ETV Bharat / city

ನಗರದ ರಸ್ತೆ ಗುಂಡಿಗಳು ಶಾಸಕರ ಅಕ್ರಮಗಳಿಗೆ ಹಿಡಿದ ಕೈಗನ್ನಡಿ: ಮೋಹನ್‌ ದಾಸರಿ

author img

By

Published : Dec 12, 2021, 9:03 AM IST

ಸಿ ವಿ ರಾಮನ್ ನಗರ ವಿಧಾನಸಭಾ ಕ್ಷೇತ್ರದ ಎಲ್ಲಾ ರಸ್ತೆಗಳಲ್ಲಿ ಅಪಾಯಕಾರಿ ಗುಂಡಿಗಳಿವೆ. ಶಾಸಕರು ತಮ್ಮ ಕ್ಷೇತ್ರದ ರಸ್ತೆಗಳ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ನುಂಗಿ ನೀರು ಕುಡಿದಿದ್ದಾರೆ. ಹೀಗಾಗಿ ,ಜನರು ಪ್ರಾಣ ಭಯದಲ್ಲಿ ರಸ್ತೆಗಳ ಮೇಲೆ ಓಡಾಡುತ್ತಿದ್ದು, ಶಾಸಕರಿಗೆ ಹಿಡಿಶಾಪ ಹಾಕುತ್ತಿದ್ದಾರೆ ಎಂದು ಆಮ್‌ ಆದ್ಮಿ ಪಾರ್ಟಿಯ ಬೆಂಗಳೂರು ನಗರ ಅಧ್ಯಕ್ಷ ಮೋಹನ್‌ ದಾಸರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಹಿ ಸಂಗ್ರಹ ಅಭಿಯಾನ
ಸಹಿ ಸಂಗ್ರಹ ಅಭಿಯಾನ

ಬೆಂಗಳೂರು: ನಗರದ ರಸ್ತೆ ಗುಂಡಿಗಳು ಶಾಸಕರ ಅಕ್ರಮಗಳಿಗೆ ಹಿಡಿದ ಕೈಗನ್ನಡಿಯಾಗಿವೆ. ಅದರಲ್ಲೂ ಸಿ ವಿ ರಾಮನ್ ನಗರ ವಿಧಾನಸಭಾ ಕ್ಷೇತ್ರದ ಶಾಸಕ ರಘು, ಸಾವಿರಾರು ಕೋಟಿ ಅನುದಾನವನ್ನು ತಮ್ಮ ಕ್ಷೇತ್ರಕ್ಕೆ ತಂದರೂ ಅಭಿವೃದ್ಧಿಯಾಗದಿರುವುದಕ್ಕೆ ಮಾಡಿರುವ ಶೇ 40 ರಷ್ಟು ಭ್ರಷ್ಟಾಚಾರವೇ ಕಾರಣ. ಇದಕ್ಕೆ ಸಾಕ್ಷಿಯಾಗಿ ರಸ್ತೆ ತುಂಬಾ ಗುಂಡಿಗಳಿವೆ ಎಂದು ಆಮ್‌ ಆದ್ಮಿ ಪಾರ್ಟಿಯ ಬೆಂಗಳೂರು ನಗರ ಅಧ್ಯಕ್ಷ ಮೋಹನ್‌ ದಾಸರಿ ಹೇಳಿದರು.

ರಸ್ತೆ ಗುಂಡಿಗಳು ಮತ್ತು ಗುತ್ತಿಗೆ ಕಾಮಗಾರಿಗಳಲ್ಲಿನ ಭ್ರಷ್ಟಾಚಾರ ಖಂಡಿಸಿ ಆಮ್‌ ಆದ್ಮಿ ಪಾರ್ಟಿಯು ಬೆಂಗಳೂರಿನಾದ್ಯಂತ ನಡೆಸುತ್ತಿರುವ 10 ದಿನಗಳ ಸಹಿ ಸಂಗ್ರಹ ಅಭಿಯಾನ ಮತ್ತು ಪ್ರತಿಭಟನಾ ಜಾಥಾದಲ್ಲಿ ನಿನ್ನೆ ಸಿವಿ ರಾಮನ್ ನಗರ ವಿಧಾನಸಭಾ ಕ್ಷೇತ್ರದಲ್ಲಿ ಮೋಹನ್‌ ದಾಸರಿ ಮಾತನಾಡಿದರು.

