ETV Bharat / city

ಅರಣ್ಯ ಪ್ರದೇಶಗಳಲ್ಲಿ ಗಣಿಗಾರಿಕೆ: ಸಮಗ್ರ ತನಿಖೆಗೆ ರಾಜೇಂದರ್ ಕಟಾರಿಯಾ ನೇಮಕ - Rajender Kumar Kataria has been appointed as investigation officer

ರಾಜ್ಯದ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆಗೆ ಪರವಾನಗಿ ನೀಡಿರುವ ಎಲ್ಲ ಪ್ರಕರಣಗಳ ಕುರಿತು ಸಮಗ್ರವಾಗಿ ತನಿಖೆ ನಡೆಸಬೇಕು. ಅದಕ್ಕಾಗಿ ಪ್ರಧಾನ ಕಾರ್ಯದರ್ಶಿ ಅಥವಾ ಕಾರ್ಯದರ್ಶಿ ಶ್ರೇಣಿಯ ಅಧಿಕಾರಿಯನ್ನು ನೇಮಿಸಬೇಕು ಎಂದು 2022ರ ಫೆ.01ರಂದು ಹೈಕೋರ್ಟ್ ಆದೇಶಿಸಿತ್ತು. ಅದರಂತೆ ತನಿಖೆ ನಡೆಸಲು ರಾಜೇಂದರ್ ಕುಮಾರ್ ಕಟಾರಿಯಾ ಅವರನ್ನು ತನಿಖಾಧಿಕಾರಿಯನ್ನಾಗಿ ನೇಮಿಸಲಾಗಿದೆ.

Rajender Kumar Kataria
ರಾಜೇಂದರ್ ಕುಮಾರ್ ಕಟಾರಿಯಾ
author img

By

Published : Apr 1, 2022, 7:25 AM IST

ಬೆಂಗಳೂರು: ರಾಜ್ಯದಲ್ಲಿ ಅರಣ್ಯ ಪ್ರದೇಶಗಳಲ್ಲಿ ನಿಯಮ ಉಲ್ಲಂಘಿಸಿ ಗಣಿಗಾರಿಕೆಗೆ ಅನುಮತಿ ನೀಡಿರುವ ಎಲ್ಲ ಪ್ರಕರಣಗಳ ಕುರಿತು ಸಮಗ್ರ ತನಿಖೆ ನಡೆಸಿ ವಿಸ್ತೃತ ವರದಿ ಸಲ್ಲಿಸಲು ಸಾರಿಗೆ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯಾ ಅವರನ್ನು ನೇಮಿಸಲಾಗಿದೆ ಎಂದು ಹೈಕೋರ್ಟ್‌ಗೆ ಸರ್ಕಾರ ಗುರುವಾರ ಮಾಹಿತಿ ನೀಡಿದೆ.

ವಾಣಿ ವಿಲಾಸ್ ಸಿಮೆಂಟ್ಸ್ ಪ್ರೈವೇಟ್ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕ ಪವನ್ ರಾಮಸ್ವಾಮಿ ಅವರು ಸಲ್ಲಿಸಿದ್ದ ಅರ್ಜಿ, ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ವಿಚಾರಣೆ ವೇಳೆ ಸರ್ಕಾರಿ ವಕೀಲರು ಹಾಜರಾಗಿ, ರಾಜ್ಯದ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆಗೆ ಪರವಾನಗಿ ನೀಡಿರುವ ಎಲ್ಲ ಪ್ರಕರಣಗಳ ಕುರಿತು ಸಮಗ್ರವಾಗಿ ತನಿಖೆ ನಡೆಸಬೇಕು. ಅದಕ್ಕಾಗಿ ಪ್ರಧಾನ ಕಾರ್ಯದರ್ಶಿ ಅಥವಾ ಕಾರ್ಯದರ್ಶಿ ಶ್ರೇಣಿಯ ಅಧಿಕಾರಿಯನ್ನು ನೇಮಿಸಬೇಕು ಎಂದು 2022ರ ಫೆ.01ರಂದು ಹೈಕೋರ್ಟ್ ಆದೇಶಿಸಿತ್ತು. ಅದರಂತೆ ತನಿಖೆ ನಡೆಸಲು ರಾಜೇಂದರ್ ಕುಮಾರ್ ಕಟಾರಿಯಾ ಅವರನ್ನು ತನಿಖಾಧಿಕಾರಿಯನ್ನಾಗಿ ನೇಮಿಸಲಾಗಿದೆ ಎಂದು ತಿಳಿಸಿದರು.

ಅದನ್ನು ಪರಿಗಣಿಸಿದ ನ್ಯಾಯಪೀಠ, ರಾಜೇಂದರ್ ಕುಮಾರ್ ಕಟಾರಿಯಾ ಅವರು ಮೊದಲಿಗೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಕೆಂಕೆರೆ ಗ್ರಾಮದಲ್ಲಿನ ಸರ್ವೆ ನಂ.12 ಮತ್ತು 14ರಲ್ಲಿನ ಭೂಮಿಯು ಅರಣ್ಯ ಅಥವಾ ಕಂದಾಯ ಭೂಮಿಯೋ ಎಂಬುದಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ ಜೂನ್ ಮೊದಲ ವಾರದಲ್ಲಿ ವರದಿ ಸಲ್ಲಿಸಬೇಕು. ನಂತರದ ಮೂರು ತಿಂಗಳಲ್ಲಿ ರಾಜ್ಯದ ವಿವಿಧೆಡೆ ಅರಣ್ಯ ಅಥವಾ ಇನ್ಯಾವುದೇ ಭೂಮಿಯಲ್ಲಿ ನಿಯಮ ಉಲ್ಲಂಘಿಸಿ ಗಣಿಗಾರಿಕೆಗೆ ಅನುಮತಿ ನೀಡಿರುವ ಕುರಿತು ತನಿಖೆ ನಡೆಸಿ ವರದಿ ಸಲ್ಲಿಸಬೇಕು ಎಂದು ಆದೇಶಿಸಿತು.

