ETV Bharat / city

ಈ ಖಾತೆ ಸಾಕು ಅನ್ನಿಸಿಲ್ಲ.. ನಾನೀಗ ಗೃಹ ಖಾತೆಯಲ್ಲಿ 'ಎಕ್ಸ್‌ಪರ್ಟ್': ಸಚಿವ ಆರಗ ಜ್ಞಾನೇಂದ್ರ - ಈಶ್ವರಪ್ಪ ಬಗ್ಗೆ ಸಚಿವ ಆರಗ ಜ್ಞಾನೇಂದ್ರ ಮಾತು

ಸಚಿವ ಆರಗ ಜ್ಞಾನೇಂದ್ರ ಅವರು ಗೃಹ ಖಾತೆಯನ್ನು ಸಮರ್ಥವಾಗಿ ನಿರ್ವಹಿಸುತ್ತಿಲ್ಲ ಎಂಬ ಆರೋಪಗಳ ಮಧ್ಯೆಯೇ 'ನಾನು ಈಗ ಗೃಹ ಖಾತೆಯಲ್ಲಿ ಎಕ್ಸ್​ಪರ್ಟ್​ ಆಗಿದ್ದೇನೆ. ಈ ಖಾತೆ ನನಗೆ ಸಾಕು ಅನ್ನಿಸಿಲ್ಲ ಎಂದು ಹೇಳಿದ್ದಾರೆ.

minister-aaraga-jnanendra
ಅರಗ ಜ್ಞಾನೇಂದ್ರ
author img

By

Published : May 11, 2022, 4:15 PM IST

Updated : May 11, 2022, 5:06 PM IST

ಬೆಂಗಳೂರು : ನಾನು ಈಗ ಗೃಹ ಖಾತೆಯಲ್ಲಿ ಎಕ್ಸ್‌ಪರ್ಟ್ ಆಗಿದ್ದೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ವಿಧಾನಸೌಧದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನನಗೆ ಈ ಖಾತೆ ಸಾಕು ಅನ್ನಿಸಿಲ್ಲ. ನಿಮಗೆ (ಮಾಧ್ಯಮದವರಿಗೆ) ಸಾಕು ಅನ್ನಿಸುತ್ತಾ ಹೇಳಿ ಎಂದು ಪ್ರಶ್ನಿಸಿದರು.

ಸಚಿವ ಸ್ಥಾನ ಭರ್ತಿ ಸಂಬಂಧ ಸಿಎಂ ಹೈಕಮಾಂಡ್ ಭೇಟಿ ವಿಚಾರಕ್ಕೆ ಪ್ರತಿಕ್ರಿಯಿಸಿ, ಹೈಕಮಾಂಡ್ ತೀರ್ಮಾನಕ್ಕೆ ನಾನು ಬದ್ಧನಾಗಿರುತ್ತೇನೆ. ಸಚಿವ ಸಂಪುಟ ಪುನಾರಚನೆ, ವಿಸ್ತರಣೆಯ ಬಗ್ಗೆ ಮಾಹಿತಿ ಇಲ್ಲ. ಸಿಎಂ‌ ಬಸವರಾಜ ಬೊಮ್ಮಾಯಿ ಅವರು ಬದಲಾಗುತ್ತಾರೆ ಎಂಬುದೂ ನನಗೆ ಗೊತ್ತಿಲ್ಲ. ಅದು ಪಕ್ಷದ ಆಂತರಿಕ ವಿಚಾರ. ನಾನು ಕಮೆಂಟ್ ಮಾಡಲ್ಲ. ಎಲೆಕ್ಷನ್ ವರ್ಷ ಬರುತ್ತಿದೆ. ಎಲ್ಲಾ ಪಕ್ಷಗಳು ಸಿದ್ಧವಾಗಿರಬೇಕು. ಅದರ ಹಿನ್ನೆಲೆಯಲ್ಲಿ ಅನೇಕ ಸಂಗತಿಗಳು ಚರ್ಚೆಗೆ ಬಂದಿದೆ ಎಂದರು.

ನಾನೀಗ ಗೃಹ ಖಾತೆಯಲ್ಲಿ 'ಎಕ್ಸ್‌ಪರ್ಟ್': ಸಚಿವ ಆರಗ ಜ್ಞಾನೇಂದ್ರ

ಧ್ವನಿವರ್ಧಕ ನಿಯಮ ಕಟ್ಟುನಿಟ್ಟು ಜಾರಿ : ಶಬ್ದ ಮಾಲಿನ್ಯದ ನಿಯಂತ್ರಣಕ್ಕಾಗಿ ಧ್ವನಿವರ್ಧಕ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿ ಮಾಡಲಾಗುವುದು. ಸುಪ್ರೀಂಕೋರ್ಟಿನ ಆದೇಶದಂತೆ, ರಾಜ್ಯದಲ್ಲಿ ಮಾರ್ಗಸೂಚಿಗಳನ್ನು ಪ್ರಕಟಿಸಲಾಗಿದೆ. ಕಟ್ಟುನಿಟ್ಟಿನ ಜಾರಿಗೆ ಕ್ರಮ ವಹಿಸಲಾಗಿದೆ ಎಂದು ಗೃಹ ಸಚಿವರು ಹೇಳಿದರು.

