊಂಡಿದ್ದಾರೆ.

ಭಾನುವಾರ ನವೀನ್ ಮೃತದೇಹ ತಾಯ್ನಾಡಿಗೆ... ಸಿಎಂ ಬೊಮ್ಮಾಯಿ ಮಾಹಿತಿ

ರಷ್ಯಾ-ಉಕ್ರೇನ್​ ಸಂಘರ್ಷದ ಮಧ್ಯೆ ಮಾರ್ಚ್​​ 1ರಂದು ರಷ್ಯಾ ನಡೆಸಿದ್ದ ಶೆಲ್​ ದಾಳಿಯಲ್ಲಿ ನವೀನ್ ಗ್ಯಾನಗೌಡರ್ ಮೃತಪಟ್ಟಿದ್ದರು. ಹಾವೇರಿ ಜಿಲ್ಲೆಯ ಚಳಗೇರಿಯಿಂದ ವೈದ್ಯಕೀಯ ವ್ಯಾಸಂಗಕ್ಕಾಗಿ ನವೀನ್‌ ಉಕ್ರೇನ್‌ಗೆ ತೆರಳಿದ್ದರು. ಈ ಯುವಕ ಮೃತಪಟ್ಟು 21 ದಿನಗಳಾದ ಬಳಿಕ ಮೃತದೇಹ ತಾಯ್ನಾಡಿಗೆ ಬರುತ್ತಿದೆ. ಸೋಮವಾರ ಸಂಜೆ ಹಾವೇರಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದು ಬಂದಿದೆ.

  • "ಇತ್ತೀಚೆಗೆ ಉಕ್ರೇನ್ ನಲ್ಲಿ ರಷ್ಯಾ ದಾಳಿ ಸಂದರ್ಭದಲ್ಲಿ ಮೃತ ಪಟ್ಟ ಹಾವೇರಿ ಜಿಲ್ಲೆಯ ಯುವಕ ನವೀನ್ ಗ್ಯಾನಗೌಡರ್ ಅವರ ಪಾರ್ಥಿವ ಶರೀರ ದಿ. 21-3-2022, ಸೋಮವಾರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರಿಗೆ ಆಗಮಿಸಲಿದೆ" : ಮುಖ್ಯಮಂತ್ರಿ @BSBommai

    — CM of Karnataka (@CMofKarnataka) March 18, 2022 " class="align-text-top noRightClick twitterSection" data=" ">

ನವೀನ್‌ ಮೃತದೇಹ ಭಾರತಕ್ಕೆ ತರಲು ಕೇಂದ್ರ ಸರ್ಕಾರ ಇನ್ನಿಲ್ಲದ ಪ್ರಯತ್ನ ನಡೆಸುತ್ತಿತ್ತು. ಉಕ್ರೇನ್‌ ಅಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿತ್ತು. ಇದರ ಫಲವಾಗಿ ಮೃತದೇಹ ಇದೀಗ ಭಾರತಕ್ಕೆ ವಾಪಸ್​ ಆಗುತ್ತಿದೆ.

ಇದೇ ವಿಷಯವಾಗಿ ರಾಜ್ಯಸಭೆಯಲ್ಲಿ ಮಾರ್ಚ್​ 15ರಂದು ಮಾಹಿತಿ ನೀಡಿದ್ದ ವಿದೇಶಾಂಗ ಸಚಿವ ಎಸ್​. ಜೈಶಂಕರ್, ನವೀನ್ ಮೃತದೇಹವನ್ನು ಸುರಕ್ಷಿತವಾಗಿ ಭಾರತಕ್ಕೆ ತರುವ ಎಲ್ಲ ಪ್ರಯತ್ನಗಳು ಮುಂದುವರೆದಿದ್ದು, ಅದಕ್ಕಾಗಿ ಉಕ್ರೇನ್​​​ನಲ್ಲಿರುವ ನಮ್ಮ ರಾಯಭಾರ ಕಚೇರಿ ಕೆಲಸ ಮಾಡ್ತಿದೆ ಎಂದಿದ್ದರು.

ಬೆಂಗಳೂರು: ಉಕ್ರೇನ್‌ನ ಖಾರ್ಕಿವ್‌ನಲ್ಲಿ ಸಾವಿಗೀಡಾದ ಹಾವೇರಿ ವಿದ್ಯಾರ್ಥಿ ನವೀನ್‌ ಗ್ಯಾನಗೌಡರ್‌ ಮೃತದೇಹ ಸೋಮವಾರ ಕರ್ನಾಟಕಕ್ಕೆ ಆಗಮಿಸಲಿದೆ. ಇಂದು ವಿಧಾನಸೌಧದಲ್ಲಿ ನಡೆದ ಸರ್ವಪಕ್ಷಗಳ ಸಭೆ ಬಳಿಕ ಸುದ್ದಿಗೋಷ್ಟಿಯಲ್ಲಿ ಭಾಗಿಯಾದ ಸಿಎಂ ಬೊಮ್ಮಾಯಿ ಈ ಮಾಹಿತಿ ಹಂಚಿಕೊಂಡಿದ್ದಾರೆ.

