ETV Bharat / city

ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ, ನಿಗಮ-ಮಂಡಳಿ ಕೂಡ ಬೇಕಿಲ್ಲ: ರಘು ಆಚಾರ್​ - undefined

ಈಟಿವಿ ಭಾರತದೊಂದಿಗೆ ಮಾತನಾಡಿದ ವಿಧಾನ ಪರಿಷತ್ ಸದಸ್ಯ ರಘು ಆಚಾರ್, ಸಚಿವ ಸಂಪುಟಕ್ಕೆ ಯಾರನ್ನು ತೆಗೆದುಕೊಳ್ಳಬೇಕು ಎನ್ನುವುದು ಸಿಎಂಗೆ ಬಿಟ್ಟ ವಿಚಾರ. ನಾನೇನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಎಂದು ಹೇಳಿದ್ರು.

Raghu Achar
author img

By

Published : Jun 11, 2019, 10:19 PM IST

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಪೂರ್ಣ ಪ್ರಮಾಣದಲ್ಲಿ ಅಧಿಕಾರಕ್ಕೆ ಬಂದರೆ ನನಗೆ ಮುಖ್ಯ ಸಚೇತಕ ಹುದ್ದೆ ನೀಡೋದಾಗಿ ಹೇಳಿದ್ದರು. ಆದ್ರೆ ಸಮ್ಮಿಶ್ರ ಸರ್ಕಾರ ರಚನೆಯಾದ ಕಾರಣ ಆ ಅವಕಾಶ ತಪ್ಪಿತು ಎಂದು ಎಂದು ವಿಧಾನ ಪರಿಷತ್ ಸದಸ್ಯ ರಘು ಆಚಾರ್ ಬೇಸರ ವ್ಯಕ್ತಪಡಿಸಿದ್ದಾರೆ.

ಶಾಸಕರ ಭವನದಲ್ಲಿ ಈಟಿವಿ ಭಾರತದೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟಕ್ಕೆ ಯಾರನ್ನು ಸೇರಿಸಿಕೊಳ್ಳಬೇಕು ಎನ್ನುವುದು ಸಿಎಂಗೆ ಬಿಟ್ಟ ವಿಚಾರ. ನಾನೇನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಸಿದ್ದರಾಮಯ್ಯ ಅವರ ಬಳಿ ಒಮ್ಮೆ ವಿಚಾರಿಸಿದಾಗ, ಮುಂದಿನ ಅವಧಿಯಲ್ಲಿ ಮುಖ್ಯ ಸಚೇತಕ ಹುದ್ದೆ ನೀಡುವ ಭರವಸೆ ಸಿಕ್ಕಿತ್ತು. ಆದರೆ ಕಾಂಗ್ರೆಸ್​ಗೆ ಸಂಪೂರ್ಣ ಬಹುಮತ ಸಿಗದ ಕಾರಣ ಈ ಅವಕಾಶ ಕೈತಪ್ಪಿದೆ ಎಂದರು.

ಈಟಿವಿ ಭಾರತದೊಂದಿಗೆ ರಘು ಆಚಾರ್ ಮಾತುಕತೆ

ನಾನು ವಿಧಾನ ಪರಿಷತ್ ಸದಸ್ಯನಾಗಿ ನನ್ನ ಕಾರ್ಯವನ್ನು ನಡೆಸಿಕೊಂಡು ಸಾಗಿದ್ದೇನೆ. ನಮ್ಮಲ್ಲಿ ಅನೇಕ ಮಂದಿ ಸಚಿವ ಸ್ಥಾನದ ಆಕಾಂಕ್ಷಿಗಳಿದ್ದಾರೆ. ಹಿರಿಯ ರಾಜಕಾರಣಿಗಳ ನಡುವೆ ನಾನು ಪೈಪೋಟಿಗಿಳಿಯಲು ಇಚ್ಚಿಸುವುದಿಲ್ಲ. ಶಾಸಕನಾಗಿ ಜನ ನನ್ನನ್ನು ಆಯ್ಕೆ ಮಾಡಿ ಕಳಿಸಿದ್ದಾರೆ, ಅವರ ಸೇವೆ ಮುಂದುವರಿಸುತ್ತೇನೆ ಎಂದರು.

