ETV Bharat / city

2027ರ ಹೊತ್ತಿಗೆ ಕರ್ನಾಟಕ ಮಲೇರಿಯಾ ಮುಕ್ತ ರಾಜ್ಯ ಗುರಿ: ಸಚಿವ ಸುಧಾಕರ್

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಚಿಕಿತ್ಸಾ ವ್ಯವಸ್ಥೆಯಾದ ಹೈಪರ್ ಬ್ಯಾರಿಕ್ ಆಕ್ಸಿಜನ್ ಥೆರಪಿ ಯೂನಿಟ್ ಅನ್ನು ವೈದ್ಯಕೀಯ ಇಲಾಖೆ ಸಚಿವ ಡಾ.ಕೆ. ಸುಧಾಕರ್​ ಲೋಕಾರ್ಪಣೆ ಮಾಡಿದರು.

author img

By

Published : Apr 25, 2022, 5:11 PM IST

minister-sudhakar
ಸಚಿವ ಸುಧಾಕರ್

ಬೆಂಗಳೂರು: ಕೇಂದ್ರ ಸರ್ಕಾರ 2030ಕ್ಕೆ ಮಲೇರಿಯಾ ಮುಕ್ತ ಭಾರತಕ್ಕೆ ಶ್ರಮಿಸುತ್ತಿದೆ. ರಾಜ್ಯದಲ್ಲೂ ಸರ್ಕಾರ ಮಲೇರಿಯಾ ವಿರುದ್ಧ ಹೋರಾಟ ಮಾಡುತ್ತಿದೆ. 2027ರ ಹೊತ್ತಿಗೆ ರಾಜ್ಯದಲ್ಲಿ ಮಲೇರಿಯಾ ನಿರ್ಮೂಲನೆ‌ ಆಗಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಕರೆ ಕೊಟ್ಟರು.

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲಿರುವ ಪಿಎಂಎಸ್ ಎಸ್​ವೈ ಆಸ್ಪತ್ರೆ ವಿಶ್ವ ಮಲೇರಿಯಾ ದಿನದ ಪ್ರಯುಕ್ತ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ಮಲೇರಿಯಾ ವಿರುದ್ಧ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯ ಆಗಬೇಕಿದೆ. ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳು ಜೊತೆಯಾಗಿ ಶ್ರಮ ಪಟ್ಟರೆ ಆರೋಗ್ಯಯುಕ್ತ ಕರ್ನಾಟಕದ ಕನಸು ನನಸಾಗಬಹುದು ಎಂದು ಹೇಳಿದರು.

ಮಲೇರಿಯಾ ನಿಯಂತ್ರಿಸುವುದು ಹೇಗೆ?: ಮಲೇರಿಯಾ ಅನಾಫಿಲಿಸ್ ಹೆಣ್ಣು ಸೊಳ್ಳೆಯ ಕಡಿತದಿಂದ ಬರುತ್ತದೆ. ಹೀಗಾಗಿ ಸೊಳ್ಳೆ ಬಾರದೇ ಇರುವ ಹಾಗೆ ಅಥವಾ ಅದರ ಸಂತತಿ ಬೆಳೆಯದಂತೆ ನೋಡಿಕೊಳ್ಳಬೇಕು. ಮನೆಯ ಸುತ್ತಮುತ್ತ ಶುಚಿತ್ವ ಕಾಪಾಡಬೇಕು. ಮನೆಯ ಕಿಟಕಿ ಬಾಗಿಲುಗಳಿಗೆ ಸೊಳ್ಳೆ ಪರದೆ ಹಾಕಿಸಿಕೊಳ್ಳಬೇಕು. ರಾಜ್ಯದ 10 ಜಿಲ್ಲೆಗಳಲ್ಲಿ ಕಳೆದ 3 ವರ್ಷಗಳಿಂದ ಒಂದೇ ಒಂದು ಮಲೇರಿಯಾ ಪ್ರಕರಣ ಕಂಡು ಬಂದಿಲ್ಲ. ಉಡುಪಿ, ಮಂಗಳೂರು ಪ್ರದೇಶಗಳಲ್ಲಿ ಮಲೇರಿಯಾ ಹೆಚ್ಚಿದೆ. ಈ ಬಗ್ಗೆ ಅಧ್ಯಯನ ನಡೆಯುತ್ತಿದೆ ಎಂದು ತಿಳಿಸಿದರು.

ಹೈಪರ್ ಬ್ಯಾರಿಕ್ ಆಕ್ಸಿಜನ್ ಥೆರಪಿ ಲೋಕಾರ್ಪಣೆ
ಹೈಪರ್ ಬ್ಯಾರಿಕ್ ಆಕ್ಸಿಜನ್ ಥೆರಪಿ ಲೋಕಾರ್ಪಣೆ

ಹೈಪರ್ ಬ್ಯಾರಿಕ್ ಆಕ್ಸಿಜನ್ ಥೆರಪಿ ಲೋಕಾರ್ಪಣೆ: ಇನ್ನು ಇದೇ ವೇಳೆ, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಚಿಕಿತ್ಸಾ ವ್ಯವಸ್ಥೆಯಾದ ಹೈಪರ್ ಬ್ಯಾರಿಕ್ ಆಕ್ಸಿಜನ್ ಥೆರಪಿ ಯೂನಿಟ್ ಅನ್ನು ಲೋಕಾರ್ಪಣೆ ಮಾಡಲಾಯಿತು.

