ETV Bharat / city

ಬಿಜೆಪಿ ಸಂಘಟನಾ ಸಭೆಗೆ ಸಚಿವ ಆರ್​. ಅಶೋಕ್ ಗೈರು - BJP meeting

ಬೆಂಗಳೂರಿನ ಬಿಜೆಪಿ ಸಂಘಟನಾತ್ಮಕ ವಿಚಾರ ಹಾಗೂ ಪಕ್ಷದ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಲು ಮಲ್ಲೇಶ್ವರಂನ ರಾಜ್ಯ ಬಿಜೆಪಿ ಕಚೇರಿಯಲ್ಲಿ ಇಂದು ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣ್ ಕುಮಾರ್ ಕರೆದಿದ್ದ ಸಭೆಗೆ ಸಚಿವ ಆರ್.ಅಶೋಕ್ ಗೈರಾಗಿದ್ದು, ಮತ್ತೊಮ್ಮೆ ಅಸಮಾಧಾನ ಹೊರಹಾಕಿದ್ದಾರೆ.

ಬಿಜೆಪಿ ಸಭೆ
author img

By

Published : Sep 16, 2019, 4:30 PM IST

ಬೆಂಗಳೂರು: ಉಪ ಮುಖ್ಯಮಂತ್ರಿ ಸ್ಥಾನ ಕೈತಪ್ಪಿದ್ದರಿಂದ ಮುನಿಸಿಕೊಂಡಿರುವ ಕಂದಾಯ ಸಚಿವ ಆರ್. ಅಶೋಕ್, ಪಕ್ಷದ ಸಂಘಟನಾತ್ಮಕ ಚಟುವಟಿಕೆಯಿಂದ ದೂರ ಉಳಿಯುವ ಮೂಲಕ ಮತ್ತೊಮ್ಮೆ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

ನಗರದ ಬಿಜೆಪಿ ಸಂಘಟನಾತ್ಮಕ ವಿಚಾರ ಹಾಗೂ ಪಕ್ಷದ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಲು ಮಲ್ಲೇಶ್ವರಂನ ರಾಜ್ಯ ಬಿಜೆಪಿ ಕಚೇರಿಯಲ್ಲಿಂದು ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣ್ ಕುಮಾರ್ ಕರೆದಿದ್ದ ಸಭೆಗೆ ಸಚಿವ ಆರ್.ಅಶೋಕ್ ಗೈರಾಗಿದ್ದಾರೆ.

ಇನ್ನು ಸಭೆಯಲ್ಲಿ ಡಿಸಿಎಂ ಡಾ. ಸಿ.ಎನ್.‌ ಅಶ್ವಥ್​ ನಾರಾಯಣ್​, ಸಂಸದರಾದ ಪಿ.ಸಿ. ಮೋಹನ್ ಹಾಗೂ ತೇಜಸ್ವಿ ಸೂರ್ಯ, ಬೆಂಗಳೂರು ಮಹಾನಗರ ಜಿಲ್ಲಾಧ್ಯಕ್ಷ ಎಸ್‌‌. ಮುನಿರಾಜು, ಬೆಂಗಳೂರು ನಗರ ಅಧ್ಯಕ್ಷ ಪಿ.ಎನ್. ಸದಾಶಿವ ಸೇರಿದಂತೆ ಬೆಂಗಳೂರಿನ ಪ್ರಮುಖ ನಾಯಕರು ಭಾಗಿಯಾಗಿದ್ದರು. ಆದರೆ ಈ ಮಹತ್ವದ ಸಭೆಯಿಂದ ಆಹ್ವಾನವಿದ್ದರೂ ಅಶೋಕ್‌, ಗೈರಾಗಿ ಅತೃಪ್ತಿ ವ್ಯಕ್ತಪಡಿಸಿದ್ದಾರೆ.