ನಿಗಮ-ಮಂಡಳಿ ಇಲ್ಲವೇ ಸಂಸದೀಯ ಕಾರ್ಯದರ್ಶಿ ಸ್ಥಾನಕ್ಕೂ ನಾನು ಆಕಾಂಕ್ಷಿ ಅಲ್ಲ. ಈ ಸ್ಥಾನಗಳನ್ನು ಕೊಟ್ಟರೂ ತೆಗೆದುಕೊಳ್ಳುವುದಿಲ್ಲ. ಅದಕ್ಕಿಂತ ಶಾಸಕನ ಸ್ಥಾನವೇ ದೊಡ್ಡದು ಎಂದು ಹೇಳಿದರು.

ಪ್ರಜಾಪ್ರಭುತ್ವದಲ್ಲಿ ಚಂದ್ರಪ್ಪ ಅವರಂತ ಸಜ್ಜನ ರಾಜಕಾರಣಿ ಸೋಲಬಾರದಿತ್ತು. ಅವರ ಸೋಲು ನಿಜಕ್ಕೂ ಬೇಸರ ತರಿಸಿದೆ. ಹಾಲಿ ಸಂಸದರು ನಾರಾಯಣಸ್ವಾಮಿ ಕೂಡ ಉತ್ತಮ ವ್ಯಕ್ತಿಯಾಗಿದ್ದು, ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಾರೆ ಎಂಬ ವಿಶ್ವಾಸವಿದೆ ಎಂದರು.

ಐಎಂಎ ಕೇಸ್​ ಸಿಬಿಐಗೆ:

ಐಎಂಎ ಜ್ಯುವೆಲ್ಲರ್ಸ್‌ ಅವ್ಯವಹಾರ ಪ್ರಕರಣವನ್ನು ಸಿಬಿಐಗೆ ನೀಡುವುದು ಸೂಕ್ತ. ಸಾವಿರಾರು ಜನ ಹಣ ಕಳೆದುಕೊಂಡಿದ್ದಾರೆ. ಆರೋಪಿ ರಾಜ್ಯದಲ್ಲಿಲ್ಲ ಎಂಬ ಮಾತು ಕೇಳಿಬರುತ್ತಿದೆ. ನನ್ನ ಕ್ಷೇತ್ರದ ಸುಮಾರು 1,500ಕ್ಕೂ ಹೆಚ್ಚು ಮಂದಿ ಇಲ್ಲಿ ಹಣ ಹೂಡಿಕೆ ಮಾಡಿ, ನಷ್ಟಕ್ಕೊಳಗಾಗಿದ್ದಾರೆ. ಮುಂದಿನ ದಿನಗಳಲ್ಲಿ ಸಿಎಂ, ಗೃಹ ಸಚಿವರು ಸೇರಿದಂತೆ ಸಂಬಂಧಪಟ್ಟವರನ್ನು ಭೇಟಿ ಮಾಡಿ, ಸೂಕ್ತ ಪರಿಹಾರ ಕೊಡಿಸುವಂತೆ ಮನವಿ ಮಾಡುತ್ತೇನೆ ಎಂದು ಹೇಳಿದರು.

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಪೂರ್ಣ ಪ್ರಮಾಣದಲ್ಲಿ ಅಧಿಕಾರಕ್ಕೆ ಬಂದರೆ ನನಗೆ ಮುಖ್ಯ ಸಚೇತಕ ಹುದ್ದೆ ನೀಡೋದಾಗಿ ಹೇಳಿದ್ದರು. ಆದ್ರೆ ಸಮ್ಮಿಶ್ರ ಸರ್ಕಾರ ರಚನೆಯಾದ ಕಾರಣ ಆ ಅವಕಾಶ ತಪ್ಪಿತು ಎಂದು ಎಂದು ವಿಧಾನ ಪರಿಷತ್ ಸದಸ್ಯ ರಘು ಆಚಾರ್ ಬೇಸರ ವ್ಯಕ್ತಪಡಿಸಿದ್ದಾರೆ.

ಶಾಸಕರ ಭವನದಲ್ಲಿ ಈಟಿವಿ ಭಾರತದೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟಕ್ಕೆ ಯಾರನ್ನು ಸೇರಿಸಿಕೊಳ್ಳಬೇಕು ಎನ್ನುವುದು ಸಿಎಂಗೆ ಬಿಟ್ಟ ವಿಚಾರ. ನಾನೇನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಸಿದ್ದರಾಮಯ್ಯ ಅವರ ಬಳಿ ಒಮ್ಮೆ ವಿಚಾರಿಸಿದಾಗ, ಮುಂದಿನ ಅವಧಿಯಲ್ಲಿ ಮುಖ್ಯ ಸಚೇತಕ ಹುದ್ದೆ ನೀಡುವ ಭರವಸೆ ಸಿಕ್ಕಿತ್ತು. ಆದರೆ ಕಾಂಗ್ರೆಸ್​ಗೆ ಸಂಪೂರ್ಣ ಬಹುಮತ ಸಿಗದ ಕಾರಣ ಈ ಅವಕಾಶ ಕೈತಪ್ಪಿದೆ ಎಂದರು.