ಮಾಧ್ಯಮಗಳ ಮೂಲಕವೂ ವ್ಯಾಪಕ ಪ್ರಚಾರ ಆಗಿದೆ. ರಾತ್ರಿ 10 ಗಂಟೆಯಿಂದ ಮರು ದಿನ ಬೆಳಗಿನ ಜಾವ 6 ಗಂಟೆಯವರೆಗೆ ಯಾವುದೇ ಧ್ವನಿವರ್ಧಕ ಬಳಕೆಗೆ ಅವಕಾಶವಿಲ್ಲ. ಬೇರೆ ಸಮಯದಲ್ಲಿ ಧ್ವನಿವರ್ಧಕಗಳಿಂದ ಉತ್ಪತ್ತಿಯಾಗುವ ಶಬ್ದದ ಪ್ರಮಾಣ ಯಾವ ಸಾಂದ್ರತೆಯಲ್ಲಿರಬೇಕು ಎಂಬುದರ ಬಗ್ಗೆ ಮಾರ್ಗಸೂಚಿಯಲ್ಲಿ ಹೇಳಲಾಗಿದೆ.

ಯಾವ ದರ್ಜೆಯ ಅಧಿಕಾರಿಗಳು, ಧ್ವನಿವರ್ಧಕಗಳಿಗೆ ಅನುಮತಿ ನೀಡಬಹುದು ಹಾಗೂ ಕಾನೂನು ಬಾಹಿರವಾಗಿ ಇರುವ ಧ್ವನಿವರ್ಧಕಗಳನ್ನು ತೆಗೆದು ಹಾಕಬಹುದು ಎಂಬುದರ ಬಗ್ಗೆಯೂ ಮಾರ್ಗಸೂಚಿಗಳು ಇವೆ ಎಂದರು. ಕೆ ಎಸ್ ಈಶ್ವರಪ್ಪ ರಾಜೀನಾಮೆ ಕೊಟ್ಟರೂ ಅವರಿಗೆ ನೋಟಿಸ್ ನೀಡದ ವಿಚಾರವಾಗಿ ಮಾತನಾಡಿ, ಅದರ ಬಗ್ಗೆ ಪೊಲೀಸರು ನಿರ್ಧಾರ ಮಾಡುತ್ತಾರೆ. ಅಗತ್ಯ ಬಿದ್ದರೆ ನೋಟಿಸ್ ಕೊಡುತ್ತಾರೆ.‌ ಇದರಲ್ಲಿ ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

ಓದಿ : ಮಾನನಷ್ಟ ಮೊಕದ್ದಮೆ: ಖುದ್ದು ಹಾಜರಾತಿಯಿಂದ ಶಾಶ್ವತ ವಿನಾಯಿತಿ ಕೇಳಿದ ರಾಹುಲ್​ ಗಾಂಧಿ

ಬೆಂಗಳೂರು : ನಾನು ಈಗ ಗೃಹ ಖಾತೆಯಲ್ಲಿ ಎಕ್ಸ್‌ಪರ್ಟ್ ಆಗಿದ್ದೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ವಿಧಾನಸೌಧದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನನಗೆ ಈ ಖಾತೆ ಸಾಕು ಅನ್ನಿಸಿಲ್ಲ. ನಿಮಗೆ (ಮಾಧ್ಯಮದವರಿಗೆ) ಸಾಕು ಅನ್ನಿಸುತ್ತಾ ಹೇಳಿ ಎಂದು ಪ್ರಶ್ನಿಸಿದರು.

ಸಚಿವ ಸ್ಥಾನ ಭರ್ತಿ ಸಂಬಂಧ ಸಿಎಂ ಹೈಕಮಾಂಡ್ ಭೇಟಿ ವಿಚಾರಕ್ಕೆ ಪ್ರತಿಕ್ರಿಯಿಸಿ, ಹೈಕಮಾಂಡ್ ತೀರ್ಮಾನಕ್ಕೆ ನಾನು ಬದ್ಧನಾಗಿರುತ್ತೇನೆ. ಸಚಿವ ಸಂಪುಟ ಪುನಾರಚನೆ, ವಿಸ್ತರಣೆಯ ಬಗ್ಗೆ ಮಾಹಿತಿ ಇಲ್ಲ. ಸಿಎಂ‌ ಬಸವರಾಜ ಬೊಮ್ಮಾಯಿ ಅವರು ಬದಲಾಗುತ್ತಾರೆ ಎಂಬುದೂ ನನಗೆ ಗೊತ್ತಿಲ್ಲ. ಅದು ಪಕ್ಷದ ಆಂತರಿಕ ವಿಚಾರ. ನಾನು ಕಮೆಂಟ್ ಮಾಡಲ್ಲ. ಎಲೆಕ್ಷನ್ ವರ್ಷ ಬರುತ್ತಿದೆ. ಎಲ್ಲಾ ಪಕ್ಷಗಳು ಸಿದ್ಧವಾಗಿರಬೇಕು. ಅದರ ಹಿನ್ನೆಲೆಯಲ್ಲಿ ಅನೇಕ ಸಂಗತಿಗಳು ಚರ್ಚೆಗೆ ಬಂದಿದೆ ಎಂದರು.