ಇದನ್ನೂ ಓದಿ: ಅಕ್ರಮ ಡಿನೋಟಿಫಿಕೇಶನ್​ ಆರೋಪ ಪ್ರಕರಣ.. ಬಿಎಸ್​ವೈ ವಿರುದ್ಧ ಕ್ರಿಮಿನಲ್‌ ಕೇಸ್​ ದಾಖಲಿಸುವಂತೆ ಕೋರ್ಟ್​ ಆದೇಶ

ಬೆಂಗಳೂರು: ರಾಜ್ಯದಲ್ಲಿ ಅರಣ್ಯ ಪ್ರದೇಶಗಳಲ್ಲಿ ನಿಯಮ ಉಲ್ಲಂಘಿಸಿ ಗಣಿಗಾರಿಕೆಗೆ ಅನುಮತಿ ನೀಡಿರುವ ಎಲ್ಲ ಪ್ರಕರಣಗಳ ಕುರಿತು ಸಮಗ್ರ ತನಿಖೆ ನಡೆಸಿ ವಿಸ್ತೃತ ವರದಿ ಸಲ್ಲಿಸಲು ಸಾರಿಗೆ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯಾ ಅವರನ್ನು ನೇಮಿಸಲಾಗಿದೆ ಎಂದು ಹೈಕೋರ್ಟ್‌ಗೆ ಸರ್ಕಾರ ಗುರುವಾರ ಮಾಹಿತಿ ನೀಡಿದೆ.

ವಾಣಿ ವಿಲಾಸ್ ಸಿಮೆಂಟ್ಸ್ ಪ್ರೈವೇಟ್ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕ ಪವನ್ ರಾಮಸ್ವಾಮಿ ಅವರು ಸಲ್ಲಿಸಿದ್ದ ಅರ್ಜಿ, ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ವಿಚಾರಣೆ ವೇಳೆ ಸರ್ಕಾರಿ ವಕೀಲರು ಹಾಜರಾಗಿ, ರಾಜ್ಯದ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆಗೆ ಪರವಾನಗಿ ನೀಡಿರುವ ಎಲ್ಲ ಪ್ರಕರಣಗಳ ಕುರಿತು ಸಮಗ್ರವಾಗಿ ತನಿಖೆ ನಡೆಸಬೇಕು. ಅದಕ್ಕಾಗಿ ಪ್ರಧಾನ ಕಾರ್ಯದರ್ಶಿ ಅಥವಾ ಕಾರ್ಯದರ್ಶಿ ಶ್ರೇಣಿಯ ಅಧಿಕಾರಿಯನ್ನು ನೇಮಿಸಬೇಕು ಎಂದು 2022ರ ಫೆ.01ರಂದು ಹೈಕೋರ್ಟ್ ಆದೇಶಿಸಿತ್ತು. ಅದರಂತೆ ತನಿಖೆ ನಡೆಸಲು ರಾಜೇಂದರ್ ಕುಮಾರ್ ಕಟಾರಿಯಾ ಅವರನ್ನು ತನಿಖಾಧಿಕಾರಿಯನ್ನಾಗಿ ನೇಮಿಸಲಾಗಿದೆ ಎಂದು ತಿಳಿಸಿದರು.

ಅದನ್ನು ಪರಿಗಣಿಸಿದ ನ್ಯಾಯಪೀಠ, ರಾಜೇಂದರ್ ಕುಮಾರ್ ಕಟಾರಿಯಾ ಅವರು ಮೊದಲಿಗೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಕೆಂಕೆರೆ ಗ್ರಾಮದಲ್ಲಿನ ಸರ್ವೆ ನಂ.12 ಮತ್ತು 14ರಲ್ಲಿನ ಭೂಮಿಯು ಅರಣ್ಯ ಅಥವಾ ಕಂದಾಯ ಭೂಮಿಯೋ ಎಂಬುದಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ ಜೂನ್ ಮೊದಲ ವಾರದಲ್ಲಿ ವರದಿ ಸಲ್ಲಿಸಬೇಕು. ನಂತರದ ಮೂರು ತಿಂಗಳಲ್ಲಿ ರಾಜ್ಯದ ವಿವಿಧೆಡೆ ಅರಣ್ಯ ಅಥವಾ ಇನ್ಯಾವುದೇ ಭೂಮಿಯಲ್ಲಿ ನಿಯಮ ಉಲ್ಲಂಘಿಸಿ ಗಣಿಗಾರಿಕೆಗೆ ಅನುಮತಿ ನೀಡಿರುವ ಕುರಿತು ತನಿಖೆ ನಡೆಸಿ ವರದಿ ಸಲ್ಲಿಸಬೇಕು ಎಂದು ಆದೇಶಿಸಿತು.

ಇದನ್ನೂ ಓದಿ: ಅಕ್ರಮ ಡಿನೋಟಿಫಿಕೇಶನ್​ ಆರೋಪ ಪ್ರಕರಣ.. ಬಿಎಸ್​ವೈ ವಿರುದ್ಧ ಕ್ರಿಮಿನಲ್‌ ಕೇಸ್​ ದಾಖಲಿಸುವಂತೆ ಕೋರ್ಟ್​ ಆದೇಶ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.