ಈಟಿವಿ ಭಾರತದೊಂದಿಗೆ ರಘು ಆಚಾರ್ ಮಾತುಕತೆ

ನಾನು ವಿಧಾನ ಪರಿಷತ್ ಸದಸ್ಯನಾಗಿ ನನ್ನ ಕಾರ್ಯವನ್ನು ನಡೆಸಿಕೊಂಡು ಸಾಗಿದ್ದೇನೆ. ನಮ್ಮಲ್ಲಿ ಅನೇಕ ಮಂದಿ ಸಚಿವ ಸ್ಥಾನದ ಆಕಾಂಕ್ಷಿಗಳಿದ್ದಾರೆ. ಹಿರಿಯ ರಾಜಕಾರಣಿಗಳ ನಡುವೆ ನಾನು ಪೈಪೋಟಿಗಿಳಿಯಲು ಇಚ್ಚಿಸುವುದಿಲ್ಲ. ಶಾಸಕನಾಗಿ ಜನ ನನ್ನನ್ನು ಆಯ್ಕೆ ಮಾಡಿ ಕಳಿಸಿದ್ದಾರೆ, ಅವರ ಸೇವೆ ಮುಂದುವರಿಸುತ್ತೇನೆ ಎಂದರು.

ನಿಗಮ-ಮಂಡಳಿ ಇಲ್ಲವೇ ಸಂಸದೀಯ ಕಾರ್ಯದರ್ಶಿ ಸ್ಥಾನಕ್ಕೂ ನಾನು ಆಕಾಂಕ್ಷಿ ಅಲ್ಲ. ಈ ಸ್ಥಾನಗಳನ್ನು ಕೊಟ್ಟರೂ ತೆಗೆದುಕೊಳ್ಳುವುದಿಲ್ಲ. ಅದಕ್ಕಿಂತ ಶಾಸಕನ ಸ್ಥಾನವೇ ದೊಡ್ಡದು ಎಂದು ಹೇಳಿದರು.

ಪ್ರಜಾಪ್ರಭುತ್ವದಲ್ಲಿ ಚಂದ್ರಪ್ಪ ಅವರಂತ ಸಜ್ಜನ ರಾಜಕಾರಣಿ ಸೋಲಬಾರದಿತ್ತು. ಅವರ ಸೋಲು ನಿಜಕ್ಕೂ ಬೇಸರ ತರಿಸಿದೆ. ಹಾಲಿ ಸಂಸದರು ನಾರಾಯಣಸ್ವಾಮಿ ಕೂಡ ಉತ್ತಮ ವ್ಯಕ್ತಿಯಾಗಿದ್ದು, ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಾರೆ ಎಂಬ ವಿಶ್ವಾಸವಿದೆ ಎಂದರು.

ಐಎಂಎ ಕೇಸ್​ ಸಿಬಿಐಗೆ:

ಐಎಂಎ ಜ್ಯುವೆಲ್ಲರ್ಸ್‌ ಅವ್ಯವಹಾರ ಪ್ರಕರಣವನ್ನು ಸಿಬಿಐಗೆ ನೀಡುವುದು ಸೂಕ್ತ. ಸಾವಿರಾರು ಜನ ಹಣ ಕಳೆದುಕೊಂಡಿದ್ದಾರೆ. ಆರೋಪಿ ರಾಜ್ಯದಲ್ಲಿಲ್ಲ ಎಂಬ ಮಾತು ಕೇಳಿಬರುತ್ತಿದೆ. ನನ್ನ ಕ್ಷೇತ್ರದ ಸುಮಾರು 1,500ಕ್ಕೂ ಹೆಚ್ಚು ಮಂದಿ ಇಲ್ಲಿ ಹಣ ಹೂಡಿಕೆ ಮಾಡಿ, ನಷ್ಟಕ್ಕೊಳಗಾಗಿದ್ದಾರೆ. ಮುಂದಿನ ದಿನಗಳಲ್ಲಿ ಸಿಎಂ, ಗೃಹ ಸಚಿವರು ಸೇರಿದಂತೆ ಸಂಬಂಧಪಟ್ಟವರನ್ನು ಭೇಟಿ ಮಾಡಿ, ಸೂಕ್ತ ಪರಿಹಾರ ಕೊಡಿಸುವಂತೆ ಮನವಿ ಮಾಡುತ್ತೇನೆ ಎಂದು ಹೇಳಿದರು.