ಉಪ ಮುಖ್ಯಮಂತ್ರಿ ಸ್ಥಾನ ಸಿಗಲಿಲ್ಲ ಎನ್ನುವುದಕ್ಕಿಂತಲೂ ಡಾ.ಸಿ ಎನ್ ಅಶ್ವಥ್​ನಾರಾಯಣ್​ಗೆ ಡಿಸಿಎಂ‌ ಸ್ಥಾನ ನೀಡಿರುವುದಕ್ಕೆ ಅಶೋಕ್​ಗೆ ಹೆಚ್ಚಿನ ಬೇಸರವಾಗಿದೆ. ಬೆಂಗಳೂರು‌ ಉಸ್ತುವಾರಿಯೂ ಬಹುತೇಕ ಕೈತಪ್ಪಲಿದೆ ಎನ್ನಲಾಗಿದೆ ಹೀಗಾಗಿ ಅಶೋಕ್ ಸಂಘಟನಾತ್ಮಕ ಸಭೆಗಳಿಂದ ದೂರ ಉಳಿಯುವುದನ್ನು ಮುಂದುವರೆಸಿದ್ದಾರೆ ಎನ್ನಲಾಗಿದೆ.

ನೂತನ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಅಶೋಕ್ ಜೊತೆ ಸಂಧಾನಕ್ಕೆ ಪ್ರಯತ್ನ ನಡೆಸಿದ್ದರೂ ಸಫಲವಾಗಲಿಲ್ಲ. ಸಿಎಂ ಯಡಿಯೂರಪ್ಪ ಸದ್ಯದ ಮಟ್ಟಿಗೆ ಯಾರ ಮನವೊಲಿಕೆ ಮಾಡುವ ಸ್ಥಿತಿಯಲ್ಲಿ ಇಲ್ಲ. ಹೀಗಾಗಿ ಪಕ್ಷದ ನಾಯಕರ ನಡುವಿನ ಮುನಿಸು ಮತ್ತಷ್ಟು ದಿನ ಮುಂದುವರೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಬೆಂಗಳೂರು: ಉಪ ಮುಖ್ಯಮಂತ್ರಿ ಸ್ಥಾನ ಕೈತಪ್ಪಿದ್ದರಿಂದ ಮುನಿಸಿಕೊಂಡಿರುವ ಕಂದಾಯ ಸಚಿವ ಆರ್. ಅಶೋಕ್, ಪಕ್ಷದ ಸಂಘಟನಾತ್ಮಕ ಚಟುವಟಿಕೆಯಿಂದ ದೂರ ಉಳಿಯುವ ಮೂಲಕ ಮತ್ತೊಮ್ಮೆ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

ನಗರದ ಬಿಜೆಪಿ ಸಂಘಟನಾತ್ಮಕ ವಿಚಾರ ಹಾಗೂ ಪಕ್ಷದ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಲು ಮಲ್ಲೇಶ್ವರಂನ ರಾಜ್ಯ ಬಿಜೆಪಿ ಕಚೇರಿಯಲ್ಲಿಂದು ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣ್ ಕುಮಾರ್ ಕರೆದಿದ್ದ ಸಭೆಗೆ ಸಚಿವ ಆರ್.ಅಶೋಕ್ ಗೈರಾಗಿದ್ದಾರೆ.

ಇನ್ನು ಸಭೆಯಲ್ಲಿ ಡಿಸಿಎಂ ಡಾ. ಸಿ.ಎನ್.‌ ಅಶ್ವಥ್​ ನಾರಾಯಣ್​, ಸಂಸದರಾದ ಪಿ.ಸಿ. ಮೋಹನ್ ಹಾಗೂ ತೇಜಸ್ವಿ ಸೂರ್ಯ, ಬೆಂಗಳೂರು ಮಹಾನಗರ ಜಿಲ್ಲಾಧ್ಯಕ್ಷ ಎಸ್‌‌. ಮುನಿರಾಜು, ಬೆಂಗಳೂರು ನಗರ ಅಧ್ಯಕ್ಷ ಪಿ.ಎನ್. ಸದಾಶಿವ ಸೇರಿದಂತೆ ಬೆಂಗಳೂರಿನ ಪ್ರಮುಖ ನಾಯಕರು ಭಾಗಿಯಾಗಿದ್ದರು. ಆದರೆ ಈ ಮಹತ್ವದ ಸಭೆಯಿಂದ ಆಹ್ವಾನವಿದ್ದರೂ ಅಶೋಕ್‌, ಗೈರಾಗಿ ಅತೃಪ್ತಿ ವ್ಯಕ್ತಪಡಿಸಿದ್ದಾರೆ.