ಸಿವಿ ರಾಮನ್ ನಗರ ವಿಧಾನಸಭಾ ಕ್ಷೇತ್ರದ ಎಲ್ಲಾ ರಸ್ತೆಗಳಲ್ಲಿ ಅಪಾಯಕಾರಿ ಗುಂಡಿಗಳಿವೆ. ಶಾಸಕರು ತಮ್ಮ ಕ್ಷೇತ್ರದ ರಸ್ತೆಗಳ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ನುಂಗಿ ನೀರು ಕುಡಿದಿದ್ದಾರೆ. ಹೀಗಾಗಿ, ಜನರು ಪ್ರಾಣ ಭಯದಲ್ಲಿ ರಸ್ತೆಗಳ ಮೇಲೆ ಓಡಾಡುತ್ತಿದ್ದು, ಶಾಸಕರಿಗೆ ಹಿಡಿಶಾಪ ಹಾಕುತ್ತಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಬೆಂಗಳೂರು ನಗರ ಘಟಕದ ಉಪಾಧ್ಯಕ್ಷ ಬಿ.ಟಿ ನಾಗಣ್ಣ ಮಾತನಾಡಿ, ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು ಶೇ 40 ರಷ್ಟು ಕಮಿಷನ್ ಅಕ್ರಮವನ್ನು ತಿಳಿಸಿದ್ದರು. ಆದರೆ ಸೂಕ್ತ ತನಿಖೆಗೆ ಆದೇಶಿಸಿಲ್ಲ ಎಂದು ಆರೋಪಿಸಿದರು.

ಆಮ್ ಆದ್ಮಿ ಪಾರ್ಟಿ ಕರ್ನಾಟಕ ರಾಜ್ಯ ವೀಕ್ಷಕ ರೋಮಿ ಭಾಟಿ ಅಭಿಯಾನದಲ್ಲಿ ಪಾಲ್ಗೊಂಡು ಕರ್ನಾಟಕದ ಜನತೆ ಬದಲಾವಣೆ ಬಯಸುತ್ತಿದ್ದಾರೆ. ಅದನ್ನು ಬೆಂಗಳೂರಿನ ಮೂಲಕ ನಾವು ಆರಂಭಿಸಬೇಕು. ಆಮ್ ಆದ್ಮಿ ಪಾರ್ಟಿ ಇದಕ್ಕೆ ಸಜ್ಜಾಗಿದೆ. ರಸ್ತೆ ಗುಂಡಿಗಳ ವಿರುದ್ಧದ ನಮ್ಮ ಹೋರಾಟ ಜನತೆಯ ದನಿಯಾಗಿದೆ ಎಂದರು.

ಅಶೋಕ್ ಮೃತ್ಯುಂಜಯ, ಜಗದೀಶ್ ಮಹಾದೇವ್, ಜಗದೀಶ್ ಬಾಬು, ಆನಂದ್ ವಾಸುದೇವನ್, ಗೋಪಾಲ್ ವೆಂಕಟ್ ರೆಡ್ಡಿ, ಪ್ರಶಾಂತಿ ಹಾಗೂ ಇನ್ನಿತರೆ ಸ್ಥಳೀಯ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.

ಬೆಂಗಳೂರು: ನಗರದ ರಸ್ತೆ ಗುಂಡಿಗಳು ಶಾಸಕರ ಅಕ್ರಮಗಳಿಗೆ ಹಿಡಿದ ಕೈಗನ್ನಡಿಯಾಗಿವೆ. ಅದರಲ್ಲೂ ಸಿ ವಿ ರಾಮನ್ ನಗರ ವಿಧಾನಸಭಾ ಕ್ಷೇತ್ರದ ಶಾಸಕ ರಘು, ಸಾವಿರಾರು ಕೋಟಿ ಅನುದಾನವನ್ನು ತಮ್ಮ ಕ್ಷೇತ್ರಕ್ಕೆ ತಂದರೂ ಅಭಿವೃದ್ಧಿಯಾಗದಿರುವುದಕ್ಕೆ ಮಾಡಿರುವ ಶೇ 40 ರಷ್ಟು ಭ್ರಷ್ಟಾಚಾರವೇ ಕಾರಣ. ಇದಕ್ಕೆ ಸಾಕ್ಷಿಯಾಗಿ ರಸ್ತೆ ತುಂಬಾ ಗುಂಡಿಗಳಿವೆ ಎಂದು ಆಮ್‌ ಆದ್ಮಿ ಪಾರ್ಟಿಯ ಬೆಂಗಳೂರು ನಗರ ಅಧ್ಯಕ್ಷ ಮೋಹನ್‌ ದಾಸರಿ ಹೇಳಿದರು.