ನಾನೀಗ ಗೃಹ ಖಾತೆಯಲ್ಲಿ 'ಎಕ್ಸ್‌ಪರ್ಟ್': ಸಚಿವ ಆರಗ ಜ್ಞಾನೇಂದ್ರ

ಧ್ವನಿವರ್ಧಕ ನಿಯಮ ಕಟ್ಟುನಿಟ್ಟು ಜಾರಿ : ಶಬ್ದ ಮಾಲಿನ್ಯದ ನಿಯಂತ್ರಣಕ್ಕಾಗಿ ಧ್ವನಿವರ್ಧಕ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿ ಮಾಡಲಾಗುವುದು. ಸುಪ್ರೀಂಕೋರ್ಟಿನ ಆದೇಶದಂತೆ, ರಾಜ್ಯದಲ್ಲಿ ಮಾರ್ಗಸೂಚಿಗಳನ್ನು ಪ್ರಕಟಿಸಲಾಗಿದೆ. ಕಟ್ಟುನಿಟ್ಟಿನ ಜಾರಿಗೆ ಕ್ರಮ ವಹಿಸಲಾಗಿದೆ ಎಂದು ಗೃಹ ಸಚಿವರು ಹೇಳಿದರು.

ಮಾಧ್ಯಮಗಳ ಮೂಲಕವೂ ವ್ಯಾಪಕ ಪ್ರಚಾರ ಆಗಿದೆ. ರಾತ್ರಿ 10 ಗಂಟೆಯಿಂದ ಮರು ದಿನ ಬೆಳಗಿನ ಜಾವ 6 ಗಂಟೆಯವರೆಗೆ ಯಾವುದೇ ಧ್ವನಿವರ್ಧಕ ಬಳಕೆಗೆ ಅವಕಾಶವಿಲ್ಲ. ಬೇರೆ ಸಮಯದಲ್ಲಿ ಧ್ವನಿವರ್ಧಕಗಳಿಂದ ಉತ್ಪತ್ತಿಯಾಗುವ ಶಬ್ದದ ಪ್ರಮಾಣ ಯಾವ ಸಾಂದ್ರತೆಯಲ್ಲಿರಬೇಕು ಎಂಬುದರ ಬಗ್ಗೆ ಮಾರ್ಗಸೂಚಿಯಲ್ಲಿ ಹೇಳಲಾಗಿದೆ.

ಯಾವ ದರ್ಜೆಯ ಅಧಿಕಾರಿಗಳು, ಧ್ವನಿವರ್ಧಕಗಳಿಗೆ ಅನುಮತಿ ನೀಡಬಹುದು ಹಾಗೂ ಕಾನೂನು ಬಾಹಿರವಾಗಿ ಇರುವ ಧ್ವನಿವರ್ಧಕಗಳನ್ನು ತೆಗೆದು ಹಾಕಬಹುದು ಎಂಬುದರ ಬಗ್ಗೆಯೂ ಮಾರ್ಗಸೂಚಿಗಳು ಇವೆ ಎಂದರು. ಕೆ ಎಸ್ ಈಶ್ವರಪ್ಪ ರಾಜೀನಾಮೆ ಕೊಟ್ಟರೂ ಅವರಿಗೆ ನೋಟಿಸ್ ನೀಡದ ವಿಚಾರವಾಗಿ ಮಾತನಾಡಿ, ಅದರ ಬಗ್ಗೆ ಪೊಲೀಸರು ನಿರ್ಧಾರ ಮಾಡುತ್ತಾರೆ. ಅಗತ್ಯ ಬಿದ್ದರೆ ನೋಟಿಸ್ ಕೊಡುತ್ತಾರೆ.‌ ಇದರಲ್ಲಿ ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

ಓದಿ : ಮಾನನಷ್ಟ ಮೊಕದ್ದಮೆ: ಖುದ್ದು ಹಾಜರಾತಿಯಿಂದ ಶಾಶ್ವತ ವಿನಾಯಿತಿ ಕೇಳಿದ ರಾಹುಲ್​ ಗಾಂಧಿ

Last Updated : May 11, 2022, 5:06 PM IST

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.