ಬಳಿಕ ಮಾತನಾಡಿದ ಸಚಿವ ಸುಧಾಕರ್​, ಖಾಸಗಿ ಆಸ್ಪತ್ರೆಗಳಲ್ಲಿ ಸಿಗುವ ದುಬಾರಿ ಆರೋಗ್ಯ ಸೇವೆಗಳು ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಸಿಕ್ಕಾಗ ಮಾತ್ರ ಆರೋಗ್ಯ ಕ್ಷೇತ್ರದಲ್ಲಿ ಹೊಸ ಕ್ರಾಂತಿ ಮಾಡಬಹುದು. ಸರ್ಕಾರಿ ಆಸ್ಪತ್ರೆಯಲ್ಲಿ ಮೊಟ್ಟ ಮೊದಲ ಬಾರಿಗೆ ಹೈಪರ್ ಬ್ಯಾರಿಕ್ ಆಕ್ಸಿಜನ್ ಥೆರಪಿ ಸಾರ್ವಜನಿಕ ಸೇವೆಗೆ ಲಭ್ಯವಾಗಿದೆ. ಹೈಪರ್ ಬ್ಯಾರಿಕ್ ಆಕ್ಸಿಜನ್ ಥೆರಪಿ ಅಥವಾ HBO2 ದುಬಾರಿ ಚಿಕಿತ್ಸೆಯಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಇಂತಹ ಸೇವೆ ಲಭ್ಯವಾಗುತ್ತಿರುವುದರಿಂದ ಸಾಮಾನ್ಯ ಜನರಿಗೂ ಇದರ ಸೇವೆ ಸಿಗುವ ಹಾಗಾಗಿದೆ ಎಂದರು.

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಉದ್ಘಾಟನೆಯಾದ ಈ HBO2 ಯೂನಿಟ್ ಅನ್ನು ಅಮೆರಿಕದಿಂದ ಆಮದು ಮಾಡಿಕೊಳ್ಳಲಾಗಿದೆ. ಸುಮಾರು 3.5 ಕೋಟಿ ರೂಪಾಯಿ ವೆಚ್ಚದ ಆಧುನಿಕ ಯಂತ್ರೋಪಕರಣಗಳು ಇದಾಗಿದೆ ಎಂದು ವಿವರಿಸಿದರು.

ಓದಿ: ಚಲಿಸುತ್ತಿದ್ದ ರೈಲಿನಲ್ಲೇ ಕಬಡ್ಡಿ ಆಟಗಾರ್ತಿ ಮೇಲೆ ರೇಪ್​... ಶೌಚಾಲಯದಲ್ಲಿ ದುಷ್ಕೃತ್ಯ

ಬೆಂಗಳೂರು: ಕೇಂದ್ರ ಸರ್ಕಾರ 2030ಕ್ಕೆ ಮಲೇರಿಯಾ ಮುಕ್ತ ಭಾರತಕ್ಕೆ ಶ್ರಮಿಸುತ್ತಿದೆ. ರಾಜ್ಯದಲ್ಲೂ ಸರ್ಕಾರ ಮಲೇರಿಯಾ ವಿರುದ್ಧ ಹೋರಾಟ ಮಾಡುತ್ತಿದೆ. 2027ರ ಹೊತ್ತಿಗೆ ರಾಜ್ಯದಲ್ಲಿ ಮಲೇರಿಯಾ ನಿರ್ಮೂಲನೆ‌ ಆಗಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಕರೆ ಕೊಟ್ಟರು.

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲಿರುವ ಪಿಎಂಎಸ್ ಎಸ್​ವೈ ಆಸ್ಪತ್ರೆ ವಿಶ್ವ ಮಲೇರಿಯಾ ದಿನದ ಪ್ರಯುಕ್ತ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ಮಲೇರಿಯಾ ವಿರುದ್ಧ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯ ಆಗಬೇಕಿದೆ. ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳು ಜೊತೆಯಾಗಿ ಶ್ರಮ ಪಟ್ಟರೆ ಆರೋಗ್ಯಯುಕ್ತ ಕರ್ನಾಟಕದ ಕನಸು ನನಸಾಗಬಹುದು ಎಂದು ಹೇಳಿದರು.

ಮಲೇರಿಯಾ ನಿಯಂತ್ರಿಸುವುದು ಹೇಗೆ?: ಮಲೇರಿಯಾ ಅನಾಫಿಲಿಸ್ ಹೆಣ್ಣು ಸೊಳ್ಳೆಯ ಕಡಿತದಿಂದ ಬರುತ್ತದೆ. ಹೀಗಾಗಿ ಸೊಳ್ಳೆ ಬಾರದೇ ಇರುವ ಹಾಗೆ ಅಥವಾ ಅದರ ಸಂತತಿ ಬೆಳೆಯದಂತೆ ನೋಡಿಕೊಳ್ಳಬೇಕು. ಮನೆಯ ಸುತ್ತಮುತ್ತ ಶುಚಿತ್ವ ಕಾಪಾಡಬೇಕು. ಮನೆಯ ಕಿಟಕಿ ಬಾಗಿಲುಗಳಿಗೆ ಸೊಳ್ಳೆ ಪರದೆ ಹಾಕಿಸಿಕೊಳ್ಳಬೇಕು. ರಾಜ್ಯದ 10 ಜಿಲ್ಲೆಗಳಲ್ಲಿ ಕಳೆದ 3 ವರ್ಷಗಳಿಂದ ಒಂದೇ ಒಂದು ಮಲೇರಿಯಾ ಪ್ರಕರಣ ಕಂಡು ಬಂದಿಲ್ಲ. ಉಡುಪಿ, ಮಂಗಳೂರು ಪ್ರದೇಶಗಳಲ್ಲಿ ಮಲೇರಿಯಾ ಹೆಚ್ಚಿದೆ. ಈ ಬಗ್ಗೆ ಅಧ್ಯಯನ ನಡೆಯುತ್ತಿದೆ ಎಂದು ತಿಳಿಸಿದರು.

ಹೈಪರ್ ಬ್ಯಾರಿಕ್ ಆಕ್ಸಿಜನ್ ಥೆರಪಿ ಲೋಕಾರ್ಪಣೆ
ಹೈಪರ್ ಬ್ಯಾರಿಕ್ ಆಕ್ಸಿಜನ್ ಥೆರಪಿ ಲೋಕಾರ್ಪಣೆ

ಹೈಪರ್ ಬ್ಯಾರಿಕ್ ಆಕ್ಸಿಜನ್ ಥೆರಪಿ ಲೋಕಾರ್ಪಣೆ: ಇನ್ನು ಇದೇ ವೇಳೆ, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಚಿಕಿತ್ಸಾ ವ್ಯವಸ್ಥೆಯಾದ ಹೈಪರ್ ಬ್ಯಾರಿಕ್ ಆಕ್ಸಿಜನ್ ಥೆರಪಿ ಯೂನಿಟ್ ಅನ್ನು ಲೋಕಾರ್ಪಣೆ ಮಾಡಲಾಯಿತು.

ಬಳಿಕ ಮಾತನಾಡಿದ ಸಚಿವ ಸುಧಾಕರ್​, ಖಾಸಗಿ ಆಸ್ಪತ್ರೆಗಳಲ್ಲಿ ಸಿಗುವ ದುಬಾರಿ ಆರೋಗ್ಯ ಸೇವೆಗಳು ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಸಿಕ್ಕಾಗ ಮಾತ್ರ ಆರೋಗ್ಯ ಕ್ಷೇತ್ರದಲ್ಲಿ ಹೊಸ ಕ್ರಾಂತಿ ಮಾಡಬಹುದು. ಸರ್ಕಾರಿ ಆಸ್ಪತ್ರೆಯಲ್ಲಿ ಮೊಟ್ಟ ಮೊದಲ ಬಾರಿಗೆ ಹೈಪರ್ ಬ್ಯಾರಿಕ್ ಆಕ್ಸಿಜನ್ ಥೆರಪಿ ಸಾರ್ವಜನಿಕ ಸೇವೆಗೆ ಲಭ್ಯವಾಗಿದೆ. ಹೈಪರ್ ಬ್ಯಾರಿಕ್ ಆಕ್ಸಿಜನ್ ಥೆರಪಿ ಅಥವಾ HBO2 ದುಬಾರಿ ಚಿಕಿತ್ಸೆಯಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಇಂತಹ ಸೇವೆ ಲಭ್ಯವಾಗುತ್ತಿರುವುದರಿಂದ ಸಾಮಾನ್ಯ ಜನರಿಗೂ ಇದರ ಸೇವೆ ಸಿಗುವ ಹಾಗಾಗಿದೆ ಎಂದರು.

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಉದ್ಘಾಟನೆಯಾದ ಈ HBO2 ಯೂನಿಟ್ ಅನ್ನು ಅಮೆರಿಕದಿಂದ ಆಮದು ಮಾಡಿಕೊಳ್ಳಲಾಗಿದೆ. ಸುಮಾರು 3.5 ಕೋಟಿ ರೂಪಾಯಿ ವೆಚ್ಚದ ಆಧುನಿಕ ಯಂತ್ರೋಪಕರಣಗಳು ಇದಾಗಿದೆ ಎಂದು ವಿವರಿಸಿದರು.

ಓದಿ: ಚಲಿಸುತ್ತಿದ್ದ ರೈಲಿನಲ್ಲೇ ಕಬಡ್ಡಿ ಆಟಗಾರ್ತಿ ಮೇಲೆ ರೇಪ್​... ಶೌಚಾಲಯದಲ್ಲಿ ದುಷ್ಕೃತ್ಯ

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.