ರಸ್ತೆ ಗುಂಡಿಗಳು ಮತ್ತು ಗುತ್ತಿಗೆ ಕಾಮಗಾರಿಗಳಲ್ಲಿನ ಭ್ರಷ್ಟಾಚಾರ ಖಂಡಿಸಿ ಆಮ್‌ ಆದ್ಮಿ ಪಾರ್ಟಿಯು ಬೆಂಗಳೂರಿನಾದ್ಯಂತ ನಡೆಸುತ್ತಿರುವ 10 ದಿನಗಳ ಸಹಿ ಸಂಗ್ರಹ ಅಭಿಯಾನ ಮತ್ತು ಪ್ರತಿಭಟನಾ ಜಾಥಾದಲ್ಲಿ ನಿನ್ನೆ ಸಿವಿ ರಾಮನ್ ನಗರ ವಿಧಾನಸಭಾ ಕ್ಷೇತ್ರದಲ್ಲಿ ಮೋಹನ್‌ ದಾಸರಿ ಮಾತನಾಡಿದರು.

ಸಿವಿ ರಾಮನ್ ನಗರ ವಿಧಾನಸಭಾ ಕ್ಷೇತ್ರದ ಎಲ್ಲಾ ರಸ್ತೆಗಳಲ್ಲಿ ಅಪಾಯಕಾರಿ ಗುಂಡಿಗಳಿವೆ. ಶಾಸಕರು ತಮ್ಮ ಕ್ಷೇತ್ರದ ರಸ್ತೆಗಳ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ನುಂಗಿ ನೀರು ಕುಡಿದಿದ್ದಾರೆ. ಹೀಗಾಗಿ, ಜನರು ಪ್ರಾಣ ಭಯದಲ್ಲಿ ರಸ್ತೆಗಳ ಮೇಲೆ ಓಡಾಡುತ್ತಿದ್ದು, ಶಾಸಕರಿಗೆ ಹಿಡಿಶಾಪ ಹಾಕುತ್ತಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಬೆಂಗಳೂರು ನಗರ ಘಟಕದ ಉಪಾಧ್ಯಕ್ಷ ಬಿ.ಟಿ ನಾಗಣ್ಣ ಮಾತನಾಡಿ, ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು ಶೇ 40 ರಷ್ಟು ಕಮಿಷನ್ ಅಕ್ರಮವನ್ನು ತಿಳಿಸಿದ್ದರು. ಆದರೆ ಸೂಕ್ತ ತನಿಖೆಗೆ ಆದೇಶಿಸಿಲ್ಲ ಎಂದು ಆರೋಪಿಸಿದರು.

ಆಮ್ ಆದ್ಮಿ ಪಾರ್ಟಿ ಕರ್ನಾಟಕ ರಾಜ್ಯ ವೀಕ್ಷಕ ರೋಮಿ ಭಾಟಿ ಅಭಿಯಾನದಲ್ಲಿ ಪಾಲ್ಗೊಂಡು ಕರ್ನಾಟಕದ ಜನತೆ ಬದಲಾವಣೆ ಬಯಸುತ್ತಿದ್ದಾರೆ. ಅದನ್ನು ಬೆಂಗಳೂರಿನ ಮೂಲಕ ನಾವು ಆರಂಭಿಸಬೇಕು. ಆಮ್ ಆದ್ಮಿ ಪಾರ್ಟಿ ಇದಕ್ಕೆ ಸಜ್ಜಾಗಿದೆ. ರಸ್ತೆ ಗುಂಡಿಗಳ ವಿರುದ್ಧದ ನಮ್ಮ ಹೋರಾಟ ಜನತೆಯ ದನಿಯಾಗಿದೆ ಎಂದರು.

ಅಶೋಕ್ ಮೃತ್ಯುಂಜಯ, ಜಗದೀಶ್ ಮಹಾದೇವ್, ಜಗದೀಶ್ ಬಾಬು, ಆನಂದ್ ವಾಸುದೇವನ್, ಗೋಪಾಲ್ ವೆಂಕಟ್ ರೆಡ್ಡಿ, ಪ್ರಶಾಂತಿ ಹಾಗೂ ಇನ್ನಿತರೆ ಸ್ಥಳೀಯ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.