ಬೆಂಗಳೂರು: ಗುರುವಾರ ರಾತ್ರಿ ನಗರದಲ್ಲಿ ಸುರಿದ ಭಾರಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಕಂದಾಯ ಸಚಿವ ಆರ್.ಅಶೋಕ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಅಲ್ಲಿನ ಮಕ್ಕಳ ಜೊತೆ ಸಚಿವರು ಕ್ರಿಕೆಟ್ ಆಡಿದರು.
ಮಳೆ ಅವಾಂತರ ಸಂಬಂಧ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ನೇತೃತ್ವದ ಸಭೆಗೆ ಸಚಿವ ಆರ್.ಅಶೋಕ್ ಗೈರಾಗಿದ್ದರು. ಸಭೆಗೆ ಗೈರಾದ ಸಚಿವ ಆರ್.ಅಶೋಕ್ ಪದ್ಮನಾಭನಗರದಲ್ಲಿ ಮಕ್ಕಳ ಜೊತೆ ಕ್ರಿಕೆಟ್ ಆಟದಲ್ಲಿ ತೊಡಗಿದ್ದರು ಎಂಬ ಮಾತುಗಳು ಕೇಳಿಬಂದಿವೆ.
ಸಿಎಂ ಹೇಳಿದ್ದೇನು?:
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, 'ನಾನು ಹುಬ್ಬಳ್ಳಿ ಬಂದ ತಕ್ಷಣ ಮಳೆ ಅನಾಹುತದ ಬಗ್ಗೆ ತುರ್ತು ಸಭೆ ಕರೆದಿದ್ದೇನೆ. ಯಾರಿಗೂ ಸಭೆ ನಡೆಸುವ ಬಗ್ಗೆ ಸೂಚನೆ ನೀಡಿರಲಿಲ್ಲ. ಹೀಗಾಗಿ ಸಚಿವರು ಸಭೆಗೆ ಬಂದಿರಲಿಲ್ಲ. ಎಲ್ಲಾ ಸಚಿವರು ಮಳೆ ಅನಾಹುತದ ಬಗ್ಗೆ ಗಂಭೀರವಾಗಿ ಇದ್ದಾರೆ' ಎಂದು ಸ್ಪಷ್ಟಪಡಿಸಿದರು.