ಉಪ ಮುಖ್ಯಮಂತ್ರಿ ಸ್ಥಾನ ಸಿಗಲಿಲ್ಲ ಎನ್ನುವುದಕ್ಕಿಂತಲೂ ಡಾ.ಸಿ ಎನ್ ಅಶ್ವಥ್​ನಾರಾಯಣ್​ಗೆ ಡಿಸಿಎಂ‌ ಸ್ಥಾನ ನೀಡಿರುವುದಕ್ಕೆ ಅಶೋಕ್​ಗೆ ಹೆಚ್ಚಿನ ಬೇಸರವಾಗಿದೆ. ಬೆಂಗಳೂರು‌ ಉಸ್ತುವಾರಿಯೂ ಬಹುತೇಕ ಕೈತಪ್ಪಲಿದೆ ಎನ್ನಲಾಗಿದೆ ಹೀಗಾಗಿ ಅಶೋಕ್ ಸಂಘಟನಾತ್ಮಕ ಸಭೆಗಳಿಂದ ದೂರ ಉಳಿಯುವುದನ್ನು ಮುಂದುವರೆಸಿದ್ದಾರೆ ಎನ್ನಲಾಗಿದೆ.

ನೂತನ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಅಶೋಕ್ ಜೊತೆ ಸಂಧಾನಕ್ಕೆ ಪ್ರಯತ್ನ ನಡೆಸಿದ್ದರೂ ಸಫಲವಾಗಲಿಲ್ಲ. ಸಿಎಂ ಯಡಿಯೂರಪ್ಪ ಸದ್ಯದ ಮಟ್ಟಿಗೆ ಯಾರ ಮನವೊಲಿಕೆ ಮಾಡುವ ಸ್ಥಿತಿಯಲ್ಲಿ ಇಲ್ಲ. ಹೀಗಾಗಿ ಪಕ್ಷದ ನಾಯಕರ ನಡುವಿನ ಮುನಿಸು ಮತ್ತಷ್ಟು ದಿನ ಮುಂದುವರೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

Intro:


ಬೆಂಗಳೂರು:ಉಪ ಮುಖ್ಯಮಂತ್ರಿ ಸ್ಥಾನ ಕೈತಪ್ಪಿದ್ದರಿಂದ ಮುನಿಸಿಕೊಂಡಿರುವ ಕಂದಾಯ ಸಚಿವ ಆರ್.ಅಶೋಕ್ ಪಕ್ಷದ ಸಂಘಟನಾತ್ಮಕ ಚುಟುವಟಿಕೆಯಿಂದ ದೂರ ಉಳಿಯುವ ಮೂಲಕ ಅಸಮಾಧಾನವನ್ನು ಮತ್ತೊಮ್ಮೆ ಹೊರಹಾಕಿದ್ದಾರೆ.