ಭಾನುವಾರ ನವೀನ್ ಮೃತದೇಹ ತಾಯ್ನಾಡಿಗೆ... ಸಿಎಂ ಬೊಮ್ಮಾಯಿ ಮಾಹಿತಿ

ರಷ್ಯಾ-ಉಕ್ರೇನ್​ ಸಂಘರ್ಷದ ಮಧ್ಯೆ ಮಾರ್ಚ್​​ 1ರಂದು ರಷ್ಯಾ ನಡೆಸಿದ್ದ ಶೆಲ್​ ದಾಳಿಯಲ್ಲಿ ನವೀನ್ ಗ್ಯಾನಗೌಡರ್ ಮೃತಪಟ್ಟಿದ್ದರು. ಹಾವೇರಿ ಜಿಲ್ಲೆಯ ಚಳಗೇರಿಯಿಂದ ವೈದ್ಯಕೀಯ ವ್ಯಾಸಂಗಕ್ಕಾಗಿ ನವೀನ್‌ ಉಕ್ರೇನ್‌ಗೆ ತೆರಳಿದ್ದರು. ಈ ಯುವಕ ಮೃತಪಟ್ಟು 21 ದಿನಗಳಾದ ಬಳಿಕ ಮೃತದೇಹ ತಾಯ್ನಾಡಿಗೆ ಬರುತ್ತಿದೆ. ಸೋಮವಾರ ಸಂಜೆ ಹಾವೇರಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದು ಬಂದಿದೆ.

  • "ಇತ್ತೀಚೆಗೆ ಉಕ್ರೇನ್ ನಲ್ಲಿ ರಷ್ಯಾ ದಾಳಿ ಸಂದರ್ಭದಲ್ಲಿ ಮೃತ ಪಟ್ಟ ಹಾವೇರಿ ಜಿಲ್ಲೆಯ ಯುವಕ ನವೀನ್ ಗ್ಯಾನಗೌಡರ್ ಅವರ ಪಾರ್ಥಿವ ಶರೀರ ದಿ. 21-3-2022, ಸೋಮವಾರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರಿಗೆ ಆಗಮಿಸಲಿದೆ" : ಮುಖ್ಯಮಂತ್ರಿ @BSBommai

    — CM of Karnataka (@CMofKarnataka) March 18, 2022 " class="align-text-top noRightClick twitterSection" data=" ">

ನವೀನ್‌ ಮೃತದೇಹ ಭಾರತಕ್ಕೆ ತರಲು ಕೇಂದ್ರ ಸರ್ಕಾರ ಇನ್ನಿಲ್ಲದ ಪ್ರಯತ್ನ ನಡೆಸುತ್ತಿತ್ತು. ಉಕ್ರೇನ್‌ ಅಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿತ್ತು. ಇದರ ಫಲವಾಗಿ ಮೃತದೇಹ ಇದೀಗ ಭಾರತಕ್ಕೆ ವಾಪಸ್​ ಆಗುತ್ತಿದೆ.

ಇದೇ ವಿಷಯವಾಗಿ ರಾಜ್ಯಸಭೆಯಲ್ಲಿ ಮಾರ್ಚ್​ 15ರಂದು ಮಾಹಿತಿ ನೀಡಿದ್ದ ವಿದೇಶಾಂಗ ಸಚಿವ ಎಸ್​. ಜೈಶಂಕರ್, ನವೀನ್ ಮೃತದೇಹವನ್ನು ಸುರಕ್ಷಿತವಾಗಿ ಭಾರತಕ್ಕೆ ತರುವ ಎಲ್ಲ ಪ್ರಯತ್ನಗಳು ಮುಂದುವರೆದಿದ್ದು, ಅದಕ್ಕಾಗಿ ಉಕ್ರೇನ್​​​ನಲ್ಲಿರುವ ನಮ್ಮ ರಾಯಭಾರ ಕಚೇರಿ ಕೆಲಸ ಮಾಡ್ತಿದೆ ಎಂದಿದ್ದರು.

Last Updated : Mar 18, 2022, 7:46 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.