Intro:chit chat


Body:ಸಚೇತಕ ಹುದ್ದೆ ಕೊಡುವ ಭರವಸೆ ಸಿಕ್ಕಿತ್ತು, ಸಮ್ಮಿಶ್ರ ಸರ್ಕಾರ ಬಂದಿದ್ದರಿಂದ ಅವಕಾಶ ಸಿಗಲಿಲ್ಲ: ರಘು ಆಚಾರ್ ಬೆಂಗಳೂರು: ಈ ಸಾರಿ ಕಾಂಗ್ರೆಸ್ ಪಕ್ಷ ಪೂರ್ಣ ಪ್ರಮಾಣದಲ್ಲಿ ಅಧಿಕಾರಕ್ಕೆ ಬಂದರೆ ಮುಖ್ಯ ಸಚೇತಕ ಹುದ್ದೆ ನೀಡುವ ಭರವಸೆ ಸಿಕ್ಕಿತ್ತು. ಸಮ್ಮಿಶ್ರ ಸರ್ಕಾರ ರಚನೆಯಾದ ಹಿನ್ನೆಲೆ ಈ ಅವಕಾಶ ತಪ್ಪಿತು. ನಾನು ಯಾವತ್ತೂ ಸಚಿವ ಸ್ಥಾನ ಆಕಾಂಕ್ಷಿ ಆಗಿರಲಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ರಘು ಆಚಾರ್ ತಿಳಿಸಿದ್ದಾರೆ. ಶಾಸಕರ ಭವನದಲ್ಲಿ ಈಟಿವಿ ಭಾರತ್ ಜೊತೆ ಮಾತನಾಡಿ, ಸಂಪುಟಕ್ಕೆ ಯಾರನ್ನು ತೆಗೆದುಕೊಳ್ಳಬೇಕು ಎನ್ನುವುದು ಸಿಎಂ ಕೈಗೊಳ್ಳುವ ನಿರ್ಧಾರ ಆದರಿಸಿ ಇರುತ್ತದೆ ನಾನೂ ಸಚಿವ ಸ್ಥಾನದ ಆಕಾಂಕ್ಷಿ ಹಾಗಿರಲಿಲ್ಲ ಅಲ್ಲದೆ ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನವನ್ನು ಕೇಳಿರಲಿಲ್ಲ. ಸಿದ್ದರಾಮಯ್ಯ ಅವರ ಬಳಿ ಒಮ್ಮೆ ವಿಚಾರಿಸಿದಾಗ ಮುಂದಿನ ಅವಧಿಯಲ್ಲಿ ಮುಖ್ಯ ಸಚೇತಕ ಹುದ್ದೆ ನೀಡುವ ಭರವಸೆ ಮಾತ್ರ ಸಿಕ್ಕಿತ್ತು. ಆದರೆ ಕಾಂಗ್ರೆಸ್ ಗೆ ಪೂರ್ಣಬಹುಮತ ಸಿಗದ ಹಿನ್ನೆಲೆ ಈ ಅವಕಾಶ ಕೈತಪ್ಪಿದೆ ಸದ್ಯ ನಾನು ವಿಧಾನ ಪರಿಷತ್ ಸದಸ್ಯನಾಗಿ ನನ್ನ ಕಾರ್ಯವನ್ನು ಸಮಾಧಾನಕರವಾಗಿ ನಡೆಸಿಕೊಂಡು ಸಾಗಿದ್ದೇನೆ ಎಂದಿದ್ದಾರೆ. ನಮ್ಮಲ್ಲಿ ಅನೇಕ ಮಂದಿ ಆಕಾಂಕ್ಷಿಗಳು ಇದ್ದಾರೆ ಹತ್ತರಿಂದ ಹದಿನೈದು ವರ್ಷ ಹಿರಿಯ ರಾಜಕಾರಣಿಗಳು ಸಚಿವಸ್ಥಾನ ಆಕಾಂಕ್ಷಿಗಳ ಆಗಿದ್ದು ಅವರ ನಡುವೆ ನಾನು ಪೈಪೋಟಿಗೆ ಇಳಿಯಲು ಇಚ್ಚಿಸುವುದಿಲ್ಲ ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿದೆ ಯಶಸ್ವಿ ಆಡಳಿತ ನೀಡಬೇಕು ಎಂಬ ಉದ್ದೇಶ ಇರುವುದರಿಂದ ಯಾವ ಸಂದರ್ಭದಲ್ಲಿಯೂ ನಾನು ಸಚಿವ ಸ್ಥಾನದ ಸ್ಥಾನದ ಆಕಾಂಕ್ಷಿ ಎಂದು ಹೇಳಿಕೊಂಡು ಹೋಗಿಲ್ಲ ಹೋಗುವುದೂ ಇಲ್ಲ. ನನ್ನನ್ನು ಶಾಸಕನಾಗಿ ಜನ ಆಯ್ಕೆ ಮಾಡಿ ಕಳಿಸಿದ್ದಾರೆ ಅವರ ಸೇವೆ ಮುಂದುವರಿಸುತ್ತೇನೆ. ಇದರಿಂದ ನಿಗಮ-ಮಂಡಳಿ ಇಲ್ಲವೇ ಸಂಸದೀಯ ಕಾರ್ಯದರ್ಶಿ ಸ್ಥಾನಕ್ಕೆ ಕೂಡ ನಾನು ಆಕಾಂಕ್ಷಿ ಅಲ್ಲ. ನಾನು ಈ ಸ್ಥಾನಗಳಿಗೆ ಆಕಾಂಕ್ಷಿ ಅಲ್ಲ ಕೊಟ್ಟರೂ ತೆಗೆದುಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಪ್ರಜಾಪ್ರಭುತ್ವದಲ್ಲಿ ಚಂದ್ರಪ್ಪ ಅವರಂತ ಸಜ್ಜನ ರಾಜಕಾರಣಿ ಸೋಲಬಾರದು. ಇವರ ಸೋಲು ನಿಜಕ್ಕೂ ಬೇಸರ ತಂದಿದೆ. ಹಾಲಿ ಸಂಸದರು ಕೂಡ ಉತ್ತಮ ವ್ಯಕ್ತಿಯಾಗಿದ್ದು ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಾರೆ ಎಂಬ ವಿಶ್ವಾಸವಿದೆ ಎಂದರು. ಐ ಎಂ ಎ ಜುವೆಲರ್ಸ್ ಅವ್ಯವಹಾರವನ್ನು ಸಿಬಿಐಗೆ ನೀಡುವುದು ಸೂಕ್ತ ಸಾವಿರಾರು ಜನ ಇಲ್ಲಿ ಹಣ ಕಳೆದುಕೊಂಡಿದ್ದಾರೆ ಆರೋಪಿ ದೇಶದಲ್ಲಿಲ್ಲ ಎಂಬ ಮಾತು ಕೇಳಿಬರುತ್ತಿದೆ ಇದರಿಂದ ಇಂತಹ ಪ್ರಕರಣ ತನಿಖೆಯನ್ನು ಸಿಬಿಐಗೆ ವಹಿಸುವುದು ಸೂಕ್ತ ಎನ್ನುವುದು ನನ್ನ ಅಭಿಪ್ರಾಯ. ನನ್ನ ಕ್ಷೇತ್ರದ ಸುಮಾರು 1500 ಮಂದಿಗೆ ಹೆಚ್ಚು ನಾಗರಿಕರು ಇಲ್ಲಿ ಹಣ ಹೂಡಿಕೆ ಮಾಡಿ ನಷ್ಟಕ್ಕೆ ಒಳಗಾಗಿದ್ದಾರೆ. ನಾನು ಮುಂದಿನ ದಿನಗಳಲ್ಲಿ ಸಿಎಂ ಸೇರಿದಂತೆ ಸಂಬಂಧಪಟ್ಟ ವ್ಯಕ್ತಿಗಳನ್ನು ಭೇಟಿ ಮಾಡಿ ತನಿಖೆ ಮೂಲಕ ಪರಿಹಾರ ಕೊಡಿಸುವಂತೆ ಮನವಿ ಮಾಡುತ್ತೇನೆ ಎಂದು ಹೇಳಿದರು.


Conclusion:chit chat

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.