ಬೆಂಗಳೂರು ಬಿಜೆಪಿ ಸಂಘಟನಾ ಸಭೆಯಿಂದಲೂ ಕಂದಾಯ ಸಚಿವ ಆರ್. ಅಶೋಕ್ ದೂರ ಉಳಿದಿದ್ದಾರೆ. ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣ್ ಕುಮಾರ್ ಕರೆದಿದ್ದ ಸಭೆಗೆ ಗೈರಾದ ಸಚಿವ ಅಶೋಕ್ ತಮ್ಮ ಅಸಮಧಾನವನ್ನು ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ಬಿಜೆಪಿ ಸಂಘಟನಾತ್ಮಕ ವಿಚಾರವಾಗಿ ಮಲ್ಲೇಶ್ವರಂನ ರಾಜ್ಯ ಬಿಜೆಪಿ ಕಚೇರಿಯಲ್ಲಿ ಬೆಳಗ್ಗೆ ನಡೆದಿದ್ದ ಸಭೆಯಲ್ಲಿ ಡಿಸಿಎಂ ಡಾ. ಸಿ.ಎನ್.‌ ಅಶ್ವಥನಾರಾಯಣ, ಸಂಸದರಾದ ಪಿ.ಸಿ. ಮೋಹನ್, ತೇಜಸ್ವಿ ಸೂರ್ಯ, ಬೆಂಗಳೂರು ಮಹಾ ನಗರ ಜಿಲ್ಲಾಧ್ಯಕ್ಷ ಎಸ್‌‌. ಮುನಿರಾಜು, ಬೆಂಗಳೂರು ನಗರ ಅಧ್ಯಕ್ಷ ಪಿ.ಎನ್. ಸದಾಶಿವ ಸೇರಿದಂತೆ ಬೆಂಗಳೂರಿನ ಪ್ರಮುಖ ನಾಯಕರು ಭಾಗಿಯಾಗಿದ್ದರು ಆದರೆ ಈ ಮಹತ್ವದ ಸಭೆಯಿಂದ ಆಹ್ವಾನವಿದ್ದರೂ ಅಶೋಕ್‌ ಗೈರಾಗಿ ಅತೃಪ್ತಿ ವ್ಯಕ್ತಪಡಿಸಿದ್ದಾರೆ.

ರಾಷ್ಟ್ರೀಯ ಐಕ್ಯತಾ ಅಭಿಯಾನ, ಬೆಂಗಳೂರಿನ ಸಂಘಟನಾತ್ಮಕ ವಿಚಾರ, ಪಕ್ಷದ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಲು ಕರೆದಿದ್ದ ಸಭೆಯಲ್ಲಿ ಸಾಕಷ್ಟು ವಿಷಯಗಳ ಕುರಿತು ಚರ್ಚೆ ನಡೆಸಲಾಯಿತು ಆದರೆ ಮುನಿಸು ಶಮನವಾಗದ ಕಾರಣ ಸಭೆಯಿಂದ ಅಶೋಕ್ ದೂರ ಉಳಿದರು.

ಉಪ ಮುಖ್ಯಮಂತ್ರಿ ಸ್ಥಾನ ಸಿಗಲಿಲ್ಲ ಎನ್ನುವುದಕ್ಕಿಂತಲೂ ಡಾ.ಸಿಎನ್ ಅಶ್ವತ್ಥನಾರಾಯಣ್ ಗೆ ಡಿಸಿಎಂ‌ ಸ್ಥಾನ ನೀಡಿರುವುದಕ್ಕೆ ಅಶೋಕ್ ಗೆ ಹೆಚ್ಚಿನ ಬೇಸರವಾಗಿದೆ, ಬೆಂಗಳೂರು‌ ಉಸ್ತುವಾರಿಯೂ ಬಹುತೇಕ ಕೈತಪ್ಪಲಿದೆ ಎನ್ನಲಾಗಿದೆ ಹೀಗಾಗಿ ಅಶೋಕ್ ಸಂಘಟನಾತ್ಮಕ ಸಭೆಗಳಿಂದ ದೂರ ಉಳಿಯುವುದನ್ನು ಮುಂದುವರೆಸಿದ್ದಾರೆ ಎನ್ನಲಾಗಿದೆ.

ನೂತನ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅಶೋಕ್ ಸಂಧಾನಕ್ಕೆ ಪ್ರಯತ್ನ ನಡೆಸಿದ್ದರೂ ಸಫಲವಾಗಲಿಲ್ಲ, ಯಡಿಯೂರಪ್ಪ ಸಧ್ಯದ ಮಟ್ಟಿಗೆ ಯಾರ ಮನವೊಲಿಕೆ ಮಾಡುವ ಸ್ಥಿತಿಯಲ್ಲಿ ಇಲ್ಲ ಹೀಗಾಗಿ ಪಕ್ಷದ ನಾಯಕರ ನಡುವಿನ ಮುನಿಸು ಮತ್ತಷ್ಟು ದಿನ ಮುಂದುವರೆಯುವ ಸಾಧ್ಯತೆ ಇದೆ.
Body:.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.